ಕರ್ನಾಟಕದಲ್ಲಿ ದ್ವೇಷ ಭಾಷಣಕ್ಕೆ ಬೀಳುತ್ತಾ ಬ್ರೇಕ್.? ಹೊಸ ಕಾನೂನು ತರಲು ಸರಕಾರದಿಂದ ಸಿದ್ದತೆ.

ರಾಜ್ಯ ಸರ್ಕಾರ ಮಹತ್ವದ ಮಸೂದೆಯೊಂದನ್ನು ತರಲು ಸಿದ್ಧತೆ ನಡೆಸುತ್ತಿದ್ದು, ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ. ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ವಿಧೇಯಕ 2025 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸಿದೆ. ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡಿದರೆ ಜೈಲು ಶಿಕ್ಷೆ ಗ್ಯಾರಂಟಿ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದು ಬಿಲ್ ಕರಡಿನಲ್ಲಿದ್ದು, ವಿಧಾನಸಭೆಯಲ್ಲಿ ಮಂಡನೆಯಾಗಿ […]

Continue Reading

ಕೋಮು ವೈಷಮ್ಯ ಬಿತ್ತುವ ಶಿಕ್ಷಕನ ಭಾಷಣ ರದ್ದುಗೊಳಿಸಿದ ಸಮಾಜ ಕಲ್ಯಾಣ ಇಲಾಖೆ

ಅರುಣ್ ಉಳ್ಳಾಲನನ್ನು ಭಾಷಣಕ್ಕೆ ಕರೆದು ಪೇಚಿಗೆ ಸಿಲುಕಿದ ಪ್ರಾಂಶುಪಾಲ !! ಬೆಳ್ತಂಗಡಿ: ಬಹಿರಂಗ ವೇದಿಕೆಯಲ್ಲಿ ಕೋಮು ದ್ವೇಷದ ಭಾಷಣ ಮಾಡಿದ ಆರೋಪ ಹೊಂದಿರುವ ಅರುಣ್ ಉಳ್ಳಾಲ್ ಎಂಬವರನ್ನು ಸರಕಾರಿ ಶಾಲೆಯೊಂದು ಭಾಷಣಕ್ಕೆ ಆಹ್ವಾನಿಸಿ ಪೇಚಿಗೆ ಸಿಲುಕಿ, ಕೊನೆ ಕ್ಷಣದಲ್ಲಿ ಕಾರ್ಯಕ್ರಮವನ್ನೇ ರದ್ಧುಗೊಳಿಸಿದ ಘಟನೆ ಗುರುವಾರ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹೊಸಂಗಡಿಯ ಇಂದಿರಾಗಾಂಧಿ ಸರಕಾರಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಅರುಣ್ ಉಳ್ಳಾಲ್ ಎಂಬವರ ಭಾಷಣ ಏರ್ಪಡಿಸಲಾಗಿತ್ತು. ಸದರಿ ಶಾಲೆಯು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೊಳಪಟ್ಟ ವಸತಿ […]

Continue Reading

ಶೇಖ್ ಹಸೀನಾ ಮತ್ತು ಇತರರನ್ನು ಭಾರತದಿಂದ ಕರೆತರಲು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ: ಗೃಹ ಸಲಹೆಗಾರ

ಢಾಕಾ: ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಪದಚ್ಯುತಗೊಂಡಿರುವ ಪ್ರಧಾನಿ ಶೇಖ್ ಹಸೀನಾ ಮತ್ತು ಇತರರನ್ನು ಭಾರತದಿಂದ ಮರಳಿ ಕರೆತರಲು ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಗೃಹ ಸಲಹೆಗಾರ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎಂಡಿ ಜಹಾಂಗೀರ್ ಆಲಂ ಚೌಧರಿ ಬುಧವಾರ ಹೇಳಿದ್ದಾರೆ. ಶೇಖ್ ಹಸೀನಾ ಕಳೆದ ವರ್ಷ ಆಗಸ್ಟ್ 5 ರಿಂದ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ನಂತರ ತನ್ನ ಅವಾಮಿ ಲೀಗ್‌ನ 16 ವರ್ಷಗಳ ಆಡಳಿತವನ್ನು ಉರುಳಿಸಿದ ವಿದ್ಯಾರ್ಥಿ ನೇತೃತ್ವದ ಬೃಹತ್ ಪ್ರತಿಭಟನೆಯ ನಂತರ ಭಾರತದಲ್ಲಿ […]

Continue Reading

ಪ್ರಕರಣವನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಆಲೋಚಿಸಿ. ‘ಒನ್ ಮಿನಿಟ್ ಅಪಾಲಜಿ’ ಕೃತಿ ಇದೆ ಅದನ್ನು ಓದಿ; ನ್ಯಾಯಾಧೀಶರ ಸಲಹೆ.

