ಕರಾವಳಿ
ಅಪಘಾತ ತಡೆಗಟ್ಟಲು ಮಂಗಳೂರು ಪೊಲೀಸರಿಂದ ವಿಶೇಷ ಕಾರ್ಯಾಚರಣೆ
ಬಿಕರ್ನಕಟ್ಟೆ-ಸಾಣೂರು 169 ರಾಷ್ಟ್ರೀಯ ಹೆದ್ದಾರಿಗೆ ಹೆಚ್ಚುವರಿ ಹೈವೇ ಪೆಟ್ರೋಲ್ ವಾಹನದ ನಿಯೋಜನೆ. ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಕಳೆದ ಒಂದು ವಾರದ ಅವಧಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರು ಮತ್ತು ವಿರುದ್ದ ದಿಕ್ಕಿನಲ್ಲಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಅಪಘಾತಗಳಲ್ಲಿ ತಲೆಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪುವ ಹಾಗೂ ಗಂಭೀರವಾಗಿ ಗಾಯಗೊಳ್ಳುವ ಪ್ರಕರಣಗಳು ಹೆಚ್ಚುತ್ತಿರುವುದಾಗಿದೆ. ಇದೇ […]
MDMA ಸಾಗಾಟ ಪ್ರಕರಣ. ಇಬ್ಬರು ಆರೋಪಿಗಳ ಸಹಿತ ಮಾದಕವಸ್ತು ಪೊಲೀಸರ ವಶ
ವೇಣೂರು: ನಿಷೇಧಿತ MDMA ಮಾದಕವಸ್ತು ಸಾಗಾಟದ ಬಗ್ಗೆ ಮಾಹಿತಿ ಬಂದ ಮೇರೆಗೆ, ವೇಣೂರು ಪೊಲೀಸ್ ಠಾಣಾ ಉಪ-ನಿರೀಕ್ಷಕರು ಪೊಲೀಸ್ ಸಿಬ್ಬಂದಿಗಳೊಂದಿಗೆ ಗುರುವಾಯನಕೆರೆ- ಮೂಡಬಿದ್ರೆ ರಸ್ತೆಯ, ಕಂಬಳದಡ್ಡ ಎಂಬಲ್ಲಿ KA-13 P-2905 ನೋಂದಣಿಯ ಕಾರಿನಲ್ಲಿ ಆರೋಪಿತರಾದ ಮಂಗಳೂರು ಮಿಜಾರು ನಿವಾಸಿ ಮಹಮ್ಮದ್ ತಹ್ನವೀರ್ ಹಾಗೂ ಮೂಡಬಿದ್ರೆ ನಿವಾಸಿ ಮಹಮ್ಮದ್ ಸಲ್ವಾನ್ ಎಂಬವರುಗಳು ಅಕ್ರಮವಾಗಿ ಸುಮಾರು 3.92ಗ್ರಾಂ ತೂಕದ MDMA ಎಂಬ ಮಾದಕವಸ್ತು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ, ಮಾಲು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿರುತ್ತಾರೆ. ಮಾದಕವಸ್ತು ಹಾಗೂ ಕೃತ್ಯಕ್ಕೆ […]
ರಾಜ್ಯ
ಜಾತಿ ಗಣತಿಯ ಅಂತಿಮ ವರದಿ; ಅತೀ ದೊಡ್ಡ ಸಮುದಾಯವಾಗಿ ಮುಸ್ಲಿಮರು, ಸರ್ಕಾರಕ್ಕೆ ಅಗ್ನಿಪರೀಕ್ಷೆ
ಸಿದ್ದರಾಮಯ್ಯನವರ ಕೈ ಸೇರಿದ, ರಾಜ್ಯ ರಾಜಕಾರಣದ ದಿಕ್ಸೂಚಿಯನ್ನೇ ಬದಲಿಸಬಲ್ಲ ವರದಿ ರಾಜ್ಯ ರಾಜಕಾರಣದ ದಿಕ್ಸೂಚಿಯನ್ನೇ ಬದಲಿಸಬಲ್ಲ ಸಾಮರ್ಥ್ಯವಿರುವ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ ನಾಯ್ಕ ಅವರು ಸಲ್ಲಿಸಿರುವ ಈ ವರದಿಯು ರಾಜ್ಯದ ಸಮುದಾಯಗಳ ಬಲಾಬಲದ ನೈಜ ಚಿತ್ರಣವನ್ನು ಬಿಚ್ಚಿಟ್ಟಿದ್ದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಮುಸ್ಲಿಂ ಸಮುದಾಯವು ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯ ಶೇಕಡಾ 14 ರಷ್ಟು ಅಂದರೆ ಬರೋಬ್ಬರಿ 80.14 ಲಕ್ಷ […]
