ಹೋಂಸ್ಟೇಗಳ ನಿರ್ವಹಣೆ, ಮೇಲ್ವಿಚಾರಣೆಗೆ ಸಮಗ್ರವಾದ ಕಾನೂನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

ಹೋಂಸ್ಟೇಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆ ನಡೆಸಲು ಯಾವುದೇ ನಿರ್ದಿಷ್ಟ ಅಥವಾ ಸಮಗ್ರ ಕಾನೂನು ಚೌಕಟ್ಟು ಇಲ್ಲದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಸಂಬಂಧ ಸಮಗ್ರ ನೀತಿಯನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಪೊನ್ನಂಪೇಟೆಯ ಕುಟ್ಟಾ ಗ್ರಾಮದ ಹೋಂಸ್ಟೇ ಒಂದರ ಮಾಲೀಕ ಪಿ.ಎ. ಪೊನ್ನಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, ಹೋಂಸ್ಟೇಗಳ ಕಾರ್ಯಾಚರಣೆಯ ವೈವಿಧ್ಯತೆ ಮತ್ತು ಅಲ್ಲಿ ಉದ್ಭವಿಸುತ್ತಿರುವ ಕಾನೂನು ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ನಿಯಮಾವಳಿಗಳನ್ನು […]

Continue Reading

ಧರ್ಮಸ್ಥಳ ಪ್ರಕರಣ: ಬೇಜಾವಾಬ್ದಾರಿಯುತ ಪೋಸ್ಟ್ ಹಾಕುವ ಪ್ರವೃತ್ತಿಯನ್ನು ತಕ್ಷಣವೇ ನಿಲ್ಲಿಸಬೇಕು. ಗಿರೀಶ್ ಮಟ್ಟಣ್ಣ ನವರಿಗೆ ಹೈಕೋರ್ಟ್ ಖಡಕ್‌ ತಾಕೀತು

ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ತೇಜೋವಧೆ ಮಾಡುವಂತಹ ಕೆಲಸಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಗಿರೀಶ್ ಮಟ್ಟಣ್ಣ ನವರಿಗೆ ಹೈಕೋರ್ಟ್ ಖಡಕ್‌ ತಾಕೀತು ಮಾಡಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಇದಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್‌ನ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಗಿರೀಶ್ ಮಟ್ಟಣವರ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಆರ್.ರಂಗನಾಥ ರೆಡ್ಡಿ, […]

Continue Reading

ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣದಲ್ಲಿ ಆರೋಪಿಯಾದ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ @ K. M. ಸಲಾಂ @ ಡಾಲರ್ ಸಲಾಂ ಎಂಬಾತನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ವಿಟ್ಲ ಠಾಣಾ ಪೊಲೀಸರು ದಿನಾಂಕ:16.06 2026 ರಂದು ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೋಪಿ ಡಾಲರ್ ಸಲಾಂ ಎಂಬಾತನ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:ಸಂ 45/2023, ವಿಟ್ಲ ಪೊಲೀಸ್ […]

Continue Reading

ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ: ಸಿ.ಎಂ, ಡಿ.ಕೆ. ಶಿವಕುಮಾರ್‌ಗೆ ವಿಶ್ವದ 61 ಕನ್ನಡ ಸಂಘಟನೆಗಳಿಂದ ಅಭಿನಂದನೆ

ಕಳೆದ ಡಿಸೆಂಬರ್ 2025 ರಲ್ಲಿ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ 30 ದೇಶಗಳ 43 ಅನಿವಾಸಿ ಸಂಘಟನೆಗಳ ಪ್ರತಿನಿಧಿಗಳ ನಿಯೋಗ ಸಿಎಂ, ಡಿಸಿಎಂ ಭೇಟಿ ನೀಡಿ ಇಟ್ಟ ಬೇಡಿಕೆಗೆಯನ್ನು ಈಡೇರಿಸಿ, ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಘೋಷಣೆ ಮಾಡಿದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಶ್ವದಾದ್ಯಂತದ ಅರವತ್ತಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಒಕ್ಕೊರಲಿನಿಂದ ಅಭಿನಂದಿಸಿವೆ. ಜೂನ್ 15ರಂದು ಅನಿವಾಸಿ ಕನ್ನಡಿಗರ ಪೋಷಕರಾದ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ ನಡೆದ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ ವಿವಿಧ ದೇಶಗಳ ಕನ್ನಡ […]

