KIADB ಅಧಿಸೂಚಿತ ಮತ್ತು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಸಂಸ್ಥೆಗಳಿಂದ ತೆರಿಗೆ ಸಂಗ್ರಹಿಸಲು ಗ್ರಾಮ ಪಂಚಾಯಿತಿಗಳಿಗೆ ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಸೂಚಿತ ಮತ್ತು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಸಂಸ್ಥೆಗಳಿಂದ ತೆರಿಗೆ ಸಂಗ್ರಹಿಸಲು ಗ್ರಾಮ ಪಂಚಾಯಿತಿಗಳಿಗೆ ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ನೆಲಮಂಗಲದ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ನೆಲೆಗೊಂಡಿರುವ ಹಲವಾರು ಇತರ ಕೈಗಾರಿಕಾ ಸಂಸ್ಥೆಗಳಿಗೆ ಸೋಂಪುರ ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿಸುವಂತೆ ನೀಡಿರುವ ನೋಟಿಸ್ ಗಳನ್ನು ಪ್ರಶ್ನಿಸಿ ಕಲ್ಪತರು ಬ್ರಿವರೀಸ್ ಮತ್ತು ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ […]

Continue Reading

ನೀರುಮಾರ್ಗ: ವೈದ್ಯಕೀಯ ಸೀಟಿಗೆ ಹೆಚ್ಚುವರಿ 8 ಲಕ್ಷ ಡೊನೇಷನ್ ಪಡೆದಿದ್ದ ಜಿ.ಆರ್.ಮೆಡಿಕಲ್ ಕಾಲೇಜು; ಹಣ ಹಿಂದಿರುಗಿಸುವಂತೆ ಶುಲ್ಕ ನಿಯಂತ್ರಣ ಸಮಿತಿ ಸೂಚನೆ

ಮಂಗಳೂರು ತಾಲೂಕಿನ ನೀರುಮಾರ್ಗ ಬಳಿಯ ಜಿ.ಆರ್. ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಎಂಟು ಲಕ್ಷ ರೂಪಾಯಿ ಡೊನೇಷನ್ ವಸೂಲಿ ಮಾಡಿಕೊಂಡಿದ್ದ ಕಾಲೇಜು ಆಡಳಿತ ಮಂಡಳಿ, ಆ ಹಣವನ್ನು ಮರಳಿ ವಿದ್ಯಾರ್ಥಿಗೆ ಹಿಂದಿರುಗಿಸುವಂತೆ ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ. ಶ್ರೀನಿವಾಸ ಗೌಡರು ಸೂಚನೆ ನೀಡಿದ್ದಾರೆ. ಜಿ.ಆರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಆರ್ ಕೆ ಆದಿತ್ಯ ಎಂಬುವವರಿಂದ ಹೆಚ್ಚುವರಿ ಹಣ ಪಾವತಿಸಿಕೊಂಡಿದ್ದರು. ಈ ಕುರಿತು ವಿದ್ಯಾರ್ಥಿ […]

Continue Reading

ಆಂಟಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ 24 ವರ್ಷದ ಯುವಕ, ಬಲವಂತವಾಗಿ ಆಂಟಿ ಜೊತೆ ಮದುವೆ ಮಾಡಿಸಿದ ಗ್ರಾಮಸ್ಥರು

ಆಂಟಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಹಿಡಿದ ಸ್ಥಳೀಯರು ಆತನಿಗೆ ಥಳಿಸಿ ಸ್ಥಳದಲ್ಲೇ ಆಂಟಿ ಜೊತೆ ಮದುವೆ ಮಾಡಿದ್ದಾರೆ. ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 24 ವರ್ಷದ ಯುವಕ ತನ್ನ ಆಂಟಿ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎಂದು ಆರೋಪಿಸಿ ಥಳಿಸಲಾಗಿದೆ. ಅಲ್ಲದೆ ಬಲವಂತವಾಗಿ ಆತನಿಗೆ ಆಂಟಿ ಜೊತೆ ಮದುವೆ ಕೂಡ ಮಾಡಲಾಗಿದೆ. ಭೀಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೀವ್‌ಚಾಪುರ ಎಂಬಲ್ಲಿಯ ಮಿಥಲೇಶ್ ಕುಮಾರ್ ಮಖಿಯಾ ಎಂಬ ಯುವಕನನ್ನು ಅಪಹರಿಸಿದ ದುಷ್ಕರ್ಮಿಗಳು ಆತನ […]

