ಮಂಗಳೂರು: ಪೋರ್ಜರಿ ಸಹಿ ಹಾಕಿ ವಾಹನ ವರ್ಗಾವಣೆ ಪ್ರಕರಣ: ಪತಿ ವಿರುದ್ಧವೇ ಪತ್ನಿಯಿಂದ ಪೊಲೀಸ್ ಆಯುಕ್ತರಿಗೆ ದೂರು; ಪ್ರಕರಣ ದಾಖಲು

ಹೆಂಡತಿಯ ಮಾಲೀಕತ್ವದಲ್ಲಿದ್ದ ಮೂರು ಘನ ವಾಹನಗಳನ್ನು ಪೋರ್ಜರಿ ಸಹಿ ಹಾಕಿ ಗಂಡ ತನ್ನ ಅಪ್ರಾಪ್ತ ಮಗಳ ಹೆಸರಿಗೆ ವರ್ಗಾಯಿಸಿ ಮೋಸ ಮಾಡಿ ವಂಚಿಸಿರುವ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಎಮ್.ಎಸ್.ಇ.ಝಡ್ ಕಾಲೊನಿ ರಾಮ ನಗರದ ನಿವಾಸಿ ಭವ್ಯ ಶೆಟ್ಟಿ ದೂರು ನೀಡಿರುವ ಮಹಿಳೆಯಾಗಿದ್ದು, ತನ್ನ ಗಂಡ ದಾಮೋದರ ಶೆಟ್ಟಿ ವಂಚನೆ ಮಾಡಿರುವುದಾಗಿ ದೂರು ನೀಡಿದ್ದಾರೆ. ಈಕೆಯ ಗಂಡ ದಾಮೋದರ ಶೆಟ್ಟಿ ಪ್ರತಿಷ್ಠಿತ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL) […]

Continue Reading

ಮಂಗಳೂರು ನಗರದ ರಸ್ತೆಗಳು ಎಷ್ಟು ಸುರಕ್ಷಿತ..? ಅಪಘಾತಗಳಿಗೆ ಕಾರಣವಾಗುತ್ತಿದೆ ರಸ್ತೆ ನಿರ್ವಹಣೆ

ಪೊಲೀಸ್ ಇಲಾಖೆ ವರದಿ ನೀಡಿದರೂ ಮಹಾನಗರ ಪಾಲಿಕೆ ಜಾಣ ಮೌನಕ್ಕೆ ಜಾರಿದೆ.! ಮಂಗಳೂರಿನಲ್ಲಿ ಕೇವಲ ಕೋಮುಗಲಭೆಯಲ್ಲಿ ಮಾತ್ರ ಜೀವ ಹೋಗೋದಲ್ಲ. ಅಲ್ಲಲ್ಲಿ ರಸ್ತೆಯ ಅಪಘಾತಕ್ಕೂ ಅಮೂಲ್ಯವಾದ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಮನೆಯಿಂದ ವ್ಯಕ್ತಿ ಈಗಲೂ ಹೊರಗೆ ಹೋದರೆ ಅದೇ ಪ್ರಾರ್ಥನೆ ‘ಮರಳಿ ಸುರಕ್ಷಿತವಾಗಿ ಬರಲಿ’ ಎಂದು. ಮಂಗಳೂರು ನಗರಕ್ಕೆ ಸಿಲಿಕಾನ್ ಹಬ್, ಐಟಿ ಬಿಟಿ ಗಳು ಬರಲಿದೆ ಅನ್ನುವ ಸುದ್ದಿಗಳು ಇವೆ. ಇದಕ್ಕೆ ಶಂಕುಸ್ಥಾಪನೆಗಳನ್ನು ಕೂಡ ರಾಜ್ಯ ಸರಕಾರ ನೆರವೇರಿಸಿದೆ. ಇತ್ತೀಚಿನ ದಿನಗಳಲ್ಲಿ ಮಂಗಳೂರಿನಲ್ಲಿ ಮತೀಯ ಶಕ್ತಿಗಳ ಅಟ್ಟಹಾಸ […]

