ಕುಮಾರಣ್ಣ ಒಪ್ಪಿದ್ರೂ ಯೋಗಿ ಒಪ್ತಿಲ್ಲ

ಫೀಲ್ಡಿಗೆ ಇಳೀತಾರಾ ಡಿಕೆಸು?, ಯೋಗೇಶ್ವರ್ ಉಲ್ಟಾ ಹೊಡೆದಿದ್ದೇಕೆ? ✍️. ಆರ್.ಟಿ.ವಿಠ್ಠಲಮೂರ್ತಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಮೊನ್ನೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಗ್ಗೆ ನಡ್ಡಾ ಪ್ರಸ್ತಾಪಿಸಿದ್ದಾರೆ. ‘ಕುಮಾರಸ್ವಾಮೀಜಿ. ಚನ್ನಪಟ್ಟಣ ಕ್ಷೇತ್ರದ ಬೈ ಎಲೆಕ್ಷನ್ನಿಗೆ ಸಂಬಂಧಿಸಿದಂತೆ ನಾವು ವರದಿ ತರಿಸಿಕೊಂಡಿದ್ದೇವೆ. ಎಷ್ಟೇ ಆದರೂ ಅದು ನಿಮ್ಮ ಕ್ಷೇತ್ರ.ಹೀಗಾಗಿ ನೀವು ನಿಮ್ಮ ಪುತ್ರನನ್ನು ಅಲ್ಲಿಂದ ಕಣಕ್ಕಿಳಿಸುತ್ತೀರೋ? ನಿಮ್ಮ ಕುಟುಂಬದ ಬೇರೊಬ್ಬರನ್ನು […]

Continue Reading

ಪ್ಯಾಲೆಸ್ತೀನ್ ನಲ್ಲಿ ನಡೆಯುತ್ತಿರುವುದು ಯದ್ಧವಲ್ಲ, ಸಾಮ್ರಾಜ್ಯಶಾಹಿ ಕ್ರೌರ್ಯ, ಭಾರತದ ನಾಗರಿಕರು ಈ ಅಮಾನವೀಯತೆಯ ವಿರುದ್ಧ ನಿಲ್ಲಬೇಕಿದೆ : ಮುನೀರ್ ಕಾಟಿಪಳ್ಳ

ತಾಯ್ನೆಲದ ವಿಮೋಚನೆಗಾಗಿ ಹೋರಾಡುತ್ತಿರುವ ಪ್ಯಾಲೆಸ್ತೀನ್ ಜನತೆಯ ಮೇಲೆ ಇಸ್ರೇಲ್ ಬರ್ಬರ ಧಾಳಿ ನಡೆಸುತ್ತಿದೆ. ಯುದ್ಧ ವಿರಾಮಕ್ಕೆ ಆಗ್ರಹಿಸಿ, ನಾಗರಿಕರ ಮೇಲಿನ ಧಾಳಿಯ ವಿರುದ್ಧವಾಗಿ ವಿಶ್ವಸಂಸ್ಥೆ ತೆಗೆದುಕೊಂಡಿರುವ ನಿರ್ಣಯಗಳನ್ನೂ ಇಸ್ರೇಲ್ ತಿರಸ್ಕರಿಸಿದೆ. ಅಮೆರಿಕಾ ನೇತೃತ್ವದ ಸಾಮ್ರಾಜ್ಯಶಾಹಿ ಕೂಟದ ಬೆಂಬಲದಿಂದ ಇಸ್ರೇಲ್ ಮಹಿಳೆಯರು, ಮಕ್ಕಳು ಎಂದು ಪರಿಗಣಿಸದೆ ಪ್ಯಾಲೆಸ್ತೀನ್ ನಾಗರಿಕರ ನರಮೇಧ ನಡೆಸುತ್ತಿದೆ. ಪ್ಯಾಲೆಸ್ತೀನ್ ಬೆಂಬಲಕ್ಕೆ ನಿಂತ ಇರಾನ್, ಲೆಬನಾನ್, ಯೆಮನ್ ದೇಶಗಳ ಮೇಲೆಯೂ ಅಂತರಾಷ್ಟ್ರೀಯ ರಾಜತಾಂತ್ರಿಕ ನಿಯಮಗಳನ್ನು ಉಲ್ಲಂಘಿಸಿ ಧಾಳಿಗಳನ್ನು ಸಂಯೋಜಿಸುತ್ತಿದೆ. ಇಸ್ರೇಲ್ ನ ಈ ರಕ್ತದಾಹ ಮೂರನೆ […]

Continue Reading

ನಂತೂರು ಸರ್ಕಲ್ ನಲ್ಲಿ ಅಪಘಾತ; ಕಂಕನಾಡಿ ಆಸ್ಪತ್ರೆಯ ಉದ್ಯೋಗಿ ಕ್ರಿಸ್ಟಿ ಕ್ರಾಸ್ತಾ ಸ್ಥಳದಲ್ಲೇ ಸಾವು.

