ಕರಾವಳಿ

ನೀಟ್ ಫಲಿತಾಂಶ: ಕಮ್ಯೂನಿಟಿ ಸೆಂಟರ್ ನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ; ಹದಿನೈದಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ MBBS

ನೀಟ್ ಎದುರಿಸಿದ 108 ವಿದ್ಯಾರ್ಥಿಗಳ ಪೈಕಿ, ಪ್ರತಿ ವಿದ್ಯಾರ್ಥಿಯು ಸರಕಾರಿ ಪ್ರಾಯೋಜಿತ ಮೆಡಿಕಲ್ ಕೋರ್ಸ್ ಗೆ ಅರ್ಹತೆ; 100% ಫಲಿತಾಂಶ ಕಳೆದ ಐದು ವರ್ಷಗಳಿಂದ ಕಮ್ಯೂನಿಟಿ ಸೆಂಟರಿನ ನಿರಂತರ ಜಾಗೃತಿ, ಪ್ರೋತ್ಸಾಹ ಮತ್ತು ಪ್ರಯತ್ನದ ಫಲ, ನೀಟ್ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳಿಗೆ ಬೇರೆ ಬೇರೆ ಸಂಘ ಸಂಸ್ಥೆ, ಶಿಕ್ಷಣ ಸಂಸ್ಥೆಗಳ ಬೆಂಬಲ, ಮಾರ್ಗದರ್ಶನ ಮತ್ತು ನೆರವು ಒದಗಿ ಬರುತ್ತಿದೆ. ಸಮುದಾಯದಲ್ಲೂ ಹಲವು ಶಿಕ್ಷಣ ಸಂಸ್ಥೆಗಳು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯನ್ನು ಉನ್ನತ ಶ್ರೇಣಿಯಲ್ಲಿ ಆರಂಭಿಸಿದೆ. […]

ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ಬಂಧನ 10 ಲಕ್ಷ ಮೌಲ್ಯದ ಆಭರಣ ವಶ

ಮಂಗಳೂರು ನಗರದ, ಉರ್ವ ಮಾರ್ಕೆಟ್ ಬಳಿಯ ಮಠದಕಣಿ ಎಂಬಲ್ಲಿಯ ಮನೆಯವರು ದಿನಾಂಕ 11-07-2026 ರಂದು ಸಂಜೆ ಮನೆಗೆ ಲಾಕ್ ಮಾಡಿ, ಬಂಟ್ವಾಳದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಹೋಗಿ ದಿನಾಂಕ 12-07-2026 ರಂದು ವಾಪಾಸು ಬಂದು ನೋಡಿದಾಗ ಮನೆಯ ಹಿಂಬದಿಯ ಬಾಗಿಲು ಒಡೆದು ಯಾರೋ ಕಳ್ಳರು ಒಳ ನುಗ್ಗಿ ಮನೆಯಲ್ಲಿದ್ದ ಸುಮಾರು 64 ಗ್ರಾಂ ತೂಕದ ಚಿನ್ನಾಭರಣ ಹಾಗೂ 25 ಸಾವಿರ ರೂ. ಸೇರಿದಂತೆ ಒಟ್ಟು 8 ಲಕ್ಷದ 57 ಸಾವಿರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿರುವ ಬಗ್ಗೆ […]

ರಾಜ್ಯ

ರಾಹುಲ್‌ ಅನುಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ: ಸೋಮವಾರ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ; ಹೊಸ ಮುಖಗಳಿಗೆ ಅವಕಾಶ

ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಬುಧವಾರ ದೆಹಲಿಗೆ ತೆರಳಿದ್ದು, ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರ ಜತೆಗೆ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಡಿ.ಕೆ. ಶಿವಕುಮಾರ್‌ ಅವರ ಸಭೆ ನಡೆಸಲಿದ್ದಾರೆ. ಈ ಸಭೆಯ ನಂತರ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ಪ್ರತ್ಯೇಕ ಪಟ್ಟಿಯನ್ನು ಹೈಕಮಾಂಡ್‌ ನಾಯಕರಿಗೆ ನೀಡುವ […]

