ಕರಾವಳಿ
ಸುಳ್ಯ: ಕಳ್ಳತನ ಹಾಗೂ ಪೊಲೀಸ್ ವಶದಿಂದ ಪರಾರಿಯಾದ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ:
ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 96/2006 ಹಾಗೂ 103/2018 ರ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸುಳ್ಯ ಅಜ್ಜಾವರ ನಿವಾಸಿ ಎ. ಎಮ್ ಅಜೀಜ್ ಎಂಬಾತನ ವಿರುದ್ದ ಮಾನ್ಯ SCJ ಮತ್ತು JMFC ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾದೀಶರಾದ ಶ್ರೀಮತಿ ದಮಯಂತಿರವರು ಆರೋಪಿಯ ವಿರುದ್ಧದ ಆರೋಪಗಳು ಸಾಭೀತಾದ ಹಿನ್ನೆಲೆಯಲ್ಲಿ ಶಿಕ್ಷೆಯನ್ನು ವಿಧಿಸಿ ಆದೇಶ ನೀಡಿರುತ್ತಾರೆ. ಪ್ರಕರಣದ ಅ.ಕ್ರ: 103/2018 ರಲ್ಲಿ ಒಂದು ವರ್ಷಗಳ ಸಾದಾ ಕಾರಾಗೃಹ ವಾಸ ಹಾಗೂ 5,000 ರೂ. ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 45 […]
ಧರ್ಮಸ್ಥಳ ಪೊಲೀಸರ ಮಿಂಚಿನ ಕಾರ್ಯಾಚರಣೆ; ಅಕ್ರಮ ದನ ಸಾಗಾಟ ಮಾಡುತ್ತಿದ್ದ ಅನಿಲ್ ಪೊಲೀಸರ ವಶಕ್ಕೆ
ಭಟ್ಟರಿಂದ ಜಾನುವಾರು ಖರೀದಿಸಿ ವಧೆ ಮಾಡಲು ಕೊಂಡೊಯ್ಯುತ್ತಿದ್ದ ತೋಮಸ್, ಕಬೀರ್ ಮೇಲೂ ಎಫ್ ಐಆರ್ ಕ್ರಮ ಜಾನುವಾರು ಸಾಗಾಟದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಉಪ ನಿರೀಕ್ಷಕರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿಯವರು ಠಾಣಾ ಸಿಬ್ಬಂದಿಗಳೊಂದಿಗೆ ಬೆಳ್ತಂಗಡಿಯ ಸೋಮಂತಡ್ಕ ಮಂಜುಶ್ರೀ ಬಸ್ ನಿಲ್ದಾಣದ ಬಳಿ ತೆರಳಿ, ದನ ಸಾಗಾಟ ಮಾಡುತ್ತಿದ್ದ ಆರೋಪಿ ಬೆಳ್ತಂಗಡಿ ತೋಟತ್ತಾಡಿ ನಿವಾಸಿ ಅನಿಲ್ ಪಿ ಎಂಬಾತನು ಯಾವುದೇ ಪೂರ್ವಾನುಮತಿ ದಾಖಲೆಗಳನ್ನು ಪಡೆಯದೆ ಪಿಕ್ ಅಪ್ ವಾಹನದಲ್ಲಿ ಒಂದು ಜಾನುವಾರನ್ನು ಸಾಗಿಸುತ್ತಿರುವುದು ಪತ್ತೆಯಾಗಿರುತ್ತದೆ. ಆರೋಪಿ […]
ರಾಜ್ಯ
‘ಒನ್ ಮ್ಯಾನ್ ಆರ್ಮಿ ‘ ಬಿಟ್ಟುಬಿಡಿ; ನಾಯಕರನ್ನು ಒಗ್ಗಟ್ಟಿನಿಂದ ಕರೆದುಕೊಂಡು ಹೋಗಿ: ಸಿಎಂ ಡಿಕೆಶಿ ಗೆ ಹೈಕಮಾಂಡ್ ಖಡಕ್ ಸೂಚನೆ
ಸಿದ್ದರಾಮಯ್ಯರ ಮನಸ್ಸು ಗೆಲ್ಲಿ, ಚುನಾವಣಾ ಪರ್ವ ಇರುವುದರಿಂದ ಎಚ್ಚರಿಕೆಯ ಹೆಜ್ಜೆ ಇಡಿ; ಹೈಕಮಾಂಡ್ ತಾಕೀತು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳದೆ ಸಾಮೂಹಿಕ ನಾಯಕತ್ವದಲ್ಲೇ ಮುನ್ನಡೆಯುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಟ್ಟುನಿಟ್ಟಿನ ಆದೇಶ ನೀಡಿದೆ ಎನ್ನಲಾಗಿದೆ. ಕೆಲವು ವಿಚಾರಗಳಲ್ಲಿ ಡಿ.ಕೆ.ಶಿ ಮುನ್ನುಗ್ಗುವ ಪ್ರವೃತ್ತಿ ಹೊಂದಿದ್ದು, ಸರಿ ಎನಿಸಿದ ವಿಚಾರಗಳಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ಸಹಜ ಪ್ರವೃತಿಯಾಗಿದೆ. ಹಲವಾರು ಸಂದರ್ಭಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಮುಖ ಹಾಗೂ ಪ್ರಭಾವಿಗಳನ್ನೇ ಸಂಘಟನೆ ಚಟುವಟಿಕೆಯಿಂದ ಹೊರ ಹಾಕಿದ ಉದಾಹರಣೆಗಳಿವೆ. […]
