ರಾಜ್ಯದಲ್ಲಿ ‘ಸಿಸೇರಿಯನ್‌ ಹೆರಿಗೆ’ ಪ್ರಮಾಣದಲ್ಲಿ ಗರಿಷ್ಠ ಏರಿಕೆ.. ಪ್ರತೀ ವರ್ಷ ಶೇಕಡಾ 10 ರಷ್ಟು ಹೆಚ್ಚಳವಾಗುತ್ತಿದೆ

ನಿಯಂತ್ರಣಕ್ಕೆ ಶ್ರೀಘ್ರದಲ್ಲಿ ವಿಶೇಷ ಕಾರ್ಯಕ್ರಮ ಘೋಷಣೆ: ಆರೋಗ್ಯ ಸಚಿವ ರಾಜ್ಯದಲ್ಲಿ ಪ್ರತಿ ವರ್ಷ `ಸಿಸೇರಿಯನ್‌ ಹೆರಿಗೆ’ ಪ್ರಮಾಣ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್‌ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಯಿತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ 46% ಇದೆ. ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್‌ ಹೆರಿಗೆಗೆ ನಿಯಂತ್ರಣ ಹೇರಬೇಕಿದೆ. ಈ […]

Continue Reading

ಕೆಪಿಸಿಸಿ ಪಟ್ಟಕ್ಕೆ ಜಾರಕಿ v/s ಡಿಕೆಸು.?

ಹೊಸ ಶಕ್ತಿಯೊಂದನ್ನು ಕಟ್ಟಲು ಹಲವು ನಾಯಕರಿಂದ ಯೋಚನೆ. ✍️. ಆರ್.ಟಿ.ವಿಠ್ಠಲಮೂರ್ತಿ ಇನ್ನು ಕೆಲ ಕಾಲ ನಿಂತಿದ್ದ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸು ಪುನ: ಆರಂಭವಾಗಿದ್ದು,ಈ ಬಾರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಡಿಸಿಎಂ ಡಿಕೆಶಿ ಅವರ ಸಹೋದರ ಡಿ.ಕೆ.ಸುರೇಶ್ ಹೆಸರು ರೇಸಿನಲ್ಲಿ ಕಾಣಿಸಿಕೊಂಡಿವೆ.ಈ ಮಧ್ಯೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ರೇಸಿನಲ್ಲಿ‌ ಕಾಣಿಸಿಕೊಂಡಿದ್ದರೂ ಸತೀಶ್ ಜಾರಕಿಹೊಳಿ ಮತ್ತು ಡಿ.ಕೆ.ಸುರೇಶ್ ನಡುವಣ ಫೈಟು ಟಫ್ ಆಗಿದೆ. ಅಂದ ಹಾಗೆ ಮೊನ್ನೆ ಮೊನ್ನೆಯ ತನಕ ಕೂಲ್ ಆಗಿದ್ದ ಕೆಪಿಸಿಸಿ […]

Continue Reading

ವಿಜಯೇಂದ್ರ ಟೀಮಿಗೆ ಸರ್ಜರಿ ಫಿಕ್ಸ್. ವಿಜಯೇಂದ್ರ ಯಾಕೆ ಹಿಂದೆ ಸರಿದರು.?

ವಿಜಯೇಂದ್ರ ವಿರುದ್ಧ ಧ್ವನಿ ಎತ್ತುತ್ತಿರುವ ಯತ್ನಾಳ್ ಗ್ಯಾಂಗು ಯಾಕೆ ಮೌನವಾಗಿದೆ. ✍️. ಆರ್.ಟಿ. ವಿಠ್ಠಲಮೂರ್ತಿ ಕಳೆದ ವಾರ ದಿಲ್ಲಿಯಲ್ಲಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನದಾಸ್ ಅಗರ್ವಾಲ್ ಅವರು ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ವಿದ್ಯಮಾನಗಳ ಬಗ್ಗೆ ಅವರು ವಿವರಿಸಿದ್ದಾರೆ. ‘ಸರ್, ಕರ್ನಾಟಕದಲ್ಲಿ ಪಕ್ಷ ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಒಂದು ಸುತ್ತಿನ ಚರ್ಚೆ ನಡೆಸಿ ಬಂದಿದ್ದೇನೆ. ಅದನ್ನು ಸರಿಪಡಿಸಬೇಕೆಂದರೆ ತುರ್ತಾಗಿ ಕೆಲ ಬದಲಾವಣೆಗಳನ್ನು ಮಾಡಬೇಕು. ಮತ್ತು ನಾಯಕರಲ್ಲಿರುವ ಪ್ರತಿಷ್ಟೆಗೆ […]

