ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ಸ್ ಆರೋಪಿಯ ಬಂಧನ

2026 ನೇ ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ದೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್ ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ತನ್ನ ಅಕೌಂಟ್ ನಲ್ಲಿ” ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026ರಂತೆ ಪ್ರಕರಣ ದಾಖಲಾಗಿ ತನಿಖೆಯ ನಡೆಯುತ್ತಿತ್ತು. […]

ಕರವೇ ಮಹಿಳಾ ಘಟಕ ಬರ್ಕಾಸ್ತು ಆದರೂ ಜಿಲ್ಲಾಧ್ಯಕ್ಷೆ ಎಂದು ಸ್ವಯಂ ಘೋಷಿಸುತ್ತಿರುವ ಜ್ಯೋತಿ ಸೇರಿಗಾರ್ತಿ; ಸಾಮೂಹಿಕ ರಾಜೀನಾಮೆ ನೀಡಿದ ಕಾರ್ಯಕರ್ತರು

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಬರ್ಕಾಸ್ತು ಆದರೂ ಜಿಲ್ಲಾಧ್ಯಕ್ಷೆ ಎಂದು ಸ್ವಯಂ ಘೋಷಿಸುತ್ತಿರುವ ಜ್ಯೋತಿ ಸೇರಿಗಾರ್ತಿಯ ವಿರುದ್ದ ಕರವೇ ಕಾರ್ಯಕರ್ತರು ಸಿಡಿದೆದ್ದು, ಇಂದು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಇಂದು ಉಡುಪಿಯ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕರವೇ ಕಾರ್ಯಕರ್ತೆ ಮೀರಾ ಅವರು ಕನ್ನಡಪರ ಹೋರಾಟಗಾರರಾದ ನಾವು ಬಹಳ ಅಭಿಮಾನವಿಟ್ಟು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕಕ್ಕೆ ಸೇರಿದ್ದು, ನಾವಿಲ್ಲಿ ಸಕ್ರಿಯ ಕಾರ್ಯಕರ್ತರಾಗಿರುತ್ತೇವೆ. ನಾವು ಕನ್ನಡ […]

ರಾಜ್ಯ

ಆಪರೇಷನ್ ಟ್ವೆಂಟಿಗೆ ಸಿದ್ದು ರೆಡಿ; ಕೆ.ಸಿ. ವೇಣುಗೋಪಾಲ್ ಅವರ 3:2 ಸೂತ್ರ. ಜಮೀರಣ್ಣಾಕೀ ಪೊಲಿಟಿಕ್ಸ್

✍️. ಅರ್.ಟಿ.ವಿಠ್ಠಲಮೂರ್ತಿ ಕಳೆದ ಬುಧವಾರ ವಿಧಾನಸಭೆಯ‌ ಮೊಗಸಾಲೆಯಲ್ಲಿ ಕುಳಿತಿದ್ದ ಡಿಸಿಎಂ ಡಿಕೆಶಿ ಕ್ಯಾಂಪಿನ ಹಿರಿಯ ನಾಯಕರೊಬ್ಬರು ತಮ್ಮ ಆಪ್ತರ ಬಳಿ ಮೆಲ್ಲಗೆ ಮಾತನಾಡುತ್ತಿದ್ದರು. ಅವರ ಪ್ರಕಾರ: ‘ಏಪ್ರಿಲ್ ಮೊದಲ ವಾರ ದಿಲ್ಲಿಯಲ್ಲಿ ನಿರ್ಣಾಯಕ ಸಭೆ ನಡೆಯಲಿದೆ.’ ಅರ್ಥಾತ್, ಬಜೆಟ್ ಅಧಿವೇಶನದ ನಂತರ ದಿಲ್ಲಿಗೆ ಧಾವಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಹತ್ವದ ವಿಷಯವೊಂದನ್ನು ಪ್ರಸ್ತಾಪಿಸಲಿದ್ದಾರೆ. ಅಂದ ಹಾಗೆ ಕೆ.ಸಿ. ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರ ಪರವಾಗಿಯೇ ನಿಂತವರು ಮತ್ತು […]

543 ಲೋಕಸಭಾ ಸ್ಥಾನಗಳನ್ನು ಬರೋಬ್ಬರಿ 816ಕ್ಕೆ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ; ಕರ್ನಾಟಕದ ಹಾಲಿ ಸಂಸದರ ಸಂಖ್ಯೆ 28 ರಿಂದ 42ಕ್ಕೆ ಏರಿಕೆ

ಕೇಂದ್ರ ಸರ್ಕಾರ ಮುಂದಿನ ಲೋಕಸಭಾ ಚುನಾವಣೆ ವೇಳೆಗೆ ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು ಬರೋಬ್ಬರಿ 816ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. 2011ರ ಜನಗಣತಿ ಆಧರಿಸಿ ಕ್ಷೇತ್ರಗಳ ಮರ ವಿಂಗಡಣೆ ಪ್ರಕ್ರಿಯೆ ನಡೆದಲ್ಲಿ ಕರ್ನಾಟಕದ ಹಾಲಿ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆಯಾಗಲಿದೆ. ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ತಿದ್ದುಪಡಿ ಕೂಡ ಈ ವಿಧೇಯಕದ ಭಾಗವಾಗಲಿದೆ. 2029ರ ಚುನಾವಣೆಗೆ ಮೊದಲು ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲಾ ಪಕ್ಷಗಳ […]

