ಕರಾವಳಿ

ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್ ನ ಅಂಗಸಂಸ್ಥೆಯಾದ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಜಿಲ್ಲೆಯ 70 ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ 586 ವಿದ್ಯಾರ್ಥಿನಿಯರಿಗೆ 47.64 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಅಂಗಸಂಸ್ಥೆಯಾದ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ 70 ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ ಸುಮಾರು 586 ವಿದ್ಯಾರ್ಥಿನಿಯರಿಗೆ ಸುಮಾರು 47.64 ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಗುರುವಾರದಂದು ಮಂಗಳೂರು ನಗರದ ಪುರಭವನದಲ್ಲಿ ನಡೆಯಿತು. ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ ಮಕ್ಕಳು ವಿದ್ಯಾವಂತರಾಗಿ […]

ಬ್ಯಾರಿ, ಕೊಂಕಣಿ ಭವನಕ್ಕೆ ಇನ್ನೂ ಸೂರಿಲ್ಲ! ಎರಡೆರಡು ಬಾರಿ ಶಿಲಾನ್ಯಾಸಗೊಂಡರೂ ಬ್ಯಾರಿಗಿಲ್ಲ ಬ್ಯಾರಿ ಭವನ

ಮಂಗಳೂರಿನಲ್ಲಿ ತುಳು ಭವನ ಸ್ವಂತ ಕಟ್ಟಡವನ್ನು ಹೊಂದಿ ಕಾರ್ಯಾಚರಿಸುತ್ತಿದೆ. ಆದರೆ ಕರಾವಳಿ ಭಾಗದಲ್ಲಿ ಪ್ರಮುಖವಾಗಿರುವ ಬ್ಯಾರಿ ಹಾಗೂ ಕೊಂಕಣಿ ಭಾಷೆಗಳಿಗೆ ಅಕಾಡೆಮಿ ಏನೂ ಸಿಕ್ಕಿದೆ. ಆದರೆ ಕೊಂಕಣಿ ಭವನ, ಬ್ಯಾರಿ ಭವನ ಮೇಲೇರದೆ ಹಾಗೆಯೇ ಉಳಿದಿದೆ. ಇದು ಕರಾವಳಿಯನ್ನು ಪ್ರತಿನಿಧಿಸುತ್ತಿರುವ ಶಾಸಕರು ಇಚ್ಛಾಶಕ್ತಿಯ ಕೊರತೆ ಅಲ್ಲದೇ ಮತ್ತೇನು..? ಬರೋಬ್ಬರಿ 1200 ವರ್ಷಗಳ ಇತಿಹಾಸದ ದಾಖಲೆಯನ್ನು ಹೊಂದಿರುವ ಬ್ಯಾರಿ ಭಾಷೆ 25 ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಕರಾವಳಿ ಕರ್ನಾಟಕವಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಬ್ಯಾರಿಗಳ […]

ರಾಜ್ಯ

ವಚನಾನಂದ ಸ್ವಾಮೀಜಿಯಿಂದ ಲೈಂಗಿಕ ದೌರ್ಜನ್ಯ; ಪೋಕ್ಸೋ ಪ್ರಕರಣ ದಾಖಲು

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರ ವಿರುದ್ಧ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕನ ತಾಯಿ ಮೇ 7ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ನೀಡಿದ್ದರು. ಘಟನೆ ನಡೆದ ಸ್ಥಳ ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಗೆ ಬರುವುದರಿಂದ, ಅಲ್ಲಿ ಮೊದಲು ‘ಜೀರೋ ಎಫ್‌ಐಆರ್’ ದಾಖಲಿಸಿ ನಂತರ ಹರಿಹರಕ್ಕೆ ಪ್ರಕರಣವನ್ನು ವರ್ಗಾಯಿಸಲಾಯಿತು. ಮೇ 8ರಂದು ಹರಿಹರ ಪೊಲೀಸರು ಪೋಕ್ಸೋ […]

ಸಿದ್ದು ಸಂದೇಶ ರಾಹುಲ್ ಕಿವಿಗೆ ತಲುಪಿತು; ಬಿಜೆಪಿ ವರಿಷ್ಟರ ಪ್ಲಾನು; ಆರೆಸ್ಸೆಸ್ ಕರ್ನಾಟಕದಲ್ಲಿ ರಂಗಪ್ರವೇಶ