ರಾಜ್ಯದ ನೂತನ ಮುಖ್ಯಮಂತ್ರಿಯ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್; ಜೂನ್ 5ರ ಶುಕ್ರವಾರದಂದು ಪ್ರಮಾಣ ವಚನ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದು ಸಂಪೂರ್ಣ ನಿಶ್ಚಿತವಾಗಿದೆ. ಇದೀಗ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ದಿನಾಂಕ ಹಾಗೂ ಮುಹೂರ್ತ ನಿಗದಿಯಾಗಿದ್ದು, ಜೂನ್ 5 ರಂದು ಶಕ್ತಿ ಪ್ರದರ್ಶನದೊಂದಿಗೆ ಡಿಕೆಶಿ ಪಟ್ಟಾಭಿಷೇಕ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿಂದೆ ಮೇ ಕೊನೆಯ ವಾರದ ಸೋಮವಾರ ಅಥವಾ ಬುಧವಾರದಂದೇ ಪ್ರಮಾಣ ವಚನ ನಡೆಯಲಿದೆ ಎಂಬ ದಟ್ಟ ವದಂತಿಗಳಿದ್ದವು. ಆದರೆ, ತಮ್ಮ ಪರಮಾಪ್ತ ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಮುಂದಿನ ಜೂನ್ 5ರ ಶುಕ್ರವಾರದಂದು ಪ್ರಮಾಣ ವಚನ ಸ್ವೀಕರಿಸಲು […]
ರಾಷ್ಟ್ರೀಯ
ರೆಡಿಯಾಗುತ್ತಿದೆ ಅಮಿತ ಯುದ್ದ ಸೂತ್ತ; ರಾಜ್ಯ ಬಿಜೆಪಿ ಅಣಿಯಾಗಬೇಕು, ಅಮಿತ್ ಶಾ ಸುಪಾರಿ
ಚನ್ನಿ-ವೀಡಿಗೆ ಡಿಕೆಶಿ ಫೆವಿಕಾಲ್.?, ಒಗ್ಗಟ್ಟಿನ ಮಹತ್ವ ವಿವರಿಸಿದ ಡಿಕೆಶಿ ✍️. ಆರ್.ಟಿ.ವಿಠ್ಟಲಮೂರ್ತಿ ಕಳೆದ ವಾರ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಕೇರಳಕ್ಕೆ ಹೋಗಿದ್ದರು. ಹೀಗೆ ಹೋದವರು ವಿ.ಡಿ.ಸತೀಶನ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದಾದ ನಂತರ ಸಮಾರಂಭಕ್ಕೆ ದಿಲ್ಲಿಯಿಂದ ಬಂದಿದ್ದ ಹಿರಿಯ ನಾಯಕರೊಬ್ಬರ ಜತೆ ಅವರು ಒನ್ ಟು ಒನ್ ಮಾತನಾಡಿದ್ದಾರೆ.ಹೀಗೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಬಗ್ಗೆ ಪ್ರಸ್ತಾಪಿಸಿ: ‘ಸಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ […]
ರಾಜ್ಯಸಭೆಗೆ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಲು ವರಿಷ್ಠರಿಗೆ ರಾಜ್ಯ ನಾಯಕರ ಶಿಫಾರಸು
ವಿಧಾನ ಪರಿಷತ್ತಿಗೆ ಬಿಜೆಪಿಗೆ 2 ಸ್ಥಾನ, ಆಕಾಂಕ್ಷಿಗಳ ದಂಡು.! ರಾಜ್ಯಸಭೆಯ ಸ್ಥಾನಗಳಿಗೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಬೇಕು ಎಂದು ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ. ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್, ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಮ್ಮುಖದಲ್ಲಿ ಪ್ರಮುಖರ ಸಭೆ ಗುರುವಾರ ನಡೆಯಿತು. ಸದಾನಂದ ಗೌಡ ಅವರು ಬಿಜೆಪಿ […]
ಅಂತಾರಾಷ್ಟ್ರೀಯ
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
