ಕರಾವಳಿ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ : ಯಕ್ಷಗಾನ ರಂಗಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ: ಯಕ್ಷಗಾನಕ್ಕೆ ಮೂಲ ಪುರುಷ ಎಂದೇ ಖ್ಯಾತರಾದ ಕವಿ ಪ್ರಾರ್ಥಿಸುಬ್ಬ ಅವರ ತವರೂರಾದ ಗಡಿನಾಡಿನ ಶ್ರೇಷ್ಠ ಯಕ್ಷಗಾನ ಕಲಾವಿದರು, ಸಂಸ್ಥೆಗಳು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕಾಸರಗೋಡಿನ ಮಂಜೇಶ್ವರ ಕಡಂಬಾರು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಹಾಗೂ ದೇವಳದ ಸಹಕಾರದಲ್ಲಿ ಯಕ್ಷ ಬಳಗ ಹೊಸಂಗಡಿ ಮಂಜೇಶ್ವರ ತಂಡದಿಂದ ಹಮ್ಮಿಕೊಂಡ […]

ಬಜಪೆ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ

ಕೈಕಂಬ: ಮೂಡಬಿದ್ರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಗುರುಪುರ- ಕೈಕಂಬ ಪೊಳಲಿ ದ್ವಾರದ ರಸ್ತೆಯ ಬಳಿ ದಿನಾಂಕ: 15-08-2026 ರಂದು 1.214 ಗ್ರಾಂ ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬೆಂಜನಪದವು, ಕಲ್ಲಿಗೆ ಎಂಬಲ್ಲಿಯ ನಿವಾಸಿಗಳಾದ ರಕ್ಷಿತ್ ಹಾಗೂ ಅಕ್ಷಯ್ ಬಿ. ಎಂಬವರನ್ನು ಬಜಪೆ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಎಚ್.ಎನ್ ನೇತ್ರತ್ವದ ಪೊಲೀಸರ ತಂಡ ದಾಳಿ ನಡೆಸಿ, ವಶಕ್ಕೆ ಪಡೆದು ಆರೋಪಿಗಳಿಂದ ಸುಮಾರು 65 ಸಾವಿರ ರೂಪಾಯಿ ಮೌಲ್ಯದ 1.214 ಕೆ.ಜಿ ತೂಕದ ಮಾದಕ […]

ರಾಜ್ಯ

ಮೇಜರ್ ಸರ್ಜರಿಯ ಸುಳಿವು ಕೊಟ್ಟರು‌ ನಿತಿನ್; ಡಲ್ಲಾಯಿತು ಜಮೀರ್ ಪವರ್

ಹತ್ತಿರವಾಗುತ್ತಿದೆ ಸರ್ಜರಿ ಡೇಟು, ಯೋಗೀಶ್ವರ್ ವಿಥ್ ಪುಲಿಕೇಶಿ ✍️. ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ಕಾಂಗ್ರೆಸ್ ವರಿಷ್ಟರು ವೀಕ್ಷಕರೊಬ್ಬರನ್ನು ಕರ್ನಾಟಕಕ್ಕೆ ಕಳಿಸಿದ್ದಾರೆ. ಹೀಗೆ ವರಿಷ್ಟರ ಸೂಚನೆಯಂತೆ ಬಂದ ಆ ವೀಕ್ಷಕರು ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಪಕ್ಷದ ಬೆಳವಣಿಗೆಗಳ ಬಗ್ಗೆ ಆ ವೀಕ್ಷಕರು ತಮ್ಮ ಅಭಿಪ್ರಾಯ ಕೇಳಿದಾಗ ವೀರಪ್ಪ ಮೊಯ್ಲಿ ನೋವಿನಿಂದ ಮಾತನಾಡಿದರಂತೆ.ಕಾರಣ? ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಆ ಜಾಗಕ್ಕೆ ಬಂದರಲ್ಲ? […]

ಸರ್ಕಾರಿ ಜಾಗಗಳಲ್ಲಿ ನಡೆಸುವ ಸಭೆ-ಸಮಾರಂಭಗಳಿಗೆ ಪರೋಕ್ಷವಾಗಿ ಬ್ರೇಕ್; ಪೂರ್ವಾನುಮತಿ ಕಡ್ಡಾಯ

ರಾಜ್ಯದಲ್ಲಿನ ಶಾಲೆಗಳು, ಕಾಲೇಜುಗಳು ಹಾಗೂ ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿಗಳ ಆವರಣದಲ್ಲಿ ಖಾಸಗಿ ಸಂಘ-ಸಂಸ್ಥೆಗಳು ಅಥವಾ ಸಂಘಟನೆಗಳು ಯಾವುದೇ ರೀತಿಯ ಚಟುವಟಿಕೆ ಅಥವಾ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಇನ್ಮುಂದೆ ಕಾನೂನುಬದ್ಧವಾಗಿ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರೂಪಿಸಲಾಗಿರುವ ‘ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026’ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ದೊರೆತಿದೆ. ಸರ್ಕಾರದ ಈ ನೂತನ ಕಾಯ್ದೆಯು ಆರ್‌ಎಸ್‌ಎಸ್ ಸೇರಿದಂತೆ ವಿವಿಧ ಸಂಘಟನೆಗಳು ಸರ್ಕಾರಿ […]

