ಕರಾವಳಿ

ಮಾಜಿ ಮೇಯರ್ ಕೆ. ಅಶ್ರಪ್ ರವರು ಸಮುದಾಯದ ನಾಯಕ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ಹೇಳಿಕೆ ಹಿಂಪಡೆಯಲಿ: ಸಿರಾಜ್ ಬಜ್ಪೆ

ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ಅವರು ಸಚಿವ ಹಾಗೂ ಸಮುದಾಯದ ನಾಯಕ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ನೀಡಿರುವ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟದ ಅಧ್ಯಕ್ಷ ಹಾಗೂ ಅಹಿಂದ ಚಳುವಳಿಯ ಜಿಲ್ಲಾ ಮುಖ್ಯ ಸಂಚಾಲಕ ಸಿರಾಜ್ ಬಜ್ಪೆ ಮನವಿ ಮಾಡಿದ್ದಾರೆ . ಹಜ್ ಭವನದ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಜ್ ಭವನ ನಿರ್ಮಾಣಕ್ಕಾಗಿ ಜಾಗವನ್ನು ದಾನ ಮಾಡಿದ ಇನಾಯತ್ ಅಲಿ […]

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು

ಬಂಟ್ವಾಳದಲ್ಲಿ ಕಳೆದ ವರ್ಷದ ಮೇ ತಿಂಗಳಲ್ಲಿ ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಕೋಕಾ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ (ಕೋಕಾ) ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಬ್ದುಲ್ ರಹ್ಮಾನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಡಿ ಬಂಧಿತರಾಗಿದ್ದ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಮಂದಿ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. […]

ರಾಜ್ಯ

ಸಮುದಾಯಕ್ಕಾಗಿ ಮಿಡಿದ ‘ದಿಲ್ ವಾಲ’ ಇನಾಯತ್; ಸಮುದಾಯದ ನಾಯಕ ಜಮೀರ್ ಸಾಹೇಬ್ರು

ಅವಿಭಜಿತ ಜಿಲ್ಲೆಯ ಕೆಲವು ಶ್ರೀಮಂತ ಕಾಕಾಗಳ ಚಪಲ ತೀರಿಸುವ ಹಕೀಕತ್ತು ಏನು.? ಎಲ್ಲದಕ್ಕೂ ‘ದಿಲ್’ ಬೇಕು. ಒಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಎಂ ಡಿಕೆಶಿ ಹವಾ, ಸಚಿವ ಸಂಪುಟ ಸಭೆ ಕಾವು ತಾರಕಕ್ಕೇರಿದರೆ, ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್ಸಿನ ಪ್ರಭಾವಿ ಮುಸ್ಲಿಂ ಮುಖಂಡ, ಕೊಡುಗೈದಾನಿ ಜಮೀರ್ ಅಹಮದ್ ಖಾನ್ ಅವರ ಹೇಳಿಕೆಯನ್ನು ವಿವಾದದ ವಸ್ತುವನ್ನಾಗಿಸುವ ಪ್ರಯತ್ನ ಮಂಗಳೂರಿನ ಕೆಲವು ಶ್ರೀಮಂತ ಕಾಕಾ ವಲಯದ ಮಧ್ಯೆ ನಡೆಯುತ್ತಿದೆ. ಮಂಗಳೂರಿನ ಕೆಲವು ಶ್ರೀಮಂತ ಕಾಕಾಗಳು ತೆರೆಮರೆಯಲ್ಲಿ ತಮಗಾದ ಮುಜುಗರವನ್ನು ತಪ್ಪಿಸಲು […]

ಡಿಸೆಂಬರ್ ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತ್ ಗಳಿಗೆ ಸಾರ್ವತ್ರಿಕ ಚುನಾವಣೆ

ಕರಾವಳಿಯಲ್ಲಿ ಪ್ರಥಮ ಬಾರಿಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳ ಅಭಿವೃದ್ಧಿಗೆ ಬೃಹತ್ ಯೋಜನೆಗಳನ್ನು ಘೋಷಣೆ ಮಾಡಿದೆ. ಜೊತೆಗೆ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ವರದಿ ಆಗಿದೆ.ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಮುಂಬರುವ ಡಿಸೆಂಬರ್ ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಸಂಪುಟ ಸಭೆಯ ಬಳಿಕ ಮಾತನಾಡಿದ ಗೃಹ […]

ರಾಷ್ಟ್ರೀಯ

ಹೊಸ ಪಾಸ್‌ಪೋರ್ಟ್ ನಿಯಮ ಜಾರಿ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಸ್‌ಪೋರ್ಟ್ ಸಿಂಧುತ್ವದ ನಿಯಮ ಬದಲು