Continue Reading

ಪುತ್ತೂರು: ಭಾರತೀಯ ಚಾರ್ಟಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ) 2025 ರಲ್ಲಿ ನಡೆಸಿದ CA ಪರೀಕ್ಷೆಯಲ್ಲಿ ಪೆರ್ನೆ ನಿವಾಸಿ ಮುಹಮ್ಮದ್ ಇಯಾಸ್ ಯಶಸ್ವಿ

ಪುತ್ತೂರು: ಭಾರತೀಯ ಚಾರ್ಟಡ್ ಎಕೌಂಟೆಂಟ್ಸ್ ಸಂಸ್ಥೆ (ಐಸಿಎಐ)ಯು 2025 ರಲ್ಲಿ ನಡೆಸಿದ ಸಿ.ಎ. ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಮುಹಮ್ಮದ್ ಇಯಾಸ್ ರವರು ತನ್ನ ಮೊದಲ ಪ್ರಯತ್ನದಲ್ಲಿಯೇ ಗ್ರೂಪ್ ಒಂದು ಮತ್ತು ಗ್ರೂಪ್ ಎರಡರಲ್ಲೂ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಪೆರ್ನೆ ನಿವಾಸಿ ಇಸ್ಮಾಯಿಲ್ ಮತ್ತು ರುಖ್ಯಾ ದಂಪತಿಯ ಕಿರಿಯ ಪುತ್ರನಾಗಿರುವ ಮುಹಮ್ಮದ್ ಇಯಾಸ್ ರವರು CA ಗಣೇಶ್ ರಾವ್ ಪಿ. ಅವರ ಮಾರ್ಗದರ್ಶನದಲ್ಲಿ ಕಳೆದ ಮೇ ತಿಂಗಳು ನಡೆದ ಸಿಎ ಅಂತಿಮ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿದ್ದಾರೆ. ಮುಹಮ್ಮದ್ […]

Continue Reading

ಕಾರ್ಪೊರೇಟ್ ಪರ ಕಾರ್ಮಿಕ ಸಂಹಿತೆಗಳ ವಿರುದ್ಧ ದೇಶಾದ್ಯಂತ ಪ್ರಬಲ ಮುಷ್ಕರ ; ಮಂಗಳೂರಿನಲ್ಲಿ ಕಾರ್ಮಿಕರ ಮೆರವಣಿಗೆ, ಪ್ರತಿಭಟನಾ ಸಭೆ

ಕಾರ್ಮಿಕ ವರ್ಗದ ಪ್ರಮುಖ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ರೂಪಿಸಿದ ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ,ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶಾದ್ಯಂತ ನಡೆದ ಮಹಾಮುಷ್ಕರ ಮಂಗಳೂರಿನಲ್ಲಿಯೂ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಎಲ್ಲಾ ವಿಭಾಗದ ಕಾರ್ಮಿಕರು,ಮಾಧ್ಯಮ ವರ್ಗದ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ._ ನಗರದ ಅಂಬೇಡ್ಕರ್ ವ್ರತ್ತದಿಂದ ಸಾವಿರಕ್ಕೂ ಮಿಕ್ಕಿದ ಕಾರ್ಮಿಕರು, ನೌಕರರು ಕೇಂದ್ರ ಸರ್ಕಾರದ ಆಕ್ರಮಣಕಾರಿ ನೀತಿಗಳ ವಿರುದ್ಧ ತೀವ್ರ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು.ಬಳಿಕ ಕ್ಲಾಕ್ […]

Continue Reading

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳು ಸವಾಲ್.. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಪ್ರಕರಣಗಳ ಸಂಖ್ಯೆ, ಶಿಕ್ಷೆ ಪ್ರಮಾಣ ಭಾರಿ ಕಡಿಮೆ

