ಉಪಚುನಾವಣೆಯಲ್ಲಿ ಕೈ ಹಿಡಿದ ಮುಸ್ಲಿಂ ಸಮುದಾಯಕ್ಕೆ ಸಿಗುತ್ತಾ ಮಂತ್ರಿ ಭಾಗ್ಯ.?

ಕ್ಯೂ ನಲ್ಲಿದ್ದಾರೆ ಆಸೀಫ್ ಸೇಠ್..ಕೈ ಹಿಡಿಯುತ್ತಾ.? ಕೈ ಕೊಡುತ್ತಾ.? ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಕೈ ಹಿಡಿದ ಮುಸ್ಲಿಂ ಸಮುದಾಯ, ಮೊನ್ನೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಮುಸ್ಲಿಂ ಸಮುದಾಯ ಸಂಪೂರ್ಣ ಕೈ ಜೋಡಿಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಒಂಭತ್ತು ಮುಸ್ಲಿಂ ಶಾಸಕರು ಆಯ್ಕೆಯಾದರೂ,ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೋಡೆತ್ತಿನ ಸರ್ಕಾರದಲ್ಲಿ ಈಗಾಗಲೇ ಮುಸ್ಲಿಂ ಸಮುದಾಯದ ಇಬ್ಬರಿಗೆ ಕ್ಯಾಬಿನೆಟ್ ಸ್ಥಾನ ನೀಡಲಾಗಿದೆ. ಬೇರೆ ಸಮುದಾಯಕ್ಕೆ ಮಂತ್ರಿ ಪಟ್ಟ ನೀಡಿದ ಪ್ರಾತಿನಿಧ್ಯಕ್ಕೆ ಹೋಲಿಸಿದರೆ […]

Continue Reading

ಮಂಗಳೂರು ಪೊಲೀಸ್ ಕಮೀಶನರ್ ವರ್ಗಾವಣೆ ಒತ್ತಾಯಿಸಿ- ಉಡುಪಿಯಲ್ಲಿ ಸಿಪಿಐಎಂ ಮತ್ತು ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಪ್ರತಿಭಟನೆ ಧರಣಿಗಳಿಗೆ ಅನುಮತಿ ನಿರಾಕರಣೆ ಮಾಡುವುದು ,ಸಿಪಿಐಎಂ ಮುಖಂಡರ ಮೇಲೆ ಹಾಗೂ ಜನಪರ ಸಂಘಟನೆಯ ಮುಖಂಡರ ಮೇಲೆ ಮೊಕದ್ದಮೆ ಹೂಡುವುದು, ಸಂವಿಧಾನದ ಹಕ್ಕುಗಳನ್ನು ದಮನಿಸಲು ಹೊರಟ, ಬಿ.ಜೆ.ಪಿ. ಸಂಘಪರಿವಾರದ ಬೆಂಗಾವಲಾಗಿ ನಿಂತಿರುವ ಮಂಗಳೂರು ಪೊಲೀಸ್ ಕಮೀಶನರ್ ಅನುಪಮ್ ಅಗರವಾಲ್ ವರ್ಗಾವಣೆ ಒತ್ತಾಯಿಸಿ ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಒತ್ತಾಯಿಸಿಸಲಾಯಿತು. ಮುಖ್ಯಮಂತ್ರಿ ಹಾಗೂ ಗ್ರಹ ಸಚಿವರು ಕೂಡಲೆ ಸಿಪಿಐಎಂ ಮುಖಂಡರ ಮೇಲೆ ಹಾಕಿರುವ ಕೇಸನ್ನು ವಾಪಾಸು ಪಡೆಯಬೇಕು, ಅಕ್ರಮ ಮರಳುಗಾರಿಕೆ, ಬೆಟ್ಟಿಂಗ್, ಮಸಾಜ್ […]

Continue Reading

ಕೆಪಿಸಿಸಿ ಪಟ್ಟ ಯಾರಿಗೂ ಬೇಕಿಲ್ಲ.

ಸುರ್ಜೇವಾಲ ಬಗ್ಗೆ ಅನುಮಾನ ಯಾಕೆ.? ಸುರ್ಜೇವಾಲ ಮೂಲಕ ಆಟವಾಡಿದ ನಾಯಕ ಯಾರು.? ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಷಯದಲ್ಲಿ ಕುತೂಹಲಕಾರಿ ಮಾಹಿತಿಗಳು ಹೊರಬರುತ್ತಿವೆ. ಅದರ ಪ್ರಕಾರ, ಈ ಪಟ್ಟಕ್ಕೇರುವ ವಿಷಯದಲ್ಲಿ ತುಂಬ ನಾಯಕರು ಹಿಂದೇಟು ಹೊಡೆಯುತ್ತಿದ್ದಾರೆ. ಕೆಲವೇ ಕಾಲದ ಹಿಂದೆ ಡಿಕೆಶಿ ನಂತರ ಈ ಪಟ್ಟಕ್ಕೆ ಬರುವವರು ಯಾರು?ಎಂಬ ಪ್ರಶ್ನೆ ಕೇಳಿದಾಗ ಹಲ ನಾಯಕರು ಉತ್ಸಾಹ ತೋರಿಸಿದ್ದರು. ಆದರೆ ಇತ್ತೀಚೆಗೆ ದಿಲ್ಲಿಗೆ ಹೋದ ಡಿಸಿಎಂ ಡಿಕೆಶಿ: ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೊಣೆಗಾರಿಕೆಯಿಂದ ನನ್ನನ್ನು ಬಿಡುಗಡೆ […]

