ಶಕ್ತಿನಗರ ಜನರಿಗೂ ಸಿಕ್ತು ‘ಶಕ್ತಿ’ಯ ಖುಷಿ..! ಭಗೀರಥ ಪ್ರಯತ್ನದ ನಂತರ ಬಂದ ಸರ್ಕಾರಿ ಬಸ್ ಕಂಡು ಜನ ಫುಲ್ ಖುಷ್..

ಮಂಗಳೂರು: ಬಂದರು ನಗರಿ ಮಂಗಳೂರಿನ ಶಕ್ತಿನಗರದ ಜನರಲ್ಲಿ ಎಂದಿಲ್ಲದ ಹರ್ಷ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಗ್ಯಾರೆಂಟಿ ಯೋಜನೆ ರಾಜ್ಯದ ಎಲ್ಲೆಡೆ ಮಹಿಳೆಯರ ಪಾಲಿಗೆ ಆಶಾಕಿರಣವಾದರೆ, ಖಾಸಗಿ ಬಸ್’ಗಳ ಪ್ರಾಬಲ್ಯವಿರುವ ದಕ್ಷಿಣ ಕನ್ನಡದ ಬಹುತೇಕ ಊರುಗಳ ಮಹಿಳೆಯರಿಗೆ ನಿಲುಕದ ಕುಸುಮದಂತಿದೆ. ಇಂತಹಾ ಸ್ಥಿತಿಯನ್ನು ಮನಗಂಡ ಸಾಮಾಜಿಕ ಹೋರಾಟಗಾರರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್ ಅವರ ಕಾಳಜಿಯಿಂದ ಮಂಗಳೂರು ಸುತ್ತಮುತ್ತಲ ಗ್ರಾಮಗಳಲ್ಲಿ ಸರ್ಕಾರಿ ಬಸ್ ಸಂಚರಿಸುವಂತಾಗಿದೆ. ಮಂಗಳೂರಿನ ಶಕ್ತಿನಗರ ಅನನ್ಯ ಸಂಭ್ರಮಕ್ಕೆ ಸಾಕ್ಷಿಯಾಯಿತು. ಶಕ್ತಿನಗರ ಪದವು […]

Continue Reading

ಪೊಲೀಸ್ ಕಮೀಷನರ್ ವರ್ಗಾವಣೆ ಅಸಾಧ್ಯವಾದರೆ ಜಿಲ್ಲಾಡಳಿತದ ಕಾರ್ಯಕ್ರಮಗಳಿಗೆ ಮುತ್ತಿಗೆ; ಯೋಗೀಶ್ ಜಪ್ಪಿನಮೊಗರು ಎಚ್ಚರಿಕೆ

ಮಂಗಳೂರು ನಗರದ ಪೊಲೀಸ್‌‌ ಕಮೀಷನರ್ ವಿನಾ ಕಾರಣ ಹೋರಾಟಗಾರರ ಮೇಲೆ ಎಫ್ಐಆರ್ ದಾಖಲಿಸುವ, ಪ್ರತಿಭಟನೆಯ ಹಕ್ಕನ್ನು ನಿರಾಕರಿಸುತ್ತಿರುವುದು ಸಂವಿಧಾನ ವಿರೋಧಿ ಮತ್ತು ಈ ನೆಲದ ಕಾನೂನು ವಿರೋಧಿ ನಡೆಯಾಗಿದೆ ಇಂತಹ ವರ್ತನೆ ಬದಲಾಯಿಸದಿದ್ದರೆ ಕಮೀಷನರ್ ಅಗ್ರವಾಲರು ಮಂಗಳೂರಿಗೆ ಬೇಕಾಗಿಲ್ಲ ಕೂಡಲೇ ವರ್ಗಾಯಿಸಲು ಕ್ರಮಕೈಗೊಳ್ಳಿ ಇಲ್ಲವೆಂದಾದರೆ ಜಿಲ್ಲಾಡಳಿತ ಕಾರ್ಯಕ್ರಮಗಳಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಎಚ್ಚರಿಸಿದರು. ಅವರು ಇಂದು ಡಿವೈಎಫ್ಐ ಸಿಪಿಐಎಂ ಬಜಾಲ್ ವಿಭಾಗ ಸಮಿತಿ ನೇತೃತ್ವದಲ್ಲಿ ನಗರದ ಪಂಪ್ವೆಲ್ […]

Continue Reading

ಮಣಿಪಾಲ: ಬಿಯರ್ ಬಾಟಲಿಯಿಂದ ಇರಿದು ಹೊಟೇಲ್ ಕಾರ್ಮಿಕನ ಕೊಲೆ..!