5 ವರ್ಷಗಳಲ್ಲಿ 16,663 ಪೋಕ್ಸೋ ಪ್ರಕರಣಗಳು ದಾಖಲು. ಬರೀ 688 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ವರ್ಷದಿಂದ ವರ್ಷಕ್ಕೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ. ಆದರೆ ಪೋಕ್ಸೋ ಪ್ರಕರಣದಲ್ಲಿ ಸಜೆಯಾಗುತ್ತಿರುವ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 16,663 ನೈಜ ಪೋಕ್ಸೋ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 688 ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆಯಾಗಿದೆ. 2020-2025 ಏಪ್ರಿಲ್ ವರೆಗೆ ರಾಜ್ಯದಲ್ಲಿ 17,426 ಪೋಕ್ಸೋ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 16,663 ಪ್ರಕರಣಗಳನ್ನು ನೈಜ ಪೋಕ್ಸೋ ಪ್ರಕರಣವೆಂದು ಗುರುತಿಸಲಾಗಿದೆ. […]

Continue Reading

ಜುಲೈ 16 ರಂದು ನರ್ಸ್ ನಿಮಿಷಾ ಪ್ರಿಯ ಗಲ್ಲುಗೇರಿಸುವ ಕುರಿತು ಮಾಹಿತಿ; ನರ್ಸ್ ನಿಮಿಷಾ ಪ್ರಿಯ ಯೆಮೆನ್‌ ಪ್ರಜೆಯನ್ನು ಕೊಲೆ ಮಾಡಿರುವ ಆರೋಪ

ನರ್ಸ್‌ ನಿಮಿಷಾ ಪ್ರಿಯಾಗೆ ಗಲ್ಲು ಶಿಕ್ಷೆ ಫಿಕ್ಸ್‌ ಆಗಿದೆ. ಜುಲೈ 16 ರಂದು ನಿಮಿಷಾ ಪ್ರಿಯ ಗಲ್ಲುಗೇರಿಸುವ ಕುರಿತು ಜೈಲು ಅಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ. ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರು 2017ರಲ್ಲಿ ಯೆಮೆನ್‌ನಲ್ಲಿ ಯೆಮೆನ್ ಪ್ರಜೆಯಾದ ತಲಾಲ್ ಅಬ್ದು ಮೆಹ್ದಿ ಅವರನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಪರಾಧಿ ಎಂದು ಸಾಬೀತಾಗಿದ್ದು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ನಿಮಿಷಾ ಮೆಹ್ದಿ ಸಹಕಾರದೊಂದಿಗೆ ಓಮನ್‌ನಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ಆದರೆ ಮೆಹ್ದಿ ತನ್ನ ಪಾಸ್‌ಪೋರ್ಟ್ ವಶಕ್ಕೆ ತೆಗೆದುಕೊಂಡು […]

Continue Reading

ನಾಳೆ ಭಾರತ ಬಂದ್‌, ಕೇಂದ್ರ ಸರ್ಕಾರದ ‘ಕಾರ್ಮಿಕ ವಿರೋಧಿ’ ನೀತಿಗಳ ವಿರುದ್ಧ ಪ್ರತಿಭಟನೆ. ದೇಶಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗಿ ಸಾಧ್ಯತೆ

ದೇಶಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾರತ ನಾಳೆ ಬಂದ್‌ಗೆ ಸಜ್ಜಾಗಿದ್ದು, ಕೇಂದ್ರ ಸರ್ಕಾರದ ‘ಕಾರ್ಮಿಕ ವಿರೋಧಿ’ ನೀತಿಗಳ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ. ಬ್ಯಾಂಕಿಂಗ್, ವಿಮೆ, ಡಾಕ್ ಸೇವೆಗಳು, ಕಲ್ಲಿದ್ದಲು ಗಣಿಗಾರಿಕೆ, ಹೆದ್ದಾರಿ ಮತ್ತು ನಿರ್ಮಾಣ ಕ್ಷೇತ್ರಗಳು ಸೇರಿದಂತೆ ಹಲವು ಪ್ರಮುಖ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆಯಿದ್ದು, ದೇಶದ ಜನಜೀವನ ಅಸ್ತವ್ಯಸ್ತಗೊಳ್ಳುವ ನಿರೀಕ್ಷೆಯಿದೆ. ಕೇಂದ್ರದ 10 ಪ್ರಮುಖ ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಅದರ ಸಹಯೋಗಿಗಳು ಈ ಬಂದ್‌ಗೆ ಕರೆ ನೀಡಿವೆ. ಸರ್ಕಾರದ ‘ಕಾರ್ಮಿಕ ವಿರೋಧಿ, ರೈತ […]

