ಕರಾವಳಿ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡದಿದ್ದಲ್ಲಿ ಜನಪ್ರತಿನಿಧಿಗಳಿಗೆ ತಕ್ಕಪಾಠ ಕಲಿಸುತ್ತೇವೆ: ಮುನೀರ್ ಕಾಟಿಪಳ್ಳ

ಸರಕಾರಿ ಆಸ್ಪತ್ರೆಗಳ ಬಲವರ್ಧನೆಗೆ ಆಗ್ರಹಿಸಿ ಗಂಜಿಮಠದಲ್ಲಿ ಬೃಹತ್ ಮಾನವ ಸರಪಳಿ ಸರಕಾರಿ ಆಸ್ಪತ್ರೆಗಳನ್ನು ಬಲವರ್ಧನೆಗೊಳಿಸಿ ಎಂದು ಜನರು ಆಗ್ರಹಿಸುತ್ತಿದ್ದರೆ, ಆರೋಗ್ಯ ಸಚಿವ ಯು.ಟಿ ಖಾದರ್ ಖಾಸಗಿಯವರ ಮಡಿಲಿಗೆ ಹಾಕಲು ಹೊರಟಿದ್ದಾರೆ. ಕಿದ್ವಾಯಿ ಕ್ಯಾನ್ಸರ್, ಜಯದೇವ ಹೃದಯದ ಆಸ್ಪತ್ರೆಗಳ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸಿ ಎಂದು ಬೇಡಿಕೆ ಇಟ್ಟರೆ ಮೈಸೂರು ದಸರಾದಲ್ಲಿ ಕಂಬಳ ಆಯೋಜಿಸುವ ಗಿಲೀಟಿನ ಮಾತುಗಳನ್ನು ಸರಕಾರ ಆಡುತ್ತದೆ. ವಿರೋಧ ಪಕ್ಷದ ಬಿಜೆಪಿ ಶಾಸಕರುಗಳು ಸರಕಾರದ ಇಂತಹ ಜನವಿರೋಧಿ ಧೋರಣೆಗಳ ವಿರುದ್ದ ಸೊಲ್ಲೆತ್ತುತ್ತಿಲ್ಲ. ಮಂಗಳೂರು ಉತ್ತರದ ಶಾಸಕ ಭರತ್ […]

ಹದಿನಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಾಡಸ್ವಾಮಿಯ ಬಂಧನ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ.ಸಂ:09/2005, ಕಲಂ 457,380 r/w 34 IPC ಪ್ರಕರಣದಲ್ಲಿ ಆರೋಪಿಯಾದ ತಮಿಳುನಾಡು ಮೂಲದ ತಿರುಣವೇಲಿ ನಿವಾಸಿ ಮಾಡಸ್ವಾಮಿ ಎಂಬಾತನು ಸುಮಾರು 16 ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಪೊಲೀಸರ ಕಣ್ಣು ತಪ್ಪಿಸಿ, ತಲೆಮರೆಸಿಕೊಂಡಿದ್ದ. ಈತನನ್ನು ಉಪ್ಪಿನಂಗಡಿ ಪೊಲೀಸರು ಬೆನ್ನುಹತ್ತಿ ಕೃಷ್ಣ ನಗರ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿ ಮಾಡಸ್ವಾಮಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ; ಅಕ್ಷೇಪಾರ್ಹ ಕಮೆಂಟ್ಸ್, ಆರೋಪಿಯ ಬಂಧನ .

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್‌ಬುಕ್‌ ಪೇಜ್‌ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಿನಾಂಕ:18-09-2025 ರಂದು ಅ.ಕ್ರ.ಸಂ:131/2025ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು ಬೆಂಗಳೂರು ವಿದ್ಯಮಾನ್ಯ ನಗರದ ನಿವಾಸಿ, ಆನಂದ.ಎ ಎಂಬಾತನನ್ನು ದಿನಾಂಕ: 27/06/2026 ರಂದು ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿ ಆನಂದ ಎಂಬಾತನ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ […]

ರಾಜ್ಯ ವಕೀಲರ ಪರಿಷತ್ತಿಗೆ AILU ಅಭ್ಯರ್ಥಿ ಬಸವರಾಜ್ ವಿ. ಕೋರಿಮಠ ಆಯ್ಕೆ

ಬಸವರಾಜ್ ವಿ.ಕೋರಿಮಠ ರವರ ಗೆಲುವು ನ್ಯಾಯಕ್ಕೆ ಸಂದ ಗೌರವ: ಅಖಿಲ ಭಾರತ ವಕೀಲರ ಒಕ್ಕೂಟ, ದ.ಕ.ಜಿಲ್ಲಾ ಘಟಕ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ 2026ರ ಚುನಾವಣೆಯಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಮುಖಂಡರಾದ ಹುಬ್ಬಳ್ಳಿಯ ಬಸವರಾಜ್ ವಿ.ಕೋರಿಮಠ ಗೆಲುವು ಸಾಧಿಸಿದ್ದು, ಅಖಿಲ ಭಾರತ ವಕೀಲರ ಒಕ್ಕೂಟ, ದ.ಕ ಜಿಲ್ಲಾ ಸಮಿತಿ ಅಭಿನಂದನೆಗಳನ್ನು ಸಲ್ಲಿಸಿದೆ. ಹುಬ್ಬಳ್ಳಿಯಲ್ಲಿ ವಕೀಲ ವೃತ್ತಿ ನಡೆಸುತ್ತಿರುವ ಬಸವರಾಜ್ ವಿ. ಕೋರಿಮಠರವರು AILU ಸಂಘಟನೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು, ಸಿವಿಲ್ ನ್ಯಾಯಾಧೀಶರ ಹುದ್ದೆಯ ಆಕಾಂಕ್ಷಿಗಳಿಗೆ ಹಾಗೂ […]

ರಾಷ್ಟ್ರೀಯ

ಪ್ರೀತಿಯ ನಾಟಕವಾಡಿ, ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ; ಆರೋಪ ಸಾಬೀತು, ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಹೈದರಾಬಾದ್‌ಗೆ ಕರೆದೊಯ್ದು ಹಲವಾರು ದಿನಗಳ ಕಾಲ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದರಿಂದ ಸೇಡಂ ತಾಲ್ಲೂಕಿನ ನಿವಾಸಿ ನವೀನ್ ಕುಮಾರ್ ದಸ್ತಪ್ಪ ದುದ್ಯಾಲ ಎಂಬಾತನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 55 ಸಾವಿರ ರೂ. ದಂಡ ವಿಧಿಸಿದೆ. 2025ರ ಮಾರ್ಚ್ 30ರಂದು ಬಾಲಕಿಗೆ ಕರೆ ಮಾಡಿ ಮಾತನಾಡುವುದಿದೆ ಎಂದು ಕರೆಸಿಕೊಂಡು ಪ್ರೀತಿಸುವುದಾಗಿ ಹೇಳಿ ಪಾಳು ಬಿದ್ದ ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಜುಲೈ […]

ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ಕಳ್ಳತನ ಪ್ರಕರಣ: ಎಂಟು ಮಂದಿ ಆರೋಪಿಗಳ ಬಂಧನ

ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡ ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿನ ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಂಧಿತ ಆರೋಪಿಗಳನ್ನು ಅವಿನಾಶ್ ಶುಕ್ಲಾ, ಅನುಕಲ್ಪ್ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

error: Content is protected !!