ರಂಗಭೂಮಿ ಉಡುಪಿ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ

ಹಿರಿಯ ಸಾಹಿತಿ ಎಚ್. ಗೋಪಾಲ ಭಟ್ಟ (ಕು. ಗೋ) ರವರಿಗೆ ವಿಶ್ವ ರಂಗಭೂಮಿ ಸನ್ಮಾನ…! ಯುವಕರನ್ನು ರಂಗಭೂಮಿಯತ್ತ ಸೆಳೆಯುವ ಕಾರ್ಯ ನಡೆಯಲಿ : ಮಾಹೆಯ ಸಹ ಕುಲಾಧಿಪತಿ ಡಾ. ಎಚ್. ಎಸ್ ಬಲ್ಲಾಳ್ ಉಡುಪಿ : ಯಾವುದೇ ಕಲಾಪ್ರಕಾರಗಳು ಉಳಿದು ಬೆಳೆಯಬೇಕಾದರೆ ಯುವಜನತೆ ಅದರಲ್ಲಿ ತೊಡಗಿಸಿ ಕೊಳ್ಳುವುದು ಅತೀ ಮುಖ್ಯ. ಈ ನಿಟ್ಟಿನಲ್ಲಿ ರಂಗ ಭೂಮಿ ಉಡುಪಿ ನಾಟಕಗಳತ್ತ ವಿದ್ಯಾರ್ಥಿಗಳನ್ನು, ಯುವಕರನ್ನು ಸೆಳೆಯುವ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ ಎಂದು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ. ಎಚ್. […]

Continue Reading

ಸೇವೆ ಸಲ್ಲಿಸಿದ ಶಾಲೆಗೆ ಕೊಳವೆ ಬಾವಿ ಕೊಡುಗೆ ನೀಡಿ ಮಾದರಿಯಾದ ಹೃದಯವಂತ ಶಿಕ್ಷಕ.

ವಿಟ್ಲ ಸಮೀಪದ ಬೊಳಂತಿಮುಗೇರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರೊಬ್ಬರು ತಾನು ಸೇವೆ ಸಲ್ಲಿಸಿದ ಶಾಲೆಗೆ ಕೊಳವೆ ಬಾವಿ ಕೊಡುಗೆ ನೀಡುವ ಮೂಲಕ ನೀರಿನ ಸಮಸ್ಯೆ ನೀಗಿಸಿ ಮಾದರಿ ಶಿಕ್ಷಕರಾಗಿದ್ದಾರೆ.ವಿಟ್ಲ ಕಸಬಾ ಗ್ರಾಮದ ಬೊಳಂತಿಮುಗೇರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ರಾಮಣ್ಣ ಗೌಡರು ವಿಶಿಷ್ಟವಾದ ಸೇವೆ ನೀಡಿದ್ದಾರೆ. ಬೊಳಂತಿಮುಗೇರು ಸರ್ಕಾರಿ ಪ್ರೌಢಶಾಲೆಗೆ ಬರುವ ಮುನ್ನ ಕೇಪು-ಕಲ್ಲಂಗಳ ಪ್ರೌಢಶಾಲೆಯಲ್ಲಿ ರಾಮಣ್ಣ ಗೌಡರು ಸುಮಾರು ಹದಿನಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅಲ್ಲಿಂದ ವರ್ಗಾವಣೆಯಾಗಿ ಬೊಳಂತಿಮುಗೇರು ಶಾಲೆಗೆ ಬಂದು ಹದಿನೇಳು ವರ್ಷಗಳ ಕಾಲ ಸೇವೆ […]

Continue Reading

ನೀರು ಬರದಿದ್ದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ನಾವೇ ಬರುತ್ತೇವೆ: ಸಂತೋಷ್ ಬಜಾಲ್

ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಜಾಲ್ ವಾರ್ಡ್ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯದರ್ಶಿ, ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್ ಇಂದು ಬಜಾಲ್ ಕಟ್ಟಪುನಿ ಪ್ರದೇಶದ […]

