ಜನನ-ಮರಣಗಳ ನೋಂದಣಿಗೆ ಸಂಬಂಧಿಸಿ ಅಕ್ಟೋಬರ್ ಒಂದು 2026 ರಿಂದ ಹೊಸ ನಿಯಮ ಜಾರಿ

ಜನನ ಮತ್ತು ಮರಣಗಳ ನೋಂದಣಿಗೆ ಸಂಬಂಧಿಸಿದ ಅಕ್ಟೋಬರ್ 1, 2026ರಿಂದ ನಿಯಮಗಳು ಬದಲಾಗಲಿವೆ. ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆ, 2026ರ ಎಲ್ಲಾ ನಿಬಂಧನೆಗಳು ಅಂದಿನಿಂದ ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. 2026ರ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ್ದು, ರಾಷ್ಟ್ರಪತಿಯ ಅಂಕಿತದ ಬಳಿಕ ಅದು ಕಾನೂನಾಗಿದೆ. ತಡವಾಗಿ ಜನನ ಅಥವಾ ಮರಣ ನೋಂದಣಿ ಮಾಡುವ ಸಂದರ್ಭಗಳಲ್ಲಿ ಇನ್ನು ಮುಂದೆ ಹೆಚ್ಚಿನ ಪರಿಶೀಲನೆ ಮತ್ತು ಅಧಿಕಾರಿಗಳ ಆದೇಶ ಅಗತ್ಯವಾಗಲಿದೆ. […]

Continue Reading

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ; ಪ್ರೀತಿಸುವ ನಾಟಕ, ಎಂಟು ಮಂದಿ ಕಾಮುಕರಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ. ಆರೋಪಿಗಳ ಬಂಧನ

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನೆಪವೊಡ್ಡಿ 8 ಮಂದಿ ಕಾಮುಕರು ಅನೇಕ ಬಾರಿ ಅತ್ಯಾಚಾರ ಮಾಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಅಲ್ವಾಲ್ ಮತ್ತು ಸುತ್ತಮುತ್ತಲಿನ ವಿವಿಧ ಸ್ಥಳಗಳಲ್ಲಿ ಸುಮಾರು ಎಂಟು ಮಂದಿ ಪುರುಷರು 16 ವರ್ಷದ ಬಾಲಕಿಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಾಲಕಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದಳು ಎಂದು ತಿಳಿದು ಬಂದಿದೆ. ಮಚಾ ಬೊಲ್ಲಾರಮ್ ನಿವಾಸಿ ಮತ್ತು ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಬಾಲಕಿ, ಹತ್ತನೇ ತರಗತಿಯಲ್ಲಿ ಓದುತ್ತಿದ್ದಾಗ ಜೆರ್ರಿ […]

Continue Reading

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು

ಬಂಟ್ವಾಳದಲ್ಲಿ ಕಳೆದ ವರ್ಷದ ಮೇ ತಿಂಗಳಲ್ಲಿ ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಕೋಕಾ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ (ಕೋಕಾ) ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಬ್ದುಲ್ ರಹ್ಮಾನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಡಿ ಬಂಧಿತರಾಗಿದ್ದ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಮಂದಿ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. […]

Continue Reading

ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಡಿವೈಎಫ್ಐ ಕಾರ್ಯಕರ್ತ ವರ್ಷಿತ್ ಕುಲಾಲ್

