ಮೈಸೂರಿನ ಉದ್ಯಮಿಯೊಬ್ಬರು ತನ್ನ ಪತ್ನಿ ಮತ್ತು ಪುತ್ರನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೇರಿಕಾದಲ್ಲಿ ನಡೆದಿದೆ.

ಅಮೇರಿಕದಲ್ಲಿ ಮೈಸೂರಿನ ಉದ್ಯಮಿಯೊಬ್ಬರು ತನ್ನ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಹತ್ಯೆ ಮಾಡಿ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪತ್ನಿ ಶ್ವೇತಾ ಹಾಗೂ ಹಿರಿಯ ಪುತ್ರನನ್ನು ಕೊಲೆ ಮಾಡಿದ ಬಳಿಕ ಹರ್ಷ ಕಿಕ್ಕೇರಿ ಹರ್ಷವರ್ಧನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರ್ಷ ತಮ್ಮ ಪತ್ನಿ ಶ್ವೇತಾ, ಇಬ್ಬರು ಪುತ್ರರೊಂದಿಗೆ ಅಮೆರಿಕದ ನ್ಯೂ ಕ್ಯಾಸಲ್‌ನಲ್ಲಿ ವಾಸವಿದ್ದರು. ಗುರುವಾರ ರಾತ್ರಿ ಹರ್ಷ, ಪತ್ನಿ ಹಾಗೂ ಹಿರಿಯ ಪುತ್ರನಿಗೆ ಗುಂಡಿಕ್ಕಿ, ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವೇಳೆ ಏಳು ವರ್ಷದ […]

Continue Reading

ಮಂಗಳೂರು: ಕುಡುಪು ಬಳಿ ವಲಸೆ ಕಾರ್ಮಿಕನ ಮೇಲೆ ಗುಂಪು ಹಲ್ಲೆ, ಹತ್ಯೆ. ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಲು ಸಿಪಿಐಎಂ ಆಗ್ರಹ.

ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಸಂಜೆ (ಎಪ್ರಿಲ್ 27) ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆಗೈದಿರುವ ಕುರಿತು ಆತಂಕಕಾರಿ ಮಾಹಿತಿಗಳು ಹೊರಬೀಳುತ್ತಿದೆ. ಘಟನೆ ನಡೆದು ಒಂದು ದಿನದ ಕಳೆದಿದ್ದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕಿಯ ಹಿನ್ನಲೆಯ ಕೆಲವು ಪ್ರಭಾವಿಗಳನ್ನು ರಕ್ಷಿಸುವ, ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, […]

Continue Reading

ಹನುಮಂತ ಹಗ್ಗ ತಿನ್ನುವಾಗ ಪೂಜಾರಿಗೆಲ್ಲಿ ಶಾವಿಗೆ.?ಬಿಜೆಪಿಯಲ್ಲಿ ಈಗ ಲೆಟರ್ ವಾರ್

ಸಿದ್ದು ಸಂಪುಟಕ್ಕೆ ಮೈನರ್ ಸರ್ಜರಿ; ರಾಹುಲ್ ಗೇಕೆ ಗಣತಿ ಬೇಕು.? ✍️. ಆರ್.ಟಿ.ವಿಠ್ಠಲಮೂರ್ತಿ ರಾಜ್ಯ ಬಿಜೆಪಿಯಲ್ಲಿರುವ ವಿಜಯೇಂದ್ರ ವಿರೋಧಿ ಪಡೆ ಮೌನಕ್ಕೆ ಜಾರಿದೆ.ಪಕ್ಷ ವಿರೋಧಿ ಚಟುವಟಿಕೆಯ ಹೆಸರಿನಲ್ಲಿ ಯತ್ನಾಳ್ ಅವರನ್ನು ವರಿಷ್ಟರು ಉಚ್ಚಾಟಿಸಿದ ನಂತರ ಅದು ಕುದಿಯುತ್ತಿದೆಯಾದರೂ ಮುಂದೇನು ಮಾಡಬೇಕು ಅಂತ ಅದಕ್ಕೆ ತೋಚುತ್ತಿಲ್ಲ. ಹಾಗಂತ ವಿಜಯೇಂದ್ರ ಅವರ ವಿರುದ್ದ ಹೋರಾಡುವ ವಿಷಯದಲ್ಲಿ ಅದಕ್ಕೆ ಪ್ಲಾನುಗಳು ಇಲ್ಲವೆಂತಲ್ಲ.ವಸ್ತುಸ್ಥಿತಿ ಎಂದರೆ ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಶಿವರಾಜ್ ಸಿಂಗ್ ಚೌಹಾಣ್ ಕರ್ನಾಟಕಕ್ಕೆ ಬಂದರೆ ವಿಜಯೇಂದ್ರ ವಿರುದ್ಧ ಹಲವು […]

