ನಿಯಂತ್ರಣಕ್ಕೆ ಶ್ರೀಘ್ರದಲ್ಲಿ ವಿಶೇಷ ಕಾರ್ಯಕ್ರಮ ಘೋಷಣೆ: ಆರೋಗ್ಯ ಸಚಿವ
ರಾಜ್ಯದಲ್ಲಿ ಪ್ರತಿ ವರ್ಷ `ಸಿಸೇರಿಯನ್ ಹೆರಿಗೆ’ ಪ್ರಮಾಣ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.
2021-2022 ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಯಿತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಇದೆ.

ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್ ಹೆರಿಗೆಗೆ ನಿಯಂತ್ರಣ ಹೇರಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿದ್ದು, ಮುಂದಿನ ತಿಂಗಳು ನೂತನ ಕಾರ್ಯಕ್ರಮವನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.