ಮಣಿಪಾಲ: ಲಕ್ಷ್ಮೀಂದ್ರನಗರದ ಬಳಿಯ ಮುಖ್ಯ ರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಇರಿದು ಹತ್ಯೆಗೈದ ಘಟನೆ ಡಿ. 6 ರಂದು ಶುಕ್ರವಾರ ನಡೆದಿದೆ. ಕೊಲೆಯಾದ ಹೋಟೆಲ್ ಕಾರ್ಮಿಕನನ್ನು ಕೇರಳದ ಕಾಸರಗೋಡು ನಿವಾಸಿ ಶ್ರೀಧರ ನಾಯಕ್ (38) ಎಂದು ಗುರುತಿಸಲಾಗಿದೆ. ಈತ ಮಣಿಪಾಲ ಈಶ್ವರನಗರದ ಹೊಟೇಲ್ ಒಂದರ ಕುಕ್ ಎಂದು ತಿಳಿದುಬಂದಿದೆ. ಬೆಳಿಗ್ಗೆ 6ಗಂಟೆ ಸುಮಾರಿಗೆ ಮೂರರಿಂದ ನಾಲ್ಕು ಮಂದಿಯ ತಂಡ ಹೊಡೆದಾಟ ನಡೆಸುತ್ತಿದ್ದರು. ಗಲಾಟೆ ವಿಕೋಪಕ್ಕೆ ತಿರುಗಿದಾಗ ಶ್ರೀಧರ್ ಅವರ ಕುತ್ತಿಗೆಗೆ ಬಿಯರ್ […]

Continue Reading

ರಂಜಾನ್ 25 ಶುಕ್ರವಾರ ಉದ್ಯಮಿಗೆ ಖೆಡ್ಡಾ ತೋಡಿ 596 ಪವನ್ ಚಿನ್ನಾಭರಣ ಲೂಟಿದ ಮಾಟಗಾತಿ ಜಿನ್ನುಮ್ಮ!

ಹನಿಟ್ರ್ಯಾಪ್, ಮಾಟ ಮಂತ್ರದಲ್ಲಿ ನಿಸ್ಸೀಮಳು ಈಕೆ ಭಾರೀ ಸಂಚಲನ ಸೃಷ್ಟಿಸಿದ ಪ್ರಕರಣ.. ಆರೋಪಿಗಳು ಅಂದರ್ ಗಲ್ಫ್ ರಾಷ್ಟ್ರಗಳಲ್ಲಿ ಹಲವಾರು ಸೂಪರ್ ಮಾರ್ಕೆಟ್ ಗಳು ಮತ್ತು ಇತರ ಉದ್ಯಮಗಳನ್ನು ಹೊಂದಿದ್ದ ಅನಿವಾಸಿ ಉದ್ಯಮಿ ಕಾಸರಗೋಡು ಫಾರೂಖಿಯ ನಿವಾಸಿ ಎಂ.ಸಿ ಅಬ್ದುಲ್ ಗಫೂರ್ ಹಾಜಿ ಏಪ್ರಿಲ್ 14, 2023 ರಂದು ಮುಂಜಾನೆ ಅವರ ಮನೆಯ ಮಲಗುವ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅದು ಮುಸ್ಲಿಮರ ಪವಿತ್ರ ಮಾಸ ರಂಜಾನ್ 25 ನೇ ಶುಕ್ರವಾರದ ದಿನವಾಗಿತ್ತು. ರಂಜಾನ್ ತಿಂಗಳಾಗಿದ್ದರಿಂದ ಅದು ಸಹಜ ಸಾವು […]

Continue Reading

ಸರ್ಕಾರಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು. ಬಂಟ್ವಾಳ ಸಮೀಪದ ವಗ್ಗ ಬಳಿ ಘಟನೆ.