Continue Reading

ಕರಾವಳಿಯಲ್ಲೊಂದು ಕೇರಳ ಮಾದರಿ ಮಾನವೀಯ ಸೇವೆ

ರೋಗಿಗಳು, ಅಶಕ್ತರ ಪಾಲಿನ ಸಾಂತ್ವನ ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿ “ನೋವಿನಲ್ಲಿ ನೀ ಒಬ್ಬಂಟಿಯಲ್ಲ , ಜೊತೆಗೆ ನಾವಿದ್ದೇವೆ” ಎಂಬ ಘೋಷಣೆಯೊಂದಿಗೆ ತಾಲೂಕಿನ ಮೂಲೆ ಮೂಲೆಗಳಲ್ಲಿರುವ ವಿವಿಧ ಕಾರಣಕ್ಕಾಗಿ ಹಾಸಿಗೆ ಹಿಡಿದಿರುವ ರೋಗಿಗಳನ್ನು ಭೇಟಿ ನೀಡಿ, ಅವರಿಗೆ ಆತ್ಮ ಸ್ಥೈರ್ಯ ಕೊಡುವ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ತಂಡ ಹಲವಾರು ವರ್ಷಗಳಿಂದ ಸತತವಾಗಿ ನಡೆಸಿಕೊಂಡು ಬರುತ್ತಿದೆ. ಇದರ ಮುಂದುವರಿದ ಭಾಗವಾಗಿ ಇಂದು ಕಳೆಂಜ ಗ್ರಾಮದ ರಾಮಣ್ಣ ಗೌಡರ ಮನೆಗೆ ಭೇಟಿ […]

Continue Reading

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕಡ್ಡಾಯ: ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು

ಭಾರತದ ಸುಪ್ರೀಂ ಕೋರ್ಟ್ ಇತ್ತೀಚೆಗೆ ‘ಪರಮ್ ವೀರ್ ಸಿಂಗ್ ಸೈನಿ ವಿರುದ್ಧ ಬಲ್ಜಿತ್ ಸಿಂಗ್ ಮತ್ತು ಇತರರು’ ಪ್ರಕರಣದಲ್ಲಿ (ವಿಶೇಷ ಮೇಲ್ಮನವಿ ಅರ್ಜಿ ಕ್ರಿಮಿನಲ್ ಸಂಖ್ಯೆ 3543/2020) ಪೊಲೀಸ್ ಠಾಣೆಗಳಲ್ಲಿ ನಡೆಯುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ದೇಶದಾದ್ಯಂತ ಅಪರಾಧ ಸ್ಥಳಗಳಲ್ಲಿ ಮತ್ತು ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಮತ್ತು ಸೆಕ್ಷನ್ 161 ಸಿಆರ್‌ಪಿಸಿ ಹೇಳಿಕೆಗಳ ಆಡಿಯೋ-ವಿಡಿಯೋ ರೆಕಾರ್ಡಿಂಗ್ ಮಾಡುವ ಪ್ರಮುಖ ಕಾನೂನು ವಿಚಾರವನ್ನು ಈ ಪ್ರಕರಣವು […]

Continue Reading

ಪುತ್ತೂರು: ನಳಿನ್ ಕುಮಾರ್ ಕಟೀಲ್ MLA ಅಭ್ಯರ್ಥಿ.!

ವಿಧಾನಸಭಾ ಚುನಾವಣೆಗೆ ಇನ್ನೇನು ಎರಡು ವರ್ಷಗಳು ಬಾಕಿ ಉಳಿದಿವೆ. ಆದರೆ ಕರಾವಳಿಯ ರಾಜಕಾರಣದಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿದೆ. ಅದರಲ್ಲೂ ಬಿಜೆಪಿಯಲ್ಲಂತೂ ರಾಜಕೀಯ ಚರ್ಚೆಗಳು ಜೋರಾಗಿ ಕೇಳಿ ಬರುತ್ತಿದೆ. ಮೂಡಬಿದ್ರೆ, ಬಂಟ್ವಾಳದಲ್ಲಿ ಬಿಜೆಪಿ ಹೊಸ ಮುಖದ ಅನ್ವೇಷಣೆಯಲ್ಲಿದೆ ಅನ್ನುವ ಮಾತುಗಳು ರಾಜಕೀಯ ಪಡಸಾಲೆಗಳಲ್ಲಿ ಗುಂಯ್ ಗುಡುತ್ತಿದೆ. ಮಂಗಳೂರು ಉತ್ತರದಲ್ಲೂ ಈ ಬಾರಿ ಬಿಜೆಪಿ ಅಭ್ಯರ್ಥಿ ಬದಲಾಯಿಸಿದರೆ ಹೇಗೆ ಅನ್ನುವ ಸಣ್ಣ ಚರ್ಚೆಗಳು ನಡೆಯುತ್ತಿದೆ. ಅದರ ನಡುವೆ ಕೈಯಾರೆ ಪಕ್ಷವನ್ನು ಬಲಿಕೊಟ್ಟ ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಪತಾಕೆ ಹಾರಿಸಲು […]

