ಕರಾವಳಿ

ನಾವೂರು: ಒಂಬತ್ತು ವರ್ಷಗಳ ಹಿಂದೆ ಡಾಮರೀಕರಣಗೊಂಡ ರಸ್ತೆ; ಇಂದು ಕಂಬಳದ ಗದ್ದೆಯನ್ನು ನಾಚಿಸುವಂತಾಗಿದೆ

ಇದು ಕೇವಲ ಒಂಬತ್ತು ವರ್ಷಗಳ ಹಿಂದೆ ನಡೆದ ರಸ್ತೆ ಡಾಮರೀಕರಣಗೊಂಡ ರಸ್ತೆಯ ಇಂದಿನ ಪರಿಸ್ಥಿತಿ. ಇಲ್ಲಿ ರಸ್ತೆಯಲ್ಲಿ ಗುಂಡಿ ಇದೆಯೋ.. ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ.. ಎಂದು ಅರ್ಥವಾಗದ ಸ್ಥಿತಿಯಲ್ಲಿದೆ.! ಇದು ನಾವೂರು ಗ್ರಾಮದ ಕೈಕಂಬ ಜಂಕ್ಷನ್ ನಿಂದ ಮೂರು ಮಾರ್ಗ ಸಂಪರ್ಕಿಸುವ ರಸ್ತೆಯ ಕಥೆ, ವ್ಯಥೆ.! ನಾವೂರು ಗ್ರಾಮದ ಕೈಕಂಬ ಜಂಕ್ಷನ್ ನಿಂದ ಫಾರೆಸ್ಟ್ ಬಂಗಲೆಗೆ ಸಂಪರ್ಕಿಸುವ 1.40 ಕಿಮೀ ದೂರದ ರಸ್ತೆಯನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ-ವಿಭಾಗ ಬೆಳ್ತಂಗಡಿ ಇದರಿಂದ 50 ಲಕ್ಷ ರೂಪಾಯಿ […]

ಕುಖ್ಯಾತ ರೌಡಿ ಮನೋಜ್ ಕೋಡಿಕೆರೆ ಮತ್ತು ಚೇತು ಪಡೀಲ್ ಬಂಧನ.

ಬಾತ್ಮೀದಾರರಿಗೆ ಘೋಷಿಸಲಾಗಿದ್ದ ನಗದು ಮೊತ್ತವನ್ನು ಪೊಲೀಸ್ ಇಲಾಖೆಯಿಂದ ವಿತರಣೆ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೋಕಾ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಗ್ಗೆ ಮಾಹಿತಿ ನೀಡಿದ ಬಾತ್ಮೀದಾರರಿಗೆ ಘೋಷಿಸಲಾಗಿದ್ದ ನಗದು ಮೊತ್ತವನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಕೋಕಾ ಕಾಯ್ದೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮನೋಜ್ ಕುಲಾಲ್ @ ಮನೋಜ್ ಕೋಡಿಕೆರೆ ಹಾಗೂ ಚೇತನ್ @ ಚೇತು ಪಡೀಲ್ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಸಾರ್ವಜನಿಕರಿಂದ ಮಾಹಿತಿ ಕೋರಿದ್ದ […]

ರಾಜ್ಯ

ಟೇಕ್ ಆಫ್ ಆಗುತ್ತಿದೆ ‘ಡಿಕೆ’ ಫ್ಲೈಟ್; ರಾಹುಲ್ ಗಾಂಧಿ ಚೀಟಿ ರಹಸ್ಯ.!, ಅಹಿಂದ ಪಿಲ್ಲರುಗಳೇ ಇಲ್ಲ

ಸಂಪುಟಕ್ಕೆ ಸೇರುವವರು ಯಾರು?; ಸ್ಪೀಕರ್ ಹುದ್ದೆಗೆ ಹೆಚ್ಕೆ ಇಲ್ಲವೇ ದಿನೇಶ್? ✍️.ಅರ್.ಟಿ.ವಿಠ್ಢಲಮೂರ್ತಿ ಕಳೆದ ವಾರ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಬಂದಿದ್ದ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಒಂದು ಚೀಟಿ ಹೊರತೆಗೆದರಂತೆ. ಅವರೇನು ಮಾಡುತ್ತಾರೆ ಅಂತ ಮುಖ್ಯಮಂತ್ರಿಗಳು ನೋಡುತ್ತಿದ್ದಂತೆಯೇ ಅವರ ಕೈಗೆ ರಾಹುಲ್ ಗಾಂಧಿ ಈ ಚೀಟಿಯನ್ನು ಕೊಟ್ಟಿದ್ದಾರೆ. ಅವರು ಕೊಟ್ಟ ಚೀಟಿಯನ್ನು ಡಿ.ಕೆ.ಶಿವಕುಮಾರ್ ಅವರು ಬಿಚ್ಚಿ ನೋಡಿದರೆ ಅದರಲ್ಲಿ ಕೃಷ್ಣ ಭೈರೇಗೌಡರ ಹೆಸರು ಕಾಣಿಸಿದೆ.ಅದನ್ನು ಅವರು ನೋಡುತ್ತಿದ್ದಂತೆಯೇ ರಾಹುಲ್ ಗಾಂಧಿ […]

