ಕರಾವಳಿ

ನ್ಯಾಯಾಲಯಕ್ಕೆ ಹಾಜರಾಗದೆ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣದ ಅ.ಕ್ರ.ಸಂ: 260/2014 ರ ಆರೋಪಿ ಬಂಟ್ವಾಳ ಕರಿಯಂಗಳ ನಿವಾಸಿ ದುನಿಯಾ ಶರೀಫ್ @ ಮಹಮ್ಮದ್ ಶರೀಫ್ ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ದಿನಾಂಕ: 05-05-2026 ರಂದು ವಿದೇಶದಿಂದ ಊರಿಗೆ ಹಿಂದಿರುಗುತ್ತಿದ್ದಾಗ, ಮುಂಬೈ ವಿಮಾನ ನಿಲ್ದಾಣದಲ್ಲಿ ಮುಂಬೈ ಸಹರಾ ಠಾಣಾ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಸ್ತಗಿರಿ ಮಾಡಿ, ದಿನಾಂಕ: 06-05-2026 ರಂದು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಧೀಶರು ಆರೋಪಿತರಿಗೆ ನ್ಯಾಯಾಂಗ […]

ಸುರತ್ಕಲ್: ಮಹಿಳೆಯ ಕೊಲೆಗೈದು, 24 ಪವನ್ ಚಿನ್ನದ ಒಡವೆ ದೋಚಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಸರಿ-ಸುಮಾರು ಹನ್ನೆರಡು ವರ್ಷಗಳ ಹಿಂದೆ (2014 ರಲ್ಲಿ ) ಕುಳಾಯಿ ಹೊಸಬೆಟ್ಟುವಿನ ಕೋರ್ದಬ್ಬು ‘ಕಲ’ದ ಬಳಿಯ ನಿವಾಸಿ ಶ್ರೀಮತಿ ಸುಮತಿ ಪ್ರಭು ಎಂಬವರ ಕುತ್ತಿಗೆಗೆ ಚೂರಿಯಿಂದ ಕೊಯ್ದು, ಕೊಲೆ ಮಾಡಿ ಮೈಮೇಲಿದ್ದ ಸರಿ-ಸುಮಾರು 3 ಲಕ್ಷದ 80 ಸಾವಿರ ರೂಪಾಯಿ ಬೆಲೆ ಬಾಳುವ, 24 ಪವನ್ ತೂಕದ ಚಿನ್ನದ ಒಡವೆಗಳನ್ನು ದೋಚಿದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ 44/2014 ರಂತೆ ಪ್ರಕರಣನ್ನು ದಾಖಲಿಸಿಕೊಂಡ ಸುರತ್ಕಲ್ ಪೊಲೀಸರು ಪ್ರಕರಣದ ಆರೋಪಿಗಳಾದ ಶಿವರಾಮ್, ಭರತ್ ಪುರ ಜಿಲ್ಲೆ, ರಾಜಸ್ಥಾನ. […]

ರಾಜ್ಯ

ರಾಜ್ಯದ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನಾರಚನೆಯ ಗೊಂದಲಗಳಿಗೆ ಅಂತಿಮ ತೆರೆ ಎಳೆಯಲು ಮೂಹೂರ್ತ ಫಿಕ್ಸ್

ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳಿಗೆ ಇದೀಗ ಹೈಕಮಾಂಡ್ ತೆರೆ ಎಳೆಯಲು ಮುಂದಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಸಿ ನಡುವಿನ ಪವರ್ ಫೈಟ್‌ಗೆ ಮುಕ್ತಾಯ ಹಾಡಲು ದೆಹಲಿ ನಾಯಕರು ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಮೇ 15ರ ಒಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಳ್ಳಲು ಹೈಕಮಾಂಡ್ ತೀರ್ಮಾನಿಸಿದೆ. ಈ ಸಭೆಯಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆಯ ಕುರಿತು ಸುದೀರ್ಘ […]

ಗ್ರಾಮ ಪಂಚಾಯತ್ ಗಳ ಸದಸ್ಯತ್ವ ನಿಗದಿ; 2026 ಮೇ 8ರ ವರೆಗೆ ಸಾರ್ವಜನಿಕ ಆಕ್ಷೇಪಣೆಗೆ ಅವಧಿ ವಿಸ್ತರಣೆ.

ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತ್ ಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಸಾರ್ವಜನಿಕರ ಕೋರಿಕೆಯ ಮೇರೆಗೆ 2026ರ ಮೇ 08 ರ ಸಂಜೆ 5:30ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ಆನ್ ಲೈನ್ ಮೂಲಕ ತಮ್ಮ ಮನವಿಗಳನ್ನು https://rdpr.karnataka.gov.in/rdc/public/ ಈ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸುವವರು ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, […]

ರಾಷ್ಟ್ರೀಯ

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಶೇ.65 ರಷ್ಟು ಮಂದಿ ಶಾಸಕರು ಕ್ರಿಮಿನಲ್ ಹಿನ್ನಲೆಯುಳ್ಳವರು

ಕ್ರಿಮಿನಲ್ ಹಿನ್ನೆಲೆಯ ಶಾಸಕರ ಪಟ್ಟಿಯಲ್ಲಿ ಬಿಜೆಪಿ ಅಗ್ರಸ್ಥಾನ; ಕಾಂಗ್ರೆಸ್‌ನ ಇಬ್ಬರು ಶಾಸಕರ ಸ್ವಚ್ಛ ದಾಖಲೆ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರಲ್ಲಿ ಶೇ.65 ರಷ್ಟು ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ಎಡಿಆರ್ ನಡೆಸಿದ ಹೊಸ ವಿಶ್ಲೇಷಣೆಯು ಬಹಿರಂಗಪಡಿಸಿದೆ. ಇದು ಹಿಂದಿನ ಚುನಾವಣೆಗಿಂತ ತೀವ್ರ ಹೆಚ್ಚಳವಾಗಿದೆ. 2026 ರ ಚುನಾವಣೆಯಿಂದ ಗೆದ್ದ ಎಲ್ಲಾ 292 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ಅಧ್ಯಯನವು ಪರಿಶೀಲಿಸಿದೆ ಮತ್ತು 2021 ರಲ್ಲಿ 142 ಕ್ಕೆ ಹೋಲಿಸಿದರೆ 190 ಶಾಸಕರು […]

‘ರಾಹುಲ್ ಮಾಡೆಲ್’ ಅನುಷ್ಠಾನಕ್ಕೆ ಕಾಂಗ್ರೆಸ್ ನಲ್ಲಿ ಬಿಗಿ ಪಟ್ಟು.. ಹಿರಿ ತಲೆಗಳ ಸಲಹೆ ನಂಬಿ ಕೆಟ್ಟ ಕಾಂಗ್ರೆಸ್.!

ಎಐಸಿಸಿ ಯಲ್ಲಿ ಹಿರಿತಲೆಗಳಿಗೆ ಬೀಳಲಿದೆ ಬ್ರೇಕ್.. ಇನ್ಮುಂದೆ ಯುವಕರ ಪಾರುಪತ್ಯಕ್ಕೆ ಕಾಂಗ್ರೆಸ್ ನಲ್ಲಿ ನಡೆಯುತ್ತಿದೆ ಮೆಗಾ ಪ್ಲ್ಯಾನ್.! ದೇಶವಾಳಿದ ಕಾಂಗ್ರೆಸ್ ಸ್ಥಿತಿ ಅಧೋಗತಿಗೆ ಇಳಿದಿದೆ. ಕೆಲವೇ ಕೆಲವು ಸೀಮಿತ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಸ್ಮಿತೆ ಉಳಿದಿದೆ ಅಷ್ಟೇ. ಕರ್ನಾಟಕದಂತಹ ದೊಡ್ಡ ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸ್ವಂತ ಬಲದಿಂದ ಅಧಿಕಾರದಲ್ಲಿದೆ. ಇನ್ನುಳಿದ ಎರಡು ಸಣ್ಣ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ ಅಷ್ಟೇ. ಉಳಿದೆಲ್ಲ ಕಡೆ ಕಾಂಗ್ರೆಸ್ ಕಥೆ ಹರೋಹರ. ಅರವತ್ತು ವರ್ಷ ದೇಶವಾಳಿದ ಕಾಂಗ್ರೆಸ್ ಸಂಕಷ್ಟದ ದಿನಗಳಲ್ಲಿದೆ. ಕಾಂಗ್ರೆಸ್ […]

ಅಂತಾರಾಷ್ಟ್ರೀಯ

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್‌ ಗ್ರೂಪ್‌ ಮಾಲೀಕ ಗೌತಮ್‌ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ

ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್‌ ಗ್ರೂಪ್‌ ಮಾಲೀಕ ಗೌತಮ್‌ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್‌ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]

error: Content is protected !!