ಬಂಟ್ವಾಳ-ಗುರುವಾಯನಕೆರೆ ರಸ್ತೆಯ ವಗ್ಗ ಸಮೀಪ ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ರಾಜೇಂದ್ರಪೂಜಾರಿ (45) ಮೃತ ಬೈಕ್ ಸವಾರ. ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ರಾಜೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಆಗಮಿಸಿ […]

Continue Reading

ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ ? – ಸುನೀಲ್ ಕುಮಾರ್ ಬಜಾಲ್

ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಐಎಂ ಉಳ್ಳಾಲ ತಾಲೂಕು ಸಮಿತಿ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ರವರು ಸ್ಪೀಕರ್ ನಡೆಯನ್ನು ಪ್ರಶ್ನಿಸಿದರು. ಅವರು ಇಂದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಮಟ್ಕಾ,, ಜುಗಾರಿ, ಸ್ಕಿಲ್ ಗೇಮ್, […]

Continue Reading

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ; ತಲೆಮರೆಸಿಕೊಂಡ ಆರೋಪಿಗಳ ಮನೆಗೆ NIAದಾಳಿ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮನೆಗಳಿಗೆ NIAತಂಡ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಿದೆ. ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಪೊಯ್ಯಗದ್ದೆ ಎಂಬಲ್ಲಿನ ನೌಷಾದ್(27) ಮನೆಗೆ ಇಂದು ಬೆಳಗ್ಗೆ NIA ತಂಡ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ನೌಷಾದ್ ಪತ್ತೆಗಾಗಿ ಈಗಾಗಲೇ ಸುಳಿವು ನೀಡಿದವರಿಗೆ ಎನ್.ಐ.ಎ. 2ಲಕ್ಷ ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಮತ್ತೋರ್ವ ತಲೆಮರೆಸಿಕೊಂಡ ಆರೋಪಿ ಅಬೂಬಕ್ಕರ್ ಸಿದ್ದೀಕ್ ಎಂಬಾತನ ಪತ್ನಿ ಮತ್ತು ಸಹೋದರನ […]

Continue Reading

ಗುರುಪುರ: ಹೆಜ್ಜೇನು ದಾಳಿಗೆ ಮೂವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಗುರುಪುರ ಮಠದಬೈಲಿನಲ್ಲಿ ಹೆಜ್ಜೇನು ದಾಳಿ ನಡೆಸಿ ಮೂವರು ಗಂಭೀರ ಗಾಯಗೊಂಡು, ಇಬ್ಬರಿಗೆ ಸಾಮಾನ್ಯ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಮಠದಬೈಲಿನ ಬೇಬಿ ಎಂಬವರು ಮನೆಯಂಗಳದಲ್ಲಿ ಇದ್ದ ವೇಳೆ ಹೆಜ್ಜೇನು (ಪೆರಿಯ) ಗುಂಪೊಂದು ದಾಳಿ ಮಾಡಿದೆ; ನೋವಿನಿಂದ ಕಿರುಚುತ್ತಾ ಹತ್ತಿರದ ರಸ್ತೆಗೆ ಓಡಿ ಬಂದ ವೇಳೆ ಅವರ ನೆರವಿಗೆ ಬಂದ ಗಣೇಶ್ ಮೇಲೆಯೂ ಹೆಜ್ಜೇನು ಎರಗಿದೆ. ಇವರಿಬ್ಬರು ತಪ್ಪಿಸಿಕೊಳ್ಳಲು ರಸ್ತೆಯಲ್ಲಿ ಓಡಾಡುತ್ತಿದ್ದ ಸಂದರ್ಭ ಇವರ ನೆರವಿಗೆ ಬಂದ ಶೋಧನ್ ರವರ ಮೇಲೂ ದಾಳಿ ಮಾಡಿದೆ. ಹೆಜ್ಜೇನು ದಾಳಿಯಿಂದ […]

