ಮಣಿಪಾಲ: ಲಕ್ಷ್ಮೀಂದ್ರನಗರದ ಬಳಿಯ ಮುಖ್ಯ ರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಇರಿದು ಹತ್ಯೆಗೈದ ಘಟನೆ ಡಿ. 6 ರಂದು ಶುಕ್ರವಾರ ನಡೆದಿದೆ.
ಕೊಲೆಯಾದ ಹೋಟೆಲ್ ಕಾರ್ಮಿಕನನ್ನು ಕೇರಳದ ಕಾಸರಗೋಡು ನಿವಾಸಿ ಶ್ರೀಧರ ನಾಯಕ್ (38) ಎಂದು ಗುರುತಿಸಲಾಗಿದೆ.

ಈತ ಮಣಿಪಾಲ ಈಶ್ವರನಗರದ ಹೊಟೇಲ್ ಒಂದರ ಕುಕ್ ಎಂದು ತಿಳಿದುಬಂದಿದೆ. ಬೆಳಿಗ್ಗೆ 6ಗಂಟೆ ಸುಮಾರಿಗೆ ಮೂರರಿಂದ ನಾಲ್ಕು ಮಂದಿಯ ತಂಡ ಹೊಡೆದಾಟ ನಡೆಸುತ್ತಿದ್ದರು. ಗಲಾಟೆ ವಿಕೋಪಕ್ಕೆ ತಿರುಗಿದಾಗ ಶ್ರೀಧರ್ ಅವರ ಕುತ್ತಿಗೆಗೆ ಬಿಯರ್ ಬಾಟಲಿಯಿಂದ ಇರಿದು ಪರಾರಿಯಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡ ಶ್ರೀಧರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯು
ಶುಕ್ರವಾರ ಬೆಳಗ್ಗೆ ವಾಯುವಿಹಾರಕ್ಕೆ ಹೋದಾಗ ಸ್ಥಳೀಯರ ಗಮನಕ್ಕೆ ಬಂದಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಡಾ.ಅರುಣ್ ಕುಮಾರ್, ಮಣಿಪಾಲ ಇನ್ಸ್ ಪೆಕ್ಟರ್ ದೇವರಾಜ್, ಮಂಜುನಾಥ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.