Continue Reading

2027ರ ಉ.ಪ್ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರಕ್ಕೆ ಬಂದರೆ, ಅದು ಈ ದೇಶದ ಇತಿಹಾಸದ ಕೊನೆಯ ಚುನಾವಣೆ: ಅಖಿಲೇಶ್ ಯಾದವ್ ಭವಿಷ್ಯ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ದೇಶದ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಗಂಭೀರವಾದ ಮತ್ತು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ನೀಡಿದ್ದಾರೆ. ಒಂದು ವೇಳೆ ಮುಂಬರುವ ಲೋಕಸಭಾ ಚುನಾವಣೆ ಹಾಗೂ 2027ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರಕ್ಕೆ ಬಂದರೆ, ಅದು ಈ ದೇಶದ ಇತಿಹಾಸದ ಕೊನೆಯ ಚುನಾವಣೆಯಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಆಡಳಿತದಲ್ಲಿ ದೇಶದ ಪ್ರಜಾಪ್ರಭುತ್ವದ ಅಳಿವು ಉಳಿವಿನ ಪ್ರಶ್ನೆ ಎದುರಾಗಿದೆ ಎಂದು ಅಖಿಲೇಶ್ ಯಾದವ್ ಆತಂಕ […]

Continue Reading

ಉಪ್ಪಿನಂಗಡಿ: ದರೋಡೆ ಪ್ರಕರಣ; ಆರೋಪಿಗಳಿಗೆ ಶಿಕ್ಷೆ ಪ್ರಕಟ:

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, 2023 ರಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 34/2023 ರಂತೆ ಪ್ರಕರಣ ದಾಖಲಾಗಿತ್ತು. ದರೋಡೆ ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬವರುಗಳನ್ನು ಬಂಧಿಸಿ, ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸದ್ರಿ ಪ್ರಕರಣದ ವಿಚಾರಣೆ ನಡೆಸಿದ […]

Continue Reading

ಮಳಲಿಯ ಮರಳು ಕಳ್ಳರು.. ಖಡಕ್ ಪೊಲೀಸ್ ಆಫೀಸರ್ಸ್ ಇದ್ದರೂ ಫಲ್ಗುಣಿಯನ್ನೇ ಮುಂಡಾಮೋಚಿದ ದಂಧೆಕೋರರು.!

ಅಧಿಕಾರಿಗಳು ಚಾಪೆ ಕೆಳಗೆ ನುಸುಳಿದರೆ, ದಂಧೆಕೋರರು ರಂಗೋಲಿ ಕೆಳಗೆ ನುಸುಳುತ್ತಾರೆ ಎನ್ನುವುದು ಹಳೆ ಗಾದೆ. ಆದರೆ, ಮಂಗಳೂರಿನ ಮಟ್ಟಿಗೆ ಆ ಗಾದೆಯೇ ಉಲ್ಟಾ. ದಂಧೆಕೋರರಿಗೆ ಅದೇ ವರದಾನ.! ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಡಕ್ ಪೊಲೀಸ್ ಆಫೀಸರ್ಸ್ ಎಂಟ್ರಿಯ ನಂತರ ಇಲ್ಲಿನ ಕ್ಲಬ್, ಮಸಾಜ್ ಎಲ್ಲವೂ ಬಾಗಿಲು ಹಾಕಿಕೊಂಡಿರುವುದೇನೂ ನಿಜ. ಆದರೆ ಅಕ್ರಮ ಮರಳುಗಾರಿಕೆಗೆ ಮಾತ್ರ ಸಂಪೂರ್ಣ ಬ್ರೇಕ್ ಬಿದ್ದಿಲ್ಲ ಅನ್ನುವುದು ಅಷ್ಟೇ ನಿಜ. ನಿನ್ನೆಯಷ್ಟೇ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗಂಜಿಮಠದ ಮಳಲಿಯ ಮೊಗರು ಗ್ರಾಮದಲ್ಲಿ ಅಕ್ರಮವಾಗಿ […]