Continue Reading

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇದೇ ಪ್ರಥಮ ಬಾರಿಗೆ ಉಭಯತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ವಿಧಾನಸೌಧದ ಸ್ಪೀಕರ್‌ ಯು. ಟಿ .ಖಾದರ್‌ ತಿಳಿಸಿದ್ದಾರೆ. ಈ ಬಗ್ಗೆ ಕರ್ನಾ ಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ನೇತೃತ್ವದ ಅಕಾಡೆಮಿ ನಿಯೋಗ ಮಂಗಳವಾರ ವಿಧಾನಸೌಧದ ಸ್ಪೀಕರ್‌ […]

Continue Reading

ಉಪ್ಪಿನಂಗಡಿ: ಮಾನಭಂಗ ಪ್ರಕರಣ: ಆರೋಪಿಗೆ ಜಾಮೀನು

ಪುತ್ತೂರು: ಉಪ್ಪಿನಂಗಡಿ ಬೊಳ್ಳಾವು ಎಂಬಲ್ಲಿ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಫೆಬ್ರವರಿ 11 ರಂದು ಬೆಳಿಗ್ಗೆ ತೋಟದಲ್ಲಿ ಅಡಿಕೆ ಹೆಕ್ಕಲು ಹೋಗಿದ್ದ ಸಂದರ್ಭ ಧರ್ನಪ್ಪ ನಾಯ್ಕ ಎಂಬಾತ ನನ್ನ ಬಳಿ ಬಂದು ನನ್ನ ಬಟ್ಟೆಯನ್ನು ಹರಿದು ಹಾಕಿ ಮೈಮೇಲೆ ಕೈ ಹಾಕಿ ಮಾನಭಂಗಕ್ಕೆ ಯತ್ನಿಸಿ ಅವಾಚ್ಯವಾಗಿ ಬೈದು, ತೋಟಕ್ಕೆ ನೀರು ಬಿಡುವ ಜೆಟ್ ನಿಂದ ಹಲ್ಲೆ ನಡೆಸಿದ್ದಾಗಿ ಆರೋಪಿಸಿ ಸುಮಿತ್ರಾ ಎಂಬವರು […]

Continue Reading

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು; ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಗೆ ಸಂಕಷ್ಟ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು. ತನಿಖೆ ನಡೆಸುತ್ತಿದ್ದ ಕಾಮಾಕ್ಷಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ವಿರುದ್ಧ ಸುಳ್ಳು ಸಾಕ್ಷಿ ಸೃಷ್ಟಿ ಮತ್ತು ದಾಖಲೆಗಳಲ್ಲಿ ದೋಷಾರೋಪಣೆ ಆರೋಪಗಳು ಎದ್ದಿವೆ. ಆರೋಪಿಗಳ ಫೋನ್ ಸೀಜ್ ಮಾಡಿದ್ದು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದರೂ, ಸೀಜ್ ಫೋಟೋಗಳಲ್ಲಿ ಠಾಣೆಯ ಫ್ಲೋರಿಂಗ್ ಮಿಸ್‌ಮ್ಯಾಚ್ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳಾದ ಪುಟ್ಟಸ್ವಾಮಿ, ನಂದೀಶ್, ವಿನಯ್, ನಾಗರಾಜ್, ಲಕ್ಷ್ಮಣ್, ದೀಪಕ್ ಮತ್ತು ಪ್ರದೂಷ್ ಅವರ ಫೋನ್‌ಗಳನ್ನು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪಂಚರ ಸಮಕ್ಷಮದಲ್ಲಿ […]

Continue Reading

ಅಕ್ರಮ ಮಣ್ಣು ಮಾಫಿಯಾಕ್ಕೆ ಮೂಡಬಿದ್ರೆ ಆರ್.ಐ ಬಲಿಪಶುವಾದರೇ..?, ವರ್ಗಾವಣೆಯ ಮಸಲತ್ತು ನಡೆಸಿದ ಜಿಲ್ಲೆಯ ರಾಜಕಾರಣಿ ಯಾರು.?

ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಇದು ಕಾಲವಲ್ಲ.!, ಬಳ್ಳಾರಿ ಗಣಿ ಮಾಫಿಯಾವನ್ನು ಮೀರಿಸುವ ಬಾಕ್ಸೈಟ್ ದಂಧೆ.! ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕ ಕೇಂದ್ರವಾಗಿರುವ, ನಿರ್ಮಾಣ ಕಾಮಗಾರಿಗೆ ಅಗತ್ಯವಾಗಿರುವ, ನೂರಾರು ಬಡ ಕುಟುಂಬಗಳ ಪಾಲಿಗೆ ಆರ್ಥಿಕ ಶಕ್ತಿಯಾಗಿರುವ ಕೆಂಪು ಕಲ್ಲು ಗಣಿಗಾರಿಕೆಗೆ ದೊಡ್ಡ ಬ್ರೇಕ್ ಬಿದ್ದಿದ್ದರೂ ಅಕ್ರಮ ಕೆಂಪು ಮಣ್ಣು ಗಣಿಗಾರಿಕೆ ಮಾತ್ರ ರಾಜಾರೋಷವಾಗಿ ನಡೆಯುತ್ತಿದೆ. ಆದರೆ ಮೂಡಬಿದ್ರೆಯಲ್ಲಿ ಅಕ್ರಮ ಕೆಂಪು ಮಣ್ಣು ಗಣಿಗಾರಿಕೆ ಕುಳಗಳಿಗೆ ಸಿಂಹಸ್ವಪ್ನರಾಗಿದ್ದ ಮೂಡಬಿದ್ರೆ ಕಂದಾಯ ನಿರೀಕ್ಷಕರಾದ ಹೆಚ್ ಬಿ ಮಂಜುನಾಥ ಅವರನ್ನು ಡಿಡೀರ್ ಆಗಿ […]

Continue Reading

ಅಧಿಕಾರದ ಜಟಾಪಟಿಯ ನಡುವೆ, ಮೊದಲ ಬಾರಿಗೆ ಆಯ್ಕೆಯಾದ ಯುವ ಶಾಸಕರು, ಹಿರಿಯ ಶಾಸಕರು ಸಿಡಿದೆದ್ದು ಪಕ್ಷದ ಹೈಕಮಾಂಡ್‌ ಗೆ ಪತ್ರ ಬರೆದು ಹೊಸ ಸಂಚಲನ

ಅಧಿಕಾರ ಹಂಚಿಕೆಯ ಜಟಾಪಟಿಯ ನಡುವೆಯೇ ಕಾಂಗ್ರೆಸ್ ನಲ್ಲಿ ಮೊದಲ ಬಾರಿಗೆ ಆಯ್ಕೆಯಾದವರು ಹಾಗೂ ಹಿರಿಯ ಶಾಸಕರು ಪಕ್ಷದ ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದಿದ್ದು ಸಂಚಲನ ಸೃಷ್ಟಿಸಿದ್ದಾರೆ. ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಿಡಿದೆದ್ದಿರುವ ಶಾಸಕರು ನೇರವಾಗಿ ರಾಹುಲ್‌ ಗಾಂಧಿ, ಸುರ್ಜೇವಾಲಾ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಅವರಿಗೂ ಪತ್ರ ಬರೆದು ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಸಂಪುಟ ಪುನರ್‌ ರಚನೆಯ ವಿಚಾರದಲ್ಲಿ ಹೈಕಮಾಂಡ್‌ನ ವಿಳಂಬಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಯುವ ಶಾಸಕರಿಗೆ ಅದರಲ್ಲೂ ಮೊದಲ […]

Continue Reading