ಅನಿವಾಸಿ ಉದ್ಯಮಿ ಹಾಜಿ ಅಬ್ದುಲ್ ಸಲಾಂ ಕೊಲೆ ಪ್ರಕರಣ: ಆರು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಘೋಷಿಸಿದ ನ್ಯಾಯಾಲಯ

ಅನಿವಾಸಿ ಉದ್ಯಮಿ ಅಬ್ದುಲ್ ಸಲಾಂ ಹಾಜಿ ಕೊಲೆಗೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 1.50 ಲಕ್ಷ ರೂಪಾಯಿ ದಂಡ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಕಾಸರಗೋಡು ಮೊಗ್ರಾಲ್ ಪೆಟ್ಟಾಡಿ ಮೂಲೆಯ ನಿವಾಸಿ ಹಾಜಿ ಅಬ್ದುಲ್ ಸಲಾಂ ಅವರನ್ನು 2017 ಏಪ್ರಿಲ್ 30 ರಂದು ಮಾಲಿಯಂಗರ ಕೋಟೆ ಸಮೀಪ ಕೊಲೆಗೈಯ್ಯಲಾಗಿತ್ತು. ಅವರ ಜೊತೆಗಿದ್ದ ನೌಶಾದ್ ಎಂಬಾತ ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದ. ಅಬ್ದುಲ್ ಸಲಾಂ ಜೊತೆಗಿದ್ದವರು ಸಿದ್ದೀಕ್ […]

Continue Reading

ವಿಜಯೇಂದ್ರ ಸೇಫ್ಟಿಗೆ ನಡ್ಡಾ ಬರುತ್ತಿದ್ದಾರೆ. ವಿಜಯೇಂದ್ರ ಅವರಿಗೆ ಶಹಭಾಷ್ ಗಿರಿ ಕೊಟ್ಟ ಮೋದಿ

ಪಕ್ಷ ಸಂಘಟನೆಯಲ್ಲಿ ಕರ್ನಾಟಕದ ಬಿಜೆಪಿ ದೇಶದಲ್ಲೇ ನಾಲ್ಕನೇ ಸ್ಥಾನ ಪಡೆದಿದೆಯಂತೆ. ಕರ್ನಾಟಕದಲ್ಲಿ ಬಿಜೆಪಿಗೆ ಅಧಿಕಾರ ಇಲ್ಲದಿದ್ದರೂ, ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮಾದರಿಯಂತೆ ಕಳೆದ ವಾರ ದಿಲ್ಲಿಗೆ ಹೋದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷ ಸಂಘಟನೆಗಾಗಿ ತಾವು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಅವರು ವಿವರಿಸಿದ್ದಾರೆ. ಹೀಗೆ ವಿಜಯೇಂದ್ರ ಅವರು ಹೇಳಿದ್ದನ್ನು ಸಮಾಧಾನದಿಂದ ಕೇಳಿಸಿಕೊಂಡ ಪ್ರಧಾನಿ ಮೋದಿಯವರು ವೆರಿಗುಡ್ ಎಂದಿದ್ದಾರೆ. ಕಾರಣ.? ಕರ್ನಾಟಕದಲ್ಲಿ ಪಕ್ಷ ಸಂಘಟನೆಗಾಗಿ ವಿಜಯೇಂದ್ರ ಅವರು […]

Continue Reading

ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಅರಣ್ಯ ಸಚಿವರ ಬೇಟಿ, ಸಮಸ್ಯೆಗಳನ್ನು ಬಗೆಹರಿಸಲು ಮನವಿ

ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯದ ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಿದರು. ಅರಣ್ಯ ಮತ್ತು ಕಂದಾಯ ಜಮೀನಿನ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸಬೇಕು, ಜಂಟಿ ಸರ್ವೇ ನಡೆಸಿ, ಕೃಷಿ ಚಟುವಟಿಕೆಗಳನ್ನು ನಡೆಸಿರುವ ಅರಣ್ಯವಾಸಿಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಗಳನ್ನು ಇತ್ಯರ್ಥಪಡಿಸಿ ಹಕ್ಕುಪತ್ರ ವಿತರಣೆ ಮಾಡಬೇಕು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ […]