Continue Reading

ಮಂಗಳೂರು: ಇಲ್ಲಿ ಎಲ್ಲವೂ ಬೀದಿ ಬದಿಯಲ್ಲೇ: ಪಾನಿಪುರಿಯಿಂದ ಹಿಡಿದು ಚರ್ಮ ವ್ಯಾಪಾರದ ತನಕ

✍️. ಇಸ್ಮಾಯಿಲ್ ಎಸ್., ವಕೀಲರು ಮತ್ತು ನೋಟರಿ, ಮಂಗಳೂರು ಮಂಗಳೂರು ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿದಾಗ ಒಂದು ಸಂಗತಿ ಸ್ಪಷ್ಟವಾಗಿ ಗೋಚರಿಸುತ್ತದೆ. ಪಾದಚಾರಿಗಳಿಗೆ ಮೀಸಲಾಗಿರಬೇಕಾದ ಫುಟ್‌ಪಾತುಗಳು ಇಂದು ಅನಧಿಕೃತ ವ್ಯಾಪಾರ ಮಂಡಿಗಳಾಗಿ ಪರಿವರ್ತನೆಗೊಂಡಿವೆ. ಜನಸಾಮಾನ್ಯರು ನಡೆದಾಡಲು ಜಾಗವಿಲ್ಲದೆ ರಸ್ತೆಗೆ ಇಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬೆಳವಣಿಗೆಯ ಹಿಂದೆ ಒಂದು ಕ್ರಮಬದ್ಧ ವಿಧಾನವೇ ಅಡಗಿರುವುದು ಗಮನಾರ್ಹ. ಆರಂಭದಲ್ಲಿ ಫುಟ್‌ಪಾತಿನ ಮೇಲೆ, ರಸ್ತೆಯ ಬದಿಯಲ್ಲಿ ಅಥವಾ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಮುಂದೆ ಒಂದು ಪುಟ್ಟ ಪೆಟ್ಟಿಗೆ ಕಾಣಿಸಿಕೊಳ್ಳುತ್ತದೆ. ಕೆಲವು ದಿನಗಳ […]

Continue Reading

ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ 15 ಪ್ರಮುಖ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಸರ್ಕಾರದ ಅಧಿಕೃತ ಸುತ್ತೋಲೆ

ದೈನಂದಿನ ಜೀವನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ರಾಜ್ಯದ ಗ್ರಾಮೀಣ ಭಾಗದ ಜನರ ಜೀವನಮಟ್ಟವನ್ನು ಸುಧಾರಿಸಲು ಮತ್ತು ನಗರ ಪ್ರದೇಶದ ಮಾದರಿಯಲ್ಲೇ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಒದಗಿಸಬೇಕಾದ 15 ಪ್ರಮುಖ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ. ರಾಜ್ಯದ ಒಟ್ಟು ಜನಸಂಖ್ಯೆಯ ಶೇ. 61.43 ರಷ್ಟು ಜನರು ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದು, ಅವರಿಗೆ ದೈನಂದಿನ ಜೀವನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದು […]

Continue Reading

ಬಜಪೆ ಪೊಲೀಸರು ಮತ್ತು ಗಣಿ ಇಲಾಖೆಯ ಜಂಟಿ ಕಾರ್ಯಾಚರಣೆ: ಮಳಲಿಯಲ್ಲಿ ಅಕ್ರಮ ಮರಳುಗಾರಿಕೆ ದಾಸ್ತಾನು ಪತ್ತೆ

ಗಂಜಿಮಠ: ಬಜಪೆ ಠಾಣಾ ವ್ಯಾಪ್ತಿಯ ಮೊಗರು ಗ್ರಾಮದ ಮಳಲಿ ಸಂಕೇಶ ಎಂಬಲ್ಲಿ ಅನ್ವಿತ್ ಮತ್ತು ರಾಜೇಂದ್ರ ಮೆಂಡಾ ಎಂಬವರು ಗುರುಪುರ ಪಲ್ಗುಣಿ ನದಿಯಿಂದ ಅಕ್ರಮವಾಗಿ ಮರಳನ್ನು ಕಳ್ಳತನ ಮಾಡಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ, ಹಿರಿಯ ಪೊಲೀಸ್ ಅಧಿಕಾರಿಗಳ ಆದೇಶ ಪಡೆದು ದಿನಾಂಕ: 15-06-2026 ರಂದು ಬಜಪೆ ಪೊಲೀಸ್ ಠಾಣೆಯ ನಿರೀಕ್ಷಕರಾದ ಬಾಲಕೃಷ್ಣ H.N ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಪವನ್ ಹಾಗೂ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ, […]

Continue Reading