ಸಿಎಂ ಸಹಿ ಫೋರ್ಜರಿ ಆರೋಪ; ರೇರ ಅಧ್ಯಕ್ಷ ರಾಕೇಶ್ ಸಿಂಗ್ ವಿರುದ್ಧ ಹೈಕೋರ್ಟ್ ಮೇಲ್ವಿಚಾರಣೆಯಲ್ಲೇ ತನಿಖೆಗೆ ನಿರ್ದೇಶನ ಕೋರಿ ರಾಜ್ಯಪಾಲರಿಗೆ ಸಿಟಿಜನ್ ರೈಟ್ಸ್ ಫೌಂಡೇಶನ್ ದೂರು.

ಬೆಂಗಳೂರು: ಸಾವಿರಾರು ಕೋಟಿ ರೂ ಮೌಲ್ಯದ ಜಮೀನನ್ನು ಅಧಿಕಾರಿಗಳು ಮುಖ್ಯಮಂತ್ರಿ ಸಹಿ ಫೋರ್ಜರಿ ಮೂಲಕ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಬಗ್ಗೆ ಹೈಕೋರ್ಟ್ ಪರಿವೀಕ್ಷಣೆಯಲ್ಲಿ ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ಸಿಟಿಜನ್ ರೈಟ್ಸ್ ಫೌಂಡೇಶನ್ ರಾಜ್ಯಪಾಲರಿಗೆ ದೂರು ನೀಡಿದೆ. ಸಾರ್ವಜನಿರ ಸಮಸ್ಯೆಗಳಿಗೆ ಸ್ಪಂಧಿಸುತ್ತಾ, ಜನರ ಹಿತಾಸಕ್ತಿ ಸಂಬಂಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ, ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಕಾನೂನು ಹೋರಾಟ ನಡೆಸುತ್ತಾ ಸಾಮಾಜಿಕ ಹಿತಾಸಕ್ತಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’, ಇದೀಗ ರಾಜ್ಯ ಸರ್ಕಾರದ ಅಧಿಕಾರಿಗಳು […]

Continue Reading

25 ವರ್ಷಗಳಲ್ಲಿ ಏನೇನು ಅಕ್ರಮಗಳಾಗಿವೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಮಗ್ರ ತನಿಖೆ ಆಗಬೇಕು: ಬಿ.ಕೆ. ಹರಿಪ್ರಸಾದ್‌

ದ್ವೇಷ ರಾಜಕಾರಣ ಸಾಂಕ್ರಾಮಿಕ ರೋಗದಂತೆ, ಇವೆಲ್ಲಾ ಬಂದಿರುವುದು ನರೇಂದ್ರ ಮೋದಿ ಅವರಿಂದ ಅರ್ಕಾವತಿ ಡಿನೋಟಿಫಿಕೇಶನ್‌ ಕುರಿತು ಯಾರೋ ವಿಚಾರಣೆ ಮಾಡಿದರೆ ಸಾಲದು. 25 ವರ್ಷಗಳಲ್ಲಿ ಏನೇನು ಅಕ್ರಮಗಳಾಗಿವೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಮಗ್ರ ತನಿಖೆ ಆಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯವರಿಂದ ಸಂಪೂರ್ಣ ತನಿಖೆ ನಡೆದರೆ ಯಾವುದೇ ಪಕ್ಷದವರಿರಲಿ, ಎಲ್ಲವೂ ಹೊರಗೆ ಬರಲಿದೆ. ಯಾರೆಲ್ಲ ಎಷ್ಟು ಶುದ್ದ ಹಸ್ತರು ಎಂಬುದು […]

Continue Reading

ಸುಳ್ಯ: ವಸತಿ ನಿಲಯದಲ್ಲಿ ಬಾಲಕನೋರ್ವನ ಮರ್ಮಾಂಗ ಹಿಡಿದೆಳೆದ ಪ್ರಕರಣ; ಮರ್ಮಾಂಗ ಊದಿಕೊಂಡು ಬಾಲಕ ಸರಕಾರಿ ಆಸ್ಪತ್ರೆಗೆ ದಾಖಲು