Continue Reading

ಮಂಗಳೂರು ಕಮೀಷನರ್ ಅಗ್ರವಾಲ್ ಅಮಾನತಿಗೆ ಹೆಚ್ಚಿದ ಒತ್ತಡ : ಜಂಟಿ ವೇದಿಕೆಯಿಂದ ಬೃಹತ್ ಧರಣಿ

ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಅಮಾನತಿಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕಮೀಷನರ್ ಅಗ್ರವಾಲ್ ಅಮಾನತು ಗೊಳಿಸಬೇಕು, ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದಿನಂತ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ದ.‌ಕ‌. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳು ಇಂದು ಹಮ್ಮಿಕೊಂಡಿದ್ದ “ಸಾಮೂಹಿಕ ಧರಣಿ” ಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಸಂಘಟನೆಗಳ ನೂರಾರು ಕಾರ್ಯಕರ್ತರು ಪಾಲ್ಗೊಂಡರು. ಕಮೀಷನರ್ ಅಮಾನತಿಗೆ ಬಲವಾಗಿ ಆಗ್ರಹಿಸಿದರು. ಸಾಮೂಹಿಕ ಧರಣಿಯನ್ನು […]

Continue Reading

ಕುಂದಾಪುರ: ಖಾಸಗಿ ಶಾಲಾ ಬಸ್ಸಿಗೆ ಗಾಳಿ ತುಂಬುವಾಗ ಟಯರ್ ಸ್ಪೋಟ..!!

ಗಾಳಿಯಲ್ಲಿ ಹಾರಾಡಿ ಕೆಳಕ್ಕೆ ಬಿದ್ದ ಯುವಕ ಅಬ್ದುಲ್ ರಜೀದ್ ಗೆ ಗಂಭೀರ ಗಾಯ ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ.ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟಯರ್ ಸಿಡಿದಿದೆ. ಟಯರ್ ಗಾಳಿ ತುಂಬಿಸುತ್ತಿದ್ದ ಅಬ್ದುಲ್ ರಜೀದ್ (19) ಗಾಯಗೊಂಡ ಯುವಕ. ಖಾಸಗಿ ಶಾಲೆ ಬಸ್ಸೊಂದರ ಟಯರ್ ಪ್ಯಾಚ್ ಗೆಂದು ಬಂದಿದ್ದು, ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ […]

Continue Reading

ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಪರಿಣಾಮ

ರಾಜ್ಯದಲ್ಲಿಯೂ ಭಾರಿ ಮಳೆ ಸಾಧ್ಯತೆ.! ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲೂ ಮಳೆ ನಿರೀಕ್ಷೆ ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹೇಳಿದೆ. ವಾಯುಭಾರ ಕುಸಿತವು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯಕ್ಕೆ ಚಲಿಸಿದೆ. ಚೆನ್ನೈನ ಪೂರ್ವ-ಈಶಾನ್ಯಕ್ಕೆ ಸುಮಾರು 450 ಕಿ.ಮೀ. […]

Continue Reading

ಮಮ್ತಾಜ್‌ ಅಲಿ ಕುಟುಂಬಸ್ಥರು ಸುಪ್ರೀಂ ಮೊರೆ. ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಜನವರಿ 9 ರ ವರೆಗೆ ಮುಂದೂಡಿಕೆ

ಮಾಜಿ ಶಾಸಕ ಮೊದೀನ್‌ ಬಾವಾ ಅವರ ಸಹೋದರ, ಉಧ್ಯಮಿ ಮಮ್ತಾಜ್‌ ಅಲಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಮೇರೆಗೆ ಬಂಧಿಸಲ್ಪಟ್ಟಿರುವ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ 2025 ಜನವರಿ 9 ರ ವರೆಗೆ ಮುಂದೂಡಿದೆ. ಇದರಿಂದಾಗಿ ಆರೋಪಿಗಳ ನ್ಯಾಯಾಂಗ ಬಂಧನವು ಮುಂದುವರಿಯಲಿದೆ. ಆಯೇಷಾ, ಗಂಡ ಶೋಹೆಬ್‌, ಅಬ್ದುಲ್ ಸತ್ತಾರ್‌ ಸಹಿತ ಇತರರು ಸೇರಿ ಹಣಕ್ಕಾಗಿ ಹನಿ ಟ್ರ್ಯಾಪ್‌ ಮಾಡಿ ಮುಮ್ತಾಝ್ ಅಲಿಯನ್ನು ಆತ್ಮಹತ್ಯೆಗೈಯ್ಯುವಂತೆ ಮಾಡಿದ್ದರು ಎಂದು ಕುಟುಂಬಸ್ಥರು ಕಾವೂರು ಪೊಲೀಸ್‌ ಠಾಣೆಯಲ್ಲಿ […]

