ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಉನ್ಮೇಶನ ದಸ್ತಗಿರಿ

ಕರಾವಳಿ

ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ. ಸಂಖ್ಯೆ: 56/2020, ಕಲಂ: 457, 380 r/w 34 ಐ.ಪಿ.ಸಿ (ಕಳವು) ಪ್ರಕರಣದಲ್ಲಿ ಆರೋಪಿಯಾಗಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಉನ್ಮೇಶ ಎಂಬಾತನನ್ನು, ಬೆಳ್ಳಾರೆ ಠಾಣಾ ಪೊಲೀಸರು ಕೇರಳ ರಾಜ್ಯದಲ್ಲಿ ದಸ್ತಗಿರಿ ಮಾಡಿ, ದಿನಾಂಕ: 17.08.2025ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿ ಉನ್ಮೇಶನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.