ಹೈಕೋರ್ಟ್ ಆದೇಶ ಉಲ್ಲಂಘನೆ: ಪತಂಜಲಿಗೆ 4 ಕೋಟಿ ರೂ. ದಂಡ

ರಾಷ್ಟ್ರೀಯ

ಕರ್ಪೂರ ಉತ್ಪನ್ನವನ್ನು ಮಾರಾಟ ಮಾಡದಂತೆ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಪತಂಜಲಿ ಕಂಪನಿಗೆ ಬಾಂಬೆ ಹೈಕೋರ್ಟ್ ಸೋಮವಾರ 8 ಕೋಟಿ ರೂಪಾಯಿ ದಂಡ ವಿಧಿಸಿದೆ.

ಪತಂಜಲಿ ಕಂಪನಿಯು ಕರ್ಪೂರ ಉತ್ಪನ್ನಗಳ ಮಾರಾಟಕ್ಕೆ ನಮ್ಮ ಕಂಪನಿಯ ಟ್ರೇಡ್ ಮಾರ್ಕ್ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಮಂಗಳಂ ಆರ್ಗಾ ನಿಕ್ಸ್ ಕಂಪನಿಯು ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಉತ್ಪನ್ನ ಮಾರಾಟ ಮಾಡದಂತೆ 2023 ರಲ್ಲಿ ಪತಂಜಲಿ ನಿರ್ಬಂಧ ವಿಧಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಐ ಛಾಗಲಾ ಅವರು “ಪತಂಜಲಿಯು ಉದ್ದೇಶಪೂರ್ವಕವಾಗಿ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ” ಎಂದು ಅಭಿಪ್ರಾಯಪಟ್ಟರು. ಎರಡು ವಾರಗಳ ಒಳಗಾಗಿ 4 ಕೋಟಿ ರೂಪಾಯಿ ಠೇವಣಿ ಇಡುವಂತೆ ಸೂಚಿಸಿದರು.