ಕರಾವಳಿ
ಬೆಳ್ತಂಗಡಿ: ಕಪ್ಪು ಕಲ್ಲು ಗಣಿಗಾರಿಕೆಯಿಂದ ಸ್ಥಳೀಯ ನಿವಾಸಿಗಳ ಮನೆ ಬಿರುಕು, ಆತಂಕದಲ್ಲಿ ಪರಿಸರವಾಸಿಗಳು
ಬರಾಯನಕೆರೆ ಸಂರಕ್ಷಣಾ ಸಮಿತಿಯಿಂದ ಡಿ.ಸಿ ಗೆ ದೂರು; ಸ್ಥಳಕ್ಕೆ ಅಧಿಕಾರಿಗಳ ದೌಡು, ಪರಿಶೀಲನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅಧಿಕಾರಿಗಳ ದಂಡು ಸಾಲು ಸಾಲಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಶನಿವಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಉಪಾಧೀಕ್ಷಕಿ ರೋಹಿಣಿ ಸಿ.ಕೆ ಸ್ಥಳಕ್ಕೆ […]
ಕುಂದಾಪುರ ಪತ್ರಕರ್ತ ವಿರುದ್ಧ ಹಲ್ಲೆ ನಡೆಸಿದ ಭ್ರಷ್ಟಾಚಾರಿ ವೈದ್ಯ ಅಮಾನತು ಅಲ್ಲ ವಜಾಗೊಳ್ಳಲಿ; ಹೆಚ್ಚಿದ ಆಗ್ರಹ
ಕುಂದಾಪುರ ಸರ್ಕಾರಿ ಆಸ್ಪತ್ರೆಯ ಭೃಷ್ಟಾಚಾರವನ್ನು ಬಯಲಿಗೆಳೆದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರ ಮೇಲೆ ವೈದ್ಯ , ಭೃಷ್ಟಾಚಾರಿ ಡಾ. ಮಹೇಂದ್ರ ಶೆಟ್ಟಿ ಬೀದಿರೌಡಿಗಳಂತೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯವಾಗಿದ್ದು , ಇದು ಪ್ರಜಾಪ್ರಭುತ್ವದ ಮೇಲಿನ ಹಲ್ಲೆಗೆ ಸಮವಾಗಿದೆ. ಕುಂದಾಪುರ ಸರ್ಕಾರಿ ಆಸ್ಪತ್ರೆಯ ಅಕ್ರಮ , ಭೃಷ್ಟಾಚಾರದ ವಿರುದ್ಧ ಜನಸಾಮಾನ್ಯರ ಧ್ವನಿಯಾಗಿ ಶ್ರೀಕಾಂತ್ ಹೆಮ್ಮಾಡಿ ಪತ್ರಿಕೆಯಲ್ಲಿ ವರದಿಯನ್ನು ಪ್ರಕಟಿಸಿದ್ದರು. ಇದನ್ನು ನೆಪವಾಗಿಟ್ಟುಕೊಂಡು ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಡಾ. ಮಹೇಂದ್ರ ಶೆಟ್ಟಿ ಪತ್ರಕರ್ತ ಹೆಮ್ಮಾಡಿರವರ ಮೇಲೆ ಮೃಗೀಯವಾಗಿ ಹಲ್ಲೆ ಮಾಡಿರುವುದು […]
ರಾಜ್ಯ
ಪ. ಜಾತಿ – ಪಂಗಡಗಳ ಹಲವು ಬೇಡಿಕೆ ಹಾಗೂ ಡಿಸಿ ಮನ್ನಾ ಜಮೀನು ಹಂಚಿಕೆ ವಿಚಾರವಾಗಿ ರಕ್ಷಿತ್ ಶಿವರಾಂ ನೇತ್ರತ್ವದಲ್ಲಿ ಸಚಿವರುಗಳ ಹಾಗೂ ಕೆಪಿಸಿಸಿ ಅಧ್ಯಕ್ಷರ ಬೇಟಿ
ಪ.ಜಾತಿ, ಪ.ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರನ್ನು ಕೆಪಿಸಿಸಿ ಕಛೇರಿಯಲ್ಲಿ ಹಾಗೂ ರಾಜ್ಯ ಕಂದಾಯ ಸಚಿವ, ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರನ್ನು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ […]
ನಕಲಿ ಔಷಧಿ ಜಾಲವನ್ನು ಬೇಧಿಸಿದ ಅಧಿಕಾರಿಗಳು; 5 ಕೋಟಿ ರೂ. ಮೌಲ್ಯದ ಔಷಧಿ, ಸಲಕರಣೆ ವಶ