Continue Reading

ಬಾಡಿಗೆ ಹೋಗಿದ್ದ ವಿಟ್ಲದ ಚಾಲಕ ನಾಪತ್ತೆ. ಉಪ್ಪಿನಂಗಡಿಯಲ್ಲಿ ಅನಾಥ ಸ್ಥಿತಿಯಲ್ಲಿ ಆಟೋ ಪತ್ತೆ; ಚಾಲಕನ ಮೊಬೈಲ್ ಸ್ವಿಚ್ಡ್ ಆಫ್

ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕರ ಪುತ್ರ ಧನರಾಜ್(28) ನಾಪತ್ತೆಯಾದ ಆಟೋ ಚಾಲಕ. 28/11/2024ರಂದು ಎಂದಿನಂತೆ ಬೆಳಿಗ್ಗೆ 8.30ರ ಸುಮಾರಿಗೆ ತನ್ನ ಮನೆಯಿಂದ ಆಟೋದೊಂದಿಗೆ ಹೊರಟಿದ್ದ ಧನರಾಜ್ ಆರು ದಿನ ಕಳೆದರೂ ಮರಳಿ ಬಂದಿಲ್ಲ. ಆತಂಕಗೊಂಡ ಪೋಷಕರು ಧನರಾಜ್ ಮೊಬೈಲಿಗೆ ಕರೆ ಮಾಡಿದರೂ ಸ್ವಿಚ್ಡ್ ಆಫ್ ಬರುತ್ತಿದೆ. ಸಂಬಂಧಿಕರಲ್ಲಿ, ಸ್ನೇಹಿತರಲ್ಲಿ ವಿಚಾರಿಸಿದ್ದರೂ ಎಲ್ಲೂ ಮಾಹಿತಿ ಲಭ್ಯವಾಗಿಲ್ಲ ಎಂದು ಪೋಷಕರು ತಿಳಿಸಿದ್ದಾರೆ. ತುಳು-ಕನ್ನಡ ಭಾಷೆ ಬಲ್ಲ ಸುಮಾರು ಐದು […]

Continue Reading

ಚುನಾವಣಾ ಬಾಂಡ್ ಹಗರಣ: ನಳಿನ್ ಕುಮಾರ್ ಕಟೀಲ್ FIR ರದ್ದುಗೊಳಿಸಿದ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸದ್ದು ಮಾಡಿದ್ದ ಸಂದರ್ಭ, ಮುಖ್ಯಮಂತ್ರಿ ವಿರುದ್ಧವೇ ಎಫ್ ಐ ಆರ್ ದಾಖಲಾಗಿ ಬಿಜೆಪಿ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯರನ್ನು ಆಗ್ರಹಿಸುತ್ತಿದ್ದ ಸಂದರ್ಭ ಇದಕ್ಕೆ ಪ್ರತ್ಯಾಸ್ತ್ರ ಅನ್ನುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಚುನಾವಣಾ ಬಾಂಡ್ ಗೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿತ್ತು. ಚುನಾವಣಾ ಬಾಂಡ್ ಗಳನ್ನು ಖರೀದಿಸಲು ಉದ್ಯಮಿಗಳ ಮೇಲೆ ಒತ್ತಡ ಹೇರಿದ ಆರೋಪದ ಮೇಲೆ ರಾಜ್ಯ […]

Continue Reading

ನಿಯಮಬಾಹಿರವಾಗಿ ಅಕ್ರಮ ಸಾಗುವಳಿ ಚೀಟಿ ವಿತರಣೆ ಆರೋಪ; ಶಿರಸ್ತೇದಾರ್ ಹೇಮಂತ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ನಿಯಮಬಾಹಿರವಾಗಿ ಅಕ್ರಮ ಸಾಗುವಳಿ ಚೀಟಿ ವಿತರಣೆ ಮಾಡಿದ ಆರೋಪದ ಮೇಲೆ ಶಿರಸ್ತೇದಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ್ ಹೇಮಂತ್‌ ಕುಮಾರ್‌ ಕಳಸ ತಾಲ್ಲೂಕಿನ ಕಛೇರಿಯಲ್ಲಿ ಪ್ರಭಾರಿ ಶಿರಸ್ತೆದಾರರಾಗಿ ಕಾರ್ಯನಿರ್ವಹಿಸುವಾಗ 50 ಕ್ಕೂ ಹೆಚ್ಚು ಸಾಗುವಳಿ ಚೀಟಿ ಅಕ್ರಮವಾಗಿ ನೀಡಿದ್ದಾರೆಂದು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. 2022 ರ ಫೆಬ್ರವರಿ ತಿಂಗಳಲ್ಲಿ ಕಳಸ ತಾಲೂಕು ಪ್ರಭಾರ ತಹಶೀಲ್ದಾರ್ ಆಗಿ ಒಂದು ತಿಂಗಳು ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಈ ಅಕ್ರಮ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆಡಳಿತಾತ್ಮಕ […]

