ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್

ಅನಧಿಕೃತ ಕಟ್ಟಡಗಳನ್ನು ನೆಲಸಮಗೊಳಿಸಲು ಗ್ರಾಮ ಪಂಚಾಯತಿ ನಿಯಮಾನುಸಾರ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರ, ಸಾರ್ವಜನಿಕ ಸ್ವತ್ತಿನ ಹಾಗೂ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಸ್ವತ್ತಿನಲ್ಲಿ ನಿರ್ಮಾಣ ಮಾಡಿರುವಂತ ಕಟ್ಟಡ ನೆಲ ಸಮಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು […]

Continue Reading

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ವಿವಿಧ ವೃತ್ತಿ ಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಮ್ಯೂನಿಟಿ ಸೆಂಟರ್ ನ ಕೌನ್ಸಿಲ್ ಸದಸ್ಯ ವಿದ್ಯಾರ್ಥಿಗಳಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಎಚ್.ಐ.ಎಫ್ ಮತ್ತು ಹಿಕ್ಮಾ ಎಜುಕೇಶನ್ ಫೌಂಡೇಶನ್ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮದಲ್ಲಿ ಪುತ್ತೂರು ಕಮ್ಯೂನಿಟಿ ಸೆಂಟರ್ ನ ಕೌನ್ಸಿಲ್ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಕಲಿಕಾ ಕೌಶಲ್ಯ ಮತ್ತು ವೃತ್ತಿ ಮಾರ್ಗದರ್ಶನ ನೀಡಿದರು. ನೂರಾರು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದರು. ಪಿಯುಸಿ ಫಲಿತಾಂಶ ಬಂದಾಗ ಎಜುಕೇಶನ್ ಮೇಳದಲ್ಲಿ ಸುಮಾರು 800 ಕ್ಕಿಂತ ಹೆಚ್ಚು ಪಿಯುಸಿ ವಿದ್ಯಾರ್ಥಿಗಳಿಗೆ ಸಾಮೂಹಿಕ ಕೌನ್ಸಿಲಿಂಗ್ ಮಾಡಿದ್ದ ಕೌನ್ಸಿಲ್ ಸದಸ್ಯರು, ಕಳೆದ ವಾರ […]

Continue Reading

ಮುಸ್ಲಿಂ ಯುವಕನೋರ್ವನಿಗೆ ನಾಲ್ಕು ಮಂದಿಯ ತಂಡವೊಂದು ಚೂರಿ ಇರಿದು ಪರಾರಿ

ಬಂಟ್ವಾಳ : ಮುಸ್ಲಿಂ ಯುವಕನೋರ್ವನಿಗೆ ನಾಲ್ಕು ಮಂದಿಯ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಚೂರಿ ಇರಿತಕ್ಕೊಳಗಾದವರನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ಗುರುತಿಸಲಾಗಿದೆ. ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. […]

Continue Reading

ಪತ್ನಿಯರನ್ನು ಸಮಾನವಾಗಿ ನೋಡಿಕೊಂಡಲ್ಲಿ ಮುಸ್ಲಿಮರು ಒಬ್ಬರಿಗಿಂತ ಹೆಚ್ಚು ಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಹೈಕೋರ್ಟ್‌

ಬಹುಪತ್ನಿತ್ವಕ್ಕೆ ಸಕಾರಣವಿದ್ದಲ್ಲಿ ಮತ್ತು ಎಲ್ಲಾ ಪತ್ನಿಯರನ್ನೂ ಸಮಾನವಾಗಿ ನೋಡಿಕೊಂಡಲ್ಲಿ ಮುಸ್ಲಿಮರು ಒಬ್ಬರಿಗಿಂತ ಹೆಚ್ಚು ಪತ್ನಿಯರನ್ನು ಹೊಂದಬಹುದು ಎಂದು ಅಲಹಾಬಾದ್ ಹೈಕೋರ್ಟ್‌ ಗುರುವಾರ ಹೇಳಿದೆ. ಮೊದಲ ಮದುವೆಯನ್ನು ಗೌಪ್ಯವಾಗಿಟ್ಟು ತನ್ನನ್ನೂ ಮದುವೆಯಾಗಿ ವಂಚಿಸಲಾಗಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರನ್ನು ಪರಿಗಣಿಸಿ ಉತ್ತರ ಪ್ರದೇಶದ ಮೊರಾದಾಬಾದ್‌ನ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದನ್ನು ಮತ್ತು ಆರೋಪಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಅರುಣ್ ಕುಮಾರ್ ಸಿಂಗ್ ದೇಶವಾಲ್ ಅವರಿದ್ದ ಪೀಠವು ಈ ಅಭಿಪ್ರಾಯ ಹೇಳಿದೆ. ಮುಸ್ಲಿಂ ವೈಯಕ್ತಿಕ […]