Continue Reading

ಮುಸ್ಲಿಮರ ಮುಂದಿರುವ ಸವಾಲುಗಳು ಮತ್ತು ಪರಿಹಾರ ಮಾರ್ಗಗಳು

ಮುಸ್ಲಿಮರು ಇಸ್ಲಾಮಿನ ಮೂಲ ತತ್ವಗಳಾದ ಶಾಂತಿ, ಕರುಣೆ ಮತ್ತು ನ್ಯಾಯಕ್ಕೆ ಬದ್ಧರಾಗಿರಬೇಕು ✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು. ಆಧುನಿಕ ಜಗತ್ತಿನಲ್ಲಿ ಮುಸ್ಲಿಮರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ತಂತ್ರಜ್ಞಾನದ ಪ್ರಗತಿ, ಸಾಮಾಜಿಕ ಬದಲಾವಣೆಗಳು ಮತ್ತು ಜಾಗತೀಕರಣದ ಪ್ರಭಾವದಿಂದಾಗಿ, ಇಸ್ಲಾಮೀಯ ಮೌಲ್ಯಗಳನ್ನು ಕಾಪಾಡಿಕೊಂಡು ಜೀವನ ನಡೆಸುವುದು ಸವಾಲಾಗಿ ಪರಿಣಮಿಸಿದೆ. ಈ ಲೇಖನವನ್ನು ಮುಸ್ಲಿಮರ ಮುಂದಿರುವ ಪ್ರಮುಖ ಸವಾಲುಗಳ ಮೇಲೆ ಬೆಳಕು ಚೆಲ್ಲುವ ಹಾಗೂ  ಈ ಸವಾಲುಗಳನ್ನು ಕುರಾನ್ ಮತ್ತು ಸುನ್ನತ್‌ನ ಬೋಧನೆಗಳ ಆಧಾರದಲ್ಲಿ ದಯೆ, ಗೌರವ ಮತ್ತು ಬುದ್ಧಿವಂತಿಕೆಯೊಂದಿಗೆ […]

Continue Reading

ಪುತ್ತೂರು: ಜಮೀನಿಗೆ ಅಕ್ರಮ ಪ್ರವೇಶ, ಸೊತ್ತುಗಳ ಕಳವು , ಕೃಷಿ ಹಾನಿ; ಒಂಭತ್ತು ಮಂದಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು, ಆರೋಪಿಗಳ ಪರ ವಾದಿಸಿದ್ದ ಮಹೇಶ್ ಕಜೆ

ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಸರ್ವೆ ನಂಬ್ರ 313/2 ರಲ್ಲಿನ ಕೃಷಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಸೊತ್ತುಗಳನ್ನು ಕಳವು ಮಾಡಿದ್ದಲ್ಲದೆ ಕೃಷಿ ಹಾನಿ ಮಾಡಿರುವ ಪ್ರಕರಣದಲ್ಲಿ 9 ಮಂದಿ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನೆಟ್ಟಣಿಗೆ ಮುಡ್ನೂರು ಕುಕ್ಕುಡೆಲು ನಿವಾಸಿ ತೇಜಸ್ವಿನಿ ಅವರು ಈ ಕುರಿತು ದೂರು ನೀಡಿದ್ದರು. ‘ನೆಟ್ಟಣಿಗೆ ಮುಡ್ನೂರಿನಲ್ಲಿ ನಮಗೆ 3.60 ಎಕ್ರೆ ಅಡಿಕೆ ತೋಟವಿದ್ದು, ಮಾರ್ಚ್ 12 ರಂದು ಆರೋಪಿಗಳಾದ ಶಶಿಧರ ಪೂಜಾರಿ, ಅಶೋಕ್ ಪೂಜಾರಿ, […]

Continue Reading

ಅಪ್ರಾಪ್ತ ದಲಿತ ಬಾಲಕಿಗೆ ಬಿಜೆಪಿ ಮುಖಂಡನಿಂದ ಲೈಂಗಿಕ ದೌರ್ಜನ್ಯ ಪ್ರಕರಣ.

ವಿಟ್ಲ ಪೊಲೀಸರ ನಡೆ ವಿರುದ್ಧ ದಲಿತ ಹಕ್ಕುಗಳ ಜಿಲ್ಲಾ ಸಮಿತಿ ಮುಖಂಡರಿಂದ ಜಿಲ್ಲಾ ಎಸ್ಪಿಗೆ ದೂರು. ವಿಟ್ಲ : ಮಾಣಿಲ ಗ್ರಾಮದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿ ಜೆ ಪಿ ಮುಖಂಡ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಮಹೇಶ್ ಭಟ್ ಎಂಬಾತ ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ ಹಿಂಸೆಯನ್ನು ಎಸಗಿರುತ್ತಾನೆ. ಈತನ ವರ್ತನೆ ಬಗ್ಗೆ ಸ್ಥಳೀಯರು ದಲಿತ ಹಕ್ಕುಗಳ ಸಮಿತಿಯ ಮುಖಂಡರ ಗಮನಕ್ಕೆ ತಂದ ಹಿನ್ನಲೆಯಲ್ಲಿ ಡಿಎಚ್ಎಸ್ […]

Continue Reading

ಬಿಜೆಪಿ ಮುಖಂಡನಿಂದ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಪ್ರಕರಣ ದಾಖಲು, ಆರೋಪಿ ನಾಪತ್ತೆ

ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ದ.ಕ ಜಿಲ್ಲೆಯ ಬಿಜೆಪಿ ಮುಖಂಡನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ಬಂಟ್ವಾಳ ಕ್ಷೇತ್ರದ ಪ್ರಭಾವಿ ಬಿಜೆಪಿ ಮುಖಂಡ ಆಗಿರುವ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ತಡವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಗುಸು ಗುಸು ಕೇಳಿ ಬಂದಿವೆ. ಅಪ್ರಾಪ್ತ ದಲಿತ ಬಾಲಕಿಗೆ ಸುಳ್ಳು ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಕೃತ್ಯವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾಗಿ ಆರೋಪಿ ಪ್ರಯತ್ನಿಸಿದ್ದ ಎಂಬ ಮಾಹಿತಿಯೂ ಕೇಳಿಬಂದಿದೆ. ಪೆರುವಾಯಿ ವ್ಯವಸಾಯ […]

Continue Reading

ಸಿಸಿಬಿ ಪೊಲೀಸರ ಕಾರ್ಯಾಚರಣೆ; ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ.

ರಾಜ್ಯದ ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆ ಹೆಸರಿನಲ್ಲಿ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಸಿಸಿಬಿಯ ಆರ್ಥಿಕ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಶಾಂತ್ ಗುಂಡ್ಮಿ, ಮೋನೀಷ್ ಕೆ.ಜೆ ಹಾಗೂ ರಾಜಶೇಖರ ಎಂದು ಗುರುತಿಸಲಾಗಿದೆ. ಕತ್ರಿಗುಪ್ಪೆಯ ರಾಮ್‌ ರಾವ್ ಲೇಔಟ್‌ನಲ್ಲಿರುವ ಅಕಾಡೆಮಿಯೊಂದರಲ್ಲಿ pucಗೆ ದಾಖಲಾಗಿದ್ದ ವಿದ್ಯಾರ್ಥಿಗೆ ಯಾವುದೇ ಪರೀಕ್ಷೆ ಬರೆಯದೆಯೇ ಆರೋಪಿಗಳು ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಹೆಸರಿನಲ್ಲಿ ಅಂಕಪಟ್ಟಿ ನೀಡಿದ್ದರು. ವಿದ್ಯಾರ್ಥಿಯ […]

Continue Reading

ಬಡವರ ವಸತಿ ಯೋಜನೆಯ ಬಗ್ಗೆ ಎಳ್ಳಷ್ಟೂ ಧ್ವನಿ ಎತ್ತದ ವೇದವ್ಯಾಸ ಕಾಮತ್ ಕೂಡಲೇ ರಾಜೀನಾಮೆ ನೀಡಲಿ – ಸುನಿಲ್ ಕುಮಾರ್ ಬಜಾಲ್

ಮಂಗಳೂರು ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬಂದು 40 ವರ್ಷಗಳು ಕಳೆದರೂ,ದೀರ್ಘ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಹಾಗೂ ಬಿಜೆಪಿ ಇಲ್ಲಿಯವರೆಗೆ ಒಂದೇ ಒಂದು ತುಂಡು ಭೂಮಿಯನ್ನು ಬಡವರಿಗೆ ನೀಡಿಲ್ಲ. ಕಳೆದ 25 ವರ್ಷಗಳಿಂದ ನಿವೇಶನರಹಿತರ ಹೋರಾಟ ನಡೆದ ಫಲವಾಗಿ ನಿವೇಶನ ರಹಿತರ ಪಟ್ಟಿ ರೆಡಿಯಾಗಿದ್ದರೂ,ಒಂದೆರಡು ಕಡೆಗಳಲ್ಲಿ ಭೂಮಿ ನಿಗದಿಪಡಿಸಿದ್ದರೂ ಅದನ್ನು ಇಲ್ಲಿನ ಬಿಲ್ಡರ್ ಮಾಫಿಯಾ ಯಾವುದಕ್ಕೂ ಅವಕಾಶವನ್ನೇ ನೀಡದೆ ಬಡವರನ್ನು ಮತ್ತಷ್ಟು ಬಡವರನ್ನಾಗಿಸುವ ಸಂಚು ನಡೆಸುತ್ತಲೇ ಇದೆ.ಈಗ ಮತ್ತೆ ಬಡವರಿಗೆ ಮನೆ ನಿವೇಶನ ಒದಗಿಸುವುದಾಗಿ ಜನತೆಯ ತೆರಿಗೆಯ […]

Continue Reading

ನಿರುದ್ಯೋಗ ನಿವಾರಣೆಯಿಂದ ಸೌಹಾರ್ದ ಭಾರತದ ನಿರ್ಮಾಣ ಸಾಧ್ಯ – ಡಾ.ಗಣನಾಥ ಶೆಟ್ಟಿ ಎಕ್ಕಾರು

ಸಾಮಾನ್ಯ ಜನರು ಉದ್ಯೋಗವನ್ನು ಪಡೆಯಲು‌ ಹರಸಾಹಸ ಪಡುತ್ತಿದ್ದಾರೆ. ಕಾರಣ ನಿರುದ್ಯೋಗ ಸಮಸ್ಯೆ ಪೆಡಂಭೂತವಾಗಿ ಯುವಜನತೆಯನ್ನು ಕಾಡುತ್ತಿದೆ.ಇಂತಹ ನಿರುದ್ಯೋಗವನ್ನು ಕಾರ್ಪೊರೇಟ್ ವಲಯ ಪ್ರೋತ್ಸಾಹಿಸುತ್ತಾ ಬರುತ್ತಿದೆ.ಜೊತೆಗೆ ಕೋಮುವಾದಿ ಶಕ್ತಿಗಳು ಇದರ ದುರ್ಲಾಭವನ್ನು ಪಡೆಯುತ್ತಿದೆ. ನಿರುದ್ಯೋಗದಿಂದ ಹತಾಶರಾದ ಯುವಜನರಲ್ಲಿ ಜಾತಿ ಧರ್ಮದ ಅಮಲನ್ನೇರಿಸಿ ಕೋಮುದ್ವೇಷವನ್ನು ಹಬ್ಬಿಸಲು ಪ್ರಚೋದನೆ ನೀಡಲಾಗುತ್ತಿದೆ. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಮೂಲಕ ದುಡಿಯುವ ಕೈಗಳಿಗೆ ಉದ್ಯೋಗ ಲಭಿಸುವಂತಾದರೆ ಮಾತ್ರವೇ ಸೌಹಾರ್ದ ಭಾರತವನ್ನು ನಿರ್ಮಿಸಲು ಸಾಧ್ಯವಿದೆ ಎಂದು ಜನಪದ ವಿದ್ವಾಂಸರೂ, ಸಾಹಿತಿಗಳಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯ ಪಟ್ಟರು. ಸ್ವಾತಂತ್ರ್ಯ […]

Continue Reading