ಮಂಗಳೂರಿನಿಂದ ಜೋಗಕ್ಕೆ ಟೂರ್ ಹೊರಟಿದ್ದ ಖಾಸಗಿ ಬಸ್ ಪಲ್ಟಿ: 15 ಮಂದಿಗೆ ಗಂಭೀರ ಗಾಯ

ಬಸ್ಸಿನಲ್ಲಿ 55 ಮಂದಿ ಹೆಚ್ಚು ಪ್ರಯಾಣಿಕರಿದ್ದರು.. ಗಾಯಾಳುಗಳು ಬಂಟ್ವಾಳ ದವರೆಂದು ಪ್ರಾಥಮಿಕ ಮಾಹಿತಿ ಮಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರವಾಸ ಹೊರಟಿದ್ದ ಖಾಸಗಿ ಬಸ್ ವೊಂದು ಜೋಗ-ಕಾರ್ಗಲ್ ಸಮೀಪದ ಅರಳಗೋಡು ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದ್ದು, ಮಂಗಳೂರಿನಿಂದ ಜೋಗಕ್ಕೆ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿ ಸುಮಾರು 55 ಪ್ರಯಾಣಿಕರಿದ್ದು 15 ಜನರಿಗೆ ತೀವ್ರತರವಾದ ಗಾಯವಾಗಿದ್ದು, ಗಾಯಾಳುಗಳನ್ನು ಕಾರ್ಗಲ್ ಆಸ್ಪತ್ರೆಗೆ ಹಾಗೂ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳದ ನಿವಾಸಿಗಳೆಂದು […]

Continue Reading

ರಾಜ್ಯದಲ್ಲಿ 20 ಸಾವಿರ ಜನಸಂಖ್ಯೆ ಮೇಲ್ಪಟ್ಟ ಗ್ರಾಮ ಪಂಚಾಯತಿಗಳಿಗೆ ಮಾತ್ರ ಪಟ್ಟಣ ಪಂಚಾಯತಿ ಭಾಗ್ಯ.!

ಸರಕಾರದ ಬಳಿ 50 ಕ್ಕೂ ಹೆಚ್ಚು ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆ ಮೇಲ್ದರ್ಜೆಗೆ ಪ್ರಸ್ತಾವನೆ ಇದೆ: ನಗರಾಭಿವೃದ್ಧಿ ಸಚಿವರು ರಾಜ್ಯದ ವಿವಿಧ ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳನ್ನಾಗಿ, ಪಟ್ಟಣ ಪಂಚಾಯತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ 50 ಕ್ಕೂ ಹೆಚ್ಚು ಪ್ರಸ್ತಾವನೆಗಳು ರಾಜ್ಯ ಸರಕಾರದ ಮುಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆದರೆ 2011 ರ ಜನಗಣತಿಯ ಆಧಾರ 20,000 ಕ್ಕೂ ಅಧಿಕ […]

Continue Reading

ಕೋವಿಡ್ ವೇಳೆ ಹೈಕೋರ್ಟ್ ಆದೇಶಕ್ಕೆ ಡೋಂಟ್ ಕೇರ್.. ದುಪ್ಪಟ್ಟು ಡೊನೇಷನ್ ಪೀಕಿಸಿ ಬರೋಬ್ಬರಿ 346 ಕೋಟಿ ಲೂಟಿಗೈದ ಖಾಸಗಿ ಶಾಲೆಗಳು.!

ಆರ್ ಟಿಇ ಅಡಿಯಲ್ಲಿ ಸೇರ್ಪಡೆಯಾದ ಮಕ್ಕಳಿಂದಲೂ ಶುಲ್ಕ ಸಂಗ್ರಹ.. ಸಿಎಜಿ ವರದಿಯಲ್ಲಿ ಬಹಿರಂಗ..ಸರಕಾರ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಹಾಮಾರಿ ಕೋವಿಡ್ ಸಾಮಾನ್ಯ ಜನತೆಗೆ ಸಂಕಷ್ಟ ತಂದೊಡ್ಡಿದ್ದರೆ, ಇದನ್ನೇ ಬಂಡವಾಳ ಮಾಡಿಕೊಂಡು ದುಡ್ಡು ಲೂಟಿಗೈದವರೂ ಇದ್ದಾರೆ. ಇದಕ್ಕೊಂದು ಸ್ಪಷ್ಟ ನಿದರ್ಶನ ಎಂಬಂತೆ ಕೋವಿಡ್ ಸಂಕಷ್ಟದ ಸಮಯದಲ್ಲಿ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬರೋಬ್ಬರಿ 346 ಕೋಟಿ ರೂಪಾಯಿ ಲೂಟಿಗೈದಿರುವುದಾಗಿ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ಬೆಳಕು ಚೆಲ್ಲಿದೆ. ಕೋವಿಡ್ ಸಂದರ್ಭದಲ್ಲಿ […]

Continue Reading

ವಿಟ್ಲ: ಗ್ಯಾಸ್ ಹಂಡೆ ಕಳ್ಳತನ; ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ನಟೋರಿಯಸ್ ಗ್ಯಾಸ್ ಅಂಡೆ ಕಳ್ಳ ಅಚ್ಚುಕು. ಮತ್ತೊಬ್ಬ ಅಶ್ರಫ್ ಪರಾರಿ.