ಸೋಮವಾರ ಸಂಜೆ ಕುತ್ತಾರ್ ಭಾಗದಲ್ಲಿ ನಡೆದ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳು ನಿಷ್ಕ್ರಿಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುತ್ತಾರ್ ಬಟ್ಟೆದಡಿ ಪ್ರದೇಶದ ಡಿವೈಎಫ್ಐಯ ಸಕ್ರಿಯ ಕಾರ್ಯಕರ್ತ ವರ್ಷಿತ್ ಕುಲಾಲ್ (21) ಇನ್ನಿಲ್ಲ ಎಂಬ ನೋವಿನ ಸುದ್ದಿ ನಿಜಕ್ಕೂ ಆಘಾತಕಾರಿ. ಮತ್ತೆ ಗುಣಮುಖನಾಗಿ ನಮ್ಮ ನಡುವೆ ಮರಳಿ ಬರುತ್ತಾನೆ ಎಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ, ವೈದ್ಯರು ವರ್ಷಿತ್ ಅವರ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದಾಗ ಆ ಕುಟುಂಬ ಎದುರಿಸಿದ ನೋವನ್ನು ಪದಗಳಲ್ಲಿ ಹೇಳಲಾಗದು. ಕಣ್ಣೆದುರೇ ಬೆಳೆಸಿದ ಮಗನನ್ನು ಕಳೆದುಕೊಂಡ ದುಃಖ ಒಂದೆಡೆಯಾದರೆ, […]

Continue Reading

ಮಂಗಳೂರು ಜೈಲು ಜಾಮರ್ ವಿವಾದ: ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ತೆರೆ, ತಾಂತ್ರಿಕ ಪರಿಹಾರಕ್ಕೆ ಒತ್ತು ನೀಡಲು ವಕೀಲ ಮನೋರಾಜ್ ರಾಜೀವ ಅಗ್ರಹ

ಮಂಗಳೂರು: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಸಿಗ್ನಲ್ ಜಾಮರ್‌ಗೆ ಸಂಬಂಧಿಸಿದ ವಿವಾದವನ್ನು ರಾಜಕೀಯ ಆರೋಪ-ಪ್ರತ್ಯಾರೋಪದ ಬದಲು ವೈಜ್ಞಾನಿಕ ಹಾಗೂ ತಾಂತ್ರಿಕ ಪರಿಶೀಲನೆಯ ಮೂಲಕ ಪರಿಹರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‌ಟಿಐ ವಿಭಾಗದ ಅಧ್ಯಕ್ಷ, ವಕೀಲ ಮನೋರಾಜ್ ರಾಜೀವ ಪ್ರತಿಪಾದಿಸಿದ್ದಾರೆ. ಜೈಲು ಜಾಮಾರ್ ವ್ಯವಸ್ಥೆಯಿಂದ ಸಾರ್ವಜನಿಕರು ಪರದಾಡುವಂತಾಗಿದ್ದಾರೆ. ಆ ವಿಚಾರವನ್ನು ಮುಂದಿಟ್ಟು ಕೆಲವರು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಕಾನೂನು ತಜ್ಞರೂ ಆದ ಮನೋರಾಜ್ ರಾಜೀವ್ ಬೇಸರ […]

Continue Reading

ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ನೋಟಿಸ್‌ ಜಾರಿಗೊಳಿಸಿದೆ. 14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಅಥವಾ ಧಾರ್ಮಿಕ ಬೋಧನೆ ನೀಡುವ ಎಲ್ಲ ಸಂಸ್ಥೆಗಳನ್ನು ನಿಯಂತ್ರಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ ಈ ಹಿಂದೆ ಶಿಕ್ಷಣ ಸಚಿವಾಲಯಕ್ಕೆ ಸೂಚಿಸಿತ್ತು. ಆದರೆ ಈ ಆದೇಶವನ್ನು ಸಚಿವಾಲಯ ಪಾಲಿಸಿಲ್ಲ ಎಂಬುದನ್ನು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದರು. ನ್ಯಾಯಮೂರ್ತಿಗಳಾದ ದೀಪಂಕರ್‌ ದತ್ತಾ, ಶೀಲ್‌ ನಾಗೂ ಅವರಿದ್ದ […]

Continue Reading

ಕರಾವಳಿ ಜಿಲ್ಲೆಗಳ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು, ಪ್ರವಾಸೋದ್ಯಮ ಸಹಿತ ಅಭಿವೃದ್ದಿ ನೀತಿಯಲ್ಲಿ ಕಾರ್ಪೊರೇಟ್ ಪರವಾದ ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ ಘೋಷಣೆ

ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ದಿಯ ಉದ್ದೇಶದೊಂದಿಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು 18.09.2026 ರಂದು ಮಂಗಳೂರಿನಲ್ಲಿ ನಡೆಸುವುದಾಗಿ ಕರ್ನಾಟಕ ಸರಕಾರ ಘೋಷಿಸಿದೆ. ಕರಾವಳಿ ಕರ್ನಾಟಕವು ಪರಿಸರ ಸೂಕ್ಷ್ಮವಾದ ಪಶ್ಚಿಮ ಘಟ್ಟ, ಅರಬಿ ಸಮುದ್ರ, ಹಲವಾರು ನದಿಗಳಿಂದ ಸಮೃದ್ದವಾದ ಪ್ರದೇಶ. ಬಂದರು, ವಿಮಾನ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ವಿಶಾಲವಾದ ರಸ್ತೆ ಜಾಲಗಳಿಂದಾಗಿ ಅಭಿವೃದ್ದಿಯ ವಿಫುಲ ಅವಕಾಶಗಳನ್ನು ಹೊಂದಿರುವುದು ಹೌದು. ಉದ್ಯಮಶೀಲ ಹಾಗು ಶ್ರಮಜೀವಿ, ವಿದ್ಯಾವಂತ, ಬುದ್ದಿವಂತ ಜನರ ನೆಲೆಯೂ ಆಗಿರುವ ಕರಾವಳಿ ಜಿಲ್ಲೆಗಳು ಸಾಧಿಸಬೇಕಾದಷ್ಟು ಅಭಿವೃದ್ಧಿ ಸಾಧಿಸಿಲ್ಲ. […]

Continue Reading

ಪೊಲೀಸರ ಡ್ಯಾಶಿಂಗ್ ರೀತಿಯ ಭಾಷೆಯನ್ನು ಕರಾವಳಿಯ ಜನ ಒಪ್ಪಿಕೊಳ್ಳಲ್ಲ. ಘಟ್ಟದಾಚೆಗಿನ ಪೊಲೀಸರ ಕಟು ಭಾಷೆ ಇಲ್ಲಿ ವರ್ಕೌಟ್ ಆಗಲ್ಲ.!

ಸಂಚಾರಿ ಪೊಲೀಸಪ್ಪನ ರೌದ್ರಾವತಾರ.. ವಿಡಿಯೋ ವೈರಲ್.. ಕರಾವಳಿ ಪೊಲೀಸರು ಅನುಸರಿಸಬೇಕಾದ ಮಾನದಂಡವೇನು.? ಪೊಲೀಸರಷ್ಟು ಟೀಕೆಗೆ ಗುರಿಯಾಗುವ ವ್ಯಕ್ತಿ ಈ ಜಗತ್ತಿನಲ್ಲಿ ಬೇರೆ ಯಾರೂ ಇರಲಿಕ್ಕಿಲ್ಲ. ಗಲಾಟೆ, ದೊಂಬಿ, ಕೋಮುಗಲಭೆ ನಡೆದರೆ ಮೊದಲು ಟೀಕೆಗೊಳಗಾಗುವುದು ಪೊಲೀಸರು. ಗಲಾಟೆಯನ್ನು ಸಮರ್ಥವಾಗಿ ನಿಭಾಯಿಸಿದರೆ ಅಮಾಯಕರ ಮೇಲೆ ದೌರ್ಜನ್ಯ ಅನ್ನುವ ಮತ್ತೊಂದು ಹೊಸ ಕೂಗು ಕೇಳಿ ಬರುತ್ತದೆ. ದಿನದ 24 ತಾಸು ಮಳೆ, ಬಿಸಿಲು ಅನ್ನದೆ ಕಾರ್ಯನಿರ್ವಹಿಸಬೇಕಾದವರು ಪೊಲೀಸರು. ಕೆಲವೊಮ್ಮೆ ನಡುಬೀದಿಯ ರಸ್ತೆಯ ಬಸ್ಸು ನಿಲ್ದಾಣ ಪೊಲೀಸರಿಗೆ ರಾತ್ರಿಯ ನಿದ್ರಿಸುವ ಸ್ಥಳವೂ ಆಗಿರುತ್ತದೆ. […]

