ಇಂದು ಸಂಘನಿಕೇತನದಲ್ಲಿ ಸಮನ್ವಯ ಬೈಠಕ್, ಪುತ್ತಿಲ ಪರಿವಾರ,ಬ್ರಿಜೇಶ್ ಚೌಟ,ನಳಿನ್ ಕುಮಾರ್ ಕಟೀಲ್ ಬಗ್ಗೆ ಚರ್ಚೆ ಸಾಧ್ಯತೆ

ಕರಾವಳಿ

ಇಂದು ಮಂಗಳೂರಿನ ಸಂಘ ನಿಕೇತನದಲ್ಲಿ ಪರಿವಾರದ ಸಮನ್ವಯ ಬೈಠಕ್ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಕುರಿತು ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.ಹಿಂದೂ ಸಂಘಟಕ ಅರುಣ್ ಕುಮಾರ್ ಪುತ್ತಿಲ ವಿಚಾರ ಕೂಡ ಸಭೆಯಲ್ಲಿ ಚರ್ಚೆಯಾಗಲಿದೆ. ಕ್ಯಾಪ್ಟನ್ ಬ್ರಿಜೇಶ್ ಚೌಟಗೆ ಲೋಕಸಭಾ ಟಿಕೆಟ್ ನೀಡುವ ಕುರಿತು ಇದೇ ವೇಳೆ ಮಾತುಕತೆ ನಡೆಯಲಿದೆ. ಮಂಗಳೂರಿನ ಸಂಘನಿಕೇತನದಲ್ಲಿ ಬೈಠಕ್ ನಡೆಯಲಿದ್ದು. ಬೈಠಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಲಿದ್ದಾರೆ.

ಬಿಜೆಪಿ, ಸಂಘಪರಿವಾರ ಹಾಗೂ ಸಂಘಟನೆಗಳ ಸುಮಾರು ನೂರಕ್ಕೂ ಅಧಿಕ ಮಂದಿ ಬೈಠಕ್‌ನಲ್ಲಿ ಪಾಲ್ಗೊಳ್ಳಲಿದ್ದು, ಇಂದು ನಡೆಯುವ ಬೈಠಕ್‌ ಭಾರಿ ಮಹತ್ವ ಪಡೆದುಕೊಳ್ಳಲಿದೆ.ಪುತ್ತೂರು ಸೇರಿದಂತೆ ಜಿಲ್ಲೆಯ ಬಿಜೆಪಿಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆ ಹಿನ್ನೆಲೆ ಪಕ್ಷ ಕೈಗೊಳ್ಳಬೇಕಾದ ಬಗ್ಗೆ ತೀರ್ಮಾನದ ಬಗ್ಗೆಯೂ ಚರ್ಚೆ ನಡೆಯಲಿದೆ.

ಪುತ್ತಿಲ ಪರಿವಾರ ಹಾಗೂ ಬ್ರಿಜೇಶ್ ಚೌಟ ವಿಚಾರವಾಗಿ ಚರ್ಚೆಯಾಗುವ ಸಾಧ್ಯತೆ ಇದೆ. ಅದಲ್ಲದೇ ಮತ್ತೆ ನಾಲ್ಕನೇ ಭಾರಿಗೆ ನಳೀನ್ ಕುಮಾರ್ ಕಟೀಲ್ ರವರಿಗೆ ಟಿಕೆಟ್ ಕೊಡುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.