ಸುಳ್ಯ: ವಸತಿ ನಿಲಯದಿಂದ ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವನ್ನು ಇಬ್ಬರು ವಿದ್ಯಾರ್ಥಿಗಳು ಹಿಡಿದೆಳೆದ ಪರಿಣಾಮವಾಗಿ ಮರ್ಮಾಂಗ ಊದಿಕೊಂಡು ಬಾಲಕ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಸೆ. 14ರಂದು ರಾತ್ರಿ ವಸತಿ ನಿಲಯದಲ್ಲಿ ಇಬ್ಬರು ಸಹಪಾಠಿ ವಿದ್ಯಾರ್ಥಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಆ ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವಾಗುತ್ತಿದ್ದ ಪರಿಣಾಮ ಮನೆಗೆ ಬಂದಿದ್ ದಎನ್ನಲಾಗಿದೆ. ಆಬಳಿಕ ತಾಯಿಗೆ ವಿಷಯ ತಿಳಿಸಿದ ಬಳಿಕ ಬಾಲಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಈಗ ಮಂಗಳೂರಿನ […]

Continue Reading

ಬೆಳಗಾವಿ ಪಾಲಿಕೆಗೆ ಚಾಟಿ ಬೀಸಿದ ಹೈಕೋರ್ಟ್; ಹೈಕೋರ್ಟ್ ನಿರ್ದೇಶನದಂತೆ ಭೂ ಮಾಲಕರಿಗೆ ಜಾಗ ಹಸ್ತಾಂತರ

ಭೂಸ್ವಾಧೀನ ಮಾಡಿಕೊಳ್ಳದೇ, ಪರಿಹಾರ ನೀಡದೆ ಖಾಸಗಿ ಜಮೀನಿನಲ್ಲಿ ರಸ್ತೆ ಬೆಳಗಾವಿ ನಗರದಲ್ಲಿ ರಸ್ತೆ ಅಗಲೀಕರಣದಲ್ಲಿ ಭೂಸ್ವಾಧೀನ ಮಾಡಿಕೊಳ್ಳದೇ ರಸ್ತೆ ನಿರ್ಮಿಸಿರುವುದು ಹಲವು ವಿವಾದಕ್ಕೆ ಕಾರಣವಾಗಿತ್ತು. ಪಾಲಿಕೆಗೆ ಹೈ ಕೋರ್ಟ್ ಚಾಟಿ ಬೀಸಿದ ಬಳಿಕ ಜಾಗವನ್ನು ಮತ್ತೆ ಭೂ ಮಾಲೀಕರಿಗೆ ಹಸ್ತಾಂತರ ಮಾಡುವ ಮೂಲಕ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಿದ್ದಾರೆ. ಈ ಮೊದಲು ಜಾಗದ ವಿವಾದದ ವಿಚಾರಣೆ ಹೈಕೋರ್ಟಿನಲ್ಲಿ ನಡೆಯುತ್ತಿರುವಾಗ ನ್ಯಾಯಾಲಯ ಪರಿಹಾರ ಕೊಡಲು 20 ಕೋಟಿ ರೂ ಗಳನ್ನು ಉಪ ವಿಭಾಗಾಧಿಕಾರಿಗಳ ಬಳಿ ಡಿಪಾಜಿಟ್ ಮಾಡುವಂತೆ […]

Continue Reading

ಮೂಡಬಿದ್ರೆ ಸರಣಿ ಕಳ್ಳತನ ಪ್ರಕರಣ: ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಸಿಂಗಂ ಸಂದೇಶ್ ಟೀಮ್ ಯಶಸ್ವಿ; ನಟೋರಿಯಸ್ ಹಬ್ಬಿ ಅಂದರ್!

ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಸಿಂಗಂ ಸಂದೇಶ್ ನೇತೃತ್ವದ ತಂಡ ಯಶಸ್ವಿಯಾಗಿದೆ. ದಿನಾಂಕ 15-08-2024 ರಂದು ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದಲ್ಲಿ ಬಳಿ 70 ವರ್ಷ ಪ್ರಾಯದ ನಿರ್ಮಾಲ ಪಂಡಿತ್ ಎಂಬವರ ಕುತ್ತಿಗೆಯಿಂದ ಸುಮಾರು 24 ಗ್ರಾಂ ಮೌಲ್ಯದ ಚಿನ್ನದ ಸರವನ್ನು ಕಸಿದಿದ್ದರು . ಅದೇ ರೀತಿ ದಿನಾಂಕ 02-09-2024 ರಂದು ಮೂಡು ಮಾರ್ನಾಡು ಗ್ರಾಮದ ಬಸದಿ ಬಳಿಯ 82 ವರ್ಷ ಪ್ರಾಯದ ಪ್ರೇಮಾ ಎಂಬವರ ಕುತ್ತಿಗೆಯಿಂದ ಸುಮಾರು 3 […]

Continue Reading

ಹೈಕೋರ್ಟಿನ ನ್ಯಾಯಮೂರ್ತಿ ಶ್ರೀಶಾನಂದ‌ ರವರ ಹೇಳಿಕೆ ವಿವಾದ; ಜಾಗೃತ ನಾಗರಿಕರು ಕರ್ನಾಟಕ ಮತ್ತು ವಕೀಲರ ಸಂಘಟನೆಯಿಂದ ಸಿ.ಜೆ ಗೆ ಪತ್ರ

ಹೈಕೋರ್ಟಿನ ನ್ಯಾಯಮೂರ್ತಿಗಳಾದ ವಿ. ಶ್ರೀಶಾನಂದ‌ ಅವರು ನ್ಯಾಯಾಲಯದ ಕಲಾಪದ ವೇಳೆ ನಿರ್ದಿಷ್ಟ ಸಮುದಾಯ ಮತ್ತು ಮಹಿಳಾ ವಕೀಲರನ್ನು ಉದ್ದೇಶಿಸಿ ಮಾಡಿರುವ ಹೇಳಿಕೆಗಳಿಗೆ ವಿವಾದದ ಕಿಡಿ ಹೊತ್ತಿಕೊಂಡಿದೆ. ಈಗಾಗಲೇ ಈ ಬಗ್ಗೆ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿಗಳ ನೇತೃತ್ವದ ಪೀಠ ಸ್ವಯಂಪ್ರೇರಿತ ವಿಚಾರಣೆಗೆ ಚಾಲನೆ ನೀಡಿದೆ. ಈ ನಡುವೆ ʼಜಾಗೃತ ನಾಗರಿಕರು ಕರ್ನಾಟಕʼ ಸಂಘಟನೆ ಹಾಗೂ ರಾಜ್ಯ ವಕೀಲರ ಸಂಘಗಳು ನ್ಯಾಯಮೂರ್ತಿಗಳ ಹೇಳಿಕೆಗೆ ಆತಂಕ ವ್ಯಕ್ತಪಡಿಸಿವೆ. ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ನಗರದ ಮುಸ್ಲಿಂ ಸಮುದಾಯ ಹೆಚ್ಚಾಗಿ ಇರುವ ಸ್ಥಳವನ್ನು ಭಾರತವಲ್ಲ ಪಾಕಿಸ್ತಾನ […]

Continue Reading

ಸಾರ್ವಜನಿಕರ ಭೇಟಿ, ಅವರ ಕುಂದುಕೊರತೆ ನಿವಾರಿಸುವುದು ಕಡ್ಡಾಯ. ಅ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಖಡಕ್ ಆದೇಶ

ಇನ್ಮುಂದೆ ಸಾರ್ವಜನಿಕರನ್ನು ಭೇಟಿ ಮಾಡಲು, ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಈ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಅವರು,ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು ಎಂದಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು […]

