ಪುಂಜಾಲಕಟ್ಟೆ: ಪಿಕಪ್‌ ವಾಹನ ಕಳವು ಪ್ರಕರಣ : ಆರೋಪಿಗಳು ಅಂದರ್

ಪುಂಜಾಲಕಟ್ಟೆ ಇಂಟರ್ ಲಾಕ್ ಪ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಲಾಗಿದ್ದ ಬೊಲೆರೋ ಪಿಕಪ್ ಗೂಡ್ಸ್ ವಾಹನ ಕಳವು ಪ್ರಕರಣದ ಆರೋಪಿಗಳನ್ನು ಪುಂಜಾಲಕಟ್ಟೆ ಎಸ್.ಐ‌.ನಂದಕುಮಾರ್ ನೇತ್ರತ್ವದ ತಂಡ ವಶಪಡಿಸಿಕೊಂಡ ಘಟನೆ ನಡೆದಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿರುವ TIYARA ಇಂಟರ್‌ಲಾಕ್‌ ಫ್ಯಾಕ್ಟರಿಯ ಮಾಲಿಕರಾದ ಟೆರೆನ್ಸ್ ಜೋಶೆಲ್ ವೇಗಸ್ ರವರ KA19D5858 ನೇ ಬೊಲೆರೋ ಪಿಕಪ್‌ ಗೂಡ್ಸ್‌ ವಾಹನವನ್ನು ಡಿ. 2 ರಂದು ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಸಮಯ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, , ಈ […]

Continue Reading

ಧಾರ್ಮಿಕ ಕ್ಷೇತ್ರಗಳಿಗೆ ಸಂಬಂಧಿಸಿ ಹೊಸ ಕೇಸು ದಾಖಲಿಸುವಂತಿಲ್ಲ. ಸುಪ್ರೀಂ ಕೋರ್ಟ್

ಆಗಸ್ಟ್ 15, 1947 ರಂದು ಇದ್ದಂತೆ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವು ಬದಲಾಗದೆ ಉಳಿಯುತ್ತದೆ ಎಂದು ಪೂಜಾ ಸ್ಥಳಗಳ ಕಾಯಿದೆಯು ಸೂಚಿಸುತ್ತದೆ. 1991 ರ ಪೂಜಾ ಸ್ಥಳಗಳ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಉತ್ತರ ಬರುವವರೆಗೆ ಯಾವುದೇ ಹೊಸ ಪ್ರಕರಣಗಳನ್ನು ದಾಖಲಿಸಲಾಗುವುದಿಲ್ಲ ಎಂದು ಕೋರ್ಟ್​ ಹೇಳಿದೆ. ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಪ್ರಕರಣವನ್ನು […]

Continue Reading

ಕೂಡ್ಲಿಗಿ: ಪ.ಪೂ.ಕಾಲೇಜು ವಿದ್ಯಾರ್ಥಿಗಳಿಗೆ ಅಧಿವೇಶನ ವೀಕ್ಷಿಸುವ ಸುವರ್ಣಾವಕಾಶ ಕಲ್ಪಿಸಿದ ಶಾಸಕ ಡಾ. ಎನ್. ಟಿ. ಶ್ರೀನಿವಾಸ್

ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ, ಪಿಯುಸಿ ತರಗತಿಯ ವಿದ್ಯಾರ್ಥಿಗಳು ಪ್ರಸ್ತುತ ಬೆಳಗಾವಿಯ ಸುವರ್ಣ ಸೌಧದಲ್ಲಿ, ಜರುಗುತ್ತಿರುವ ಚಳಿಗಾಲದ ಅಧಿವೇಶನವನ್ನು ಖುದ್ದು ನೇರವಾಗಿ ವೀಕ್ಷಿಸುವ ಸುವರ್ಣಾವಕಾಶವನ್ನು, ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಡಾ”ಎನ್.ಟಿ.ಶ್ರೀನಿವಾಸ್ ರವರು ಕಲ್ಪಿಸಿ ಕೊಟ್ಟಿದ್ದಾರೆ. ಶಾಸಕರು ಒಟ್ಟು 200 ವಿದ್ಯಾರ್ಥಿಗಳಿಗೆ ಅಧಿವೇಶನ ವೀಕ್ಷಿಸುವ ಸುವರ್ಣಾವಕಾಶ ಕಲ್ಪಿಸಿಕೊಟ್ಟಿದ್ದಾರೆ. ಅಧಿವೇಶನ ಆರಂಭಗೊಂಡ ಎರಡನೇ ದಿನವಾದ, ಡಿಸೆಂಬರ್10ರಂದು ಕೂಡ್ಲಿಗಿಯ ಸ.ಸಂ.ಪ.ಪೂ.ಕಾಲೇಜಿನ ಪಿಯುಸಿ ತರಗತಿಯ 54 ವಿದ್ಯಾರ್ಥಿಗಳು. ಸುವರ್ಣ ಸೌಧದಲ್ಲಿ ಜರುಗುವ ಅಧಿವೇಶನವನ್ನು, ಖುದ್ದು ವೀಕ್ಷಿಸಿ ಕಣ್ತುಂಬಿಸಿಕೊಂಡಿದ್ದಾರೆ. ಅಧಿವೇಶನ […]

Continue Reading

ಅಧಿಕಾರ ರಾಜಕಾರಣಕ್ಕಿಂತ ತತ್ವ ಸಿದ್ಧಾಂತದ ಬದ್ಧತೆ ಹೊಂದಿರುವ ಡೈನಾಮಿಕ್ ರಾಜಕಾರಣಿ ಬಿ. ಕೆ ಹರಿಪ್ರಸಾದ್

ಮುಚ್ಚುಮರೆಯಿಲ್ಲದೆ ಹುಳುಕುಗಳನ್ನು ತೆರೆದಿಡುವ ಗಟ್ಟಿ ಧ್ವನಿಯ ಏಕೈಕ ನಾಯಕ ಕರಾವಳಿಯ ಕೋಮು ರಾಜಕಾರಣ ಕೊನೆಯಾಗಬೇಕಾದರೆ ಬಿ. ಕೆ ಹರಿಪ್ರಸಾದ್ ಉಸ್ತುವಾರಿ ಮಂತ್ರಿಯಾಗಲಿ ಸಣ್ಣ ಪುಟ್ಟ ಅಧಿಕಾರಕ್ಕಾಗಿ ತತ್ವ ಸಿದ್ಧಾಂತಕ್ಕೆ ಎಳ್ಳು ನೀರು ಬಿಟ್ಟು ಬಕೆಟ್ ಹಿಡಿಯುವ ಅದೆಷ್ಟೋ ರಾಜಕಾರಣಿಗಳನ್ನು ನಾವು ಕಂಡಿದ್ದೇವೆ. ಅಂತಹುದರಲ್ಲಿ ಅಧಿಕಾರ, ರಾಜಕಾರಣಕ್ಕಿಂತ ತತ್ವ ಸಿದ್ಧಾಂತವೇ ಮೇಲು ಅನ್ನುತ್ತಾ ಇದೇ ಕಾರಣದಿಂದ ಮಂತ್ರಿಯಾಗುವ ಭಾಗ್ಯ ಕಳೆದುಕೊಂಡ ಈ ಕಾಲಘಟ್ಟದ ಏಕೈಕ ರಾಜಕಾರಣಿಯಿದ್ದರೆ ಅದು ಬಿ. ಕೆ ಹರಿಪ್ರಸಾದ್ ಮಾತ್ರ ಅನ್ನುವುದು ಸುಳ್ಳಲ್ಲ. ಕಾಂಗ್ರೆಸ್ ಪಕ್ಷದ […]

