ಕಡಬ ತಾಲೂಕಿನ ಐನೆಕಿದು ಗ್ರಾಮದ ಕಲ್ಲಾಜೆ ಎಂಬಲ್ಲಿ ಹೊಳೆಯಲ್ಲಿ ಅಕ್ರಮವಾಗಿ ಇಟಾಚಿ ವಾಹನದ ಮೂಲಕ ಮರಳು ತೆಗೆಯಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸ್ ಉಪ-ನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ ರವರು ಸಿಬ್ಬಂದಿಗಳೊಂದಿಗೆ ದಿನಾಂಕ 16.02.2026 ರಂದು ಬೆಳಿಗ್ಗೆ 10.30 ರ ಸಮಯಕ್ಕೆ ತಕ್ಷೀರು ಸ್ಥಳಕ್ಕೆ ತೆರಳಿದಾಗ ಆರೋಪಿಗಳು ವಾಹನಗಳನ್ನುಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದರು. ಸ್ಥಳದಲ್ಲಿದ್ದ TATA HITACHI ಮತ್ತು KA-21-B-3929 EICHER ಟಿಪ್ಪರ್ ಹಾಗೂ KA-20-D-7639 ಟಿಪ್ಪರ್ ಲಾರಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ
ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 50,000 ಸಾವಿರ ರೂಪಾಯಿ ಮೌಲ್ಯದ 50 ಟನ್ ಮರಳು ಪತ್ತೆಯಾಗಿದೆ. ಸ್ವಾಧೀನಪಡಿಸಿದ ವಾಹನಗಳ ಒಟ್ಟು ಅಂದಾಜು ಮೌಲ್ಯ 20 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 08/2026 ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