Continue Reading

ಉಳ್ಳಾಲ ಮಂಜನಾಡಿಯಲ್ಲಿ ಯಕ್ಷಗಾನ ಕಾರ್ಯಾಗಾರ ಯಕ್ಷ ಸೌರಂಭ

ಯಕ್ಷಗಾನ ಕಾರ್ಯಾಗಾರಗಳ ಮೂಲಕ ಅಕಾಡೆಮಿಯಿಂದ ಯಕ್ಷಗಾನಕ್ಕೆ ಶಕ್ತಿ ತುಂಬುವ ಕಾರ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಅಭಿಪ್ರಾಯ ಉಡುಪಿ : ಯಕ್ಷಗಾನ ಕಲೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಈ ಕಲೆಯ ಆಳ, ವಿಸ್ತಾರ, ಸೊಬಗನ್ನು ಯಕ್ಷಾಸಕ್ತರಿಗೆ ಮುಟ್ಟಿಸಲು ವಿವಿಧ ಕಡೆಗಳಲ್ಲಿ ಯಕ್ಷಗಾನ ಕಾರ್ಯಾಗಾರಗಳನ್ನು ಅಕಾಡೆಮಿ ಹಮ್ಮಿಕೊಳ್ಳುವುದರ ಮೂಲಕ ಕಲೆಯ ಬೆಳೆವಣಿಗೆಗೆ ಪ್ರೋತ್ಸಾಹಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಮಂಗಳೂರು ಉಲ್ಲಾಳದ ಮಂಜನಾಡಿ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಸ್ಥಾನದ ಆವರಣದಲ್ಲಿ […]

Continue Reading

ಉಳ್ಳಾಲ ತಾಲೂಕಿನ ಅಭಿವೃದ್ಧಿಗಾಗಿ ಎಪ್ರಿಲ್ 29ರಂದು ಹಕ್ಕೊತ್ತಾಯ ಸಮಾವೇಶ; ವಿವಿಧ ಸಂಘಟನೆಗಳ ಸಂಪೂರ್ಣ ಬೆಂಬಲ

ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ, ವಿವಿಧ ಜನವಿಭಾಗಗಳ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಎಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಮೈದಾನದಲ್ಲಿ ಬ್ರಹತ್ ಹಕ್ಕೊತ್ತಾಯ ಸಮಾವೇಶ ನಡೆಯಲಿದ್ದು, ಈಗಾಗಲೇ ಹಲವಾರು ಸಂಘಟನೆಗಳು ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ. ಉಳ್ಳಾಲ ತಾಲೂಕು ರಚನೆಯಾಗಿ 5 ವರ್ಷಗಳು ಕಳೆದರೂ ಇನ್ನೂ ಕೂಡ ತಾಲೂಕು ಕಚೇರಿ ಇಲ್ಲ, ಸರಕಾರಿ ತಾಲೂಕು ಆಸ್ಪತ್ರೆ ಇಲ್ಲ, ನ್ಯಾಯಾಲಯ ಸಬ್ ರಿಜಿಸ್ಟಾರ್ ಕಚೇರಿ ಇಲ್ಲ, ಸರಕಾರಿ ಪದವಿ ಕಾಲೇಜ್, ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜ್, ಪಾಲಿಟೆಕ್ನಿಕ್ ಇಲ್ಲ, ಕ್ರೀಡಾಂಗಣ, […]

Continue Reading

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಸಿಐಡಿ. ಡಿಜಿಪಿ ಎಂ.ಎ.ಸಲೀಂ ನೇಮಕಗೊಳ್ಳುವ ಸಾಧ್ಯತೆ