Continue Reading

ಗ್ರಾಹಕರನ್ನು ಗೊಂದಲಕ್ಕೆ ಸಿಲುಕಿಸಬೇಡಿ; ಪಕ್ಕದ ರಾಜ್ಯದಲ್ಲಿ ಸ್ಮಾರ್ಟ್ ಮೀಟರ್‌ಗೆ ರೂ. 900 ಶುಲ್ಕವಿದೆ, ಕರ್ನಾಟಕದಲ್ಲಿ ರೂ. 10 ಸಾವಿರ ಏಕೆ.?: ಹೈಕೋರ್ಟ್

ರಾಜ್ಯದಲ್ಲಿ ವಿದ್ಯುತ್ ಬಳಕೆಯನ್ನು ರಿಯಲ್-ಟೈಂನಲ್ಲಿ ಟ್ರ್ಯಾಕ್ ಮಾಡಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸ್ಮಾರ್ಟ್ ಪ್ರೀ-ಪೇಯ್ಡ್ ಮೀಟರ್‌ಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಮುಂದಾಗಿದೆ. ಆದರೆ, ಈ ಯೋಜನೆಗೆ ಆರಂಭಿಕ ವಿಘ್ನ ಎದುರಾಗಿದ್ದು, ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಸ್ಮಾರ್ಟ್ ಮೀಟರ್‌ಗಳ ಅಳವಡಿಕೆಗೆ ವಿಧಿಸಲಾಗಿರುವ ಭಾರಿ ಶುಲ್ಕದ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಬೆಸ್ಕಾಂನ ಸ್ಮಾರ್ಟ್ ಮೀಟರ್ ಕಡ್ಡಾಯ ನಿಯಮವನ್ನು ಪ್ರಶ್ನಿಸಿ ಜಯಲಕ್ಷ್ಮೀ ಎಂಬುವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ […]

Continue Reading

ಆಧುನಿಕ ಸೌಲಭ್ಯ, ಉನ್ನತ ವಿಧಾನ, ನುರಿತ ಅಧ್ಯಾಪಕರನ್ನು ನಿಯೋಜಿಸಲಾಗಿದೆ, ಸಾಧನೆ ಮಾಡುವ ಇಚ್ಛಾಶಕ್ತಿ ಮತ್ತು ಶ್ರಮ ವಿದ್ಯಾರ್ಥಿಗಳಲ್ಲಿ ಇರಬೇಕು: ನಿವೃತ್ತ ಡಿಸಿಪಿ. ಜಿ. ಎ ಬಾವಾ

ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಆರಂಭದ ಹಂತದಲ್ಲೇ ಸರಿಯಾದ ಶೈಕ್ಷಣಿಕ ಮಾರ್ಗದರ್ಶನ ಮತ್ತು ಉತ್ತೇಜನ ನೀಡುವ ಉದ್ದೇಶದಿಂದ ಇಂದು ವಿ.ಕೆ. ಒಬೇದುಲ್ಲಾ ಸ್ಕೂಲ್ ನಲ್ಲಿ ಹೆತ್ತವರ ಜೊತೆ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಗಾರ ನಡೆಯಿತು. ವಿದ್ಯಾರ್ಥಿಗಳಲ್ಲಿ ಕಲಿಕೆಯ ಶಿಸ್ತು, ಕಲಿಕೆಯ ವಿಧಾನ ಮತ್ತು ಕಲಿಯ ಗುರಿಯ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು. ಹೆತ್ತವರು ತಮ್ಮ ಮಕ್ಕಳ ಕುರಿತ ಕಾಳಜಿ ಮತ್ತು ಪಾತ್ರಗಳನ್ನು ನಿರ್ವಹಿಸುವ ಬಗ್ಗೆಯೂ ಮನಮುಟ್ಟುವ ಹಿತವಚನ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಡಿಸಿಪಿ ಜಿ. ಎ. ಬಾವಾರವರು […]

Continue Reading