ಬೆಂಗಳೂರು: ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಕಾನೂನು ಹೋರಾಟದಲ್ಲಿರುವ ಐಎಎಸ್- ಐಪಿಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ.ರೂಪಾ ಮೌದ್ಗೀಲ್ ಅವರಿಗೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಹಾಗೂ ‘ಒನ್ ಮಿನಿಟ್ ಅಪಾಲಜಿ’ ಎಂಬ ಇಂಗ್ಲಿಷ್ ಕೃತಿಯನ್ನು ಓದುವಂತೆ ಇಬ್ಬರಿಗೂ ನಗರದ 5ನೇ ಎಸಿಎಂಎಂ ನ್ಯಾಯಾಲಯ ಸಲಹೆ ನೀಡಿದೆ. ರೂಪಾ ಅವರು 2023ರ ಫೆ.18 ಮತ್ತು 19ರಂದು ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯ ಪೋಸ್ಟ್ ಪ್ರಕಟಿಸಿ ತೇಜೋವಧೆ ಮಾಡಿದ್ದಾರೆ. ಅವರಿಂದ ಒಂದು ಕೋಟಿ ರುಾಪಾಯಿ […]

Continue Reading

ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ; ಡಿವೈಎಫ್ಐ ಕಾರ್ಯಕರ್ತರು ದೋಷಮುಕ್ತ

2016ರಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಸಂಘರ್ಷದಲ್ಲಿ ಹಲ್ಲೆಗೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸದೆ ದಾರಿಯಲ್ಲಿ ಪೊಲೀಸ್ ವಾಹನದಿಂದ ಇಳಿಸಿದ ಕ್ರಮವನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಕೂಳೂರು ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ತಪ್ಪಿತಸ್ಥ ಪೋಲೀಸರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ಸುಮಾರು ಒಂದು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಸಾರ್ವನಿಕರಿಗೆ ತೊಂದರೆ ನೀಡಿರುತ್ತಾರೆ ಎಂದು ಮಂಗಳೂರಿನ ಕಸಬಾ ಬೆಂಗರೆಯ ಡಿವೈಎಫ್ಐ ಕಾರ್ಯಕರ್ತರಾದ ಎ.ಬಿ.ನೌಷಾದ್, ಹನೀಫ್, […]

Continue Reading

ದ.ಕ. ಜಿಲ್ಲೆಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸಾಮೂಹಿಕ ಧರಣಿ; ಹಲವು ಸಂಘಟನೆಗಳು ಭಾಗಿ, ವ್ಯಾಪಕ ಬೆಂಬಲ

ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು, ಹೆದ್ದಾರ ಅಗಲೀಕರಣ ಕಾಮಗಾರಿಗಳು ಶರವೇಗದಲ್ಲಿ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ, ಕೂಳೂರು ಸೇತುವೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ತಿಗೊಳಿಸಬೇಕು, ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವುಗೊಳಿಸಬೇಕು, ಹೊಸ ಟೋಲ್ ಗೇಟ್ ಗಳನ್ನು ಸ್ಥಾಪಿಸುವಾಗ ಅಂತರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಮುಂತಾದ ಬೇಡಿಕೆಗಳನ್ನು ಮುಂದಿಟ್ಟು “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ನೇತೃತ್ವದಲ್ಲಿ ನಂತೂರು ಜಂಕ್ಷನ್ ನಲ್ಲಿ ಸಾಮೂಹಿಕ ಧರಣಿ ನಡೆಯಿತು. ಜಿಲ್ಲೆಯ ಹಲವು […]

Continue Reading

ಬಿಜೆಪಿಯ ಬಣ ಗುದ್ದಾಟ ತಾರ್ಕಿಕ ಅಂತ್ಯಕ್ಕೆ.! ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ; ಯತ್ನಾಳ್‌ ಎಚ್ಚರಿಕೆ

ಬಿಜೆಪಿಯ ಬಣ ಗುದ್ದಾಟ ತಾರ್ಕಿಕ ಅಂತ್ಯಕ್ಕೆ ತಲುಪಿದ್ದು, ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ ಎಂದು ಭಿನ್ನರ ಬಣದ ಹೀರೋ, ಬಸನಗೌಡ ಪಾಟೀಲ್‌ ಯತ್ನಾಳ್‌ ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ. ಹೈಕಮಾಂಡ್ ನಮ್ಮ ತಂಡದ ಭೇಟಿಗೆ ಸಮಯಾವಕಾಶ ನೀಡಿದ್ದಾರೆ. ನಮ್ಮ ತಂಡದ ಇತರರೆಲ್ಲರೂ ಒಬ್ಬೊಬ್ಬ ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಮ್ಮ ತಂಡದಿಂದ ಅಭ್ಯರ್ಥಿ ಯಾರು ಆಗಬೇಕು ಎಂಬುದನ್ನು ಸಮಾಲೋಚಿಸಲಾಗುತ್ತಿದೆ. ವರಿಷ್ಠರು ಇಂತಹ ವರ್ಗದವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಎಂದರೆ ಅಂತಹ ವರ್ಗದವರನ್ನೇ […]