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಸಿಐಡಿ ಡಿಜಿಪಿ ಎಂ.ಎ.ಸಲೀಂ ನೇಮಕಗೊಳ್ಳುವ ಸಾಧ್ಯತೆ ಇದೆ. ದಶಕಗಳ ಬಳಿಕ ಕನ್ನಡಿಗ ಐಪಿಎಸ್‌ ಅಧಿಕಾರಿಯೊಬ್ಬರು ಈ ಮಹತ್ವದ ಹುದ್ದೆಗೆ ಏರಿದಂತಾಗುತ್ತದೆ. ಹಾಲಿ ಪೊಲೀಸ್‌ ಮಹಾನಿರ್ದೇಶಕರಾದ ಅಲೋಕ್‌ ಮೋಹನ್‌ ರವರ ಸೇವಾವಧಿ ಎಪ್ರಿಲ್ 30ಕ್ಕೆ ಕೊನೆಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ರವರು ಸಲೀಂ ಪರ ಒಲವು ತೋರಿದ್ದಾರೆ ಎನ್ನಲಾಗಿದೆ. ಸೇವಾ ಜ್ಯೇಷ್ಠತೆಯಲ್ಲಿ ಅಗ್ನಿಶಾಮಕ ದಳ, ಪೌರ ರಕ್ಷಣೆ ಡಿಜಿಪಿಯಾಗಿರುವ ಪ್ರಶಾಂತ್‌ ಕುಮಾರ್‌ ಠಾಕೂರ್‌ ಹಾಗೂ ಎಂ.ಎ.ಸಲೀಂ ಈ ಹುದ್ದೆಯ ರೇಸ್‌ನಲ್ಲಿದ್ದಾರೆ. ನಿಯಮ ಪ್ರಕಾರ […]

Continue Reading

ಪಹಲ್ಗಾಮ್​: ಭಯೋತ್ಪಾದಕ ಭೀಕರ ದಾಳಿ ವೇಳೆ ತನ್ನ ಪ್ರಾಣ ಪಣಕ್ಕಿಟ್ಟು ಪ್ರವಾಸಿಗರನ್ನು ರಕ್ಷಿಸಿದ ಸ್ಥಳೀಯ ನಿವಾಸಿ ರಯೀಸ್ ಅಹ್ಮದ್ ಭಟ್ ‘ಪಹಲ್ಗಾಮ್ ಹೀರೋ’

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ಭೀಕರ ದಾಳಿ ವೇಳೆ ತನ್ನ ಪ್ರಾಣವನ್ನು ಲೆಕ್ಕಿಸದೇ ದಾಳಿಯಲ್ಲಿ ಗಾಯಗೊಂಡಿದ್ದ ಪ್ರವಾಸಿಗರನ್ನು ಉಳಿಸುವಲ್ಲಿ ಸಾಹಸ ಮೇರೆದ ಸ್ಥಳೀಯ ನಿವಾಸಿ ರಯೀಸ್ ಅಹ್ಮದ್ ಭಟ್ ಅವರನ್ನು ‘ಪಹಲ್ಗಾಮ್ ಹೀರೋ’ ಎಂದು ಗೌರವಿಸಲಾಗುತ್ತಿದೆ. ಭೀಕರ ದಾಳಿಯ ವೇಳೆ 5 ರಿಂದ 6 ಜನರ ಜೀವ ಉಳಿಸಿದ ರಯೀಸ್ ಅಹ್ಮದ್ ಭಟ್ ಇದೀಗ ‘ಪಹಲ್ಗಾಮ್ ಹೀರೋ’ ಆಗಿದ್ದಾರೆ. ದಾಳಿಯ ವೇಳೆ ಗಾಯಗೊಂಡ ಪ್ರವಾಸಿಗರಿಗೆ ಅವರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಸಹಾಯ ಮಾಡಿದರು. ದಾಳಿಕೋರರ ದಾಳಿಗೆ ಸತ್ತರೂ […]

Continue Reading

ರಾಜ್ಯದ ಒಟ್ಟು 88 ಜನ ಪಾಕ್‌ ಪ್ರಜೆಗಳು. ಭಟ್ಕಳದಲ್ಲಿ 10 ಮಂದಿ ಮಹಿಳೆಯರು, ಮಂಗಳೂರುನಲ್ಲಿ ಮೂರು ಮಂದಿ ಮಹಿಳೆಯರು

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 88 ಜನ ಪಾಕ್‌ ಪ್ರಜೆಗಳಿದ್ದಾರೆ. ಈ ಪೈಕಿ ಅಲ್ಪಾವಧಿಯ ವೀಸಾ ಮೇಲೆ ಬಂದವರು ಇನ್ನೆರಡು ದಿನಗಳಲ್ಲಿ ದೇಶ ತೊರೆಯಬೇಕಾಗಿದೆ. ಪಹಲ್ಗಾಮ್‌ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ನಿರ್ದೇಶನದಂತೆ ವಿದೇಶಾಂಗ ಸಚಿವಾಲಯ ನೀಡಿದ ಸೂಚನೆ ಪ್ರಕಾರ ಕ್ರಮ ಜರಗಿಸಲಾಗುವುದು. ಆದರೆ ದೀರ್ಘಾಕಾಲೀನ ವೀಸಾ ಹೊಂದಿದವರಿಗೆ ಇದು ಅನ್ವಯಿಸದು ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. 88 ಮಂದಿಯಲ್ಲಿ ನಾಲ್ವರು ವೈದ್ಯಕೀಯ ಕಾರಣಗಳಿಗಾಗಿ ಭಾರತಕ್ಕೆ ಬಂದಿದ್ದಾರೆ. ಅವರು 4 ದಿನಗಳಲ್ಲಿ ದೇಶ […]

