ಕರಾವಳಿ
ಸ್ವಾತಂತ್ರ್ಯ ಲಭಿಸಿ 79 ವರ್ಷಗಳಾದರೂ ಇನ್ನೂ ದಲಿತ, ಆದಿವಾಸಿಗಳ ಅಭಿವೃದ್ಧಿ ಮರೀಚಿಕೆ
ಕಾಲು ಸಂಕ, ರಸ್ತೆ ವಂಚಿತ ಕುಗ್ರಾಮಕ್ಕೆ ಅಧಿಕಾರಿಗಳ ದೌಡು, ಬೆಳ್ತಂಗಡಿಯಲ್ಲೊಂದು ಕಣ್ಣೀರ ಕಥೆ ಯಾರಿಗೆ ಬಂತು, ಎಲ್ಲಿಗೆ ಬಂತು ನಲ್ವತ್ತೇಳರ ಸ್ವಾತಂತ್ರ್ಯ ಹಾಡಿಗೆ ಕಿವಿಯಾದ ಅಧಿಕಾರಿಗಳುಬರೆಮೇಲು ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶಕ್ಕೆ ಅಧಿಕಾರಿಗಳ ದಂಡು. ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ/ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದ ಕಾಲುಸಂಕದ ವಿಚಾರ ವ್ಯಾಪಕ ಚರ್ಚೆ ಆಕ್ರೋಶಕ್ಕೆ ಕಾರಣವಾಗಿತ್ತು. ಬಜಕ್ರೆಸಾಲು ಪ್ರದೇಶದ 8-10 ಪರಿಶಿಷ್ಟ […]
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಸೌಜನ್ಯ ತಾಯಿ ಕುಸುಮವತಿ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ.ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ವಿಚಾರಣೆ ವೇಳೆ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿತು. ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿತು. ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಮುಂದುವರಿಸಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್ಐಟಿ […]
ರಾಜ್ಯ
ನಕಲಿ ಪಿಎಚ್ ಡಿ ಪ್ರಮಾಣ ಪತ್ರ ಪ್ರಕರಣ: 249 ಅತಿಥಿ ಉಪನ್ಯಾಸಕರು ಸೇವೆಯಿಂದ ವಜಾ; ಕಪ್ಪು ಪಟ್ಟಿಗೆ ಸೇರಿಸುವಂತೆ ಸರಕಾರದ ಆದೇಶ
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಮತ್ತು ಅಮಾನ್ಯ ಪಿಎಚ್ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ ಬೃಹತ್ ಹಗರಣವನ್ನು ಕಾಲೇಜು ಶಿಕ್ಷಣ ಇಲಾಖೆ ಬಯಲಿಗೆಳೆದಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ 249 ಅಭ್ಯರ್ಥಿಗಳ ಪಿಎಚ್ಡಿ ಪ್ರಮಾಣಪತ್ರಗಳು ನಕಲಿ ಅಥವಾ ಅಮಾನ್ಯ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ, ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. 2025-26ನೇ ಶೈಕ್ಷಣಿಕ ವರ್ಷದ ನೇಮಕಾತಿ ವೇಳೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಿಲಿಂಗ್ ಮೂಲಕ ನೇಮಕ ಮಾಡಲಾಗಿತ್ತು. […]
ಜಿಬಿಎ ಅಧಿಕಾರಿಗಳಿಗೆ ಹಲ್ಲೆ, ಜೀವ ಬೆದರಿಕೆ ಪ್ರಕರಣ: ಆರೋಪಿ ಬಸವರಾಜ ಪಡುಕೋಟೆ ವಿರುದ್ಧ ಗೂಂಡಾ ಕಾಯ್ದೆಗೆ ಚಿಂತನೆ
ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಈತನ ವಿರುದ್ದ ಈಗಾಗಲೇ ಹಲವಾರು ಠಾಣೆಗಳಲ್ಲಿ 19ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಹಫ್ತಾ ವಸೂಲಿ ಸೇರಿದಂತೆ ಹಲವು ಅಪರಾಧಿ ಚಟುವಟಿಕೆಗಳು ಭಾಗಿಯಾಗಿ, ಮಿತಿಮೀರಿರುವ ಹಿನ್ನೆಲೆಯಲ್ಲಿ ಕಠಿಣ ಕಾನೂನಿನಡಿ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಅಧಿಕಾರಿಗಳ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ 12 ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ […]
ರಾಷ್ಟ್ರೀಯ
ಸೈಬರ್ ಅಪರಾಧಿಗಳಿಗೆ ನಕಲಿ ಬ್ಯಾಂಕಿಂಗ್ ಅಪ್ಲಿಕೇಶನ್ ಮತ್ತು ಮಾಲ್ವೇರ್ ತುಂಬಿದ APK ಫೈಲ್ ಪೂರೈಕೆ, 17 ವರ್ಷದ ಪೋರ ಡೆವಲಪರ್ನ ಬಂಧನ
ದೇಶಾದ್ಯಂತ ಸೈಬರ್ ಕ್ರಿಮಿನಲ್ ಗಳಿಗೆ ನಕಲಿ ಬ್ಯಾಂಕಿಂಗ್ ಅಪ್ಲಿಕೇಶನ್ಗಳು ಮತ್ತು ಮಾಲ್ವೇರ್ ತುಂಬಿದ APK ಫೈಲ್ಗಳನ್ನು ರಚಿಸಿ ಪೂರೈಸಿದ ಆರೋಪದ ಮೇಲೆ ಗುಜರಾತ್ನ ಸೂರತ್ ಸೈಬರ್ ಕ್ರೈಮ್ ಸೆಲ್ ಉತ್ತರ ಪ್ರದೇಶದ ಕಾನ್ಪುರದ 17 ವರ್ಷದ ಡೆವಲಪರ್ನನ್ನು ಬಂಧಿಸಲಾಗಿದೆ. ಆರೋಪಿಯು 11 ನೇ ತರಗತಿಯವರೆಗೆ ಮಾತ್ರ ಅಧ್ಯಯನ ಮಾಡಿದ್ದರೂ, ದೊಡ್ಡ ಪ್ರಮಾಣದ ಸೈಬರ್ ವಂಚನೆ ಕಾರ್ಯಾಚರಣೆಗಳಲ್ಲಿ ಬಳಸಲಾಗುತ್ತಿದ್ದ ಅತ್ಯಾಧುನಿಕ ಸಾಧನಗಳನ್ನು ಅಭಿವೃದ್ಧಿಪಡಿಸಲು ಕೃತಕ ಬುದ್ಧಿಮತ್ತೆ ಮತ್ತು ಟೆಲಿಗ್ರಾಮ್ ಅನ್ನು ಬಳಸಿದ್ದಾನೆ. ಬಂಧಿತನನ್ನು ರೋಹಿತ್ ವೀರೇಂದ್ರ ಸಿಂಗ್ ಶಕ್ಯಾ […]
ಸಿಜೆಪಿ ಜೊತೆ ಮಾತುಕತೆಗೆ ಮುಂದಾದ ಕೇಂದ್ರ ಸರಕಾರ; ಸಚಿವ ಜೆ.ಪಿ. ನಡ್ಡಾ ಜೊತೆ ಮಾತುಕತೆ
ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳನ್ನು ಪ್ರಶ್ನಿಸಿ ಕಾಕ್ರೋಜ್ ಜನತಾ ಪಾರ್ಟಿಯ ನೇತೃತ್ವದಲ್ಲಿ ದೆಹಲಿಯಲ್ಲಿ ಇಂದು ಸಂಸತ್ ಚಲೋ ಎಂಬ ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ. ಈ ಪ್ರತಿಭಟನೆಗೆ ದೆಹಲಿ ಪೊಲೀಸರ ಅನುಮತಿ ಇರದ ಕಾರಣ ಕೆಲ ಕಡೆಗಳಲ್ಲಿ ಲಾಠಿ ಚಾರ್ಜ್ ಕೂಡ ಆಗಿದೆ ಎಂದು ವರದಿಯಾಗಿದೆ. ಇದರ ನಡುವೆ ಪ್ರತಿಭಟನೆಯ ತೀವ್ರತೆಯನ್ನು ಅರಿತ ಕೇಂದ್ರ ಸರ್ಕಾರವು ಸಿಜೆಪಿಯೊಂದಿಗೆ ಮಾತುಕತೆಗೆ ಮುಂದಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಕಾಕ್ರೋಚ್ ಜನತಾ ಪಕ್ಷದ ಪ್ರತಿನಿಧಿಗಳು […]
ಅಂತಾರಾಷ್ಟ್ರೀಯ
ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ
ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