ಮತ್ತೆ ಯುವತಿಯ ಬಲಿ ಪಡೆದ ಮಂಗಳೂರು ನಂತೂರ್ ನ ಮರಣ ಸರ್ಕಲ್. ಕಂಕನಾಡಿ ಆಸ್ಪತ್ರೆಯ ಉದ್ಯೋಗಿ ಕೋಡಿಕಲ್ ನಿವಾಸಿ ಕ್ರಿಸ್ಟಿ ಕ್ರಾಸ್ತಾ(27) ತನ್ನ ದ್ವಿಚಕ್ರ ವಾಹನದಲ್ಲಿ ಮನೆ ಕಡೆ ಹೋಗುತ್ತಿದ್ದ ಸಂದರ್ಭ ನಂತೂರು ಸರ್ಕಲಲ್ಲಿ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಅದೇ ಸಂದರ್ಭ ಕೇರಳ ಕಡೆಗೆ ತೆರಳುತ್ತಿದ್ದ ಮೀನು ತುಂಬಿದ ಲಾರಿ ರಸ್ತೆಗೆ ಬಿದ್ದ ಕ್ರಿಸ್ಟಿ ಕ್ರಾಸ್ತಾರ ತಲೆ ಮೇಲೆಯೇ ಹರಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈವರೆಗೆ ಮೂವತ್ತಕ್ಕೂ ಹೆಚ್ಚು ವಾಹನ ಸವಾರರ ಬಲಿ ಪಡೆದು […]

Continue Reading

ಬ್ಯಾಂಕ್ ಹರಾಜಿನಲ್ಲಿ ಆಸ್ತಿ ಖರೀದಿಸಿದವರು ಬಾಕಿ ಪಾವತಿಸದಿದ್ದರೆ ಠೇವಣಿ ಮುಟ್ಟುಗೋಲು ಹಾಕಿಕೊಳ್ಳಬಹುದು: ಹೈಕೋರ್ಟ್ ಆದೇಶ

ಬ್ಯಾಂಕ್ ಹರಾಜಿನಲ್ಲಿ ಆಸ್ತಿ ಖರೀದಿಸಿದವರು ನಿಗದಿತ ಅವಧಿಯಲ್ಲಿ ಬಾಕಿ ಪಾವತಿಸದಿದ್ದರೆ, ಮುಂಗಡವಾಗಿಟ್ಟಿದ್ದ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಕೆ.ಸುಬ್ರಹ್ಮಣ್ಯರಾವ್ ಮತ್ತು ಅವರ ಪತ್ನಿ ಎಚ್.ಎಂ ನಾಗರತ್ನಗೆ 3.25 ಕೋಟಿ ರೂಪಾಯಿಗಳನ್ನು ಮರು ಪಾವತಿಸುವಂತೆ ನಿರ್ದೇಶನ ನೀಡಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಕೆನರಾ ಬ್ಯಾಂಕ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ಆಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, […]

Continue Reading

ತನಿಖೆಗೊಳಗಾದವರ ನಿದ್ರಿಸುವ ಹಕ್ಕನ್ನು ಗೌರವಿಸುವುದು ಮಹತ್ವದ್ದು; ಹೊತ್ತಲ್ಲದ ಹೊತ್ತಿನಲ್ಲಿ ಹೇಳಿಕೆ ದಾಖಲಿಸಿ ವ್ಯಕ್ತಿಯ ನಿದ್ರೆಯ ಹಕ್ಕನ್ನು ಇ.ಡಿ ಕಸಿಯುವಂತಿಲ್ಲ: ಬಾಂಬೆ ಹೈಕೋರ್ಟ್