ರಾಷ್ಟ್ರೀಯ

ಇಡೀ ದೇಶಕ್ಕೆ 2002ರ ವರ್ಷವನ್ನು ಮೂಲ ವರ್ಷವಾಗಿ ನಿಗದಿಪಡಿಸಲಾಗಿದೆ. ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬರುವುದಿಲ್ಲ: ಸುಪ್ರೀಂ ಕೋರ್ಟ್

ಸಿಕ್ಕಿಂನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (SIR‌) 2002ನೇ ವರ್ಷವನ್ನು ಆಧಾರವಾಗಿರಿಸಿಕೊಂಡಿರುವ ಚುನಾವಣಾ ಆಯೋಗದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ. ಸಿಕ್ಕಿಂ ಮೂಲನಿವಾಸಿ ಸುರಕ್ಷಾ ಸಂಘವು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಹಾಗೂ ವಿ. ಮೋಹನಾ ಅವರನ್ನೊಳಗೊಂಡ ಪೀಠವು ವಜಾಗೊಳಿಸಿದೆ. ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗಾಗಿ 2002ರ ಬದಲಿಗೆ 1993 ಅನ್ನು ಮೂಲ ವರ್ಷವಾಗಿ ನಿಗದಿಪಡಿಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ […]

ಅಪಘಾತದಲ್ಲಿ ಪೋಷಕರು ಮೃತಪಟ್ಟರೆ, ವಿವಾಹಿತ, ಉದ್ಯೋಗಿ ಮಕ್ಕಳು ಕೂಡ ಪರಿಹಾರ ಪಡೆಯಲು ಅರ್ಹರು: ಸುಪ್ರೀಂ ಕೋರ್ಟ್

ಅಪಘಾತದಲ್ಲಿ ಪೋಷಕರು ಮೃತಪಟ್ಟ ಸಂದರ್ಭದಲ್ಲಿ, ಅವರ ವಯಸ್ಕ, ವಿವಾಹಿತ ಹಾಗೂ ಲಾಭದಾಯಕ ಉದ್ಯೋಗದಲ್ಲಿರುವ ಮಕ್ಕಳು ಕೂಡ ಪರಿಹಾರ ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅವಲಂಬನೆಯ ಪ್ರಮಾಣಕ್ಕೆ ಅನುಗುಣವಾಗಿ ಈ ಮಕ್ಕಳೂ ಪರಿಹಾರಕ್ಕಾಗಿ ಕಾನೂನುಬದ್ಧವಾಗಿ ಅರ್ಹರು ಎಂದು ನ್ಯಾಯಮೂರ್ತಿಗಳಾದ ಎನ್. ಕೋಟೀಶ್ವರ್ ಸಿಂಗ್ ಮತ್ತು ಎನ್.ವಿ. ಅಂಜಾರಿಯ ಅವರ ಪೀಠವು ತೀರ್ಪು ನೀಡಿದೆ. ಕಾನೂನುಬದ್ಧ ಪ್ರತಿನಿಧಿ ಎಂಬುದನ್ನು ಮೋಟಾರು ವಾಹನ ಕಾಯ್ದೆಯಲ್ಲಿ ವ್ಯಾಖ್ಯಾನಿಸಿಲ್ಲವಾದರೂ, ಮೃತ ವ್ಯಕ್ತಿಯ ಆಸ್ತಿಯನ್ನು ಕಾನೂನುಬದ್ಧವಾಗಿ ಪ್ರತಿನಿಧಿಸುವವರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರು […]

ಅಂತಾರಾಷ್ಟ್ರೀಯ

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ : ಯಕ್ಷಗಾನ ರಂಗಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಬಜಪೆ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ

ಇಡೀ ದೇಶಕ್ಕೆ 2002ರ ವರ್ಷವನ್ನು ಮೂಲ ವರ್ಷವಾಗಿ ನಿಗದಿಪಡಿಸಲಾಗಿದೆ. ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬರುವುದಿಲ್ಲ: ಸುಪ್ರೀಂ ಕೋರ್ಟ್

ವಿಟ್ಲ: ಉಮೇಶ್ ಶೆಟ್ಟಿ ಎಂಬಾತನಿಂದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ; ವಿಟ್ಲ ಪೊಲೀಸರ ಕಾರ್ಯಾಚರಣೆ, ಆರೋಪಿಯ ಬಂಧನ, ಪೋಕ್ಸೋ ಪ್ರಕರಣ ದಾಖಲು

ಸುಲಿಗೆ ಪ್ರಕರಣ: ಅಜ್ಜಿಯನ್ನೇ ಯಮಾರಿಸಿದ ಮೊಮ್ಮಗನ ಬಂಧನ; ಎರಡು ಚಿನ್ನದ ಬಳೆಗಳು ವಶ

error: Content is protected !!