ಮಗುವನ್ನು ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ ಗೆ ಇಂದು ಸಂಜೆ ಮಾಣಿ-ಮೈಸೂರು ಹೆದ್ದಾರಿಯ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಬಳಿ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ. ಆಂಬ್ಯುಲೆನ್ಸ್ನಲ್ಲಿದ್ದ ಐವರು ಗಾಯಗೊಂಡಿದ್ಜಾರೆ.
ಜಯಪ್ರಕಾಶ್ ಎಂಬವರು ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್(ಕೆಎ 21, ಬಿ 1971) ಗೆ ಪುತ್ತೂರು ಕಡೆಯಿಂದ ಮೈಸೂರಿನತ್ತ ಸಂಚರಿಸುತ್ತಿದ್ದ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಇನ್ನೊಂದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಂಟೈನರ್ ಲಾರಿ ಚಾಲಕ ಜೆಸಿಬಿಯೊಂದನ್ನು ಓವರ್ಟೇಕ್ ಮಾಡುವ ಸಂದರ್ಭ ಅಪಘಾತ ಸಂಭವಿಸಿದೆ. ಅಪಘಾತದಿಂದ ಆಂಬ್ಯುಲೆನ್ಸ್ ನ ಮುಂಭಾಗ ಜಖಂಗೊಂಡಿದ್ದು ಕಂಟೈನರ್ಗೂ ಅಲ್ಪ ಪ್ರಮಾಣದ ಹಾನಿಯಾಗಿದೆ.
ಅಪಘಾತದ ಪರಿಣಾಮ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಸ್ಥಳಕ್ಕೆ ಸಂಪ್ಯ ಠಾಣಾ ಎಸ್ಸೆ ಜಂಬೂರಾಜ್ ಮಹಾಜನ್ ಮತ್ತು ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