Continue Reading

ಕುಪ್ಪೆಪದವು: ಫೆಬ್ರವರಿ 8 ಕ್ಕೆ ಹೊಸ ಉಪ ಅಂಚೆ ಕಚೇರಿ ಉದ್ಘಾಟನೆ, ಹೊಸ ಪಿನ್ ಕೋಡ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಪ್ಪೆಪದವಿನಲ್ಲಿ ಹೊಸ ಅಂಚೆ ಕಚೇರಿ ಫೆಬ್ರವರಿ 8 ರಂದು ಉದ್ಘಾಟನೆಗೊಳ್ಳಲಿದ್ದು, ಆ ಬಳಿಕ ಹೊಸ ಪಿನ್ ಕೋಡ್ ಆಗಿ 574162 ಆಗಿರುತ್ತದೆ ಎಂದು ಮಂಗಳೂರು ಅಂಚೆ ವಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಮೊದಲು ಕುಪ್ಪೆಪದವು, ಇರುವೈಲು, ಕೊಳವೂರು ಪ್ರದೇಶಗಳು ಗಂಜಿಮಠ ಅಂಚೆ ಕಚೇರಿಯ ಬಟವಾಡೆ ವ್ಯಾಪ್ತಿಗೆ ಒಳಪಟ್ಟಿದ್ದು, ಇಲ್ಲಿಯ ಪಿನ್ ಕೋಡ್ 574144 ಆಗಿತ್ತು. ಇರುವೈಲು ಮತ್ತು ಕೊಳವೂರು ಶಾಖಾ ಅಂಚೆ ಕಚೇರಿ ವ್ಯಾಪ್ತಿಗೆ ಒಳಪಡುವ ಎಲ್ಲ ಪ್ರದೇಶಗಳು […]

Continue Reading

ರಿವಾಲ್ವರ್ ಮಿಸ್ ಫೈರಿಂಗ್.. ಕಾಂಗ್ರೆಸ್ ಮುಖಂಡಗೆ ಗಾಯ. ಆಸ್ಪತ್ರೆಗೆ ದಾಖಲು..

ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ ಅಚಾನಕ್ಕಾಗಿ ಸಿಡಿದು ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿ ಗಾಯಗೊಂಡಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮಾಜಿ ಇಂಟಕ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿಯವರು ಇತ್ತೀಚೆಗಷ್ಟೇ ತನ್ನ ಆತ್ಮರಕ್ಷಣೆಗಾಗಿ ಪರವಾನಗಿ ಪಡೆದು ರಿವಾಲ್ವರ್ ಇಟ್ಟುಕೊಂಡಿದ್ದರು. ಇಂದು ವಿಟ್ಲ ಠಾಣಾ ವ್ಯಾಪ್ತಿಯ ಅನಂತಾಡಿ ಬಳಿ ತನ್ನದೇ ರಿವಾಲ್ವರ್ ನ ಗುಂಡು ಆಕಸ್ಮಿಕವಾಗಿ ಸಿಡಿದು ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಅನಂತಾಡಿಗೆ ಯಾವ ಉದ್ದೇಶಕ್ಕಾಗಿ ಬಂದಿದ್ದಾರೆಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ. ಗಾಯಾಳು […]

Continue Reading

ಅಘೋರಿಗಳ ನಿಗೂಢ ಜಗತ್ತು.!ಶವ ಸಂಭೋಗ, ಮೃತದೇಹಗಳ ಮಾಂಸ ಸೇವನೆ..’ಅಘೋರಿ’ ರಹಸ್ಯ..!

ಅಘೋರಿಗಳ ನಿಗೂಢ ಜಗತ್ತಿನಲ್ಲಿ ಎಷ್ಟೇ ಅಧ್ಯಯನ ಮಾಡಿದರೂ ಅವರ ಕುರಿತು ಸಂಪೂರ್ಣವಾಗಿ ತಿಳಿಯಲು ಆಗುವುದಿಲ್ಲ. ಅಗೆದಂತೆ ಹೆಚ್ಚು ರಹಸ್ಯಗಳು ಮತ್ತು ರೋಚಕತೆಗಳು ಹೊರಬರುತ್ತವೆ. ದೇಹವನ್ನು ಬೂದಿಯಿಂದ ಮುಚ್ಚಿಕೊಳ್ಳುವ ಅಘೋರಿಗಳು ಕೆಲವೊಮ್ಮೆ ಮೃತ ದೇಹಗಳ ಮಾಂಸವನ್ನು ತಿನ್ನುತ್ತಾರೆ, ಇನ್ನೂ ಕೆಲವೊಮ್ಮೆ ಅವುಗಳೊಂದಿಗೆ ಸಂಭೋಗಿಸುತ್ತಾರೆ ಎಂದು ಹೇಳಲಾಗುತ್ತದೆ. ಅಘೋರಿಗಳ ಆಚರಣೆ ತುಂಬಾ ವಿಭಿನ್ನವಾಗಿದೆ. ಹಾಗಾಗಿ ಇದರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಏಕೆಂದರೆ ಅವರ ಜೀವನ, ಜೀವನ ಪರಿಸ್ಥಿತಿಗಳು ಮತ್ತು ಅವರು ಏನು ಮಾಡುತ್ತಾರೆ ಎಂಬುದು ನಿಗೂಢವಾಗಿದೆ. ಅಘೋರಿ ಎಂದರೆ […]

Continue Reading