ಕರಾವಳಿ
ಯುವ ಸಮೂಹದ ಭವಿಷ್ಯ, ಸಾಮಾಜಿಕ ಕಾಳಜಿ ಬೆಳೆಸುವುದರಲ್ಲಿ ಪುತ್ತೂರು ಕಮ್ಯೂನಿಟಿ ಸೆಂಟರ್ ಸೇವೆ ಅನನ್ಯ: ಜಿಲಾನಿ ಎಚ್. ಮೊಖಾಷಿ
ಕಮ್ಯೂನಿಟಿ ಸೆಂಟರ್ ನ ಪದ್ದತಿ ಮತ್ತು ನೀತಿಗಳು ರಾಜ್ಯದ ಪ್ರತಿಯೊಂದು ಸಂಘ ಸಂಸ್ಥೆಗಳಿಗೂ ಮಾದರಿಯಾಗಿದೆ. ವಿಧ್ಯಾರ್ಥಿಗಳಿಗೆ ಶೈಕ್ಷಣೈಕ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಅವರನ್ನು ಸಮಾಜಮುಖಿ ಕೆಲಸದಲ್ಲಿ ತೊಡಗಿಸುವ ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಶ್ರೀ ಜಿಲಾನಿ H ಮೊಖಾಷಿ ಅವರು ಅಭಿಪ್ರಾಯ ಪಟ್ಟರು. ಇತ್ತಿಚೆಗೆ ಅವರು ಮಂಗಳೂರಿನಲ್ಲಿ ಇರುವ ಪುತ್ತೂರು ಕಮ್ಯೂನಿಟಿ ಸೆಂಟರ್ ನ ಕಚೇರಿಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆ ಪರಿಶೀಲಿಸಿದರು. ಪುತ್ತೂರು ಎಂಬ ತಾಲೂಕು ಮಟ್ಟದಲ್ಲಿ ಆರಂಭವಾದ […]
ಬಿಜೆಪಿಯಲ್ಲಿ ಬಂಟರಿಗೆ ಬ್ರೇಕ್; ಬಿಲ್ಲವ ಪಾರಮ್ಯಕ್ಕೆ ವೇದಿಕೆ ಸಜ್ಜು
ಹೀಗೊಂದು ಮಾತು ಕರಾವಳಿಯ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಭಾರೀ ಜೋರಾಗಿ ಕೇಳಿ ಬರುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ ಬ್ಯಾರಿಗಳದ್ದೇ ದೊಡ್ಡ ಪ್ರಭಾವವಿದೆ. ಬಿಲ್ಲವ ಮತದಾರರು ಬಿಜೆಪಿ ಜೊತೆ ಗುರುತಿಸಿಕೊಂಡರೆ, ಬ್ಯಾರಿ ಮತದಾರರು ಕಾಂಗ್ರೆಸ್ ಜೊತೆಯಲ್ಲಿದ್ದಾರೆ. ವಿಚಿತ್ರವೆಂದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ, ಬ್ಯಾರಿಗಳ ಪ್ರಭಾವ ಜಾಸ್ತಿಯಿದ್ದರೂ ಅಧಿಕಾರ ಮಾತ್ರ ಬಂಟರ ಕೈಯಲ್ಲಿ. ಅದು ಕಾಂಗ್ರೆಸ್, ಬಿಜೆಪಿಯಾಗಲಿ ಕರಾವಳಿ ರಾಜಕಾರಣವನ್ನು ಆಳುತ್ತಿರುವುದು ಬಂಟರು ಮಾತ್ರ. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ಬಿಲ್ಲವರಿಗೆ ಚೊಂಬು ಕೊಟ್ಟು ಬಂಟರು ಅಧಿಕಾರಕ್ಕೆ ಏರುತ್ತಿದ್ದಾರೆ […]
ರಾಜ್ಯ
ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಗಳಲ್ಲಿ 3 ವರ್ಷಗಳಲ್ಲಿ 23 ವಿದ್ಯಾರ್ಥಿಗಳ ಅಸಹಜ ಸಾವು; ಪೋಷಕರಲ್ಲಿ ಆತಂಕ
ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಕಳೆದ 3 ವರ್ಷಗಳಲ್ಲಿ 23 ವಿದ್ಯಾರ್ಥಿಗಳು ವಿವಿಧ ಕಾರಣಗಳಿಗಾಗಿ ಮೃತಪಟ್ಟಿದ್ದಾರೆ. ಇದಲ್ಲದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘದ (ಕ್ರೈಸ್) ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ 21 ವಿದ್ಯಾರ್ಥಿಗಳು ಮೃತರಾಗಿದ್ದಾರೆ. ಇದು ವಿದ್ಯಾರ್ಥಿಗಳ ಪೋಷಕರಲ್ಲಿ ಸಹಜವಾಗಿಯೇ ಆತಂಕ ಮೂಡಿಸಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿನ ಹಲವಾರು ವಸತಿ ಶಾಲೆ -ಕಾಲೇಜುಗಳಲ್ಲಿ […]
ಸತ್ಯಾಂಶಕ್ಕೆ ದೂರವಿರುವ ವಿಷಯಗಳನ್ನು ಹರಡುತ್ತಿರುವುದು ಆರೋಗ್ಯ ಸಚಿವರೇ ಹೊರತು ಸಂಘಟನೆಗಳಲ್ಲ; ಡಿವೈಎಫ್ಐ ತಿರುಗೇಟು
ಜನರ ಧಿಕ್ಕು ತಪ್ಪಿಸುತ್ತಿರುವುದು ಯಾರು.? ಸುಳ್ಳು ಹೇಳಿಕೆಗಳನ್ನು ನೀಡಿ ಜನರ ಬೇಡಿಕೆಗಳನ್ನು ಕಡೆಗಣಿಸುತ್ತಿರುವುದು ಯಾರು.? ಬೆಳ್ತಂಗಡಿ, ಬಂಟ್ವಾಳದ ತಾಲೂಕು ಆಸ್ಪತ್ರೆ, ಮೂಡಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಯನ್ನು ಖಾಸಗೀ ಸಂಸ್ಥೆಗಳೊಂದಿಗೆ ಕರಾರು ಒಪ್ಪಂದ ಮಾಡಿರುವ ಆರೋಗ್ಯ ಇಲಾಖೆಯ ನಡೆಯನ್ನು ಡಿವೈಎಫ್ಐ ವಿರೋಧಿಸಿದ್ದು ಮತ್ತು ಈ ಒಪ್ಪಂದ ರದ್ದುಗೊಳಿಸಲು ಜನ ಚಳುವಳಿಗಳನ್ನು ಕೈಗೆತ್ತಿಕೊಂಡಿರುವ ವೇಳೆ ಸರಕಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ” ಕೆಲವು ಸಂಘಟನೆಗಳು ಈ ಕುರಿತು ನಕರಾತ್ಮಕ ವಿಷಯಗಳನ್ನು ಹರಡುತ್ತಿದ್ದು ಇದು ಸತ್ಯಾಂಶಕ್ಕೆ […]
ರಾಷ್ಟ್ರೀಯ
ಅಸ್ಥಿಪಂಜರವನ್ನೇ ಬ್ಯಾಂಕಿಗೆ ಹೊತ್ತು ತಂದಿರುವ ಘಟನೆ; ಇವಳೇ ನನ್ನ ಸಹೋದರಿ, ಮೃತ ಪಟ್ಟಿರುವುದಕ್ಕೆ ಇದೇ ಸಾಕ್ಷಿ.!