Continue Reading

ಬ್ಯಾರಿ ಸಮುದಾಯದ ಚಿನ್ನದ ಹೃದಯ, ಸಾಂಸ್ಕೃತಿಕ ಸಂಪತ್ತು, ಮತ್ತು ಉತ್ಸಾಹವನ್ನು ಇನ್ನಷ್ಟು ಹೊಳಪು ಕೊಡೋಣ.

“ಬ್ಯಾರಿ” ಗಳಾದ ನಾವು, ಸ್ವಲ್ಪ ಶಿಸ್ತಿನ ಜೊತೆಗೆ, ತುಳುನಾಡಿನ ನಿಜವಾದ ಸ್ಟಾರ್‌ಗಳಾಗಬಹುದು.! “ಬ್ಯಾರಿ ಸ್ಟೈಲ್” ✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು. “ಬ್ಯಾರಿ” ಸಮುದಾಯದ ನಮ್ಮ ವಿಶೇಷತೆ: ಸ್ವಲ್ಪ ಹಾಸ್ಯ, ಸ್ವಲ್ಪ ಸಂದೇಶಮಂಗಳೂರಿನ “ಬ್ಯಾರಿ” ಸಮುದಾಯದವರು ನಾವು! ತುಳುನಾಡಿನ ಹೆಮ್ಮೆ, ಸಂಸ್ಕೃತಿಯ ಸೊಗಡು, ವ್ಯಾಪಾರದ ವೀರರು, ಮತ್ತು ಸಮಾಜದ ಸದಾಶಯದ ಹೃದಯವಂತರು. ನಮ್ಮ ಸಮುದಾಯದ ಇತಿಹಾಸ 1350 ವರ್ಷಗಳಷ್ಟು ಹಳೆಯದು, ಮತ್ತು ನಾವು ಮಂಗಳೂರಿನ ಕರಾವಳಿಯ ಸಾಂಸ್ಕೃತಿಕ ಹೃದಯಬಾಗವಾಗಿದ್ದೇವೆ. ಆದರೆ, ಸ್ನೇಹಿತರೇ, ನಮ್ಮ ಕೆಲವು “ವಿಶೇಷ” ಚಟುವಟಿಕೆಗಳ […]

Continue Reading

ಮಂಗಳೂರು ಸರ್ವೇ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ

ಮಂಗಳೂರ ನಗರದಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್ ಎಂಬವರ ಮನೆ, ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡದಿಂದ ದಾಳಿ ನಡೆದಿದೆ. ಒಟ್ಟು 3-4 ವಾಹನಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ […]

Continue Reading

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ, ಪ್ರಕರಣ ದಾಖಲು.

ಗುರುವಾಯನಕೆರೆಯಲ್ಲಿ ಮೇ 12ರಂದು ನಡೆದ ಸುಹಾಸ್ ಶೆಟ್ಟಿ ನುಡಿನಮನ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಶೆಟ್ಟಿ ಎಂಬ ಮಹಿಳೆ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಮುಸ್ಲಿಂ ಸಮುದಾಯದವರೊಂದಿಗೆ ಯಾವುದೇ ವ್ಯವಹಾರ ನಡೆಸಬಾರದು, ಅವರೊಂದಿಗಿರುವ ಸಂಬಂಧವನ್ನು ಬಹಿಷ್ಕರಿಸಬೇಕೆಂದು ಸಾರ್ವಜನಿಕವಾಗಿ ಬಹಿರಂಗ ಹೇಳಿಕೆ ನೀಡಿರುವುದನ್ನು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರಿಪ್ರಸಾದ್ ಇರುವರ್ತಾಯ ಎಂಬುವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಸಾಯಿರಾಮ್ ಫ್ರೆಂಡ್ಸ್ ಸಂಘಟನೆ ವತಿಯಿಂದ ಗುರುವಾಯನಕೆರೆಯಲ್ಲಿ ನಡೆದ ಸುಹಾಸ್ ಶೆಟ್ಟಿಗೆ ನುಡಿನಮನ ಕಾರ್ಯಕ್ರಮದಲ್ಲಿ […]

Continue Reading

ಕರ್ನಲ್ ಸೋಫಿಯಾ ಖುರೇಷಿ “ಭಯೋತ್ಪಾದಕರ ಸಹೋದರಿ” ಬಿಜೆಪಿ ನಾಯಕ, ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ವಿರುದ್ದ ಎಪ್ಐಆರ್.