ಬೆಂಗಳೂರು ಸಿ.ಕೆ.ತಾಂಡ್ಯ ಸಮೀಪದ ಫಾರ್ಮ್ಹೌಸ್ನಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಭಾರೀ ನಕಲಿ ಔಷಧಿ ಮರು ಪ್ಯಾಕಿಂಗ್ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡ ನಡೆಸಿದ ಈ ಮೆಗಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ 5 ಕೋಟಿ ರೂ. ಮೌಲ್ಯದ ಔಷಧಿಗಳು ಹಾಗೂ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಶಾಂತ್ ಎಂಬಾತ ಸ್ಥಳೀಯರಿಂದ ಫಾರ್ಮ್ಹೌಸ್ ವೊಂದನ್ನು ಗುತ್ತಿಗೆಗೆ ಪಡೆದು, ಕಳೆದೊಂದು ವರ್ಷದಿಂದ ಈ ಕೃತ್ಯ ನಡೆಸುತ್ತಿದ್ದನು. ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದಿಂದ […]
ರಾಷ್ಟ್ರೀಯ
ಪೋಷಕರನ್ನು ನೋಡಿಕೊಳ್ಳದಿದ್ದರೆ ಅವರ ಆಸ್ತಿಯಲ್ಲಿ ವಾಸಿಸುತ್ತಿರುವ ಮಕ್ಕಳು ಅಥವಾ ಇತರರು ಖಾಲಿ ಮಾಡಬೇಕು
ಹಿರಿಯ ನಾಗರಿಕರ ರಕ್ಷಣೆ, ಭದ್ರತೆ ಮತ್ತು ಗೌರವಯುತ ಜೀವನವನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿದ್ದಲ್ಲಿ, ಅವರ ಆಸ್ತಿಯಲ್ಲಿ ವಾಸಿಸುತ್ತಿರುವ ಮಕ್ಕಳು ಅಥವಾ ಇತರರನ್ನು ತೆರವುಗೊಳಿಸಲು ‘ತಂದೆ-ತಾಯಿ ಮತ್ತು ಹಿರಿಯ ನಾಗರಿಕರ ಪೋಷಣೆ ಹಾಗೂ ಕಲ್ಯಾಣ ಕಾಯ್ದೆ- 2007’ ರಡಿಯಲ್ಲಿ ರಚಿಸಲಾದ ನ್ಯಾಯಾಧಿಕರಣಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಅತ್ಯಂತ ಪ್ರಮುಖ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠವು, ಪುತ್ರ ಮತ್ತು ಸೊಸೆಯನ್ನು ಮನೆಯಿಂದ ತೆರವುಗೊಳಿಸುವಂತೆ ನೀಡಿದ್ದ ಆದೇಶವನ್ನು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು […]
ಇಡೀ ದೇಶಕ್ಕೆ 2002ರ ವರ್ಷವನ್ನು ಮೂಲ ವರ್ಷವಾಗಿ ನಿಗದಿಪಡಿಸಲಾಗಿದೆ. ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬರುವುದಿಲ್ಲ: ಸುಪ್ರೀಂ ಕೋರ್ಟ್
ಸಿಕ್ಕಿಂನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (SIR) 2002ನೇ ವರ್ಷವನ್ನು ಆಧಾರವಾಗಿರಿಸಿಕೊಂಡಿರುವ ಚುನಾವಣಾ ಆಯೋಗದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಕ್ಕಿಂ ಮೂಲನಿವಾಸಿ ಸುರಕ್ಷಾ ಸಂಘವು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯಾ ಬಾಗ್ಚಿ ಹಾಗೂ ವಿ. ಮೋಹನಾ ಅವರನ್ನೊಳಗೊಂಡ ಪೀಠವು ವಜಾಗೊಳಿಸಿದೆ. ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಗಾಗಿ 2002ರ ಬದಲಿಗೆ 1993 ಅನ್ನು ಮೂಲ ವರ್ಷವಾಗಿ ನಿಗದಿಪಡಿಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ […]
ಅಂತಾರಾಷ್ಟ್ರೀಯ
ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ
ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]
ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ
ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]
