ಟಾರ್ಗೆಟ್ ಕಿಲ್ಲರ್-03 ಎಂಬ ಇನ್ಸ್ಟಾಗ್ರಾಂ ಪೇಜ್​​ ನಲ್ಲಿ ಶೀಘ್ರದಲ್ಲೇ ಸೇಡು; ‘ಫಿನೀಶ್’ ಅಂತ ಪೋಸ್ಟ್ ಬಹಿರಂಗವಾಗಿತ್ತು.

ದುಷ್ಕರ್ಮಿಗಳು ಸೋಶಿಯಲ್ ಮೀಡಿಯಾದಲ್ಲೇ ಸುಹಾಸ್‌ ಶೆಟ್ಟಿಗೆ ಪ್ರತೀಕಾರದ ಎಚ್ಚರಿಕೆ ಕೊಟ್ಟಿದ್ದರಂತೆ ಮಂಗಳೂರು: ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್​ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಮುಹೂರ್ತ ಫಿಕ್ಸ್ ಆಗಿತ್ತಾ ಎಂಬ ಅನುಮಾನಗಳು ಸದ್ಯ ಹುಟ್ಟಿಕೊಂಡಿವೆ. ಏಕೆಂದರೆ ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸುಹಾಸ್ ಶೆಟ್ಟಿ ಫೋಟೋ ಹಾಕಿ‌ ಶೀಘ್ರದಲ್ಲೇ ಸೇಡು […]

Continue Reading

ಕಾರ್ಮಿಕ ಸಂಹಿತೆ ಕಾರ್ಮಿಕರನ್ನು ಗುಲಾಮಗಿರಿಯತ್ತ ದೂಡುವ ವ್ಯವಸ್ಥಿತ ತಂತ್ರ: ಸುನಿಲ್ ಕುಮಾರ್ ಬಜಾಲ್

29 ಪ್ರಮುಖ ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಲು ಹೊರಟ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳನ್ನು ಕಾಪಾಡಲು ಉತ್ಸುಕವಾಗಿದೆಯೇ ಹೊರತು ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನಲ್ಲ.ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರವು ಕಾರ್ಮಿಕರ ಎಲ್ಲಾ ಹಕ್ಕುಗಳನ್ನು ಮೊಟಕುಗೊಳಿಸಿ, ಸಂಘ ಕಟ್ಟುವ,ಮುಷ್ಕರ ಹೂಡುವ,ಬೇಡಿಕೆ ಪಟ್ಟಿ ಇಡುವ,ಒಪ್ಪಂದ ವೇರ್ಪಡಿಸುವ ಮುಂತಾದ ಎಲ್ಲಾ ಹಕ್ಕುಗಳನ್ನು ನಾಶ ಮಾಡುವ ಮೂಲಕ ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ದೂಡುವ ವ್ಯವಸ್ಥಿತ ತಂತ್ರ ಇದಾಗಿದೆ ಎಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ […]

Continue Reading

ಕುಡುಪು ಗುಂಪು ಹತ್ಯೆ: ಕರ್ತವ್ಯ ಲೋಪ ಎಸಗಿದ ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿದಂತೆ ಮೂವರ ಅಮಾನತು

ವಾಮಂಜೂರು ಸಮೀಪದ ಕುಡುಪು ಎಂಬಲ್ಲಿ ಏಪ್ರಿಲ್ 27 ರಂದು ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದ ಕೇರಳ ಮೂಲದ ಕಾರ್ಮಿಕ ಅಶ್ರಫ್ ಎಂಬಾತನ ಮೇಲೆ ಮೂವತ್ತರಷ್ಟು ದುಷ್ಕರ್ಮಿಗಳು ವಿನಾಕಾರಣ ಥಳಿಸಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಅಸಹಜ ಸಾವು ಎಂದು ಬಿಂಬಿಸಿ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಅದಕ್ಕೆ ಸಾಥ್ ನೀಡಿದ ಎಸ್ ಬಿ ಚಂದ್ರ ಹಾಗೂ ಪೊಲೀಸ್ ಸಿಬ್ಬಂದಿ ಯಲ್ಲಾಲಿಂಗ […]

Continue Reading

114 ಕೋಮು ಘಟನೆಗಳಾದಾಗಲೂ ಸುಮ್ಮನಿದ್ದ ಸಚಿವ ‘ದಿನೇಶ್ ಗುಂಡೂರಾವ್ ‘ಕರ್ತವ್ಯ ಲೋಪ’ಕ್ಕೆ ಶಿಕ್ಷೆ ಏನು.?

ಇನ್ಸ್ ಪೆಕ್ಟರ್ ಜೊತೆಗೆಯೇ ಸೋಮಾರಿ, ನಿಷ್ಕ್ರಿಯ ಉಸ್ತುವಾರಿ ಸಚಿವರ ಅಮಾನತ್ತು ಕೂಡಾ ಆಗಬೇಕು. ✍️. ನವೀನ್‌ ಸೂರಿಂಜೆ, ಲೇಖಕರು, ಪತ್ರಕರ್ತರು. ಮಂಗಳೂರು ಗ್ರಾಮಾಂತರ ಇನ್ಸ್ ಪೆಕ್ಟರ್ ಅಮಾನತ್ತಿನಿಂದ ಕರಾವಳಿಯ ಕೋಮು ಸಂಘರ್ಷ/ ಕೋಮು ಹತ್ಯೆ/ ಗುಂಪು ದಾಳಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆಕ್ರೋಶಿತರಿಗೆ  ಅದೊಂದು ತಾತ್ಕಾಲಿಕ ಸಾಂತ್ವನವಷ್ಟೆ. 114 ಕೋಮು ಘಟನೆಗಳಾದಾಗಲೂ ಸುಮ್ಮನಿದ್ದ ಸಚಿವ ‘ದಿನೇಶ್ ಗುಂಡೂರಾವ್ ‘ಕರ್ತವ್ಯ ಲೋಪ’ಕ್ಕೆ ಶಿಕ್ಷೆ ಏನು.? ಕುಡುಪು ಮಾಬ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಗ್ರಾಮಾಂತರ ಇನ್ಸ್ ಪೆಕ್ಟರ್ ರನ್ನು ಅಮಾನತ್ತು […]

Continue Reading

ಕುಡುಪು ಮಾಬ್ ಲಿಂಚಿಂಗ್, ಹತ್ಯೆ ಪ್ರಕರಣವನ್ನು ಮಂಗಳೂರು ಕಮಿಷನರೇಟ್ ಪೊಲೀಸ್ ಮುಚ್ಚಿಹಾಕಲು ಪ್ರಜ್ಞಾಪೂರ್ವಕ ಪ್ರಯತ್ನ ನಡೆಸಿತ್ತು ಎಂಬುದಕ್ಕೆ FIR ಪ್ರಬಲ ಸಾಕ್ಷಿಯಾಗಿ ನಿಲ್ಲುತ್ತದೆ: ಮುನೀರ್ ಕಾಟಿಪಳ್ಳ

ಕುಡುಪು ಸಾಮ್ರಾಟ್ ಮೈದಾನದಲ್ಲಿ 27.04.2025 ರ ಸಂಜೆ ಮೂರು ಗಂಟೆಗೆ ಮಾಬ್ ಲಿಂಚಿಂಗ್ ಗೆ ಅಪರಿಚಿತ ವ್ಯಕ್ತಿಯೋರ್ವ ಬಲಿಯಾಗಿದ್ದಾನೆ ಎಂಬ ಸುದ್ದಿ ವಾಮಂಜೂರು ಪೊಲೀಸ್ ಠಾಣೆಗೆ ಗಂಟೆಯ ಒಳಗಡೆ ತಲುಪಿತ್ತು. ಅದರಂತೆ ಐದು ಗಂಟೆಯ ಆಸುಪಾಸು ಪೊಲೀಸರು ಹೊಡೆತಗಳಿಂದ ಜರ್ಜರಿತ ಗೊಂಡ ಮೃತ ದೇಹ ಬಿದ್ದದ್ದ ಸ್ಥಳವನ್ನೂ ತಲುಪಿದ್ದಾರೆ. ಅಷ್ಟು ಹೊತ್ತಿಗೆ ಪೊಲೀಸರಿಗೆ ನಡೆದಿರುವ ಘಟನೆಯ ಪೂರ್ತಿ ವಿವರ ಮನದಟ್ಟಾಗಿದೆ. ವಿಷಯ ಕಮೀಷನರ್ ಅವರಿಗು ಸಹಜವಾಗಿ ತಲುಪಿದೆ. ಆದರೆ, ವಿವಿಧ ಕಾರಣಗಳಿಗೆ( ಹಲ್ಲೆ ಕೋರ ಗುಂಪಿನ ನಾಯಕ, […]

Continue Reading

ಮಂಗಳೂರು ಮಾಬ್ ಲಿಂಚಿಗ್, ಹತ್ಯೆ, ಕಮೀಷನರ್ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟಿಸುತ್ತಿವೆ.