Continue Reading

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಸಂಘಪರಿವಾರದ ಕಾರ್ಯಕರ್ತ ಪ್ರಸಾದ್

ಸತತ ಸುರಿಯುವ ಮಳೆಯ ನಡುವೆ ಮುಳುಗು ತಜ್ಞ ಇಸ್ಮಾಯಿಲ್ ಕಾರ್ಯಾಚರಣೆ.. ಮೃತದೇಹ ಪತ್ತೆ ಬೆಳ್ತಂಗಡಿ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ, ಸಂಘಪರಿವಾರದ ಕಾರ್ಯಕರ್ತ ಪ್ರಸಾದ್ ಎಂಬವರು ಡಿಸೆಂಬರ್ 2 ರಂದು ಸಂಜೆ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ‌‌‌ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿ‌ಯ‌ ಸಂಜಯ ನಗರದ ಇಸ್ಮಾಯಿಲ್‌ ಸತತ ಸುರಿಯುವ […]

Continue Reading

ಗಡಿದಾಟಿ ಉಡುಪಿ ಜಿಲ್ಲೆಗೂ ವಿಸ್ತರಣೆಗೊಂಡ ಮಂಗಳೂರು ಪೊಲೀಸ್ ಕಮೀಷನರ್ ಹಠಾವೋ ಚಳವಳಿ

ಸರ್ವಾಧಿಕಾರಿಗಳಿಗೆ, ಜನವಿರೋಧಿ ಐಪಿಎಸ್ ಗಳಿಗೆ ತಲೆಬಾಗುವ ಪ್ರಶ್ನೆಯೇ ಇಲ್ಲ. ಹೋರಾಟ ಮತ್ತಷ್ಟು ವ್ಯಾಪಕಗೊಳ್ಳಲಿದೆ: ಸಿಪಿಐಎಂ ಕುಂದಾಪುರ ತಾಲೂಕು ಸಮಿತಿ ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು, ಮಂಗಳೂರು ನಗರಿದಂದ ಅವರನ್ನು ವರ್ಗಾಯಿಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಡಿವೈಎಪ್ಐ ಸಂಘಟನೆಗಳಿಂದ ಜಿಲ್ಲಾದ್ಯಂತ ಪ್ರತಿಭಟನಾ ಸಭೆ ನಡೆಯುತ್ತಾ ಇದೆ. ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ […]

Continue Reading

ಭೀಕರ ರಸ್ತೆ ಅಪಘಾತ; ಕೇರಳ ಸಾರಿಗೆ ಸಂಸ್ಥೆಯ ಬಸ್ ಗೆ ಕಾರು ಡಿಕ್ಕಿ, ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೇರಳ ಸಾರಿಗೆ ಸಂಸ್ಥೆಯ ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಲಪ್ಪುರದಲ್ಲಿ ನಡೆದಿದೆ. ಆಲಪ್ಪುಳದ ಕಲಾರ್‌ಕೋಡ್ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಕೆಎಸ್‌ಆರ್‌ಟಿಸಿ ಸೂಪರ್-ಫಾಸ್ಟ್ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳಲ್ಲದೆ, […]

Continue Reading

ಪೊಲೀಸ್ ಕಮೀಷನರ್ ಅಗ್ರವಾಲ್ ಎತ್ತಂಗಡಿಯಾಗದೆ ವಿರಮಿಸುವುದಿಲ್ಲ, ಹೋರಾಟವನ್ನು ಜಿಲ್ಲೆಯ ಮೂಲೆಮೂಲೆಗೆ ವಿಸ್ತರಿಸುತ್ತೇವೆ: ಮುನೀರ್ ಕಾಟಿಪಳ್ಳ

ಪೊಲೀಸ್ ಕಮೀಷನರ್ ವರ್ಗಾವಣೆಗೆ ಆಗ್ರಹಿಸಿ ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು, ಮಂಗಳೂರು ನಗರದಂದ ಅವರನ್ನು ವರ್ಗಾಯಿಸಬೇಕು ಒತ್ತಾಯಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಕಮೀಷನ್ ಹಠಾವೊ ಘೋಷಣೆಗಳನ್ನು ಕೂಗಿದರು. ಕಮೀಷನರ್ ವಿರುದ್ಧದ […]

Continue Reading