Continue Reading

ಹೊಲದ ವಿಚಾರ ದಾಯಾದಿ ಕಲಹ; ಮೂರು ದಿನಗಳಾದರೂ ಕೇಸು ದಾಖಲಿಸದ ಹೊಸಹಳ್ಳಿ ಪೊಲೀಸರು

ಪೊಲೀಸ್ ಸಿಬ್ಬಂದಿಯೇ ಶಾಮೀಲು ಶಂಕೆ.! ಪೊಲೀಸ್ ಸಿಬ್ಬಂದಿಯನ್ನೇ ಅಪರಾಧಿಯನ್ನಾಗಿ ಪರಿಗಣಿಸಬೇಕು; ಗಾಯಾಳುಗಳ ಆಕ್ರೋಶ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾವ್ಯಾಪ್ತಿಯ, ಸೂಲದಹಳ್ಳಿ ಯಲ್ಲಿ ಡಿ.5ರಂದು ಹೊಲದ ವಿಚಾರದಲ್ಲಿ, ದಾಯಾದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಒಂದು ಗುಂಪಿನವರ ಮೇಲೆ ಮತ್ತೊಂದು ಗುಂಪು ಮಾರಣಾಂತಿಕ ಹಲ್ಲೆಮಾಡಿದ ಪರಿಣಾಮ ಮೂವರು ತೀವ್ರವಾಗಿ ಮಾರಣಾಂತಿಕ ಗಾಯಗೊಂಡಿದ್ದಾರೆ. ಗಾಯಳುಗಳು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ, ತುರ್ತಾಗಿ ಅಗತ್ಯ ಪ್ರಥಮ ಚಿಕಿತ್ಸೆ ಪಡಿದಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿ ನೀಡಿದ ಮಾಹಿತಿ ಮೇರೆಗೆ, […]

Continue Reading

ರಾಜ್ಯಾದ್ಯಂತ ಡಿಸೆಂಬರ್ 10 ರಿಂದ 12 ರ ವರೆಗೆ ಮೂರು ದಿನಗಳ ಶೋಕಾಚರಣೆ; ಮೂಡಬಿದ್ರೆಯ ಆಳ್ವಾಸ್ ವಿರಾಸತ್ ಗೆ ಅನ್ವಯವಲ್ಲವೇ.?

ಶೇಖರ್ ಲಾಯಿಲ ಸಾಮಾಜಿಕ ಹೋರಾಟಗಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ, ರಾಜ್ಯಪಾಲರಾಗಿ ಜನಾನುರಾಗಿದ್ದ ಎಸ್. ಎಂ ಕೃಷ್ಣರವರು ನಿಧನರಾಗಿದ್ದು, ಮೃತರ ಗೌರವಾರ್ಥ ಕರ್ನಾಟಕ ರಾಜ್ಯ ಸರ್ಕಾರ ಇಡೀ ರಾಜ್ಯಾದ್ಯಂತ ಡಿಸೆಂಬರ್ 10 ರಿಂದ 12 ರ ವರೆಗೆ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಈ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಆದರೆ ಮೂಡಬಿದಿರೆಯ ಮೋಹನ್ ಆಳ್ವರ ನೇತೃತ್ವದ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಆಳ್ವಾಸ್ ವಿರಾಸತ್ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆಳ್ವಾಸ್ […]

Continue Reading

ಅಂಗಡಿ ಮುಂದೆ ಯುವಕನ ಮೃತದೇಹ ಪತ್ತೆ. ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದ ಘಟನೆ.

ಕನ್ಯಾನ ಜಂಕ್ಷನಲ್ಲಿನ ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಕಂಡುಬಂದಿದೆ. ಕೆಲ ಕ್ಷಣಗಳ ಮೊದಲು ಕುಳಿತುಕೊಂಡಿದ್ದ ಯುವಕ ಇದ್ದಕ್ಕಿದ್ದಂತೆ ಮೃತಪಟ್ಟ ವಿಚಾರ ಜನರ ಕುತೂಹಲಕ್ಕೆ ಕಾರಣವಾಗಿದೆ. ಮೂಲತಃ: ಸಾಲೆತ್ತೂರು ಸಮೀಪದ ಮೆದು ನಿವಾಸಿಯಾಗಿದ್ದು ಪ್ರಸ್ತುತ ಕನ್ಯಾನ ಪಿಲಿಚಾಮುಂಡಿ ಗುಡ್ಡೆ ನಿವಾಸಿ ಸುರೇಶ್ ನಾಯ್ಕ (32) ಮೃತಪಟ್ಟ ವ್ಯಕ್ತಿಯೆಂದು ಪರಿಚಯಸ್ಥರು ತಿಳಿಸಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿರುವ ಈತ ಅದೇ ಕಾರಣದಿಂದಾಗಿ ಕುಸಿದುಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಸ್ಥಳಕ್ಕೆ 112ಪೊಲೀಸರು ಹಾಗೂ ವಿಟ್ಲ ಪೊಲೀಸರು ಆಗಮಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು […]

