ಚುನಾವಣಾ ಕರ್ತವ್ಯ ಲೋಪ, ಶೃಂಗೇರಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟೇಗೌಡ ಅಮಾನತು

ರಾಜ್ಯ

ಚುನಾವಣಾ ‌ಕರ್ತವ್ಯ ಲೋಪ, ನಿರ್ಲಕ್ಷ್ಯದಡಿಯಲ್ಲಿ ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟೇಗೌಡ ಅವರನ್ನು ಅಮಾನತುಗೊಳಿಸಲಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪುಟ್ಟೇಗೌಡ ಅವರು ಚುನಾವಣಾ ಕೆಲಸಗಳನ್ನು ಸರಿಯಾಗಿ ನಿರ್ವಹಿಸಿಲ್ಲ. ಮಹಿಳಾ ಸಿಬ್ಬಂದಿಗಳೊಂದಿಗೆ ಅವಾಚ್ಯ, ಅಶ್ಲೀಲ ಪದ ಬಳಸಿ ಮಜುಗುರವಾಗುವಂತೆ ನಡೆದುಕೊಂಡಿರುವುದು ಕಂಡುಬಂದ ತಕ್ಷಣದಿಂದ ಅವರನ್ನು ಕರ್ತವ್ಯದಿಂದ ಆಮಾತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆದ ರಮೇಶ್‌ ರವರು ತಿಳಿಸಿದ್ದಾರೆ.