ಕರ್ನಾಟಕದಲ್ಲಿ SIR ನಡೆದರೆ, ರಾಜ್ಯ ಕಾಂಗ್ರೆಸ್ 1994 ರ ಪರಿಸ್ಥಿತಿಗೆ ✍️. ಆರ್.ಟಿ.ವಿಠ್ಠಲಮೂರ್ತಿ ತೃಣಮೂಲ ಕಾಂಗ್ರೆಸ್ ನ ಅಧಿನಾಯಕಿ ಮಮತಾ ಬ್ಯಾನರ್ಜಿ ಕುಸಿದು ಬಿದ್ದ ರೀತಿಯಿಂದ ದಿಲ್ಲಿಯ ಕಾಂಗ್ರೆಸ್ ವರಿಷ್ಟರಿಗೆ ಚಿಂತೆ ಸುರುವಾಗಿದೆ. ಅಷ್ಟೇ ಅಲ್ಲ, ಈ ಚಿಂತೆಯ ಪರಿಣಾಮವಾಗಿ ಅವರೀಗ ಕರ್ನಾಟಕದ ಮೇಲೆ ಕಣ್ಣು ನೆಟ್ಟಿದ್ದಾರೆ. ಅಂದ ಹಾಗೆ ಪಶ್ಚಿಮ ಬಂಗಾಳವನ್ನು ಅಭೇದ್ಯ ಕೋಟೆಯನ್ನಾಗಿ ಮಾಡಿಕೊಂಡಿದ್ದ ಮಮತಾ ಬ್ಯಾನರ್ಜಿ ಇತ್ತೀಚಿನ ಚುನಾವಣೆಯಲ್ಲಿ ಕುಸಿದು ಬಿದ್ದರು. ಬಿಜೆಪಿಯ ಮಾರಕ ಧಾಳಿಯ ಎದುರು ಅವರ ತೃಣಮೂಲ ಕಾಂಗ್ರೆಸ್‌ ಪಕ್ಷ […]

ರಾಷ್ಟ್ರೀಯ

ಟೋಲ್ ಪ್ಲಾಜಾಗಳು ಸಂಪೂರ್ಣ ಕ್ಯಾನ್ಸಲ್; ‘ಮಲ್ಟಿ-ಲೇನ್ ಫ್ರೀ ಫ್ಲೋ’ (MLFF) ಎಂಬ ಆಧುನಿಕ ವ್ಯವಸ್ಥೆ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರು ಇನ್ನು ಮುಂದೆ ಟೋಲ್ ಪ್ಲಾಜಾಗಳ ಬಳಿ ವಾಹನ ನಿಲ್ಲಿಸಿ ಹಣ ಪಾವತಿಸುವ ದಿನಗಳು ಅಂತ್ಯವಾಗಲಿವೆ. ಕೇಂದ್ರ ರಸ್ತೆ ಸಾರಿಗೆ ಸಚಿವರು ದೇಶಾದ್ಯಂತ ಹೊಸ ತಂತ್ರಜ್ಞಾನ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಘೋಷಿಸಿದ್ದಾರೆ. 2026ರ ಅಂತ್ಯದೊಳಗೆ ಪ್ರಸ್ತುತ ಇರುವ ಭೌತಿಕ ಟೋಲ್ ಪ್ಲಾಜಾಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಗುರಿ ಸರ್ಕಾರ ಹೊಂದಿದೆ. ಈಗಿನ ಟೋಲ್ ಬೂತ್‌ಗಳ ಬದಲಿಗೆ ‘ಮಲ್ಟಿ-ಲೇನ್ ಫ್ರೀ ಫ್ಲೋ’ (MLFF) ಎಂಬ ಆಧುನಿಕ ವ್ಯವಸ್ಥೆ ಜಾರಿಗೆ ಬರಲಿದೆ. […]

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೌಕರರಿಂದ ಮೇ 25, 26 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರ ಘೋಷಣೆ

ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೌಕರರು ಮೇ 25 ಮತ್ತು 26 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರವನ್ನು ಘೋಷಿಸಿದ್ದಾರೆ. 1947 ರ ಕೈಗಾರಿಕಾ ವಿವಾದ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ವರ್ಕ್‌ಮೆನ್ ವರ್ಗದ ನೌಕರರು ಆಂದೋಲನದಲ್ಲಿ ಭಾಗವಹಿಸುತ್ತಾರೆ ಎಂದು ಆಲ್ ಇಂಡಿಯಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಶನ್ ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರದ ಪರಿಣಾಮವಾಗಿ ಎಲ್ಲಾ ಶಾಖೆಗಳಲ್ಲಿ ಬ್ಯಾಂಕಿಂಗ್ ಕಾರ್ಯಾಚರಣೆಗಳು ಪರಿಣಾಮ ಬೀರುವ ಸಾಧ್ಯತೆಯಿದೆ, ಮುಷ್ಕರದ ಪರಿಣಾಮ […]

ಅಂತಾರಾಷ್ಟ್ರೀಯ

ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ

ರಿಯಾದ್: ಕರ್ನಾಟಕ ​ಅನಿವಾಸಿ ಒಕ್ಕೂಟದ ಪ್ರಥಮ‌ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಬತಫನ ರೆಸ್ಟೋರೆಂಟ್‌ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]

ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ

ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್‌ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್‌ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]

error: Content is protected !!