18 ವರ್ಷ ತುಂಬಿದ ತಕ್ಷಣ ಆ ಪಾಸ್‌ಪೋರ್ಟ್ ಅಮಾನ್ಯವಾಗಲಿದೆ ವಿದೇಶಾಂಗ ಸಚಿವಾಲಯವು ಪಾಸ್‌ಪೋರ್ಟ್ ಕಾಯ್ದೆಗೆ ತಿದ್ದುಪಡಿ ತಂದಿದ್ದು, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಸ್‌ಪೋರ್ಟ್ ಸಿಂಧುತ್ವದ ನಿಯಮವನ್ನು ಬದಲಾಯಿಸಿದೆ. ಇನ್ನು ಮುಂದೆ ಮಗುವಿಗೆ 18 ವರ್ಷ ತುಂಬಿದ ತಕ್ಷಣ ಆ ಪಾಸ್‌ಪೋರ್ಟ್ ಅಮಾನ್ಯವಾಗಲಿದ್ದು, ನೂತನ ನಿಯಮ ತಕ್ಷಣದಿಂದಲೇ ಜಾರಿಗೆ ಬಂದಿದೆ. ಮಕ್ಕಳ ಪಾಸ್‌ಪೋರ್ಟ್ ಪಡೆಯಲು ಬಯಸುವ ಪೋಷಕರಿಗೆ ವಿದೇಶಾಂಗ ಸಚಿವಾಲಯ ಮಹತ್ವದ ಮಾಹಿತಿ ನೀಡಿದೆ. ಅಪ್ರಾಪ್ತರಿಗೆ ನೀಡುವ 26 ಪುಟಗಳ ಪಾಸ್‌ಪೋರ್ಟ್ ಸಿಂಧುತ್ವವನ್ನು ಗರಿಷ್ಠ 5 […]

ಜನನ-ಮರಣಗಳ ನೋಂದಣಿಗೆ ಸಂಬಂಧಿಸಿ ಅಕ್ಟೋಬರ್ ಒಂದು 2026 ರಿಂದ ಹೊಸ ನಿಯಮ ಜಾರಿ

ಜನನ ಮತ್ತು ಮರಣಗಳ ನೋಂದಣಿಗೆ ಸಂಬಂಧಿಸಿದ ಅಕ್ಟೋಬರ್ 1, 2026ರಿಂದ ನಿಯಮಗಳು ಬದಲಾಗಲಿವೆ. ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆ, 2026ರ ಎಲ್ಲಾ ನಿಬಂಧನೆಗಳು ಅಂದಿನಿಂದ ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. 2026ರ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ್ದು, ರಾಷ್ಟ್ರಪತಿಯ ಅಂಕಿತದ ಬಳಿಕ ಅದು ಕಾನೂನಾಗಿದೆ. ತಡವಾಗಿ ಜನನ ಅಥವಾ ಮರಣ ನೋಂದಣಿ ಮಾಡುವ ಸಂದರ್ಭಗಳಲ್ಲಿ ಇನ್ನು ಮುಂದೆ ಹೆಚ್ಚಿನ ಪರಿಶೀಲನೆ ಮತ್ತು ಅಧಿಕಾರಿಗಳ ಆದೇಶ ಅಗತ್ಯವಾಗಲಿದೆ. […]

ಅಂತಾರಾಷ್ಟ್ರೀಯ

ಬಹುರಾಷ್ಟ್ರಿಯ ಶೃಂಗಸಭೆಗಳಿಂದ ದೇಶಕ್ಕೆ ಏನು ಪ್ರಯೋಜನ: ಚಿದಂಬರಂ

ಭಾರತದ ರಾಜತಾಂತ್ರಿಕತೆ, ಒಗ್ಗೂಡಿಸುವಿಕೆ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ: ತರೂರು ಬ್ರಿಕ್ಸ್ ಶೃಂಗಸಭೆಯ ಪ್ರಸ್ತುತತೆಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಮರ್ಥಿಸಿಕೊಂಡಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಬ್ರಿಕ್ಸ್ ಶೃಂಗಸಭೆಯಿಂದ ಭಾರತ ಪಡೆದಿರುವ ಸ್ಪಷ್ಟ ಪ್ರಯೋಜನಗಳನ್ನು ಪ್ರಶ್ನಿಸಿದ ನಂತರ, ಈ ಗುಂಪು ಜಾಗತಿಕ ದಕ್ಷಿಣಕ್ಕೆ ಪ್ರಮುಖ ವೇದಿಕೆಯನ್ನು ಒದಗಿಸುತ್ತದೆ ಮತ್ತು ಭಾರತದ ರಾಜತಾಂತ್ರಿಕ ಸಮಾವೇಶದ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ವರದಿಯೊಂದು ತಿಳಿಸಿದೆ. ಬ್ರಿಕ್ಸ್ ಶೃಂಗಸಭೆಯ ಮೊದಲು ಮಾತನಾಡಿದ ತರೂರ್, 11 ದೇಶಗಳ ಗುಂಪು ವಿಶ್ವದ ಜನಸಂಖ್ಯೆ ಮತ್ತು ಜಾಗತಿಕ […]

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

error: Content is protected !!