ರಾಷ್ಟ್ರೀಯ ಉದ್ಯಾನ, ಅಭಯಾರಣ್ಯ, ಸಂರಕ್ಷಿತ ಅರಣ್ಯ ಪ್ರದೇಶಗಳ ಒಂದು ಕಿ.ಮೀ ಸುತ್ತಳತೆಯಲ್ಲಿ ಗಣಿಗಾರಿಕೆ ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಸುವ ಗಣಿಗಾರಿಕೆ ವನ್ಯಜೀವಿಗಳಿಗೆ ಅಪಾಯಕಾರಿಯಾಗಿದೆ ಎಂಬ ಸಂಗತಿ ಗಮನಿಸಿದ ಸುಪ್ರೀಂ ಕೋರ್ಟ್, ಈ ಹಿಂದೆ ಜಾರ್ಖಂಡ್ ನ ಸರಂಡಾ ವನ್ಯಜೀವಿ ಅಭಯಾರಣ್ಯ ಹಾಗೂ ಸಸಂಗದಾಬುರು ಸಂರಕ್ಷಿತ ಮೀಸಲು ಅರಣ್ಯ ಪ್ರದೇಶಕ್ಕೆ ನೀಡಿದ ಆದೇಶವನ್ನು ದೇಶವ್ಯಾಪಿ ಅನ್ವಯಗೊಳಿಸುವಂತೆ ಆದೇಶ ನೀಡಿದೆ.
ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆಯನ್ನು ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು.
