ಹಿಂದೂ ವಿಧವೆಯ ಮರಣ ನಂತರ, ಆಕೆಯ ಆಸ್ತಿ ಆಕೆಯ ಹೆತ್ತವರ ಬದಲು ಆಕೆಯ ಗಂಡನ ಕುಟುಂಬಕ್ಕೆ ಸಂದುತ್ತದೆ: ಸುಪ್ರೀಂ ಕೋರ್ಟ್

ರಾಷ್ಟ್ರೀಯ

ಮಕ್ಕಳಿಲ್ಲದ ಹಿಂದೂ ವಿಧವೆಯ ಮರಣ ನಂತರ, ಆಕೆಯ ಆಸ್ತಿ ಆಕೆಯ ಹೆತ್ತವರ ಬದಲು ಆಕೆಯ ಗಂಡನ ಕುಟುಂಬಕ್ಕೆ ಸಂದುತ್ತದೆ ಎಂದು ಹೇಳುವ ಹಿಂದೂ ಉತ್ತರಾಧಿಕಾರ ಕಾಯ್ದೆಯ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹಿಂದೂ ಕಾನೂನಿನಡಿಯಲ್ಲಿ ಮಹಿಳೆ ಮದುವೆಯಾದಾಗ, ಆಕೆಯ ಗೋತ್ರವೂ ಬದಲಾಗುತ್ತದೆ ಎಂದು ಹೇಳಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, ಹಿಂದೂ ಸಮಾಜ ಕನ್ಯಾದಾನ ಎಂಬ ಪರಿಕಲ್ಪನೆಯನ್ನು ಹೊಂದಿದೆ, ಅದರ ಅಡಿಯಲ್ಲಿ ಒಬ್ಬ ಮಹಿಳೆ ಮದುವೆಯಾದಾಗ, ಅವಳ “ಗೋತ್ರ” ಅಂದರೆ ಒಂದು ಕುಲ ಅಥವಾ ಸಾಮಾನ್ಯ ಪೂರ್ವಜರಿಂದ ಬಂದ ವಂಶಸ್ಥರು ಸಹ ಬದಲಾಗುತ್ತದೆ ಎಂದು ಹೇಳಿದ್ದಾರೆ.

ಹೀಗಾಗಿ ಸಾವಿರಾರು ವರ್ಷಗಳಿಂದ ಅಸ್ತಿತ್ವದಲ್ಲಿರುವ ಒಂದು ವಿಷಯ ತನ್ನ ನಿರ್ಧಾರದಿಂದ ಬದಲಾಗಬೇಕು ಎಂಬುದನ್ನು ನ್ಯಾಯಾಲಯ ಬಯಸುವುದಿಲ್ಲ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು ಹೇಳಿದ್ದಾರೆ. ಮಕ್ಕಳಿಲ್ಲದ ಹಿಂದೂ ವಿಧವೆಯೊಬ್ಬಳು ವಿಲ್ ಇಲ್ಲದೆ ಸಾವನ್ನಪ್ಪಿದರೆ, ಆಕೆಯ ಆಸ್ತಿಯನ್ನು ಯಾರು ಪಡೆದುಕೊಳ್ಳುತ್ತಾರೆ ಎಂಬುದರ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಈ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಪ್ರಸ್ತುತ ಕಾನೂನಿನಡಿಯಲ್ಲಿ, ಆಸ್ತಿಯನ್ನು ಆಕೆಯ ತಾಯಿಯ ಕುಟುಂಬದ ಬದಲಿಗೆ, ಅತ್ತೆ-ಮಾವಂದಿರಿಗೆ ವರ್ಗಾಯಿಸಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಿದೆ.