ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಗೆ 25 ರಿಂದ 45 ವರ್ಷಗಳ ವಯೋಮಿತಿ ನಿಗದಿ, ನಿವೃತ್ತಿ ವಯೋಮಿತಿ 60ಕ್ಕೆ ಸೀಮಿತಗೊಳಿಸಿ ಆದೇಶ

ರಾಜ್ಯದ ಆಶಾ ಕಾರ್ಯಕರ್ತೆಯರ ನಿವೃತ್ತಿ ವಯೋಮಿತಿ 60 ಕ್ಕೆ ನಿಗದಿಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿದ್ದು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯದಾದ್ಯಂತ ಜಿಲ್ಲಾವಾರು ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಆಶಾನಿಧಿ ತಂತ್ರಾಂಶದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ವಿವರಗಳು ನಮೂದಾಗಿರುತ್ತವೆ. ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಹಾಲಿ ಇರುವ ಜನಸಂಖ್ಯೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, […]

Continue Reading

BIG EXCLUSIVE’ ಫೆಬ್ರವರಿ 25 ಕ್ಕೆ ವಿಚಾರ ಗೊತ್ತಾಗುತ್ತೆ’.. ವಾಟ್ಸಾಪ್ ಸಂದೇಶ ರವಾನಿಸಿದ್ದ ದಿಗಂತ್..ಅವತ್ತೆ ನಿಗೂಢ ನಾಪತ್ತೆ..!

ಲಿಂಗ ಪರಿವರ್ತನೆ ಜಾಲಕ್ಕೆ ಸಿಲುಕಿದನಾ ದಿಗಂತ್..? ಬಗೆದಷ್ಟು ಬಿಚ್ಚಿಡುತ್ತಿದೆ ನಿಗೂಢ ನಾಪತ್ತೆ ಪ್ರಕರಣ ಕರಾವಳಿಯಲ್ಲಿ ಪಿಯುಸಿ ವಿದ್ಯಾರ್ಥಿ ದಿಗಂತ್ ದಿಢೀರ್ ನಾಪತ್ತೆ ಪ್ರಕರಣ ರಾಜ್ಯದಾದ್ಯಂತ ಸಂಚಲನ ಸೃಷ್ಟಿಸಿದೆ. ವಿಧಾನಸಭಾ ಅಧಿವೇಶನದಲ್ಲೂ ದಿಗಂತ್ ನಾಪತ್ತೆ ಪ್ರಕರಣ ಚರ್ಚೆಗೆ ಬಂದಿದೆ. ಇಂದಿಗೆ ವಾರ ಕಳೆದರೂ ದಿಗಂತ್ ಎಲ್ಲಿದ್ದಾನೆ ಅನ್ನುವ ಸಣ್ಣ ಕ್ಲೂ ಯಾರಿಗೂ ಸಿಕ್ಕಿಲ್ಲ. ಪೊಲೀಸ್ ಇಲಾಖೆ ಏಳು ತಂಡ ರಚನೆ ಮಾಡಿ ತನಿಖೆಗೆ ಇಳಿದಿದೆ. ಆದರೂ ದಿಗಂತ್ ಪತ್ತೆಯೇ ಇಲ್ಲ. ಅಷ್ಟಕ್ಕೂ ದಿಗಂತ್ ನಾಪತ್ತೆ ಹಿಂದೆ ರೋಚಕ ಸಂಗತಿ […]

Continue Reading

ವಂಶವೃಕ್ಷ ಪಡೆಯಲು ಇನ್ನು ಮುಂದೆ ಎಲ್ಲಾ ಜಿಲ್ಲೆಗಳಲ್ಲಿ ಒಂದೇ ಮಾದರಿಯ ಮಾನದಂಡ: ಕಂದಾಯ ಸಚಿವ

ವಂಶವೃಕ್ಷ ಪಡೆಯಲು ಒಂದೊಂದು ಜಿಲ್ಲೆಯಲ್ಲಿ ಬೇರೆ ಬೇರೆ ದಾಖಲೆಗಳನ್ನು ಕೇಳುತ್ತಿದ್ದಾರೆ ಎಂದು ಮೇಲ್ಮನೆ ಸದಸ್ಯ ವೈ.ಎಂ. ಸತೀಶ್‌ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರತಿಕ್ರಿಯಯಿಸಿ, ವಂಶವೃಕ್ಷ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವಂಶವೃಕ್ಷ ಪಡೆಯಲು ಒಂದೇ ಮಾದರಿಯ ಮಾನದಂಡ ಅನುಸರಿಸಲಾಗುತ್ತಿದೆ. ಅದರಂತೆ ಪಡಿತರ ಚೀಟಿ ಅಥವಾ ಮತದಾರರ ಚೀಟಿ ಅಥವಾ ಆಧಾರ್‌ ಕಾರ್ಡ್‌ ನೀಡಬೇಕು. ಅರ್ಜಿ ನಮೂನೆಯಲ್ಲಿ ಸ್ವಯಂಘೋಷಿತ ಪತ್ರ ನೀಡಬೇಕು. ಈ ದಾಖಲೆಗಳೊಂದಿಗೆ ಗ್ರಾಮ ಲೆಕ್ಕಿಗರು ಕ್ಷೇತ್ರ […]

Continue Reading

ವಿಟ್ಲದಲ್ಲಿ ಗಣಿ ಮಾಫಿಯಾದ ಅಟ್ಟಹಾಸ. ಭಾರಿ ಪ್ರಮಾಣದಲ್ಲಿ ಸ್ಫೋಟಕ ಸಿಡಿದು ನಲುವತ್ತಕ್ಕೂ ಹೆಚ್ಚು ಮನೆಗಳಿಗೆ ಹಾನಿ.‌

ಮುತ್ತಿಗೆ ಹಾಕಿ ಅಧಿಕಾರಿಗಳ ಚಳಿ ಬಿಡಿಸಿದ ಗ್ರಾಮಸ್ಥರು. ವಿಟ್ಲ : ಕ್ವಾರಿಯಲ್ಲಿ ಕಲ್ಲು ಬಂಡೆಗಳನ್ನು ಸ್ಫೋಟಿಸಲು ಅಕ್ರಮವಾಗಿ ಗುಡ್ಡದಲ್ಲಿ ದಾಸ್ತಾನು ಇರಿಸಿದ್ದ ಭಾರಿ ಪ್ರಮಾಣದ ಸ್ಫೋಟಕಗಳು ಸಿಡಿದು ವಿಟ್ಲ ಸುತ್ತಮುತ್ತ ಹತ್ತು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸ್ಫೋಟದ ಸದ್ದಿನೊಂದಿಗೆ ಕಂಪನ ಸಂಭವಿಸಿ ಐವತ್ತಕ್ಕೂ ಹೆಚ್ಚು ಮನೆಗಳು ಹಾನಿಗೊಂಡಿವೆ. ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡತ್ತಡ್ಕ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ವಿಟ್ಲ ಸುತ್ತಮುತ್ತ ಹತ್ತು ಕಿಲೋ ಮೀಟರ್ ವ್ಯಾಪ್ತಿಯಲ್ಲಿ […]

Continue Reading

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ -15 ಸಮಾರೋಪ…!

ಕೆರೆಮನೆ ಶಂಭು ಹೆಗಡೆ ಯಕ್ಷಗಾನ ಕಲಾ ಸೌರಭವನ್ನು ಜಗದಗಲಕ್ಕೆ ಪಸರಿಸಿದ ಮಹಾನ್ ಕಲಾವಿದ : ಡಾ.ತಲ್ಲೂರು ಉಡುಪಿ : ಯಕ್ಷಗಾನ ಕಲಾ ಸೌರಭವನ್ನು ಜಗದಗಲಕ್ಕೆ ಪಸರಿಸಿ ಈ ಮೂಲಕ ತನ್ನ ಸಾಧನೆಗೆ ರಾಷ್ಟ್ರೀಯ ಪ್ರಶಸ್ತಿ ಪಡೆದ ಕೆರೆಮನೆ ಶಂಭು ಹೆಗಡೆ ಪ್ರಾತ: ಸ್ಮರಣೀಯರು. ಅವರ ಸಾಧನೆಯ ಹಾದಿಯನ್ನೇ ಅನುಸರಿಸಿಕೊಂಡು ಯಕ್ಷಗಾನ ಕಲೆಯ ಉಳಿವು ಬೆಳವಣಿಗೆಗೆ ತನ್ನದೇ ಕೊಡುಗೆಯನ್ನು ಮಂಡಳಿಗೆ ವಿಶ್ವ ಮಾನ್ಯತೆಯನ್ನು ತಂದಿರುವ ಕೆರೆಮನೆ ಶಿವಾನಂದ ಹೆಗಡೆ ಹಾಗೂ ಅವರ ಕುಟುಂಬ ಅಭಿನಂದನಾರ್ಹರು ಎಂದು ಕರ್ನಾಟಕ ಯಕ್ಷಗಾನ […]

Continue Reading

“ಸುರತ್ಕಲ್ – ನಂತೂರು ಹೆದ್ದಾರಿ ಡಾಮರೀಕರಣಕ್ಕೆ ಟೆಂಡರ್” ಸಂಸದರ ಹೇಳಿಕೆ ಸ್ವಾಗತಾರ್ಹ

ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಕುರಿತು ಮೌನ ಯಾಕೆ.? ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರಶ್ನೆ. ಸಂಪೂರ್ಣ ಹದಗೆಟ್ಟಿರುವ ಸುರತ್ಕಲ್ – ನಂತೂರು ರಾಷ್ಟ್ರೀಯ ಹೆದ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿಗೊಳಿಸಲು ಆಗ್ರಹಿಸಿ ‘ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ’ ಹಲವು ಸುತ್ತಿನ ಹೋರಾಟಗಳನ್ನು ನಡೆಸಿ ಸಂಸದರೂ ಸೇರಿದಂತೆ ಸಂಬಂಧ ಪಟ್ಟವರಿಗೆ ಮನವಿಗಳನ್ನು ಸಲ್ಲಿಸಿತ್ತು. ಈಗ ಸಂಸದ ಬ್ರಿಜೇಶ್ ಚೌಟರು ಸುರತ್ಕಲ್ – ನಂತೂರು ರಾಷ್ಟ್ರೀಯ ಹೆದ್ದಾರಿ ಡಾಮರೀಕರಣಕ್ಕೆ ಟೆಂಡರ್ ಕರೆದಿರುವುದಾಗಿ ಹೇಳಿಕೆ ನೀಡಿದ್ದಾರೆ. ಟೋಲ್ […]

Continue Reading

ಅಕ್ರಮ ಮರಳುಗಾರಿಕೆ ಮತ್ತು ಗಣಿಗಾರಿಕೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌

ಅನಧಿಕೃತ ಮತ್ತು ವಿವೇಚನೆರಹಿತ ಮರಳು ಗಣಿಗಾರಿಕೆಯು ನದಿಗಳ ಬತ್ತುವಿಕೆಗೆ, ನದಿಯ ಸಾವಿಗೂ ಕಾರಣವಾಗಿದೆ ನದಿ ತಟದಲ್ಲಿ ಅಕ್ರಮ ಮರಳು, ಗಣಿಗಾರಿಕೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ನದಿ ಪಾತ್ರದಲ್ಲಿನ ಬದಲಾವಣೆಗಳ ಬಗ್ಗೆ ವಾಸ್ತವ ಕಾಲದ ಮಾಹಿತಿ ನೀಡುವ ವ್ಯವಸ್ಥೆ ಅಳವಡಿಸಿ ಕೊಳ್ಳುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ನದಿಗಳ ಗಡಿ, ಮರಳಿನ ದಿಬ್ಬಗಳನ್ನು ಉಪಗ್ರಹ ಚಿತ್ರಗಳ ಮೂಲಕ ಗುರುತಿಸಬೇಕು, ಮತ್ತು ಇದರಲ್ಲಿ ಏನೇ ಬದಲಾವಣೆಯಾದರೂ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿತ ಇಲಾಖೆಗಳಿಗೆ ತಿಳಿಸುವ ವ್ಯವಸ್ಥೆ […]

Continue Reading

ಕೈ ಕಮಾಂಡ್ ಗೆ ಅಕ್ಟೋಬರ್ 31 ಡೆಡ್ ಲೈನ್.. ಡಿಕೆಶಿ ಕೊಟ್ರು ಬಿಗ್ ಟಾಸ್ಕ್..ಇತ್ತ ಮೊಯ್ಲಿ ಅಭಯ.!

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸುನಾಮಿಯ ಮುನ್ಸೂಚನೆ ಕಾಣಿಸುತ್ತಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಗೆ ಅಕ್ಟೋಬರ್ 31 ಡೆಡ್ ಲೈನ್ ನೀಡಿರುವ ಮಾಹಿತಿಯೊಂದು ಹೊರಬಿದ್ದಿದೆ. ಅಕ್ಟೋಬರ್ 31 ರೊಳಗೆ ಮುಖ್ಯಮಂತ್ರಿ ಆಗಬೇಕು ಎಂದು ಡಿಕೆಶಿ ಖಡಕ್ ಡೆಡ್ ಲೈನ್ ಜೊತೆ ವಾರ್ನಿಂಗ್ ನೀಡಿದ್ದಾರೆ ಅನ್ನುವ ಸುದ್ದಿಯಿದೆ. ಈವರೆಗೂ ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಬಣದ ಕೆಲವು ಶಾಸಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರೆ, ಇದೀಗ ಕಾಂಗ್ರೆಸ್ ನಲ್ಲೂ ಡಿಕೆಶಿ ಪರ ಬಹಿರಂಗವಾಗಿ ಅವರ ಬೆಂಬಲಿಗರು ಬ್ಯಾಟಿಂಗ್ ನಡೆಸಲು ಆರಂಭಿಸಿದ್ದಾರೆ. […]

Continue Reading

ಡಿಕೆಶಿ ಅಂದ್ರೆ ಅಮಿತ್ ಶಾ ಅವರಿಗಿಷ್ಟ. ಅಮಿತ್ ಷಾ-ಡಿಕೆಶಿ ಆಪ್ತರಾಗಿದ್ದು ಹೇಗೆ.?

ಡಿಕೆಶಿ ಫ್ಲ್ಯಾಟಿನಲ್ಲಿ ಇಡಲಾಗಿದ್ದ ಅಜ್ಜಯ್ಯನವರ ಗದ್ದುಗೆ ಮಡಿದ ಚಮತ್ಕಾರ ಏನು.? ರಾಷ್ಟ್ರಪತಿ ಆಳ್ವಿಕೆ ಮೇಲೆ ಕಣ್ಣು; ಬಿಜೆಪಿಯಲ್ಲಿ ಬೆಂಗಳೂರು ವಾರ್ ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಮಾತುಕತೆ ನಡೆಯಲಿಲ್ಲವಾದರೂ ಅದು ಕರ್ನಾಟಕದ ರಾಜಕಾರಣದಲ್ಲಿ ಸಂಚಲನ ಮೂಡಿರುವುದು ಮಾತ್ರ ನಿಜ. ಅದರ ಪ್ರಕಾರ, ನಿಗದಿತ ಸಮಯಕ್ಕೆ ಸರಿಯಾಗಿ ತಮಗೆ ಸಿಎಂ ಹುದ್ದೆ ಸಿಗದಿದ್ದರೆ ಪಕ್ಷ […]

Continue Reading

ಶುದ್ಧ ಕುಡಿಯುವ ನೀರನ್ನು ಅನಗತ್ಯ ಪೋಲು ಮಾಡುವವರಿಂದ 5.60 ಲಕ್ಷ ದಂಡ ವಸೂಲಿ ಮಾಡಿದ ಜಲಮಂಡಳಿ

ಕುಡಿಯುವ ನೀರನ್ನು ಕೈದೋಟ, ಕಟ್ಟಡ ನಿರ್ಮಾಣಕ್ಕೆ ಬಳಸಿದವರ ಮೇಲೆ ದಾಖಲಾಯ್ತು 112 ಪ್ರಕರಣಗಳು ಕುಡಿಯುವ ನೀರಿನ ಅನಗತ್ಯ ಪೋಲು ಮಾಡುವವರ ವಿರುದ್ಧ ಬೆಂಗಳೂರು ಜಲಮಂಡಳಿಯ ದಂಡ ಅಭಿಯಾನ ಚುರುಕುಗೊಂಡಿದೆ. ಕಳೆದ ಒಂದು ವಾರದಲ್ಲಿ 112 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಕುಡಿಯುವ ನೀರಿನ ಅನಗತ್ಯ ಪೋಲು ಮಾಡಿದವರಿಂದ 5.60 ಲಕ್ಷ ರೂಪಾಯಿ ದಂಡ ವಸೂಲಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾದ್ ಮನೋಹರ್ ತಿಳಿಸಿದ್ದಾರೆ. ಮುಂಬರುವ ಬೇಸಿಗೆಯಲ್ಲಿ […]

Continue Reading