ಅಕ್ರಮ ಹಣ ವರ್ಗಾವಣೆ ಕಾಯಿದೆಯಡಿ ಸಮನ್ಸ್‌ ಪಡೆದವರ ಹೇಳಿಕೆಗಳನ್ನು ತಡರಾತ್ರಿಯವರೆಗೂ ಪಡೆದುಕೊಳ್ಳುವ ಬದಲು ಕಚೇರಿ ಅವಧಿಗ ಸೀಮಿತಗೊಳಿಸಲು ಎಲ್ಲಾ ಯತ್ನ ಮಾಡುವಂತೆ ಜಾರಿ ನಿರ್ದೇಶನಾಲಯ ತನ್ನ ಅಧಿಕಾರಿಗಳಿಗೆ ಸೂಚಿಸಿದೆ.ಕಳೆದ ಏಪ್ರಿಲ್‌ನಲ್ಲಿ ಬಾಂಬೆ ಹೈಕೋರ್ಟ್‌ ನೀಡಿದ್ದ ನಿರ್ದೇಶನದಂತೆ ಸುತ್ತೋಲೆ ಹೊರಡಿಸಿರುವ ಇ.ಡಿ ತನಿಖೆಗೊಳಗಾದವರ ನಿದ್ರಿಸುವ ಹಕ್ಕನ್ನು ಗೌರವಿಸುವುದು ಮಹತ್ವದ್ದು ಎಂದಿದೆ. ಹೊತ್ತಲ್ಲದ ಹೊತ್ತಿನಲ್ಲಿ ಹೇಳಿಕೆ ದಾಖಲಿಸಿ ವ್ಯಕ್ತಿಯ ನಿದ್ರೆಯ ಹಕ್ಕನ್ನು ಇ ಡಿ ಕಸಿಯುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ತನ್ನ ಅಕ್ರಮ ಬಂಧನ ಪ್ರಶ್ನಿಸಿ 64 ವರ್ಷದ […]

Continue Reading

ಪತ್ರಕರ್ತೆ ಗೌರಿ ಲಂಕೇಶ್ ಹಂತಕ ಶಿಂಧೆ ಬಣದ ಪಕ್ಷಕ್ಕೆ ಸೇರ್ಪಡೆ.. ಚುನಾವಣಾ ಪ್ರಚಾರದ ಮುಖ್ಯಸ್ಥರನ್ನಾಗಿ ಆಯ್ಕೆ!

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದೆ. ನವೆಂಬರ್ 20 ರಂದು ನಡೆಯಲಿರುವ ಮಹಾ ಕದನ ದೇಶದ ಗಮನ ಸೆಳೆದಿದೆ. ಈ ನಡುವೆಯೇ ಆತಂಕಕಾರಿ ಘಟನೆಯೊಂದು ವರದಿಯಾಗಿದ್ದು, ದೇಶವನ್ನೇ ಬೆಚ್ಚಿಬೀಳಿಸಿದ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಶ್ರೀಕಾಂತ್ ಪಂಗರ್ಕರ್ ಏಕನಾಥ ಶಿಂಧೆ ಬಣದ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ವರದಿಗಳು ತಿಳಿಸಿವೆ. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನ ಅವರ ನಿವಾಸದ ಎದುರೇ ಗುಂಡಿಕ್ಕಿ ಕೊಲ್ಲಲಾಗಿತ್ತು. ಬಲಪಂಥೀಯ ವಿಚಾರಧಾರೆಯ ವಿರುದ್ಧ ಅಕ್ಷರ ಸಮರ ಸಾರಿದ್ದ […]

Continue Reading

ಪುತ್ರನ ಹುಟ್ಟುಹಬ್ಬಕ್ಕೆ ಕಡವೆಯ ಗುಂಡಿಟ್ಟು ಕೊಂದು ಮಾಂಸ ಫ್ರಿಡ್ಜ್ ನಲ್ಲಿಟ್ಟ ಪೋಷಕರು.

ದಾಳಿ ನಡೆಸಿ ಮಾಂಸ, ಕೋವಿ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು; ಆರೋಪಿಗಳು ಎಸ್ಕೇಪ್. ಮಗನ ಹುಟ್ಟುಹಬ್ಬಕ್ಕಾಗಿ ರಕ್ಷಿಣಾರಣ್ಯದಿಂದ ಕಡವೆಯನ್ನು ಗುಂಡಿಕ್ಕಿ ಕೊಂದು ಮಾಂಸವನ್ನು ಫ್ರಿಡ್ಜ್ ನಲ್ಲಿಟ್ಟ ಪ್ರಕರಣ ಉಪ್ಪಿನಂಗಡಿ ಬಳಿ ನಡೆದಿದೆ. ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್ ಎಂಬವರ ಮನೆಗೆ ದಾಳಿ ನಡೆಸಿದೆ. ಹತ್ಯೆಗೆ ಬಳಸಿದ ಕೋವಿ, ಫ್ರಿಡ್ಜ್ ನಲ್ಲಿ ಇರಿಸಲಾಗಿದ್ದ ಕಡವೆ ಮಾಂಸವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ . ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಆರೋಪಿಗಳು ಗುಂಡ್ಯ […]