Continue Reading

ಮಲ್ಪೆ ವಾಸುದೇವ ಸಾಮಗ ಸಂಸ್ಮರಣೆ, ಪ್ರಶಸ್ತಿ ಪ್ರದಾನ

ವಾಸುದೇವ ಸಾಮಗ ಅವರ ಬದುಕು, ಬರಹಗಳು ಯಕ್ಷಗಾನಸಕ್ತರಿಗೆ ದಾರಿದೀಪ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ವರದಿ: ಅನುಷಾ ಆಚಾರ್ ಪಳ್ಳಿ ಉಡುಪಿ : ಯಕ್ಷಗಾನಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿ ಮೇರು ಕಲಾವಿದರಾಗಿ ಮೆರೆದ ದಿ.ಮಲ್ಪೆ ವಾಸುದೇವ ಸಾಮಗ ಅವರ ಬದುಕು ಅವರು ರಚಿಸಿದ ಯಕ್ಷಗಾನ ಕೃತಿಗಳು ಯಕ್ಷಗಾನಾಸಕ್ತರಿಗೆ ದಾರಿ ದೀಪಗಳಾಗಿವೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಕುಂದಾಪುರ ತೆಕ್ಕಟ್ಟೆಯ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಯಶಸ್ವೀ […]

Continue Reading

ಗಣ್ಯರ ಹೆಸರು ಬಳಸಿ ಚಿನ್ನಾಭರಣ ಮಳಿಗೆಗೆ ಕೋಟ್ಯಾಂತರ ರೂಪಾಯಿ ವಂಚನೆ; ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯ ಬಂಧನ.

ಬಿಜೆಪಿ ಮುಖಂಡ ವರ್ತೂರ್ ಪ್ರಕಾಶ್ ಗೆ ತನಿಖೆ ಸಂಕಷ್ಟ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ. ಚಿನ್ನಾಭರಣ ಮಳಿಗೆಯಲ್ಲಿ ಗಣ್ಯರ ಹೆಸರು ಬಳಸಿಕೊಂಡು ಕೋಟ್ಯಾಂತರ ಮೌಲ್ಯದ ಆಭರಣ ಖರೀದಿಸಿ ಹಣ ಪಾವತಿಸದೆ ವಂಚಿಸಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪುಲಿಕೇಶಿನಗರ ಉಪ-ವಿಭಾಗದ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಚಿನ್ನ ಹಾಗೂ ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬಾಗಲಗುಂಟೆ ನಿವಾಸಿ ಶ್ವೇತಾಗೌಡ ಬಂಧಿತ ಆರೋಪಿ. ಕೆಲ ದಿನಗಳ ಹಿಂದೆ ಅವಿನ್ಯೂ ರಸ್ತೆಯ ನವರತ್ನ ಜ್ಯುವೆಲರ್ಸ್‌ ಮಳಿಗೆಯಲ್ಲಿ ಸುಮಾರು […]

Continue Reading

ಮಹಿಳೆಯ ಭೇಟಿಯಾಗಲು ಹೋಗಿ ಕಬಕದಲ್ಲಿ ಒದೆ ತಿಂದ ನಟೋರಿಯಸ್ ಕಾಮುಕ..

ಬೋಳಂತೂರಿನ ಆಟೋ ಚಾಲಕ ಕಿಸ್ ರಹೀಂನ ಹುಚ್ಚಾಟಕ್ಕೆ ಮಹಿಳೆಯರ ಬದುಕು ಬರ್ಬಾದ್. ಹೌದು, ಆಟೋ ಚಾಲಕರೆಂದರೆ ಜನರಿಗೆ ಪ್ರೀತಿ, ವಿಶ್ವಾಸ..ಚಾಲಕರ ಸಮಾಜಸೇವೆಗೊಂದು ಹ್ಯಾಟ್ಸಪ್ ಹೇಳಲೇಬೇಕು. ಆದರೆ ಆಟೋ ಚಾಲಕ ಬೋಳಂತೂರು ನಿವಾಸಿ ಕಿಸ್ ರಹೀಂ ಮಾತ್ರ ಆಟೋ ಚಾಲಕರ ಮೇಲಿನ ನಂಬಿಕೆ, ಪ್ರೀತಿ ಮತ್ತು ಜನತೆಯ ವಿಶ್ವಾಸಕ್ಕೆ ಕಂಠಕನಾಗಿದ್ದಾನೆ. ಆಟೋ ಚಾಲಕರ ಮಾನ-ಮರ್ಯಾದೆಯನ್ನು ಸಾರ್ವಜನಿಕ ಸಮಾಜದ ಮುಂದೆ ಹರಾಜು ಹಾಕುತ್ತಿದ್ದಾನೆ. ವರ್ಷದ ಹಿಂದೊಮ್ಮೆ ವಾಣಿಜ್ಯ ಸಂಕೀರ್ಣದ ಮೆಟ್ಟಿಲಲ್ಲಿ ನಿಂತು ಶಾಲಾ ವಿದ್ಯಾರ್ಥಿನಿಯ ಮೊಬೈಲ್ ಸಂಖ್ಯೆ ಪಡೆಯುವ ನೆಪದಲ್ಲಿ […]

Continue Reading