ಮಂಗಳೂರಿನ ಕೆ.ಪಿ.ಟಿ.ಬಳಿ ನಡೆದ ಅಪಘಾತ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಮೃತ್ಯು.

ಕರಾವಳಿ

ಮಂಗಳೂರಿನ ಕೆ.ಪಿ.ಟಿ.ಬಳಿ ಗುರುವಾರದಂದು ಬೈಕ್-ನ್ಯಾನೋ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾಸ್ಕರ್ (49) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಾಣಿ ಸಮೀಪದ ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿದ್ದರು. ಕೆಲಸದ ನಿಮಿತ್ತ ಮಂಗಳೂರಿಗೆ ಹೋಗಿದ್ದ ಭಾಸ್ಕರ್ ಅವರು ಚಲಾಯಿಸುತ್ತಿದ್ದ ಬೈಕಿಗೆ ನ್ಯಾನೋ ಕಾರು ಕೆ.ಪಿ.ಟಿ.ಬಳಿ ಡಿಕ್ಕಿ ಹೊಡೆದು ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.