Continue Reading

ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ ಒಟ್ಟೂ 3364 ಬಾಣಂತಿಯರ ಸಾವು

ಮುಖ್ಯಮಂತ್ರಿ ಕಚೇರಿಯಿಂದಲೇ ಅಧಿಕೃತ ಅಂಕಿ ಅಂಶ ಬಿಡುಗಡೆ ರಾಜ್ಯದಲ್ಲಿ ಆರು ವರ್ಷಗಳಲ್ಲಿ ಒಟ್ಟೂ 3364 ಬಾಣಂತಿಯರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಬಾಣಂತಿಯರು ಹಾಗೂ ಶಿಶು ಮರಣ ಪ್ರಮಾಣ ವಿಚಾರವಾಗಿ ವಿರೋಧ ಪಕ್ಷಗಳ ಆರೋಪದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ. ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕಚೇರಿಯಿಂದ ಬಾಣಂತಿಯರ ಸಾವಿನ ಬಗ್ಗೆ ಅಂಕಿ- ಅಂಶಗಳನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದೆ […]

Continue Reading

ಬೆಳ್ತಂಗಡಿ: ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ – ಆರೋಪಿ ಉಮೇಶ್ ಗೌಡ ಅರೆಸ್ಟ್

ಮಹಿಳೆಯೊಬ್ಬರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ಚಿನ್ನದ ಕರಿಮಣಿ ಸರವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಗಿರಿಗುಡ್ಡೆ, ಡೆಂಬುಗ ನಿವಾಸಿ ಉಮೇಶ್ ಗೌಡ(38) ಎಂಬಾತನನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ತಂಡದ ಸಿಬ್ಬಂದಿಗಳು ಕೊಯ್ಯೂರು ಗ್ರಾಮದ ಆದೂರ್‌ ಪೆರಲ್ ಬಸ್ ನಿಲ್ದಾಣದಲ್ಲಿ ಡಿ.10 ರಂದು ಬೆಳಗ್ಗೆ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, […]

Continue Reading

ಬಿಜೆಪಿ ಬೆಕ್ಕಿಗೆ ಗಂಟೆ ಕಟ್ಟುವುದು ಹೇಗೆ.?ಯಡಿಯೂರಪ್ಪ ಕುದಿಯುತ್ತಿರುವುದು ಏಕೆ.?

ಸೋಮಣ್ಣ ಹೆಸರು ರೇಸಿಗೆ ಬಂದಿದೆ. ಬಿಜೆಪಿ ವರಿಷ್ಟರಿಗೆ ಡಿಕೆಶಿ ಸಂದೇಶ ಕಳೆದ ವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ರಾಜ್ಯ ಬಿಜೆಪಿಯ ನಾಯಕರೊಬ್ಬರು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಯತ್ನಾಳ್ ವರ್ಸಸ್ ವಿಜಯೇಂದ್ರ ನಡುವಣ ಬಿಕ್ಕಟ್ಟಿನ ಬಗ್ಗೆ ಅವರು ಪ್ರಾಕ್ಟಿಕಲ್ ವರದಿ ನೀಡಿದರಂತೆ.ಅಂದ ಹಾಗೆ ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿರುವ ವಿಜಯೇಂದ್ರ ಮತ್ತು ಯತ್ನಾಳ್ ಗ್ಯಾಂಗಿನ ಸಂಘರ್ಷದ ಬಗ್ಗೆ ನಡ್ಡಾ ಅವರಿಗೆ ಗೊತ್ತಿಲ್ಲ ಅಂತೇನಲ್ಲ. ಆದರೆ ಏನೇ ಮಾಡಿದರೂ ವಿಜಯೇಂದ್ರ ವರ್ಸಸ್ ಯತ್ನಾಳ್ ಗ್ಯಾಂಗಿನ ಮಧ್ಯೆ […]

Continue Reading