ಬಿಟ್ ಕಾಯಿನ್ ಹಗರಣದ ಆರೋಪಿ, ಕುಖ್ಯಾತ ಹ್ಯಾಕರ್ ಶ್ರೀಕಿಗೆ ಗನ್ ಮ್ಯಾನ್

ರಾಜ್ಯ

ಕೊಲೆ ಬೆದರಿಕೆ ಹಿನ್ನೆಲೆಯಲ್ಲಿಲಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿಗೆ ಗನ್‌ಮ್ಯಾನ್ ನೀಡಲಾಗಿದೆ.
ಎಸ್‌ಐಟಿ ಮುಂದೆ ಸ್ಫೋಟಕ ಮಾಹಿತಿ ನೀಡಿದ್ದ ಶ್ರೀಕಿಗೆ ಈಗ ಕೊಲೆ ಬೆದರಿಕೆ ಇದೆ. ಅಷ್ಟೇ ಅಲ್ಲದೇ ಶ್ರೀಕಿ ಪೊಲೀಸರ ಕೈಯಲ್ಲಿ ಸಿಗದೇ ತಪ್ಪಿಸಿಕೊಂಡು ಓಡಾಡುತ್ತಿರುತ್ತಾನೆ. ಹೀಗಾಗಿ ಎಸ್‌ಐಟಿ ಶ್ರೀಕಿಗೆ ಗನ್ ಮ್ಯಾನ್ ನೀಡಿದೆ.

ಬಿಟ್‌ ಕಾಯಿನ್‌ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು, ರಾಜಕರಣಿಗಳ ಮಕ್ಕಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.ಇದೀಗ ಜೀವ ಬೆದರಿಕೆ ಹಿನ್ನಲೆಯಲ್ಲಿ ಶ್ರೀಕಿಗೆ ಗನ್ ಮ್ಯಾನ್ ನೀಡಲಾಗಿದೆ.