Continue Reading

ಬೆಳ್ತಂಗಡಿ: ಬಾಂಜಾರು ಮಲೆಕುಡಿಯ ಸಮುದಾಯಕ್ಕೆ ಮಂಜೂರಾದ ಜಮೀನಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ ರಿಟ್ ಅರ್ಜಿ ಹಿಂಪಡೆಯುವಂತೆ ಬಿ.ಕೆ.ಹರಿಪ್ರಸಾದ್ ಒತ್ತಾಯ.

ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47ಬಡ ಕುಟುಂಬಗಳು ವಾಸಿಸುತ್ತಿವೆ. ಮಂಗಳೂರಿನ ಪ್ರಸಿದ್ಧ ಉದ್ಯಮಿ ಯೆನೆಪೋಯ ಮೊಯ್ದೀನ್ ಕುಂಞಿ ಮತ್ತು ಕಂಪನಿಯು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ 4028 ಎಕರೆ ಜಮೀನು ಹೊಂದಿದೆ. ಇದರಲ್ಲಿ 368ಎಕರೆ ಜಮೀನು ಹೆಚ್ಚುವರಿಯಾಗಿ ಹೊಂದಿರುವುದನ್ನು ಬೆಳ್ತಂಗಡಿ ಭೂ ನ್ಯಾಯ ಮಂಡಳಿಯು ತೀರ್ಪು ನೀಡಿದೆ. ಭೂನ್ಯಾಯ ಮಂಡಳಿಯ ತೀರ್ಪಿನ ವಿರುದ್ಧ ಭೂಮಾಲಿಕರ ಸಂಸ್ಥೆ ಮತ್ತು ರಾಜ್ಯ ಸರ್ಕಾರವು ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ರಿಟ್ ಅರ್ಜಿಗಳನ್ನು ವಜಾಗೊಳಿಸಿ ಭೂ […]

Continue Reading

ಹಳ್ಳಿ ಗದ್ದುಗೆಗೆ ಇನ್ನೂ ‘ಪಕ್ಷ’ ಅಧಿಕೃತ.. ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆಗಳಡಿ ಅಭ್ಯರ್ಥಿಗಳ ಸ್ಪರ್ಧೆಗೆ ರಾಜ್ಯ ಸರ್ಕಾರ ಚಿಂತನೆ

ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳ ಚಿಹ್ನೆಗಳಡಿ ಅಭ್ಯರ್ಥಿಗಳ ಸ್ಪರ್ಧೆಗೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮೂರು ದಶಕಗಳ ಹಿಂದೆ ರಾಜಕೀಯ ಪಕ್ಷಗಳ ಚಿಹ್ನೆಗಳನ್ನು ಬಳಸಿಕೊಳ್ಳಲಾಗುತ್ತಿತ್ತು. ಕರ್ನಾಟಕದಲ್ಲಿ ಮೊದಲ ಬಾರಿ 1987ರಲ್ಲಿ ನಡೆದಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಆ ಬಳಿಕ ರೂಪಿಸಿದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿ ನಿಯಮ-1993ರ ಪ್ರಕಾರ ರಾಜಕೀಯ ಪಕ್ಷಗಳ ಚಿಹ್ನೆ ಬಿಟ್ಟು ಚುನಾವಣೆ ನಡೆಸಲು ನಿಯಮ […]

Continue Reading

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಅವಮಾನ, ಶಿಕ್ಷಣ ಪ್ರೇಮಿಗಳಿಂದ ಬಾರೀ ಆಕ್ರೋಶ.

ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ 91 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶಾಲೆಯ ಹಳೆವಿದ್ಯಾರ್ಥಿಗಳು ಸಂಘಟಿಸಿದ ಆಟೋಟ ಸ್ಪರ್ದೆಯ ವಿಜೇತರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಇದರ ಅಂಗವಾಗಿ 55 ಕೆ‌.ಜಿ.ವಿಭಾಗದ ಕಬಡ್ಡಿ ಪಂದ್ಯಾಕೂಟದ ವೇದಿಕೆಯಲ್ಲಿ ಈ ಅವಮಾನದ ಘಟನೆ ಸಂಭವಿಸಿದೆ.ಅತಿಥಿಗಳು ವೇದಿಕೆಯಲ್ಲಿ ತುಂಬಿ ತುಳುಕಿದ ಕಾರಣ ಸಂಘಟಕರು ಶಿಷ್ಟಾಚಾರವನ್ನು ಪಾಲಿಸದೆ ಬೇಕಾಬಿಟ್ಟಿ ಕಾರ್ಯಕ್ರಮ ನಡೆಸಿದ್ದೆ ಎಡವಟ್ಟಿಗೆ ಕಾರಣವಾಗಿದೆ. ವೇದಿಕೆಯಲ್ಲಿ ಸಮಾಜಘಾತುಕರು, ಕ್ರಿಮಿನಲ್ ಹಿನ್ನೆಲೆಯಲ್ಲಿ ಉಳ್ಳವರನ್ನು ಹಣದಾಸೆಗಾಗಿ ಸನ್ಮಾನ ಎಂಬ ಪೋಟೋ […]

Continue Reading

ಮಂಗಳೂರಿನಿಂದ ಜೋಗಕ್ಕೆ ಟೂರ್ ಹೊರಟಿದ್ದ ಖಾಸಗಿ ಬಸ್ ಪಲ್ಟಿ: 15 ಮಂದಿಗೆ ಗಂಭೀರ ಗಾಯ

ಬಸ್ಸಿನಲ್ಲಿ 55 ಮಂದಿ ಹೆಚ್ಚು ಪ್ರಯಾಣಿಕರಿದ್ದರು.. ಗಾಯಾಳುಗಳು ಬಂಟ್ವಾಳ ದವರೆಂದು ಪ್ರಾಥಮಿಕ ಮಾಹಿತಿ ಮಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರವಾಸ ಹೊರಟಿದ್ದ ಖಾಸಗಿ ಬಸ್ ವೊಂದು ಜೋಗ-ಕಾರ್ಗಲ್ ಸಮೀಪದ ಅರಳಗೋಡು ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದ್ದು, ಮಂಗಳೂರಿನಿಂದ ಜೋಗಕ್ಕೆ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿ ಸುಮಾರು 55 ಪ್ರಯಾಣಿಕರಿದ್ದು 15 ಜನರಿಗೆ ತೀವ್ರತರವಾದ ಗಾಯವಾಗಿದ್ದು, ಗಾಯಾಳುಗಳನ್ನು ಕಾರ್ಗಲ್ ಆಸ್ಪತ್ರೆಗೆ ಹಾಗೂ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳದ ನಿವಾಸಿಗಳೆಂದು […]

Continue Reading

ರಾಜ್ಯದಲ್ಲಿ 20 ಸಾವಿರ ಜನಸಂಖ್ಯೆ ಮೇಲ್ಪಟ್ಟ ಗ್ರಾಮ ಪಂಚಾಯತಿಗಳಿಗೆ ಮಾತ್ರ ಪಟ್ಟಣ ಪಂಚಾಯತಿ ಭಾಗ್ಯ.!

ಸರಕಾರದ ಬಳಿ 50 ಕ್ಕೂ ಹೆಚ್ಚು ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆ ಮೇಲ್ದರ್ಜೆಗೆ ಪ್ರಸ್ತಾವನೆ ಇದೆ: ನಗರಾಭಿವೃದ್ಧಿ ಸಚಿವರು ರಾಜ್ಯದ ವಿವಿಧ ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳನ್ನಾಗಿ, ಪಟ್ಟಣ ಪಂಚಾಯತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ 50 ಕ್ಕೂ ಹೆಚ್ಚು ಪ್ರಸ್ತಾವನೆಗಳು ರಾಜ್ಯ ಸರಕಾರದ ಮುಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆದರೆ 2011 ರ ಜನಗಣತಿಯ ಆಧಾರ 20,000 ಕ್ಕೂ ಅಧಿಕ […]

Continue Reading

ಕೋವಿಡ್ ವೇಳೆ ಹೈಕೋರ್ಟ್ ಆದೇಶಕ್ಕೆ ಡೋಂಟ್ ಕೇರ್.. ದುಪ್ಪಟ್ಟು ಡೊನೇಷನ್ ಪೀಕಿಸಿ ಬರೋಬ್ಬರಿ 346 ಕೋಟಿ ಲೂಟಿಗೈದ ಖಾಸಗಿ ಶಾಲೆಗಳು.!