Continue Reading

ಬಡ್ಡಿ ಸಮೇತ ಪರಿಹಾರ ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಗ್ರಾಹಕರ ನ್ಯಾಯಾಲಯ ಆದೇಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಹಕರೊಬ್ಬರಿಗೆ ಆದ ತೊಂದರೆಗೆ ಜಿಲ್ಲಾ ಗ್ರಾಹಕ ನ್ಯಾಯಾಲಯ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶಿಸಿದೆ. ನಿವೃತ್ತ ಸರಕಾರಿ ಅಭಿಯೋಜಕ ನಾಗರಾಜ ಆಚಾರ್, ಬ್ಯಾಂಕ್ ನ ತಮ್ಮ ಖಾತೆ ವಿವರಗಳನ್ನು 2023 ರ ಸೆಪ್ಟೆಂಬರ್ 28 ರಂದು ಪರಿಶೀಲಿಸಿದಾಗ ಎರಡು ದಿನದ ಹಿಂದೆ ಖಾತೆಯ ಯುಪಿಐ ಮೂಲಕ 99,000 ರೂಪಾಯಿ ಮೊತ್ತ ವರ್ಗಾವಣೆಯಾಗಿತ್ತು. ಅವರ ಗಮನಕ್ಕೆ ಬಾರದಂತೆ ಹಣ ವರ್ಗಾವಣೆಗೊಂಡಿದ್ದರ ಬಗ್ಗೆ ಬ್ಯಾಂಕಿಂಗ್ ಓಂಬಡ್ಸ್ ಮನ್ ಮತ್ತು ಸಕ್ಷಮ […]

Continue Reading

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ಎರಡು ಕೋಟಿ ರೂ. ಸುಲಿಗೆ ಪ್ರಕರಣ

ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಭೂಗತ. ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್‌ ಫೂಲ್‌ ಸಿಂಗ್‌ ಚವ್ಹಾಣ್ ಅವರಿಂದ ಎರಡು ಕೋಟಿ ಸುಲಿಗೆ ನಡೆಸಿದ್ದ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದ ಇಬ್ಬರು ಆರೋಪಿಗಳನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಥಣಿಯ ಎಂಜಿನಿಯರ್‌ ಸೋಮಶೇಖರ್‌ ನಾಯಕ್‌ ಹಾಗೂ ಬಸವೇಶ್ವರನಗರದ ನಿವಾಸಿ ವಿಜಯಕುಮಾರಿ ಎಂದು ಗುರುತಿಸಲಾಗಿದೆ. ಕೇಂದ್ರ ಆಹಾರ ಸಚಿವ […]

Continue Reading

ಆರೋಗ್ಯಾಧಿಕಾರಿ ಡಾ.ಎಸ್.ಕೆ. ಸವಿತಾ ಕೊವೀಡ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ಲೂಟಿ ವರದಿಯಲ್ಲಿ ಬಹಿರಂಗ; ಶಿಸ್ತು ಕ್ರಮ ಜರುಗಿಸಲು ತೀರ್ಮಾನ

ಆರೋಗ್ಯಾಧಿಕಾರಿ ಡಾ. ಎಸ್.ಕೆ.ಸವಿತಾ ಅವರು ಲಕ್ಷಾಂತರ ರೂಪಾಯಿ ಲೂಟಿ ಮಾಡಿರುವುದು ವರದಿಯಲ್ಲಿ ಬಯಲಾಗಿದೆ. ಸವಿತಾ ಅವರು ಕೊವಿಡ್‌ ಸಾಂಕ್ರಮಿಕ ರೋಗ ಸಂದರ್ಭದಲ್ಲಿ ಸ್ವಾಬ್‌ ಕಲೆಕ್ಟರ್‌ ಮತ್ತು ಗಣಕ ಯಂತ್ರ ನಿರ್ವಾಹಕರ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗಳನ್ನು ತಮ್ಮ ಕುಟುಂಬದವರ ಖಾತೆಗೆ ಹಣ ವರ್ಗಾಯಿಸಿ ಬಿಬಿಎಂಪಿಗೆ ನಷ್ಟ ಉಂಟು ಮಾಡಿದ್ದಾರೆ ಎಂದು ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌ ರಮೇಶ್‌ ಮತ್ತು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವದ್ದಿ ಸಂಘದ ಅಧ್ಯಕ್ಷ ಎ.ಅಮತ್‌ ರಾಜ್‌ ಅವರು ಬಿಬಿಎಂಪಿ ಮುಖ್ಯ ಅಯುಕ್ತರಿಗೆ […]

Continue Reading