ಹೌದು, ಪೊಲೀಸರು ಕರ್ತವ್ಯದಲ್ಲಿ ಒಂದಿಷ್ಟು ನಿರ್ಲಕ್ಷ್ಯ ತೋರುತ್ತಾ ಎಡವಿದರೆ ಠಾಣಾ ಸರಹದ್ದು ಏನಾಗುತ್ತದೆ ಎಂಬುದಕ್ಕೆ ವಿಟ್ಲ ಠಾಣಾ ವ್ಯಾಪ್ತಿಯ ಉರಿಮಜಲು, ಅಳಕೆಮಜಲು, ಇಡ್ಕಿದು ಪರಿಸರ ಸಾಕ್ಷಿಯಾಗಿದೆ. ಪದೇ ಪದೇ ಕಳ್ಳತನ, ಗಾಂಜಾ, ಎಂಡಿಎಂಎ ಸೇರಿದಂತೆ ಅಪರಾಧ ಕೃತ್ಯಗಳಲ್ಲಿ ಅಳಕೆಮಜಲು, ಉರಿಮಜಲು ಪರಿಸರ ಕುಖ್ಯಾತಿ ಪಡೆದಿದೆ. ಇಂದು ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಹಡೀಲು ಎಂಬಲ್ಲಿ ಮನೆ ಮುಂದೆ ಇಟ್ಟಿದ್ದ ಗ್ಯಾಸ್ ಹಂಡೆಯನ್ನು ಹಾಡಹಗಲಲ್ಲೇ ಕದ್ದು ಆಟೋದಲ್ಲಿ ಎಸ್ಕೇಪ್ ಆಗಿದ್ದಾರೆ. ಗ್ಯಾಸ್ ವಿತರಕರು ಬಂದಾಗ ಹಂಡೆ ಮಾಯವಾಗಿದೆ. […]

Continue Reading

ರಾಜ್ಯಮಟ್ಟದ ಕಬಡ್ಡಿ ಆಟಗಾರ ನಡುಮನೆ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ.

ಕಾರ್ಕಳ ಮುಟ್ಲುಪಾಡಿ,‌ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಶುಕ್ರವಾರ(ಡಿ.13) ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ.ಶುಕ್ರವಾರ ಮಂಡ್ಯದಲ್ಲಿ ನಡೆಯುತ್ತಿದ್ದ ಕಬಡ್ಡಿಯಲ್ಲಿ ಭಾಗವಹಿಸಿದ್ದ ಪ್ರೀತಂಗೆ ಆಟವಾಡುತ್ತಿದ್ದಾಗ‌ಲೇ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಹೃದಯಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಮೃತರು ತಾಯಿ ಮತ್ತು ಸಹೋದರನ ಜೊತೆಗೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ವಿದ್ಯಾಭ್ಯಾಸದ ಜೊತೆಗೆ ಚಿಕ್ಕಂದಿನಿಂದಲೇ ಕಬಡ್ಡಿ ಆಟವನ್ನು ಮೆಚ್ಚಿಕೊಂಡಿದ್ಜ ಪ್ರೀತಂ ತನ್ನ ಸಾಧನೆಯಿಂದಲೇ ಉತ್ತುಂಗ ಶಿಖರವನ್ನೇರಿದ್ದರು ಎಂಬುದನ್ನು ಸ್ನೇಹಿತರು ಖಚಿತಪಡಿಸಿದ್ದಾರೆ. ಪ್ರೀತಂ ಶೆಟ್ಟಿಯವರು ಸಾಯಿರಾಂ […]

Continue Reading

ಪುತ್ತೂರು: ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಆರೋಪಿಗಳ ಜಾಮೀನು ಅರ್ಜಿ ತಿರಸ್ಕ್ರತ.

ವಿಶೇಷ ಸರ್ಕಾರಿ ಅಭಿಯೋಜಕರಾಗಿ ವಾದ ಮಂಡಿಸಿದ ‘ಕಜೆ ಲಾ ಛೇಂಬರ್ಸ್’ ಮುಖ್ಯಸ್ಥರಾದ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಪುತ್ತೂರು: ನವೆಂಬರ್ 6 ರ ತಡರಾತ್ರಿ ಪುತ್ತೂರಿನ ನೆಹರೂ ನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಒಂದನೇ ಮತ್ತು ಎರಡನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ ಚೇತು ಹಾಗೂ ಮನೀಷ್ ಅಲಿಯಾಸ್ ಬ್ರೋಕರ್ ಮನಿ ಎಂಬವರು ಮಾನ್ಯ ಪುತ್ತೂರು‌ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. […]

Continue Reading

ಮುಂಬೈಯಿಂದ ಮಂಗಳೂರಿನ ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ: ಉಡುಪಿಯ ಅಖಿಲೇಶ್ ಖಾಕಿ ಬಲೆಗೆ

ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಯಲ್ಲಿ ಡ್ರಗ್ ಪೆಡ್ಲರ್ ಖಾಕಿ ಬಲೆಗೆ ಬಿದ್ದಿದ್ದಾನೆ. ಮುಂಬೈಯಿಂದ ಮಂಗಳೂರು ನಗರಕ್ಕೆ ಗಾಂಜಾವನ್ನು ಸಾಗಾಟ ಮಾತ್ತು ಮಾರಾಟ ಮಾಡುತ್ತಿದ್ದ ಉಡುಪಿಯ ಅಂಬಲಪಾಡಿ ನಿವಾಸಿ ಅಖಿಲೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮೂಲ್ಕಿಯ ಬಪ್ಪನಾಡು ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ ಅಖಿಲೇಶ್ ನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ 1,62,000 ರೂ ಮೌಲ್ಯದ 6.7 ಕೆಜಿ ಗಾಂಜಾ, […]

Continue Reading

ಆನೆ ಕೊಲ್ಲಲು ಅನುಮತಿ ಕೇಳಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ; ಅರಣ್ಯ ಮಂತ್ರಿ ಖಂಡ್ರೆ ಕೆಂಡಾಮಂಡಲ.!

ಮನುಷ್ಯರಿಗೆ ಬದುಕುವ ಹಕ್ಕಿರುವಂತೆಯೇ ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶಾಸಕರಿಗೆ ನೀತಿಪಾಠ ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಕೆಂಡಾಮಂಡಲರಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಅವರು, ರಾಜ್ಯ ಸರ್ಕಾರ ಆನೆಗಳ ಹಾವಳಿ ತಡೆಗೆ ಕಳೆದ 2 ವರ್ಷಗಳಲ್ಲಿ 489.46 ಮೀ. ಸೌರಬೇಲಿ, […]

Continue Reading

ಮದ್ಯದ ನಶೆಯಲ್ಲಿ ಪತ್ನಿಯನ್ನೇ ಕೊಲೆಗೈದ ಪಾಪಿ ಪತಿ. ವಿಟ್ಲ ಸಮೀಪದ ಪುಣಚ ಬಳಿ ಪತಿರಾಯನ ರಾಕ್ಷಸೀ ಕೃತ್ಯ.

ವಿಟ್ಲ ಠಾಣಾ ವ್ಯಾಪ್ತಿಯ ಪುಣಚ ಸಮೀಪದ ದೇವಿನಗರ ನಿವಾಸಿ ಲೀಲಾ ನಾಯ್ಕ(45)ಮೃತ ದುರ್ದೈವಿ.ಪ್ರತಿನಿತ್ಯ ಕಂಠಪೂರ್ತಿ ಕುಡಿದು ಬಂದು ಪತ್ನಿ ಜೊತೆ ಗಲಾಟೆ ನಡೆಸುವುದು ಪತಿ ಸಂಜೀವ ನಾಯ್ಕನ ಚಟವಾಗಿತ್ತು. ಎಂದಿನಂತೆಯೇ ಬುಧವಾರದಂದು ಕೂಡಾ ಕಂಠಪೂರ್ತಿ ಕುಡಿದು ಬಂದು ಪತ್ನಿ ಜೊತೆ ಕಾಲು ಕೆರೆದು ಜಗಳವಾಡಿದ್ದಾನೆ. ಜಗಳ ಮುಂದುವರಿದು ಪತ್ನಿ ಲೀಲಾಳ ಮೇಲೆ ಸಂಜೀವ ಮನಬಂದಂತೆ ಥಳಿಸಿ ಸಲಾಕೆಯ ಭರ್ಚಿಯಿಂದ ಹಲ್ಲೆ ಗೈದು ಪರಿಣಾಮ ಲೀಲಾ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಸ್ಥಳೀಯರು ಗಾಯಾಳುವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ […]

Continue Reading

ಉಳ್ಳಾಲ: ಕಲ್ಕಟ್ಟ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಗಂಭೀರ ಗಾಯಗೊಂಡಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉಳ್ಳಾಲ ತಾಲೂಕಿನ ಮಂಜನಾಡಿ ಕಲ್ಕಟ್ಟ ಮನೆಯಲ್ಲಿ ಡಿಸೆಂಬರ್ 7 ರಂದು ಮನೆಯ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಮಲಗಿದ್ದ ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಖುಬ್ರಾ ಮೃತಪಟ್ಟಿದ್ದಾರೆ. ಮೂವರು ಮಕ್ಕಳಾದ ಮೆಹದಿಯಾ, ಮಝಿಯಾ, ಮಾಯಿದಾ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಲಿಂಡರ್ ಸ್ಪೋಟಗೊಂಡು ಇವರ ಚರ್ಮ ಬೆಂದು ಹೋಗಿರುವುದಾಗಿ ತಿಳಿದು ಬಂದಿದೆ.

Continue Reading