Continue Reading

ಗೋವುಗಳ ಕಳ್ಳಸಾಗಾಟ ಸುಳ್ಳು ಆರೋಪ; ಪೊಲೀಸ್‌ ಸಿಬ್ಬಂದಿ ಸೇರಿ ಗೋ ರಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನ್ಯಾಯಾಲಯ ಆದೇಶ

ಗೋವುಗಳ ಕಳ್ಳಸಾಗಾಟ ನಡೆಸುತ್ತಿದ್ದಾರೆ ಎಂಬ ಸುಳ್ಳು ದೂರಿನಲ್ಲಿ ಇಬ್ಬರನ್ನು ಸಿಲುಕಿಸಿದ ಪ್ರಕರಣ ಸಂಬಂಧ ಮೂವರು ಪೊಲೀಸ್‌ ಸಿಬ್ಬಂದಿ ಮತ್ತು ‘ಗೋ ರಕ್ಷಕ’ ಸೇರಿ ಇತರ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಗುಜರಾತ್‌ನ ನ್ಯಾಯಾಲಯವೊಂದು ಆದೇಶಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪರ್ವೇಜ್‌ ಅಹಮ್ಮದ್‌ ಮಾಳವೀಯ ಅವರು ಮಂಗಳವಾರ, ಗೋವುಗಳ ಮಾಲೀಕ ಇಲಿಯಾಸ್‌ ದೇವಾಳ್‌ ಮತ್ತು ಚಾಲಕ ನಾಜಿರ್ ಮಲಿಕ್‌ ಅವರನ್ನು ಖುಲಾಸೆಗೊಳಿಸಿದರು. ಆರೋಪಿಗಳು ಗೋವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದರು ಎಂದು ಸಾಬೀತು ಮಾಡುವ ಯಾವುದೇ ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್‌ ಒದಗಿಸಿಲ್ಲ ಎಂದು […]

Continue Reading

ಕಳಪೆ ಮಟ್ಟದ ಪೀಠೋಪಕರಣ ತಯಾರಿಸಿ ಕೊಟ್ಟು ವಂಚನೆ; ಪ್ರೀತಿ ಫರ್ನಿಚರ್ ಮಾಲಕನಿಗೆ ಬಿತ್ತು ದಂಡ; ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು

ಕಳಪೆ ಮಟ್ಟದ ಪೀಠೋಪಕರಣ ತಯಾರಿಸಿ ಕೊಟ್ಟು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಸಮೀಪದ ಕಲ್ಲಂಗಲದ ಪ್ರೀತಿ ಫರ್ನಿಚರ್ ಮಾಲಕ ಸಂಜಯ್ ಕುಮಾರ್ ಗೆ 20,000 ರೂಪಾಯಿ ದಂಡ ವಿಧಿಸಿ ಮಂಗಳೂರಿನ ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ. ಕಲ್ಲಂಗಲ ನಿವಾಸಿ ಹೈದರ್ ಅಲಿ 50,000 ರೂಪಾಯಿ ಮುಂಗಡ ನೀಡಿ ಉತ್ತಮ ಗುಣಮಟ್ಟದ ತೇಗದ ಮರದಿಂದ ಮನೆಗೆ ಪೀಠೋಪಕರಣವನ್ನು ತಯಾರಿಸಲು ಸೂಚಿಸಿದ್ದರು. ನಿಗದಿತ ಸಮಯಕ್ಕೆ ಪೀಠೋಪಕರಣ ತಯಾರಿಸದೆ ಕಳಪೆ ಗುಣಮಟ್ಟದ ಪೀಠೋಪಕರಣಗಳನ್ನು ಪೂರೈಸಿದ ಬಗ್ಗೆ ಹೈದರ್ ಅಲಿ ನ್ಯಾಯಾಲಯಕ್ಕೆ […]

Continue Reading