ರಾತ್ರಿಪಾಳಿ ಕೆಲಸದಲ್ಲಿ ಪತಿ, ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನ ಜೊತೆ ರಾಸಲೀಲೆ; ಸಿಕ್ಕಿ ಬಿದ್ದ ಪತ್ನಿ, ಕುಕ್ಕರ್ ಪ್ರಯೋಗಕ್ಕೆ ಪತಿ ಮಾಟಾಶ್.!

ರಾಜ್ಯ

ದಾಂಪತ್ಯ ಸಂಬಂಧಕ್ಕೆ ಕಳಂಕ ತರುವಂತಹ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯ ಬೀನಾ ಕಾಲೋನಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಎನ್‌ಸಿಎಲ್ ಸಂಸ್ಥೆಯಲ್ಲಿ ಸೀನಿಯರ್ ಓವರ್‌ಮನ್ ಆಗಿ ಸೇವೆ ಸಲ್ಲಿಸುತ್ತಿದ್ದ ರಮಾ ಶಂಕರ್ ಮಿಶ್ರಾ ಅವರನ್ನು ಅವರ ಪತ್ನಿ ಪ್ರಿಯಾಂಕಾ ಮಿಶ್ರಾ ಹಾಗೂ ಆಕೆಯ ಪ್ರಿಯಕರ ವಿಕಾಸ್ ಚೌಹಾಣ್ ಮತ್ತು ಸಹಚರರು ಸೇರಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಎನ್‌ಸಿಎಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಮಾ ಶಂಕರ್ ಅವರಿಗೆ ರಾತ್ರಿ ಪಾಳಿಯ ಕೆಲಸವಿರುತ್ತಿತ್ತು. ಗಂಡ ಕೆಲಸಕ್ಕೆ ತೆರಳಿದ ತಕ್ಷಣ, ಪತ್ನಿ ಪ್ರಿಯಾಂಕಾ ತನ್ನ ಇಬ್ಬರು ಹೆಣ್ಣುಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ ಮಲಗಿಸಿ, ಪ್ರಿಯಕರ ವಿಕಾಸ್‌ನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು.

ಘಟನೆ ನಡೆದ ರಾತ್ರಿ ರಮಾ ಶಂಕರ್ ಅವರು ಪ್ರಮುಖ ಫೈಲ್ ಒಂದನ್ನು ಮನೆಯಲ್ಲೇ ಮರೆತು ಡ್ಯೂಟಿಗೆ ತೆರಳಿದ್ದರು. ಮಧ್ಯರಾತ್ರಿ ಫೈಲ್ ಕೊಂಡೊಯ್ಯಲು ಮನೆಗೆ ವಾಪಸ್ ಬಂದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಅನುಮಾನಗೊಂಡು ಸ್ಪೇರ್ ಕೀ ಬಳಸಿ ಒಳಗೆ ಹೋದಾಗ ಪತ್ನಿ ಪ್ರಿಯಕರನೊಂದಿಗೆ ಇರುವುದು ಕಂಡುಬಂದಿದೆ. ಈ ವೇಳೆ ದಂಪತಿ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಪ್ರಿಯಾಂಕಾ ಮತ್ತು ಆಕೆಯ ಪ್ರಿಯಕರ ಸೇರಿ ಪ್ರೆಶರ್ ಕುಕ್ಕರ್ ಹಾಗೂ ಬಲವಾದ ವಸ್ತುವಿನಿಂದ ರಮಾ ಶಂಕರ್ ತಲೆಗೆ ಹೊಡೆದು, ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ರಸ್ತೆಬದಿಯಲ್ಲಿ ಎಸೆದು, ಅಪಘಾತದಂತೆ ಬಿಂಬಿಸಲು ಯತ್ನಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ರಮಾ ಶಂಕರ್ ಅವರ ತಂದೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾಲ್ ಡಿಟೇಲ್ಸ್ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಪತ್ನಿ ಪ್ರಿಯಾಂಕಾ, ಆಕೆಯ ಪ್ರಿಯಕರ ವಿಕಾಸ್ ಚೌಹಾಣ್ ಹಾಗೂ ಮೃತದೇಹ ವಿಲೇವಾರಿಗೆ ಸಹಕರಿಸಿದ ಅನುರಾಗ್ ಸಿಂಗ್ ಮತ್ತು ಸೋನು ಗುಪ್ತಾ ಹಾಗೂ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