ಕೋಕಾ ಪ್ರಕರಣ: ಬಂಧಿತ ಆರೋಪಿಗಳಿಗೆ ಮೈಸೂರಿನ KCOCA ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು

ಕೋಕಾ ಪ್ರಕರಣದಲ್ಲಿ ಬಂದಿತರಾಗಿದ್ದ ಶ್ಯಾಮ್ ಸುಂದರ್ ಶೆಟ್ಟಿ, ಸುವಿನ್ ಕಾಂಚನ್ @ ಮುನ್ನ ಹಾಗೂ ಅಕ್ಷಯ್ ಎಂಬುವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಮೈಸೂರಿನ KCOCA ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ದಿನಾಂಕ 01-01-2026 ರಂದು ಸಂಜೆ ಸುಮಾರು 5:30ರ ಸಮಯಕ್ಕೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಮಂತೂರು ಗ್ರಾಮದ ಅಂಗಾರಗುಡ್ಡೆ ಎಂಬಲ್ಲಿ ಸಹಜುದ್ದೀನ್ ಆತನ ತಂದೆಯೊಂದಿಗೆ ಜಗ್ಗು ಶೆಟ್ಟಿ ಎಂಬವರ ಕೊಟ್ಟಿಗೆಯಲ್ಲಿ ಸಾಕುತ್ತಿದ್ದ ಕಂಬಳದ ಕೋಣಗಳ ಚಕಾರಿ ಮಾಡುತ್ತಿರುವ […]

ರಾಷ್ಟ್ರೀಯ

ಪೊಲೀಸರ ಒಂದು ಸಣ್ಣ ಎಡವಟ್ಟು, ಜೈಲು ಪಾಲಾಗಿ, ಶಿಕ್ಷೆ ಅನುಭವಿಸಿದ ಅಮಾಯಕ

ಜೈಲಲ್ಲೇ ಕೂತು ಕಾನೂನು ಪುಸ್ತಕ ಓದಿ, ಹೈಕೋರ್ಟಲ್ಲಿ ತನ್ನ ಪರ ತಾನೇ ವಾದ ಮಾಡಿ ಗೆದ್ದ ಶೆಟ್ಟಿ ಪೊಲೀಸರ ಒಂದು ಸಣ್ಣ ಎಡವಟ್ಟಿನ ಬೇಜವಾಬ್ದಾರಿ, ನಿರ್ಲಕ್ಷತನದಿಂದ ಒಬ್ಬ ಅಮಾಯಕನ ಬದುಕನ್ನೇ ಹೇಗೆ ನರಕ ಮಾಡಬಹುದು ಅನ್ನೋದಕ್ಕೆ ಈ ಘಟನೆ ಒಂದು ಜೀವಂತ ಉದಾಹರಣೆ. ಹೆಸರಿನ ಸಾಮ್ಯತೆ ಇದೆ ಅನ್ನೋ ಒಂದೇ ಒಂದು ಕಾರಣಕ್ಕೆ ಪೊಲೀಸರು ಮಾಡಿದ ಮಹಾ ಎಡವಟ್ಟಿನಿಂದಾಗಿ, ಒಬ್ಬ ವ್ಯಕ್ತಿ ತನ್ನ ಯೌವನದ ಪ್ರಮುಖ ಏಳು ವರ್ಷಗಳನ್ನು ಜೈಲಿನ ಕತ್ತಲ ಕೋಣೆಯಲ್ಲಿ ಕಳೆಯಬೇಕಾಗಿ ಬಂತು. ಜೈಲಿನಿಂದ […]

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಜೂನ್ ಆರರಂದು ನೀಟ್ ಪರೀಕ್ಷೆ ಅವ್ಯವಸ್ಥೆ ವಿರುದ್ದ CJP ಯಿಂದ ಪ್ರತಿಭಟನೆ

ದೆಹಲಿ: ಪರೀಕ್ಷಾ ಸಂಬಂಧಿತ ಲೋಪದೋಷ, ವಿವಾದಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಜೂನ್ 6 ರಂದು ಭಾರತಕ್ಕೆ ಮರಳುವುದಾಗಿ ಹಾಗೂ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ಯ ಸ್ಥಾಪಕ ಅಭಿಜೀತ್ ದಿಪ್ಕೆ ಸೋಮವಾರ ಘೋಷಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪರೀಕ್ಷಾ ಸಂಬಂಧಿತ ಗೊಂದಲಗಳು ಮತ್ತು ವಿವಾದಗಳು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿವೆ ಮತ್ತು ಸರ್ಕಾರವು ಇದಕ್ಕೆ ಹೊಣೆಗಾರಿಕೆಯನ್ನು ಹೊರಬೇಕು ಎಂದು ಹೇಳುತ್ತಾ, ವಿದ್ಯಾರ್ಥಿಗಳು ಮತ್ತು ಬೆಂಬಲಿಗರು ಈ ಅಭಿಯಾನದಲ್ಲಿ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

error: Content is protected !!