Continue Reading

ಉಳ್ಳಾಲದಲ್ಲಿ ಸುದೀರ್ಘವಾಗಿ ಗೆಲುವು ಸಾಧಿಸಿದವರು ಜನರ ಬದುಕನ್ನು ಸೋಲಿಸಿದ್ದಾರೆ: ಸಂತೋಷ್ ಬಜಾಲ್

ಕಮ್ಯೂನಿಸ್ಟ್‌ ಪಕ್ಷದ ಶಾಸಕರಾಗಿದ್ದ ಕೃಷ್ಣ ಶೆಟ್ಟಿ ಗೇಣಿದಾರರ ಪರನಿಂತ ಜನನಾಯಕ. 1983 ರಲ್ಲಿ ಆಯ್ಕೆಯಾದ ಮೇಷ್ಟ್ರು ಹಲವು ಜನಪರ ಯೋಜನೆ ತಂದವರು. ಇತಿಹಾಸ ಪ್ರಸಿದ್ಧ ಉಳ್ಳಾಲ ಯಾವ ಹಂತಕ್ಕೆ ಅಭಿವೃದ್ಧಿಗೊಳ್ಳಬೇಕಿತ್ತು ಆದರೆ ಯಾವುದೇ ಅಭಿವೃದ್ಧಿ ಕಾಣದೆ ಇಂತಹ ಪರಿಸ್ಥಿತಿಗೆ ತಂದಿಡಲು ಯಾರು ಕಾರಣ. ಉಳ್ಳಾಲದಲ್ಲಿ ಜನಪ್ರತಿನಿಧಿಯೊಬ್ಬರು ಸುದೀರ್ಘವಾಗಿ ಗೆಲ್ಲುತ್ತಾ ಬರುತ್ತಿದ್ದರೂ ಇಲ್ಲಿನ ಜನರ ಬದುಕಿನ ಪ್ರಶ್ನೆ ಮಾತ್ರ ಸೋಲುತ್ತಾ ಬಂದಿದೆ ಎಂದು CPIM ಜಿಲ್ಲಾ ಯುವ ನಾಯಕರಾದ ಸಂತೋಷ್ ಬಜಾಲ್ ರವರು ಹೇಳಿದರು. ಅವರು CPIM ನೇತ್ರತ್ವದಲ್ಲಿ […]

Continue Reading

ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಮೇಯನೇಸ್ ನಿಷೇಧಿಸಿ ಆದೇಶ

ಮೇಯನೇಸ್ ಅನ್ನು ಸರಿಯಾಗಿ ತಯಾರಿಸದಿರುವುದು ಮತ್ತು ಸರಿಯಾಗಿ ಸಂಗ್ರಹಿಸದಿರುವುದು ಸೇರಿದಂತೆ ಹಲವು ಅಂಶಗಳಿಂದ ಸಾರ್ವಜನಿಕ ಆರೋಗ್ಯಕ್ಕೆ ದೊಡ್ಡ ಅಪಾಯವನ್ನುಂಟುಮಾಡುತ್ತವೆ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಈ ನಿರ್ಧಾರ ಕೈಗೊಂಡಿವೆ. ತಮಿಳುನಾಡು ಸರ್ಕಾರವು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆಯ ಪ್ರಕಾರ, ಮೊಟ್ಟೆಗಳಿಂದ ತಯಾರಿಸಿದ ಮೇಯನೇಸ್ ಅನ್ನು ಒಂದು ವರ್ಷ ನಿಷೇಧಿಸಿ ಆದೇಶಿಸಿದೆ. ಈ ಆದೇಶದ ಪ್ರಕಾರ, ಸಾರ್ವಜನಿಕರ ಹಿತದೃಷ್ಟಿಯಿಂದ, ತಮಿಳುನಾಡಿನ ಯಾವುದೇ ಭಾಗದಲ್ಲಿ ಮೇಯನೇಸ್ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ತಮಿಳುನಾಡು ಗೆಜೆಟ್‌ನಲ್ಲಿ […]

Continue Reading