ರಾಷ್ಟ್ರೀಯ

ವಿವಾಹಿತ ಪುರುಷ ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ ಲಿವ್-ಇನ್ ಸಂಬಂಧ ಅಪರಾಧವಲ್ಲ: ಅಲಹಬಾದ್ ಹೈಕೋರ್ಟ್

ವಿವಾಹಿತ ಪುರುಷ ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ ಲಿವ್-ಇನ್ ಸಂಬಂಧದಲ್ಲಿ ತೊಡಗಿರುವುದು ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಉತ್ತರ ಪ್ರದೇಶದ ಶಹಜಹಾನ್‌ಪುರದ ದಂಪತಿಗಳು ಸಲ್ಲಿಸಿದ್ದ ಕ್ರಿಮಿನಲ್ ರಿಟ್ ಅರ್ಜಿಯ ವಿಚಾರಣೆಯಲ್ಲಿ ಅಲಹಾಬಾದ್ ಹೈಕೋರ್ಟ್ ಈ ಮಹತ್ವದ ಹೇಳಿಕೆ ನೀಡಿದೆ. ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ ಲಿವ್-ಇನ್ ಸಂಬಂಧದಲ್ಲಿ ಭಾಗವಹಿಸಿದ್ದಕ್ಕಾಗಿ ವಿವಾಹಿತ ಪುರುಷನ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಮಾತ್ರವಲ್ಲದೇ ಬಂಧನದ ಭಯವನ್ನು ರದ್ದುಗೊಳಿಸಿ ಬೆದರಿಕೆಗಳನ್ನು ಎದುರಿಸುತ್ತಿರುವ ದಂಪತಿಗಳಿಗೆ ಪೊಲೀಸ್ ರಕ್ಷಣೆಯನ್ನು ಆದೇಶಿಸಿರುವುದರಿಂದ ಕಾನೂನನ್ನು ನೈತಿಕತೆಯಿಂದ […]

‘ಮೋದಿ ಭಾರತ’ದಲ್ಲಿ ಬೀಫ್ ಮಾಂಸ ರಫ್ತಿನಲ್ಲಿ ಸಾರ್ವಕಾಲಿಕ ದಾಖಲೆ.!

ಐದು ವರ್ಷಗಳಲ್ಲಿ 3.22 ಶತಕೋಟಿ ಡಾಲರ್ ನಿಂದ 4.16 ಶತಕೋಟಿ ಡಾಲರ್ ಗೆ ಜಂಪ್: ಸಂಸತ್ತಿನಲ್ಲಿ ಅಧಿಕೃತ ಹೇಳಿಕೆ ಕಳೆದ ಐದು ವರ್ಷಗಳಲ್ಲಿ ಭಾರತದ ಮಾಂಸ ರಫ್ತಿನ ಪ್ರಮಾಣ 3.22 ಶತಕೋಟಿ ಡಾಲರ್ ನಿಂದ 4.16 ಶತಕೋಟಿ ಡಾಲರ್ ಗೆ ಏರಿದೆ ಎಂದು ಕೇಂದ್ರ ಸರಕಾರ ಸಂಸತ್ ನಲ್ಲಿ ಹೇಳಿದೆ. ಮಾಂಸ ರಫ್ತಿನ ಪ್ರಮಾಣದ ಕುರಿತು ಸಿಪಿಐಎಂ ಪಕ್ಷ ಸಂಸದ ಜಾನ್ ಬ್ರಿಟ್ಟಾಸ್ ಕೇಳಿದ ಪ್ರಶ್ನೆಗೆ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯ ಸಹಾಯಕ ಸಚಿವ ಜಿತಿನ್ ಪ್ರಸಾದ್ […]

ಅಂತಾರಾಷ್ಟ್ರೀಯ

ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್‌ ಗ್ರೂಪ್‌ ಮಾಲೀಕ ಗೌತಮ್‌ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ

ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್‌ ಗ್ರೂಪ್‌ ಮಾಲೀಕ ಗೌತಮ್‌ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್‌ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]

ಮೂಲಸೌಕರ್ಯದ ಮೇಲಿನ ದಾಳಿಗೆ ಇರಾನ್ ಆಕ್ರೋಶ; ಇಂತಹ ದಾಳಿ ನಡೆದರೆ ನಿಮ್ಮ ಮಿತ್ರ ರಾಷ್ಟ್ರಗಳನ್ನು ಸಂಪೂರ್ಣ ನಾಶ ಮಾಡದೆ ಬಿಡುವುದಿಲ್ಲ: ಇರಾನ್ ಎಚ್ಚರಿಕೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮತ್ತೊಮ್ಮೆ ಇಂತಹ ದಾಳಿ ನಡೆದರೆ ಯಾವುದೇ ಒತ್ತಡಕ್ಕೂ ಮಣಿಯದೆ “ಅನಿಯಂತ್ರಿತ ಪ್ರತಿದಾಳಿ” ನಡೆಸುವುದಾಗಿ ಇರಾನ್ ಸ್ಪಷ್ಟ ಎಚ್ಚರಿಕೆ ನೀಡಿದೆ. ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿ ನಡೆಸಿದರೆ ಗಲ್ಫ್ ಪ್ರದೇಶದ ತೈಲ ಹಾಗೂ ಅನಿಲ ವಲಯವನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಇಸ್ರೇಲ್’ಗೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ […]

error: Content is protected !!