ಆರ್ ಟಿಇ ಅಡಿಯಲ್ಲಿ ಸೇರ್ಪಡೆಯಾದ ಮಕ್ಕಳಿಂದಲೂ ಶುಲ್ಕ ಸಂಗ್ರಹ.. ಸಿಎಜಿ ವರದಿಯಲ್ಲಿ ಬಹಿರಂಗ..ಸರಕಾರ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಹಾಮಾರಿ ಕೋವಿಡ್ ಸಾಮಾನ್ಯ ಜನತೆಗೆ ಸಂಕಷ್ಟ ತಂದೊಡ್ಡಿದ್ದರೆ, ಇದನ್ನೇ ಬಂಡವಾಳ ಮಾಡಿಕೊಂಡು ದುಡ್ಡು ಲೂಟಿಗೈದವರೂ ಇದ್ದಾರೆ. ಇದಕ್ಕೊಂದು ಸ್ಪಷ್ಟ ನಿದರ್ಶನ ಎಂಬಂತೆ ಕೋವಿಡ್ ಸಂಕಷ್ಟದ ಸಮಯದಲ್ಲಿ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬರೋಬ್ಬರಿ 346 ಕೋಟಿ ರೂಪಾಯಿ ಲೂಟಿಗೈದಿರುವುದಾಗಿ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ಬೆಳಕು ಚೆಲ್ಲಿದೆ. ಕೋವಿಡ್ ಸಂದರ್ಭದಲ್ಲಿ […]

Continue Reading

ವಿಟ್ಲ: ಗ್ಯಾಸ್ ಹಂಡೆ ಕಳ್ಳತನ; ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ನಟೋರಿಯಸ್ ಗ್ಯಾಸ್ ಅಂಡೆ ಕಳ್ಳ ಅಚ್ಚುಕು. ಮತ್ತೊಬ್ಬ ಅಶ್ರಫ್ ಪರಾರಿ.

ಹೌದು, ಪೊಲೀಸರು ಕರ್ತವ್ಯದಲ್ಲಿ ಒಂದಿಷ್ಟು ನಿರ್ಲಕ್ಷ್ಯ ತೋರುತ್ತಾ ಎಡವಿದರೆ ಠಾಣಾ ಸರಹದ್ದು ಏನಾಗುತ್ತದೆ ಎಂಬುದಕ್ಕೆ ವಿಟ್ಲ ಠಾಣಾ ವ್ಯಾಪ್ತಿಯ ಉರಿಮಜಲು, ಅಳಕೆಮಜಲು, ಇಡ್ಕಿದು ಪರಿಸರ ಸಾಕ್ಷಿಯಾಗಿದೆ. ಪದೇ ಪದೇ ಕಳ್ಳತನ, ಗಾಂಜಾ, ಎಂಡಿಎಂಎ ಸೇರಿದಂತೆ ಅಪರಾಧ ಕೃತ್ಯಗಳಲ್ಲಿ ಅಳಕೆಮಜಲು, ಉರಿಮಜಲು ಪರಿಸರ ಕುಖ್ಯಾತಿ ಪಡೆದಿದೆ. ಇಂದು ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಹಡೀಲು ಎಂಬಲ್ಲಿ ಮನೆ ಮುಂದೆ ಇಟ್ಟಿದ್ದ ಗ್ಯಾಸ್ ಹಂಡೆಯನ್ನು ಹಾಡಹಗಲಲ್ಲೇ ಕದ್ದು ಆಟೋದಲ್ಲಿ ಎಸ್ಕೇಪ್ ಆಗಿದ್ದಾರೆ. ಗ್ಯಾಸ್ ವಿತರಕರು ಬಂದಾಗ ಹಂಡೆ ಮಾಯವಾಗಿದೆ. […]

Continue Reading