ತನ್ನ ಮೃತ ತಂಗಿಯ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಪಡೆಯಲು ಸಾವಿನ ಪುರಾವೆಯಾಗಿ ಆಕೆಯ ಅಸ್ಥಿಪಂಜರವನ್ನೇ ಬ್ಯಾಂಕಿಗೆ ಹೊತ್ತು ತಂದಿರುವ ಘಟನೆ ಒಡಿಶಾದ ಕೆಂಜಿಹಾರ್ ಜಿಲ್ಲೆಯಲ್ಲಿ ನಡೆದಿದೆ. ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ತಂಗಿಯ ಮರಣದ ನಂತರ ಆಕೆಯ ಖಾತೆಯಲ್ಲಿದ್ದ ಹಣ ಬಿಡಿಸಿಕೊಳ್ಳಲು ಬ್ಯಾಂಕಿಗೆ ಅಲೆದಾಡುತ್ತಿದ್ದರು. ಬ್ಯಾಂಕ್ ಅಧಿಕಾರಿಗಳು ಮರಣ ಪ್ರಮಾಣಪತ್ರ ಸೇರಿದಂತೆ ಸೂಕ್ತ ದಾಖಲೆಗಳನ್ನು ಕೇಳಿದ್ದರು ಎನ್ನಲಾಗಿದೆ. ಇದರಿಂದ ಹತಾಶರಾದ ವ್ಯಕ್ತಿ, ಹೂತುಹಾಕಿದ್ದ ತಂಗಿಯ ಶವವನ್ನು ಹೊರತೆಗೆದು, ಅದರ ಅಸ್ಥಿಪಂಜರವನ್ನೇ ಚೀಲದಲ್ಲಿ ಹಾಕಿಕೊಂಡು ಬ್ಯಾಂಕಿಗೆ ಬಂದಿದ್ದಾರೆ. ಜಿತು […]
ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಸಜ್ಜು; ಲೋಕಸಭೆಯಲ್ಲಿರುವ 543 ಸದಸ್ಯರ ಬಲವನ್ನು 850ಕ್ಕೆ ಏರಿಸಲು ಸರ್ಕಾರ ಪ್ರಸ್ತಾವನೆ
ಭಾರತೀಯ ಸಂಸದೀಯ ಇತಿಹಾಸದಲ್ಲೇ ಅತ್ಯಂತ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಸಜ್ಜಾಗಿದೆ. ಪ್ರಸ್ತುತ ಲೋಕಸಭೆಯಲ್ಲಿರುವ 543 ಸದಸ್ಯರ ಬಲವನ್ನು ಬರೋಬ್ಬರಿ 850ಕ್ಕೆ ಏರಿಸಲು ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈ ಮೂಲಕ ದಶಕಗಳಿಂದ ಬಾಕಿ ಉಳಿದಿರುವ ‘ಮಹಿಳಾ ಮೀಸಲಾತಿ’ ಕಾನೂನನ್ನು ಜಾರಿಗೊಳಿಸಲು ಮತ್ತು ಹೊಸ ಕ್ಷೇತ್ರ ಪುನರ್ ವಿಂಗಡಣೆಗೆ ಹಾದಿ ಸುಗಮಗೊಳಿಸಲು ಮೋದಿ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯಂತೆ ಲೋಕಸಭೆಯ ಒಟ್ಟು ಬಲ 850 ಆಗಲಿದೆ. ಇದರಲ್ಲಿ 815 ಸ್ಥಾನಗಳನ್ನು ವಿವಿಧ ರಾಜ್ಯಗಳಿಗೆ […]
ಅಂತಾರಾಷ್ಟ್ರೀಯ
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
ಮಾಲ್ಡೀವ್ಸ್: ಸ್ಪೀಡ್ ಬೋಟ್ ಅಪಘಾತ; ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಪಾರು, ಇಬ್ಬರು ಭಾರತೀಯರು ನಾಪತ್ತೆ
ಮಾಲ್ಡೀವ್ಸ್ ಸಮೀಪ ನಡೆದ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಶುಕ್ರವಾರ ಮುಂಜಾನೆ ಮಾಲ್ಡೀವ್ಸ್ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಅವರಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಸಿಂಘಾನಿಯಾ ಕೂಡ […]