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ನೇಮಕಾತಿ ಆದೇಶ ರದ್ದು

ಮುಖ್ಯಮಂತ್ರಿಯವರ ಸಚಿವಾಲಯದ ಮೂರನೇ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ಅವರ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಕಳೆದ ಜುಲೈ 8, 2026 ರಂದು ರಾಘವೇಂದ್ರ ಭಟ್ ಅವರನ್ನು ಈ ಹುದ್ದೆಗೆ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಈ ನೇಮಕಾತಿ ಪ್ರಕಟವಾಗುತ್ತಿದ್ದಂತೆ ತೀವ್ರ ವಿವಾದ ಸೃಷ್ಟಿಯಾಗಿತ್ತು. ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ […]

ರಾಷ್ಟ್ರೀಯ

ಸಂತ್ರಸ್ತ ಕೈದಿಗಳ ಬಿಡುಗಡೆಗೆ ಏಕರೂಪ ನೀತಿ ರೂಪಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಈವರೆಗೂ ಜೈಲಿನಲ್ಲಿ ಕೊಳೆಯುತ್ತಿರುವ ವೃದ್ಧರು ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ಸೂಕ್ತ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್​ ಗುರುವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್​ ನಾಥ್​ ಮತ್ತು ಸಂದೀಪ್​ ಮೆಹ್ತಾ ಅವರಿದ್ದ ಪೀಠ ಈ ಮಹತ್ವದ ತೀರ್ಪು ನೀಡಿದೆ. ಈ ನೀತಿಯು ಕೈದಿಗಳ ಬಿಡುಗಡೆಗೆ ಇರಬೇಕಾದ ಅರ್ಹತಾ ಮಾನದಂಡಗಳು ಮತ್ತು ಕಾರ್ಯವಿಧಾನದ ಚೌಕಟ್ಟನ್ನು ಸ್ಪಷ್ಟವಾಗಿ […]

ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಪ್ರಕ್ರಿಯೆಗೆ ಅಧಿಕೃತವಾಗಿ ವೇಗ; ರಾಜ್ಯ ಚುನಾವಣಾ ಆಯೋಗದಿಂದ ಸಿದ್ಧತೆ, ಮಹತ್ವದ ಸುತ್ತೋಲೆ

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಸುವ ಪ್ರಕ್ರಿಯೆಗೆ ಈಗ ಅಧಿಕೃತವಾಗಿ ವೇಗ ಸಿಕ್ಕಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಗ್ರಾಮೀಣ ಭಾಗದಲ್ಲಿ ಈಗಿನಿಂದಲೇ ರಾಜಕೀಯ ಕಾವೇರತೊಡಗಿದೆ. 2027ರ ಮಾರ್ಚ್ ಅಂತ್ಯದೊಳಗೆ ಅವಧಿ ಮುಕ್ತಾಯಗೊಳ್ಳಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ಹೊಸದಾಗಿ ಪುನರ್‌ರಚಿತವಾಗಿರುವ 42 ಗ್ರಾಮ ಪಂಚಾಯಿತಿಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯೋಗ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

ನೀಟ್ ಫಲಿತಾಂಶ: ಕಮ್ಯೂನಿಟಿ ಸೆಂಟರ್ ನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ; ಹದಿನೈದಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ MBBS

ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ಬಂಧನ 10 ಲಕ್ಷ ಮೌಲ್ಯದ ಆಭರಣ ವಶ

ಮಂಗಳೂರಿನಲ್ಲಿ ಮತ್ತೆ ಚಾಕು, ಚೂರಿಯ ಆರ್ಭಟ.. ಈ ಬಾರಿ ಟಾರ್ಗೆಟ್ ಮಾತ್ರ ಅಮಾಯಕ ಹೆಣ್ಮಕ್ಕಳು.. ಏನಾಗುತ್ತಿದೆ ಮಂಗಳೂರಿನಲ್ಲಿ..?

ಸಂತ್ರಸ್ತ ಕೈದಿಗಳ ಬಿಡುಗಡೆಗೆ ಏಕರೂಪ ನೀತಿ ರೂಪಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ: ಖೋಟಾ ನೋಟು ಮುದ್ರಣ ಜಾಲ ಪತ್ತೆ. ಏಳು ಮಂದಿ ಆರೋಪಿಗಳ ಬಂಧನ; ಪ್ರಿಂಟಿಗ್ ಸಾಮಾಗ್ರಿ ವಶ

error: Content is protected !!