ಕರಾವಳಿ
ಬೆಳ್ತಂಗಡಿ ಲಾಯಿಲ ಗ್ರಾಮದ ದಲಿತ ಕುಟುಂಬಗಳು ವಾಸಿಸುವ ಊರಿನ ರಸ್ತೆಯ ಕಥೆ ವ್ಯಥೆ ಇದು
ಪರಿಶಿಷ್ಟರ ಬಗ್ಗೆ ಮೊಸಳೆ ಕಣ್ಣೀರು ಹಾಕುವ ಸರಕಾರಗಳು; ಪರಿಶಿಷ್ಟ ಕುಟುಂಬಗಳು ವಾಸಿಸುವ ರಸ್ತೆಯ ಯಾತನೆಗೆ ಇನ್ನಾದರೂ ಕಿವಿ ಕೊಡುತ್ತಾ..? ಇದು ತಾಲೂಕು ಕೇಂದ್ರದಿಂದ ಕೂಗಳತೆಯ ದೂರದಲ್ಲಿರುವ ಲಾಯಿಲ ಗ್ರಾಮದ ಅತ್ಯಂತ ಹೆಚ್ಚು ಪರಿಶಿಷ್ಟ ಜಾತಿ ಜನಸಂಖ್ಯೆಯನ್ನು ಹೊಂದಿರುವ ರಸ್ತೆಯ ಕರುಣಾಮಯ ಕಥೆ. ಇಲ್ಲಿ 80 ಕ್ಕೂ ಹೆಚ್ಚು ಕೇವಲ ದಲಿತ ಕುಟುಂಬಗಳೇ ಇವೆ. ಆದರೆ ಇಲ್ಲಿನ ರಸ್ತೆ ಮಾತ್ರ ಇಂದಿಗೂ ಡಾಮರೀಕರಣವನ್ನೇ ಕಂಡಿಲ್ಲ. ಒಂದು ಕಿ.ಮೀ. ಡಾಮರೀಕರಣಗೊಂಡ ರಸ್ತೆಯಲ್ಲಿ ಡಾಮರೀಕರಣದ ಅಸ್ತಿಪಂಜರಗಳು ಕಾಣಸಿಗುತ್ತದೆ. ಲಾಯಿಲ ಗ್ರಾಮದ ಲಾಯಿಲ […]
ಉಡುಪಿ: ಯುವಕನ ಅಪಹರಣ; ಹಣಕ್ಕೆ ಬೇಡಿಕೆ, ಕೋಕಾ ಕಾಯ್ದೆಯಡಿ ಏಳು ಆರೋಪಿಗಳ ಬಂಧನ
ಮನೋಜ್ ಕೋಡಿಕೆರೆ, ಚೇತನ್ ಪಡೀಲ್ ಬಗ್ಗೆ ಮಾಹಿತಿ ನೀಡಿದವರಿಗೆ 50 ಸಾವಿರ ಬಹುಮಾನ ಘೋಷಣೆ ಸಾಸ್ತಾನದಲ್ಲಿ ಯುವಕನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಏಳು ಮಂದಿಯನ್ನು ಆರೋಪಿಗಳನ್ನು ಬಂಧಿಸಿರುತ್ತಾರೆ. ದೇವಿ ಪ್ರಸಾದ್ ಶೆಟ್ಟಿ ಯಾನೆ ದೀಕ್ಷಿತ್ ಹಿರಿಯಡ್ಕದ ಸುಜಿತ್, ಕಾಟಿಪಳ್ಳದ ಸುದೀಪ್, ಕೃಷ್ಣಾಪುರ ಶ್ರೀಷಾ ಆನಂದ ಶೆಟ್ಟಿ, ಮಿಥುನ್ ಕೈಕಂಬ, ಕೆಮ್ಮಣ್ಣು, ಹೂಡೆ ಮನೋಜ್ ವಿ. ಕೊಟ್ಯಾನ್ ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಸಿದ್ದಾಪುರ ಮೋಹನ […]
ರಾಜ್ಯ
ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಡಾಕ್ಟ್ರು ಬರುತ್ತಾರೆ; ಒಂಭತ್ತಕ್ಕೆ ಡಿಕೆಶಿ ದಿಲ್ಲಿಗೆ.?, ಶಾಮನೂರು ಕೋಟೆ ಸೇಫ್ ಆಗಲಿದೆ.?
ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಟಿಫಿಕೇಟು ✍️. ಅರ್.ಟಿ.ವಿಠ್ಟಲಮೂರ್ತಿ ಇತ್ತೀಚೆಗೆ ಹಿರಿಯ ಲಿಂಗಾಯತ ನಾಯಕ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಜತೆ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದಾರೆ. ಈ ಚರ್ಚೆಯ ಸಂದರ್ಭದಲ್ಲಿ: ‘ಡಾಕ್ಟ್ರೇ, ನೀವು ಕೆಪಿಸಿಸಿ ಅಧ್ಯಕ್ಷರಾಗಲು ರೆಡಿಯಾಗಿ’ ಎಂದಿದ್ದಾರೆ. ಸಿದ್ದರಾಮಯ್ಯ ಅವರು ಈ ಮಾತು ಹೇಳಿದಾಗ ಪ್ರತಿಕ್ರಿಯಿಸಿದ ಶರಣ ಪ್ರಕಾಶ್ ಪಾಟೀಲ್ ಅವರು: ‘ಸಾರ್ ನಾನು ಮಂತ್ರಿಯಾಗಿದ್ದುಕೊಂಡೇ ಕೆಪಿಸಿಸಿ ಅಧ್ಯಕ್ಷನಾಗಲು ತಯಾರಿದ್ದೇನೆ’ ಎಂದಾಗ: ಹಾಗೇ ಆಗಲಿ ಡಾಕ್ಟ್ರೇ ಅದಕ್ಕೇನು? ‘ಅಂತ […]
ಆಪರೇಷನ್ ಟ್ವೆಂಟಿಗೆ ಸಿದ್ದು ರೆಡಿ; ಕೆ.ಸಿ. ವೇಣುಗೋಪಾಲ್ ಅವರ 3:2 ಸೂತ್ರ. ಜಮೀರಣ್ಣಾಕೀ ಪೊಲಿಟಿಕ್ಸ್
✍️. ಅರ್.ಟಿ.ವಿಠ್ಠಲಮೂರ್ತಿ ಕಳೆದ ಬುಧವಾರ ವಿಧಾನಸಭೆಯ ಮೊಗಸಾಲೆಯಲ್ಲಿ ಕುಳಿತಿದ್ದ ಡಿಸಿಎಂ ಡಿಕೆಶಿ ಕ್ಯಾಂಪಿನ ಹಿರಿಯ ನಾಯಕರೊಬ್ಬರು ತಮ್ಮ ಆಪ್ತರ ಬಳಿ ಮೆಲ್ಲಗೆ ಮಾತನಾಡುತ್ತಿದ್ದರು. ಅವರ ಪ್ರಕಾರ: ‘ಏಪ್ರಿಲ್ ಮೊದಲ ವಾರ ದಿಲ್ಲಿಯಲ್ಲಿ ನಿರ್ಣಾಯಕ ಸಭೆ ನಡೆಯಲಿದೆ.’ ಅರ್ಥಾತ್, ಬಜೆಟ್ ಅಧಿವೇಶನದ ನಂತರ ದಿಲ್ಲಿಗೆ ಧಾವಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಹತ್ವದ ವಿಷಯವೊಂದನ್ನು ಪ್ರಸ್ತಾಪಿಸಲಿದ್ದಾರೆ. ಅಂದ ಹಾಗೆ ಕೆ.ಸಿ. ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರ ಪರವಾಗಿಯೇ ನಿಂತವರು ಮತ್ತು […]
ರಾಷ್ಟ್ರೀಯ
ಭಾರತ ಸರ್ಕಾರದ ಮಹತ್ವದ ಜನಗಣತಿ ಯೋಜನೆ ನಾಳೆಯಿಂದ ಚಾಲನೆ; ಡಿಜಿಟಲ್ ರೂಪದಲ್ಲಿ ಮಾಹಿತಿ ನೀಡಲು ಅವಕಾಶ
ಭಾರತ ಸರ್ಕಾರದ ಮಹತ್ವದ ಯೋಜನೆಗಳಾದ ಜನಗಣತಿ ಪ್ರಕ್ರಿಯೆಗೆ ನಾಳೆಯಿಂದ ಚಾಲನೆ ದೊರೆಯಲಿದೆ.ಡಿಜಿಟಲ್ ರೂಪದಲ್ಲಿ ಮಾಹಿತಿ ನೀಡಲು ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಜನಗಣತಿ ಮಾಡುವವರು ಮನೆಗೆ ಬಂದಾಗ ಅವರಿಗೆ ಕೇವಲ ರೆಫರೆನ್ಸ್ ನಂಬರ್ ನೀಡುವ ಮೂಲಕ ಜವಾಬ್ದಾರಿಯನ್ನು ಪೂರ್ಣಗೊಳಿಸಬಹುದಾಗಿದೆ. ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: ಮೊದಲು https://test.census.gov.in/se/ ಜಾಲತಾಣಕ್ಕೆ ಲಾಗಿನ್ ಆಗಿ ಸೆನ್ಸಸ್ ನಲ್ಲಿ ಭಾಗವಹಿಸಬಹುದಾಗಿದೆ. ಮೊದಲಿಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ಬರುವ OTP ಬಳಸಿ ಲಾಗಿನ್ ಆಗಿ, ಅಲ್ಲಿ ಕಾಣಿಸುವ ‘ಸ್ವಯಂ ಗಣತಿ’ ಐಕಾನ್ […]
ಸಂವಿದಾನ ಬದ್ಧ ರಾಜಕೀಯ ವ್ಯವಸ್ಥೆಯಲ್ಲಿ ಕುಟುಂಬ ರಾಜಕಾರಣವೆಂಬ ಕಳಂಕ
“ವಂಶಪಾರಂಪರ್ಯ ಜಾಗೀರು”ಗಳಂತಾಗಿರುವ ಕ್ಷೇತ್ರಗಳು ಮುಕ್ತವಾಗಿ, ಸಾಮಾನ್ಯ ನಾಗರಿಕನೂ ದೇಶದ ಉನ್ನತ ಪೀಠವನ್ನೇರಲು ಸಾಧ್ಯವಾಗಬೇಕು ✍️. ಇಸ್ಮಾಯಿಲ್ ಎಸ್. ನ್ಯಾಯವಾದಿಗಳು, ಮಂಗಳೂರು. ಮೊದಲ ಪುಲಕೇಶಿ, ಎರಡನೇ ಪುಲಕೇಶಿ… ಒಂದನೇ ಕೃಷ್ಣದೇವರಾಜ, ಎರಡನೇ ಕೃಷ್ಣದೇವರಾಜ, ಮೂರನೇ …. ಹೀಗೆಯೇ ಈ ಪಟ್ಟಿ ಮುಂದುವರಿಯುತ್ತದೆ. ಇತಿಹಾಸದ ಪುಟಗಳನ್ನು ತಿರುವುತ್ತಾ ಸಾಗಿದಲ್ಲಿ ಇಂತಹ ಸಾವಿರಾರು ಉದಾಹರಣೆಗಳು ಸಿಗುತ್ತವೆ. ಜಗತ್ತಿನ ವಿವಿಧ ಭಾಗಗಳಲ್ಲಿ ಆಳಿದ ರಾಜ ವಂಶಗಳು ಹಾಗೂ ಸದ್ರಿ ರಾಜವಂಶಗಳಿಂದ ಬಂದಿರುವ ಹಿರಿ-ಕಿರಿಯ ರಾಜರುಗಳ ಬಹುದೊಡ್ಡ ಉದಾಹರಣೆಗಳಿವೆ. ಆದರೆ ಆಧುನಿಕ ಜನಗತ್ತಿನಲ್ಲಿ ರಾಜರುಗಳಿಗೆ […]
ಅಂತಾರಾಷ್ಟ್ರೀಯ
ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ
ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]
ಮೂಲಸೌಕರ್ಯದ ಮೇಲಿನ ದಾಳಿಗೆ ಇರಾನ್ ಆಕ್ರೋಶ; ಇಂತಹ ದಾಳಿ ನಡೆದರೆ ನಿಮ್ಮ ಮಿತ್ರ ರಾಷ್ಟ್ರಗಳನ್ನು ಸಂಪೂರ್ಣ ನಾಶ ಮಾಡದೆ ಬಿಡುವುದಿಲ್ಲ: ಇರಾನ್ ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮತ್ತೊಮ್ಮೆ ಇಂತಹ ದಾಳಿ ನಡೆದರೆ ಯಾವುದೇ ಒತ್ತಡಕ್ಕೂ ಮಣಿಯದೆ “ಅನಿಯಂತ್ರಿತ ಪ್ರತಿದಾಳಿ” ನಡೆಸುವುದಾಗಿ ಇರಾನ್ ಸ್ಪಷ್ಟ ಎಚ್ಚರಿಕೆ ನೀಡಿದೆ. ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿ ನಡೆಸಿದರೆ ಗಲ್ಫ್ ಪ್ರದೇಶದ ತೈಲ ಹಾಗೂ ಅನಿಲ ವಲಯವನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಇಸ್ರೇಲ್’ಗೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ […]
