ಕರಾವಳಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ

ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಸಪ್ಲೆಯರ್ ಅಣ್ಣಪ್ಪ ಸ್ವಾಮಿ @ ಮನು, ಹೊಸಮನೆ ನಿಲಯ, ಇಡ್ಯಾ, ಕುಲಾಯಿ ಹೊಸಬೆಟ್ಟು, ಸುರತ್ಕಲ್. ಹಾಲಿ ವಾಸ: ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿ ಬಾಡಿಗೆ ಮನೆ ನಿವಾಸಿ, ಈತನನ್ನು ಮಾಲು […]

ಶಾಸಕರಿಂದ ಬೀದಿ ವ್ಯಾಪಾರಿಗಳ, ಅಧಿಕಾರಿಗಳ ಸಭೆ ರಾಜಕೀಯ ಪ್ರೇರಿತ: ಸಿಐಟಿಯು

ಮಂಗಳೂರು: ಮಂಗಳೂರು ನಗರದ ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳು ಮತ್ತು ಬೀದಿ ವ್ಯಾಪಾರಿಗಳ ಸಭೆಯು ರಾಜಕೀಯ ಪ್ರೇರಿತ ಎಂದು ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಆರೋಪಿಸಿದೆ. ಶಾಸಕರು ಬಹುಸಂಖ್ಯಾತ ಸದಸ್ಯರು ಇರುವ ಬೀದಿಬದಿ ವ್ಯಾಪಾರಸ್ಥರ ಸಂಘಟನೆಯ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸದೆ ಕೇವಲ ಒಂದು ವಿಭಾಗದ ಬೀದಿಬದಿ ವ್ಯಾಪಾರಿಗಳನ್ನು ಇಟ್ಟು ಸಭೆ ನಡೆಸಿರುವುದಲ್ಲದೆ ಬೀದಿ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಡೆಗಣಿಸಿ ಬೀದಿಬದಿ […]

ರಾಜ್ಯ

ರಾಜ್ಯದಲ್ಲಿ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ; ಸರ್ಕಾರ ಮಾರ್ಗಸೂಚಿ ಪ್ರಕಟ

ಮೇ 31, 2026ರ ಒಳಗಾಗಿ ನಿರ್ಮಾಣ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಸಾಮಾನ್ಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇಂಧನ ಇಲಾಖೆಯ ಅಪರ ಕಾರ್ಯದರ್ಶಿ ಈ ಕುರಿತು ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪಾಲಿಸಬೇಕಾದ ಕಾರ್ಯವಿಧಾನಗಳ ಆದೇಶವನ್ನು ರವಾನಿಸಿದ್ದಾರೆ. ಮೇ 31, 2026ರ ಒಳಗಾಗಿ ನಿರ್ಮಾಣ ಪೂರ್ಣಗೊಂಡು, ಈಗಾಗಲೇ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ವಸತಿ ಕಟ್ಟಡಗಳ ವಿವರಗಳನ್ನು ವಿದ್ಯುತ್ ಇಲಾಖೆ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು. ವಿದ್ಯುತ್ […]

ಕಿರುತೆರೆ ನಟಿಯ ವಂಚನೆ ಬಯಲು; ಶ್ರೀಮಂತ ಯುವಕರೇ ಈಕೆಯ ಟಾರ್ಗೆಟ್, ಹನಿಟ್ರ್ಯಾಪ್ ಶಂಕೆ, ನಟಿಯ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಉದ್ಯಮಿಗಳನ್ನು ಸಂಪರ್ಕಿಸಿ, ಆಭರಣ ಬಿಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಎಂಬಾಕೆಯನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈಕೆಯ ಮಾಯದ ಮಾತುಗಳಿಗೆ ಮರುಳಾಗಿ ಲಕ್ಷ ರೂಪಾಯಿ ಕಳೆದುಕೊಂಡ ಯುವಕನೊಬ್ಬ ನೀಡಿದ ದೂರಿನ ಮೇರೆಗೆ ಈಕೆಯನ್ನು ಪೊಲೀಸರು ಬಂಧಿಸಿರುತ್ತಾರೆ. ಈಕೆ ಚಾಲಾಕಿ ವಂಚಕಿ. ತುಂಬಾ ಚಾಣಾಕ್ಷತನದಿಂದ ವಂಚನೆ ಮಾಡುತ್ತಿದ್ದಳು. ಇನ್‌ಸ್ಟಾಗ್ರಾಮ್, ಫೇಸ್‌ಬುಕ್‌ಗಳ ಮೂಲಕ ತಾನು ಸೀರಿಯಲ್ ನಟಿ ಎಂದು ಶ್ರೀಮಂತ ಯುವಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದಳು. ಚಾಟಿಂಗ್ ಮೂಲಕ […]

ರಾಷ್ಟ್ರೀಯ

ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ಕಳ್ಳತನ ಪ್ರಕರಣ: ಎಂಟು ಮಂದಿ ಆರೋಪಿಗಳ ಬಂಧನ

ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡ ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿನ ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಂಧಿತ ಆರೋಪಿಗಳನ್ನು ಅವಿನಾಶ್ ಶುಕ್ಲಾ, ಅನುಕಲ್ಪ್ […]

ದಲಿತ ಚಳುವಳಿಯ ಜೊತೆಗೆ ಕಮ್ಯುನಿಸ್ಟ್ ಚಳುವಳಿಯನ್ನು ಬೆಸುಗೆ ಹಾಕಿದ ದೇಶದ ಮೊದಲ ದಲಿತ ಕಮ್ಯುನಿಸ್ಟ್ RB ಮೋರೆಯವರ ಜೀವನ ಚರಿತ್ರೆ ನಿಜಕ್ಕೂ ರೋಮಾಂಚನಕಾರಿ ಅನುಭವ

ಎಳೆಯ ಪ್ರಾಯದಲ್ಲೇ ಜಾತಿ ತಾರತಮ್ಯ, ಅಸ್ಪ್ರಶ್ಯತೆಯ ನೋವನ್ನುಂಡು ದಲಿತ ಸಮುದಾಯಕ್ಕಾಗುವ ಅವಮಾನ ಬೇಗುದಿಗಳನ್ನು ಸ್ವತಃ ಅನುಭವಿಸಿದ ಕಾಂ.ಆರ್ ಬಿ ಮೋರೆ ಈ ದೇಶ ಕಂಡಂತಹ ಮೊದಲ ದಲಿತ ಕಮ್ಯುನಿಸ್ಟ್. ಕಡು ಬಡತನ, ತೀವ್ರ ಸಂಕಷ್ಟಗಳನ್ನು ಎದುರಿಸಿದ ಮೋರೆಯವರು ಬಾಲ್ಯದಲ್ಲಿ ಶಿಕ್ಷಣ ಪಡೆಯಲಿಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದರು.ದಲಿತರ ನೋವಿಗೆ ಧ್ವನಿಯಾದ ಮೋರೆಯವರು ದಲಿತ ಚಳುವಳಿಗಾಗಿ ತನ್ನನ್ನು ತಾನು ಸಮರ್ಪಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ರವರಿಗೆ ಅತ್ಯಂತ ಸನಿಹದ ಸಹವರ್ತಿಯಾದರು.ಮಹಾಡ್ ಚಳುವಳಿಗೆ ಅಂಬೇಡ್ಕರ್ ರವರನ್ನು ಕರೆತರುವ ಮೂಲಕ ಅಂಬೇಡ್ಕರ್ ರವರು […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

error: Content is protected !!