ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಇನ್ನು ಎರಡು ತಿಂಗಳಲ್ಲಿ ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದ್ದು, ಎರಡು-ಮೂರು ತಿಂಗಳಲ್ಲಿ ಚುನಾವಣೆಗೆ ನೋಟಿಫಿಕೇಶನ್ ಹೊರಡಿಸಲಾಗುವುದು. ಬಿಜೆಪಿ ಅಧಿಕಾರದಲ್ಲಿದ್ದಾಗ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಮುಂದೂಡುತ್ತಲೆ ಬಂದಿದೆ. ಆದರೆ, ಈ ಬಾರಿ ನಾವು ಚುನಾವಣೆ ನಡೆಸುವುದು ಖಚಿತ ಎಂದರು. ಇತ್ತೀಚೆಗೆ ಮಾನ್ಯ ಕರ್ನಾಟಕ ಹೈಕೋರ್ಟ್ ಈ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.