ಪ್ರಕರಣದ ಆಳವಾದ ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಿ. ರಾಜ್ಯ ಸರಕಾರಕ್ಕೆ ಸಿಪಿಐಎಂ ಆಗ್ರಹ ಮಂಗಳೂರು ಕುಡುಪು ಬಳಿ ಹೊರ ರಾಜ್ಯದ ಅಪರಿಚಿತ ವ್ಯಕ್ತಿಯನ್ನು ಧರ್ಮದ ಗುರುತಿನ ಕಾರಣಕ್ಕಾಗಿ ಸಂಘಪರಿವಾರ ಬೆಂಬಲಿಗರ ಗುಂಪೊಂದು ಹೊಡೆದು ಸಾಯಿಸಿದ ಪ್ರಕರಣವನ್ನು ಮಾಬ್ ಲಿಂಚಿಂಗ್, ಕೊಲೆ ಪ್ರಕರಣ ಎಂದು ಮಂಗಳೂರು ಪೊಲೀಸ್ ಕಮೀಷನರ್ ಎರಡು ದಿನಗಳ ತರುವಾಯ ಪತ್ರಿಕಾಗೋಷ್ಟಿಯಲ್ಲಿ ಒಪ್ಪಿಕೊಂಡಿದ್ದಾರೆ. ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಕುರಿತು ಕಮೀಷನರ್ ಅಗ್ರವಾಲ್ ಮಾಧ್ಯಮಗಳಿಗೆ ನೀಡಿರುವ ಒಟ್ಟು ಹೇಳಿಕೆ ಪೊಲೀಸ್ ಇಲಾಖೆ ಈ ಪ್ರಕರಣದಲ್ಲಿ […]

Continue Reading

ಮಂಗಳೂರು: ಗುಂಪು ಹತ್ಯೆಗೆ ಪಾಕಿಸ್ತಾನ ಜಿಂದಾಬಾದ್ ಕಾರಣ; ಗೃಹ ಮಂತ್ರಿಗಳು ಕೂಡಲೇ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು: ದ.ಕ. ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟ ಆಗ್ರಹ

ಮಂಗಳೂರಿನ ಕುಡುಪುವಿನಲ್ಲಿ ಉತ್ತರಪ್ರದೇಶ, ಬಿಹಾರ ಮಾದರಿಯ ಗುಂಪು ಹಲ್ಲೆ ಮತ್ತು ಹತ್ಯೆ ಆಗಿರುವುದನ್ನು ಸರಿಯಾದ ಮಾರ್ಗದಲ್ಲಿ ತನಿಖೆ ಮಾಡಿಸುವುದನ್ನು ಬಿಟ್ಟು, ಬಾಲಿಶ ಹೇಳಿಕೆ ನೀಡಿದ ಗೃಹ ಮಂತ್ರಿ ಪರಮೇಶ್ವರ್ ಕೂಡಲೇ ತಮ್ಮ ಮಾತನ್ನು ಹಿಂದಕ್ಕೆ ಪಡೆಯಬೇಕು. ತನಿಖೆಯ ದಿಕ್ಕು ತಪ್ಪಿಸುವಂಥ ಹೇಳಿಕೆ ನೀಡುವುದು ಸರಿಯಲ್ಲ. ಈಗಾಗಲೇ ಪೊಲೀಸ್ ಇಲಾಖೆ ತನಿಖೆ ಮಾಡಿ 15 ಜನ ಆರೋಪಿಗಳನ್ನು ಬಂಧಿಸಿ, ಬಾಕಿ ಉಳಿದ ಆರೋಪಿಗಳನ್ನು ಬಂಧಿಸುವಲ್ಲಿ ಕಾರ್ಯೋನ್ಮಖರಾಗಿರುವ ಸಮಯದಲ್ಲಿ ಈ ಬಾಲಿಶ ರೀತಿಯ ಹೇಳಿಕೆ ಸರಿಯಲ್ಲ. ಉನ್ನತ ಸ್ಥಾನದಲ್ಲಿರುವ ಗೃಹ […]

Continue Reading

ಕರವೇ ಪ್ರವೀಣ್ ಶೆಟ್ಟಿ ಬಣದ ನೂತನ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾಧ್ಯಕ್ಷೆಯಾಗಿ ಜ್ಯೋತಿ ಸೇರಿಗಾರ್ತಿ ಆಯ್ಕೆ

ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಮಾಜಿ ಜಿಲ್ಲಾಧ್ಯಕ್ಷರಾದ ಅನ್ಸಾರ್ ಅಹಮದ್ ರವರ ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಶ್ರೀಮತಿ ಜ್ಯೋತಿ ಸೇರಿಗಾರ್ತಿ ರವರನ್ನು ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿಯವರು ನೇಮಕಗೊಳಿಸಿ ಅದೇಶ ಹೊರಡಿಸಿರುತ್ತಾರೆ. ಅನ್ಸಾರ್ ಅಹಮದ್ ರವರನ್ನು ಉಡುಪಿ ಜಿಲ್ಲಾ ಗೌರವಾಧ್ಯಕ್ಷ ರನ್ನಾಗಿ ನೇಮಿಸಿ ಸಂಘಟನೆಯನ್ನು ಅನ್ಸಾರ್ ಅಹಮದ್ ರವರ ನೇತೃತ್ವದಲ್ಲಿ ಮುನ್ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಿರು ತ್ತಾರೆ. […]

Continue Reading

ಉಳ್ಳಾಲ ತಾಲೂಕಿನ ಸಮಗ್ರ ಅಭಿವೃದ್ದಿಗೆ ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ

ಉಳ್ಳಾಲ ತಾಲೂಕಿನಲ್ಲಿ ರಿಯಲ್ ಎಸ್ಟೇಟ್, ಶಿಕ್ಷಣ, ಆರೋಗ್ಯ ಕ್ಷೇತ್ರದ ಲಾಬಿಗಳ ದರ್ಬಾರ್ ನಡೆಯುತ್ತಿದೆ: ಮುನೀರ್ ಕಾಟಿಪಳ್ಳ ಉಳ್ಳಾಲ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ತಾಲೂಕಿನ ಜನಸಾಮಾನ್ಯರ 28 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐಎಂ ಉಳ್ಳಾಲ ಮತ್ತು ಮುಡಿಪು ವಲಯ ಸಮಿತಿಗಳ ಜಂಟಿ ನೇತೃತ್ವದಲ್ಲಿ ದೇರಳಕಟ್ಟೆ ಮೈದಾನದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು. ಸಮಾವೇಶಕ್ಕೂ ಮುನ್ನ ನಿಟ್ಟೆ ಮೆಡಿಕಲ್ ಕಾಲೇಜು ಹಾಗೂ ನಾಟೆಕಲ್ ಜಂಕ್ಷನ್ ನಿಂದ ಸಿಪಿಐಎಂ ಕಾರ್ಯಕರ್ತರು ದೇರಳಕಟ್ಟೆ ಮೈದಾನದವರೆಗೆ ಮೆರವಣಿಗೆಯಲ್ಲಿ ಆಗಮಿಸಿದರು. ಸಮಾವೇಶವನ್ನು ಸಿಪಿಐಎಂ ಜಿಲ್ಲಾ […]

Continue Reading

ಮಂಗಳೂರು: ಗುಂಪು ಹಲ್ಲೆ; ಕುಡುಪು ಬಳಿ ಯುವಕನೊಬ್ಬನ ಹತ್ಯೆ ಪ್ರಕರಣ 15 ಮಂದಿ ಆರೋಪಿಗಳ ಬಂಧನ

ಜಿಲ್ಲೆಯಲ್ಲಿ ನಡೆದ ಗುಂಪು ಹತ್ಯೆಯ ಮೊದಲ ಪ್ರಕರಣ, ಮಾಜಿ ಕಾರ್ಪೊರೇಟರ್ ಒಬ್ಬರ ಪತಿ ಕೃತ್ಯದಲ್ಲಿ ಭಾಗಿ ನಗರದ ಹೊರವಲಯದ ಕುಡುಪುವಿನಲ್ಲಿ ಯುವಕನೊಬ್ಬ ಭಾನುವಾರ ಮೃತಪಟ್ಟಿದ್ದು, ಇದಕ್ಕೆ ಗುಂಪು ಹಲ್ಲೆಯೇ ಕಾರಣ. ಬಲವಾದ ಹಲ್ಲೆಯಿಂದ ದೇಹದೊಳಗೆ ಆಗಿರುವ ಗಾಯಗಳಿಂದ ಯುವಕ ಸತ್ತಿರುವುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ದೃಢಪಟ್ಟಿದೆ. ಆತನಿಗೆ ಹಲ್ಲೆ ನಡೆಸಿದ 15 ಆರೋಪಿಗಳನ್ನು ಬಂಧಿಸಿದ್ದಾರೆ. ಕುಡುಪು ತಿರುವೈಲು ಗ್ರಾಮದ ನಡುಮನೆಯ ಸಚಿನ್, ದೇವದಾಸ್, ಮಂಗಳನಗರದ ಮಂಜುನಾಥ್, ನೀರುಮಾರ್ಗದ ಸಾಯಿದೀಪ್, ಮಂಗಳನಗರ ನಿತೇಶ್ ಕುಮಾರ್ ಅಲಿಯಾಸ್‌ ಸಂತೋಷ್, ಕುಡುಪು […]

Continue Reading