Continue Reading

ಸಿದ್ದು ಕೊರಳಿಗೆ ಗಂಟೆ ಕಟ್ಟುವವರು ಯಾರು.?, ಬೇರೆ ದಾರಿಯತ್ತ ರಾಜಣ್ಣ?, ಯಡಿಯೂರಪ್ಪ ಖುಷಿಗೆ ಏನು ಕಾರಣ?

✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ದಿಲ್ಲಿಗೆ ಹೋದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿ ತುಂಬ ಕಕ್ಕುಲತೆ ತೋರಿಸಿದರಂತೆ. ‘ಸಿದ್ಧರಾಮಯ್ಯಾಜೀ, ನೀವು ನಮ್ಮ ಪಕ್ಷದ ಆಸ್ತಿ. ಮುಂದಿನ ದಿನಗಳಲ್ಲಿ ನಾವು ಮರಳಿ ಕರ್ನಾಟಕದ ಅಧಿಕಾರ ಸೂತ್ರ ಹಿಡಿಯಲು ನಿಮ್ಮ ಶಕ್ತಿ ಮುಖ್ಯ. 2029 ರ ಲೋಕಸಭಾ ಚುನಾವಣೆಯಲ್ಲಿ ನಾವು ಬಿಜೆಪಿ ಮಿತ್ರಕೂಟವನ್ನು ಎದುರಿಸಬೇಕು ಎಂದರೆ 2028 ರ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಕರ್ನಾಟಕವನ್ನು ಗೆಲ್ಲಲೇಬೇಕು. […]

Continue Reading

ಲೈಂಗಿಕ ದುರುದ್ದೇಶವಿರದ ದೈಹಿಕ ಶಿಕ್ಷೆಯನ್ನು ಪೋಕ್ಸೋ ಎಂದು ಪರಿಗಣಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಲೈಂಗಿಕ ದುರುದ್ದೇಶವಿರದ ದೈಹಿಕ ಶಿಕ್ಷೆಯನ್ನು ಪೋಕ್ಸೋ ಎಂದು ಪರಿಗಣಿಸಲು ಸಾಧ್ಯವಿಲ್ಲ. ಪಾಠವನ್ನು ಪೂರ್ಣ ಗೊಳಿಸಲು ವಿಫಲರಾದ ವಿದ್ಯಾರ್ಥಿನಿಯರಿಗೆ ಹೊಡೆಯುವುದು, ಅವರ ಕೈಗಳನ್ನು ಹಿಡಿಯುವುದು, ಬೆನ್ನು ಅಥವಾ ಸೊಂಟವನ್ನು ಮುಟ್ಟುವುದು ಸೇರಿ ಲೈಂಗಿಕ ಉದ್ದೇಶವಿಲ್ಲದೆ ಶಿಕ್ಷಕರು ನೀಡುವ ದೈಹಿಕ ಶಿಕ್ಷೆಯು ಪೋಕ್ಸೊ ಅಪರಾಧವಲ್ಲ, ಇದು ಪೋಕ್ಸೊ ಕಾಯ್ದೆಯ ಸೆಕ್ಷನ್‌ 10ರ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಶಿಕ್ಷಕರ ಇಂತಹ ನಡವಳಿಕೆಯು ಅನುಚಿತವಾದ ಶಿಕ್ಷೆಯ ಸ್ವರೂಪವಾಗಿದೆ. ಎಳೆಯ ವಯಸ್ಸಿನ ವಿದ್ಯಾರ್ಥಿಗಳೊಂದಿಗೆ ವ್ಯವಹರಿಸುವಾಗ ಶಿಕ್ಷಕರು ಹೆಚ್ಚು ಸಂವೇದನಾಶೀಲರಾಗಿ ಇರಬೇಕು’ […]

Continue Reading