ಮಧ್ಯಪ್ರದೇಶದ ಬಿಜೆಪಿ ಹಾಲಿ ಶಾಸಕ ಹಾಗೂ ಹಲವು ಜಿಲ್ಲೆಗಳ ಇತರ ನಾಯಕರು ಇತ್ತೀಚೆಗೆ ಬಿಜಿಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಈ ನಾಯಕರು ಭೋಪಾಲ್ನಲ್ಲಿರುವ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಮತ್ತು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಕೆಲವು ತಿಂಗಳುಗಳು ಬಾಕಿ ಇರುವಾಗ ಈ ಘಟನೆ ನಡೆದಿದೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಮಾಜಿ ‘ನಿಷ್ಠಾವಂತರು’ ಬಿಜೆಪಿಯಿಂದ ಕಾಂಗ್ರೆಸ್ಗೆ ಸಾಮೂಹಿಕ ವಲಸೆ ಹೋಗುತ್ತಿದ್ದಾರೆ.
ಶಿವಪುರಿ ಜಿಲ್ಲೆಯ ಕೋಲಾರಸ್ ಕ್ಷೇತ್ರದ ಶಾಸಕ ವೀರೇಂದ್ರ ರಘುವಂಶಿ ಅವರು ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಅವರು ಆಗಸ್ಟ್ 31ರಂದು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ತಮ್ಮ ರಾಜೀನಾಮೆ ಪತ್ರದಲ್ಲಿ ಶಾಸಕರು ಬಿಜೆಪಿಯಲ್ಲಿನ ಗುಂಪುಗಾರಿಕೆ ಮತ್ತು ಭ್ರಷ್ಟಾಚಾರದ ಕುರಿತು ಆರೋಪಿಸಿದ್ದಾರೆ.
ಧಾರ್ ಜಿಲ್ಲೆಯ ಬಿಜೆಪಿಯ ಮಾಜಿ ಶಾಸಕ ಭವರ್ ಸಿಂಗ್ ಶೇಖಾವತ್ ಮತ್ತು ಸಾಗರ ಜಿಲ್ಲೆಯ ಚಂದ್ರಭೂಷಣ ಸಿಂಗ್ ಬುಂದೇಲಾ ಸೇರಿದ್ದಾರೆ. ಝಾನ್ಸಿಯಿಂದ ಎರಡು ಬಾರಿ ಸಂಸದ ಸಹ ಆಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಗೊಳ್ಳಲು ಚಂದ್ರ ಭೂಷಣ್ ಸಿಂಗ್ ತವರು ಜಿಲ್ಲೆಯಿಂದ 500 ವಾಹನಗಳ ಬೆಂಗಾವಲು ಪಡೆಯೊಂದಿಗೆ ಆಗಮಿಸಿದ್ದರು.
ಜೂನ್ನಲ್ಲಿ ಕೊಲಾರಸ್ನಲ್ಲಿ ಸಿಂಧಿಯಾ ಅವರೊಂದಿಗೆ ಕೆಲಸ ಮಾಡುತ್ತಿದ್ದ ಶಿವಪುರಿ ಪ್ರಬಲ ವ್ಯಕ್ತಿ ಬೈಜನಾಥ್ ಸಿಂಗ್ ಯಾದವ್ ಅವರು ತಮ್ಮ ಹಲವಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾದರು. ನಂತರ, ಬಿಜೆಪಿಯ ಶಿವಪುರಿ ಜಿಲ್ಲಾ ಮಾಜಿ ಉಪಾಧ್ಯಕ್ಷ ರಾಕೇಶ್ ಗುಪ್ತಾ ಕಾಂಗ್ರೆಸ್ ಸೇರ್ಪಡೆಗೊಂಡರು.
2020ರ ಮಾರ್ಚ್ ನಲ್ಲಿ ಸಿಂಧಿಯಾ ಅವರು 22 ಕಾಂಗ್ರೆಸ್ ಶಾಸಕರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದರ ಪರಿಣಾಮವಾಗಿ ರಾಜ್ಯದಲ್ಲಿ ಹಿಂದಿನ ಕಮಲ್ ನಾಥ್ ನೇತೃತ್ವದ ಸರ್ಕಾರ ಪತನವಾಗಿತ್ತು.