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬಿಗ್ ಸರ್ಜರಿಗೆ ತಯಾರಿ, ಆಯಕಟ್ಟಿನ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸಿದ್ಧತೆ
ಕಾನೂನು ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡಲು ಡಿಕೆ ಚಿಂತನೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿರುವ ಸಿಎಂ ಡಿ.ಕೆ. ಶಿವಕುಮಾರ್ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಮಟ್ಟದ ಬದಲಾವಣೆ ತರಲು ಸಜ್ಜಾಗಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಮುಖವಾಗಿ ಗೃಹ ಇಲಾಖೆಗೆ ಮೇಜರ್ ಸರ್ಜರಿ ನಡೆಸಲು ಸಿಎಂ ತೀರ್ಮಾನಿಸಿದ್ದು, ಆಯಾಕಟ್ಟಿನ ಹುದ್ದೆಗಳಲ್ಲಿರುವ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸಿದ್ಧತೆ ನಡೆದಿದೆ ಎಂದು ಗೃಹ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಮುಖ್ಯವಾಗಿ ಪೊಲೀಸ್ […]
ರಾಷ್ಟ್ರೀಯ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಜೂನ್ ಆರರಂದು ನೀಟ್ ಪರೀಕ್ಷೆ ಅವ್ಯವಸ್ಥೆ ವಿರುದ್ದ CJP ಯಿಂದ ಪ್ರತಿಭಟನೆ
ದೆಹಲಿ: ಪರೀಕ್ಷಾ ಸಂಬಂಧಿತ ಲೋಪದೋಷ, ವಿವಾದಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಜೂನ್ 6 ರಂದು ಭಾರತಕ್ಕೆ ಮರಳುವುದಾಗಿ ಹಾಗೂ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ಯ ಸ್ಥಾಪಕ ಅಭಿಜೀತ್ ದಿಪ್ಕೆ ಸೋಮವಾರ ಘೋಷಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪರೀಕ್ಷಾ ಸಂಬಂಧಿತ ಗೊಂದಲಗಳು ಮತ್ತು ವಿವಾದಗಳು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿವೆ ಮತ್ತು ಸರ್ಕಾರವು ಇದಕ್ಕೆ ಹೊಣೆಗಾರಿಕೆಯನ್ನು ಹೊರಬೇಕು ಎಂದು ಹೇಳುತ್ತಾ, ವಿದ್ಯಾರ್ಥಿಗಳು ಮತ್ತು ಬೆಂಬಲಿಗರು ಈ ಅಭಿಯಾನದಲ್ಲಿ […]
ರೆಡಿಯಾಗುತ್ತಿದೆ ಅಮಿತ ಯುದ್ದ ಸೂತ್ತ; ರಾಜ್ಯ ಬಿಜೆಪಿ ಅಣಿಯಾಗಬೇಕು, ಅಮಿತ್ ಶಾ ಸುಪಾರಿ
ಚನ್ನಿ-ವೀಡಿಗೆ ಡಿಕೆಶಿ ಫೆವಿಕಾಲ್.?, ಒಗ್ಗಟ್ಟಿನ ಮಹತ್ವ ವಿವರಿಸಿದ ಡಿಕೆಶಿ ✍️. ಆರ್.ಟಿ.ವಿಠ್ಟಲಮೂರ್ತಿ ಕಳೆದ ವಾರ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಕೇರಳಕ್ಕೆ ಹೋಗಿದ್ದರು. ಹೀಗೆ ಹೋದವರು ವಿ.ಡಿ.ಸತೀಶನ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದಾದ ನಂತರ ಸಮಾರಂಭಕ್ಕೆ ದಿಲ್ಲಿಯಿಂದ ಬಂದಿದ್ದ ಹಿರಿಯ ನಾಯಕರೊಬ್ಬರ ಜತೆ ಅವರು ಒನ್ ಟು ಒನ್ ಮಾತನಾಡಿದ್ದಾರೆ.ಹೀಗೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಬಗ್ಗೆ ಪ್ರಸ್ತಾಪಿಸಿ: ‘ಸಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ […]
ಅಂತಾರಾಷ್ಟ್ರೀಯ
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
