ಬೆಳ್ತಂಗಡಿ: ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ: ಆರೋಪಿ ಉಮೇಶ್ ಗೌಡನಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, 5,000 ಸಾವಿರ ರೂ. ದಂಡ

ಕರಾವಳಿ

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯ ನಿರೀಕ್ಷಕರಾದ ಸುಬ್ಬಾಪುರ್ ಮಠ್ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಸಂದೇಶ್ ರವರು ಆರೋಪಿಯ ಮೇಲೆ ಆರೋಪ ಸಾಬೀತಾದ ಕಾರಣ, ಆರೋಪಿ ಉಮೇಶ್ ಗೌಡ ಎಂಬವರಿಗೆ ಮೂರು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ಹಾಗೂ 5,000 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ ಆರು ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ನೀಡಿರುತ್ತಾರೆ. ಸರ್ಕಾರದ ಪರ ಸಹಾಯಕ ಸಹಕಾರಿ ಅಭಿಯೋಜಕರಾಗಿ ಶ್ರೀಮತಿ ಆಶಿತಾ ರವರು ವಾದಿಸಿರುತ್ತಾರೆ..