ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ದುರುದ್ದೇಶದಿಂದ ಅಪಪ್ರಚಾರ ಮಾಡಿದ್ದಾರೆ.ಜಯಲಲಿತಾ ಕುರಿತ ಟೀಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಪಳನಿಸ್ವಾಮಿ, “ಅಣ್ಣಾಮಲೈ ಅವರ ಹೇಳಿಕೆಯು ಬೇಜವಾಬ್ದಾರಿಯಾಗಿದೆ, ರಾಜಕೀಯ ಅನುಭವ ಮತ್ತು ಪ್ರಬುದ್ಧತೆಯ ಕೊರತೆಯಿದೆ. ನಾವು ಅದನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಹೇಳಿದರು.ಕ್ರಾಂತಿಕಾರಿ ನಾಯಕಿ ಮತ್ತು ಇಧಯ ದೈವಂ (ಜಯಲಲಿತಾ ಅವರನ್ನು ಅವರ ಅನುಯಾಯಿಗಳು ಪ್ರೀತಿಯಿಂದ ಕರೆಯುವ ಹೃದಯದ ದೇವತೆ) ಖ್ಯಾತಿಗೆ ಯೋಜಿತ ರೀತಿಯಲ್ಲಿ ಕಳಂಕ ತಂದಿದ್ದಕ್ಕಾಗಿ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳು ಬಿಜೆಪಿ ಮುಖ್ಯಸ್ಥರ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ್ದಾರೆ. ಪಳನಿಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದೇ ಮೊದಲ ಬಾರಿಗೆ ನಿರ್ಣಯ ಅಂಗೀಕರಿಸಲಾಯಿತು.
ಮುಂಚೂಣಿಯಲ್ಲಿರುವ ಇಂಗ್ಲೀಷ್ ದೈನಿಕವೊಂದಕ್ಕೆ ಸೋಮವಾರ ಸಂದರ್ಶನ ನೀಡಿದ ಅಣ್ಣಾಮಲೈ ತಮಿಳುನಾಡಿನ ಹಲವು ಆಡಳಿತಗಳು ಭ್ರಷ್ಟವಾಗಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದೆ. ಹಾಗಾಗಿಯೇ ತಮಿಳುನಾಡು ಅತ್ಯಂತ ಭ್ರಷ್ಟ. ರಾಜ್ಯಗಳಲ್ಲೊಂದಾಗಿದೆ. ಜಯಲಲಿತಾ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ 1991-96ರ ನಡುವಿನ ಅವಧಿಯಲ್ಲಿ ತಮಿಳುನಾಡು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಎಂದು ಹೇಳುತ್ತೇನೆ ಎಂದು ಅಣ್ಣಾಮಲೈ ಹೇಳಿದ್ದರು