ಮಧ್ಯಪ್ರದೇಶ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕರ್ನಲ್ ಸೋಫಿಯಾ ಖುರೇಷಿ ಅವರನ್ನು “ಭಯೋತ್ಪಾದಕರ ಸಹೋದರಿ” ಎಂದು ಕರೆದಿದ್ದಕ್ಕಾಗಿ ಬಿಜೆಪಿ ನಾಯಕ ಮತ್ತು ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿದೆ. ಭಾರತೀಯ ನ್ಯಾಯ ಸಂಹಿತಾ, 2023 ರ ಅಡಿಯಲ್ಲಿ ಪ್ರಾಥಮಿಕವಾಗಿ ಅಪರಾಧಗಳನ್ನು ಸಚಿವರ ವಿರುದ್ಧ ಮಾಡಲಾಗುತ್ತಿದೆ ಎಂದು ನ್ಯಾಯಾಲಯ ಗಮನಿಸಿದೆ. ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಅನುರಾಧಾ ಶುಕ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಭಾರತದ […]

Continue Reading

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ವ ಧರ್ಮೀಯರ ಕಿಡ್ನಿ ರೋಗಿಗಳ ಶುಶ್ರೂಷೆಯಲ್ಲಿ ಮುಂಚೂಣಿಯಲ್ಲಿರುವ ಟೀಮ್ B ಹ್ಯೂಮನ್ ಟ್ರಸ್ಟ್ ಗೆ ಉದ್ಯಮಿ ಬಿ.ಎಂ. ಶರೀಫ್ ಸಾರಥ್ಯ

ಹಲವಾರು ಸಮಾಜಮುಖಿ ಸೇವೆಗಳ ಮೂಲಕ ಸಮಾಜದ ಎಲ್ಲಾ ಧರ್ಮೀಯರ ಸೇವೆ ಮಾಡುತ್ತಿರುವ ಪ್ರತಿಷ್ಠಿತ ಸೇವಾ ಸಂಸ್ಥೆ ಟೀಮ್ ಬೀ ಹ್ಯೂಮನ್ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ B.M ಶರೀಫ್ ಅಧಿಕಾರ ಸ್ವೀಕರಿಸಿದರು. ಈ ಮೊದಲು ಟ್ರಸ್ಟ್ ನ ಸ್ಥಾಪಕರಾದ ಆಸಿಫ್ ಡೀಲ್ಸ್ ರವರ ನೇತೃತ್ವದಲ್ಲಿ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿ ಯೋಜನೆಗಳೊಂದಿಗೆ ನಡೆಯುತ್ತಿದ್ದ ಟ್ರಸ್ಟ್ ನ ಕಾರ್ಯಕ್ರಮಗಳು ಇನ್ನು ಮುಂದೆ ಸಾಮಾಜಿಕ ಕಾಳಜಿಯ ಉದ್ಯಮಿ ಶರೀಫ್ ಹಾಜಿಯವರ ಮುಂದಾಳುತ್ವದಲ್ಲಿ ಇನ್ನೂ ಪರಿಣಾಮಕಾರಿಯಾಗಿ ನಡೆಯಲಿದೆ. ದಕ್ಷಿಣ […]

Continue Reading

ಲಂಚದ ಹಣ ಸ್ವೀಕರಿಸುವಾಗ ಮಂಗಳೂರು ಲೋಕಾಯುಕ್ತ ಪೊಲೀಸರ ದಾಳಿ

ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಲೋಕಾಯುಕ್ತ ಬಲೆಗೆ ದೂರುದಾರರ ಪತಿ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದ ನಂತರ ಪಿರ್ಯಾದಿದಾರರ ಗಂಡ ಜೂನ್ 2024 ರಂದು ಮರಣ ಹೊಂದಿದ್ದು, ಪಿರ್ಯಾದಿದಾರರು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರ ಬಳಿ ಗಂಡನ ಮರಣ ಉಪದಾನದ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ […]

Continue Reading