Continue Reading

ಕ್ಷುಲ್ಲಕ ಕಾರಣಕ್ಕೆ ಒಡಹುಟ್ಟಿದ ತಮ್ಮನನ್ನೇ ಹತ್ಯೆಗೈದ ಅಣ್ಣನಿಗೆ ಜೀವಾವಧಿ ಸಜೆ

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ದಿನಾಂಕ 10.05.2022 ರಂದು ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ನಂದರ ಬೆಟ್ಟು ಎಂಬಲ್ಲಿ ಬಾಳಪ್ಪ ನಾಯ್ಕ ಮತ್ತು ಐತ್ತಪ್ಪ ನಾಯ್ಕ ರವರಿಗೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ಐತ್ತಪ್ಪ ನಾಯ್ಕನು ತನ್ನ ತಮ್ಮನಾದ ಬಾಳಪ್ಪ ನಾಯ್ಕನ ತಲೆಗೆ ಹಾಗೂ ಇತರ ಭಾಗಗಳಿಗೆ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದು ಪರಾರಿಯಾಗಿದ್ದ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ 73/2022 ಕಲಾಂ 302ರಂತೆ ಪ್ರಕರಣ ದಾಖಲಾಗಿತ್ತು. ವಿಟ್ಲ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ […]

Continue Reading

ಬ್ಯಾರಿ ಭಾಷೆಗ್ ‘ಮಲಾಮೆ’ ಮಲಾಮತ್ತವಾ.?

ಕೊಡಗನ ಕೋಳಿ ನುಂಗಿತ್ತಾ.. ಬ್ಯಾರಿ ಭಾಷೆಯ ಮಲಾಮೆ ನುಂಗುತ್ತಾ.!! ಕೊಡಗನ ಕೋಳಿ ನುಂಗಿತ್ತಾ ಅನ್ನುವ ಗಾದೆ ಮಾತಿನಂತೆ ಬ್ಯಾರಿ ಭಾಷೆಯನ್ನು ಮಲಾಮೆ ನುಂಗಬಹುದಾ ಅನ್ನುವ ಆತಂಕ ಇದೀಗ ಬ್ಯಾರಿ ಸಮುದಾಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಬ್ಯಾರಿಗಳು ತುಳುನಾಡು ಎಂದು ಹಿಂದೆ ಕರೆಯಲಾಗುತ್ತಿದ್ದ ಕರ್ನಾಟಕದ ಈಗಿನ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಾಸವಾಗಿರುವ ಒಂದು ಮುಸ್ಲಿಮ್ ಜನಾಂಗ. ಅವರು ತಮ್ಮದೇ ಆದ ವಿಶಿಷ್ಟ ಸಂಪ್ರದಾಯ ಮತ್ತು ಸಾಂಸ್ಕೃತಿಕ ಅನನ್ಯತೆಯನ್ನು ಹೊಂದಿರುವ ಒಂದು ಸಾಮಾಜಿಕ ಪಂಗಡ. ಬ್ಯಾರಿಗಳಿಗೆ ಕೊಂಕಣ […]

Continue Reading

ರೈಸ್ ಪುಲ್ಲಿಂಗ್ ಚೆಂಬು ತೋರಿಸಿ ಉದ್ಯಮಿಗೆ ಎಕರೆಗಟ್ಟಲೇ ಜಮೀನು ವಂಚನೆ; ಸಿಸಿಬಿಯಲ್ಲಿ ದೂರು ದಾಖಲು

ರೈಸ್ ಪುಲ್ಲಿಂಗ್ ಚೆಂಬು ತೋರಿಸಿ ಉದ್ಯಮಿಗೆ ಎಕರೆಗಟ್ಟಲೇ ಜಮೀನು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು 6 .58 ಎಕರೆ ಜಮೀನು ಬರೆಸಿಕೊಂಡು ಬೋರ್ ವೆಲ್ ಉದ್ಯಮಿ ಕಾಂತರಾಜು ಎಂಬವರಿಗೆ ವಂಚಸಿದ್ದಾರೆ. ನಾಗರತ್ನ, ರಾಮಚಂದ್ರ, ಸುಕುಮಾರ್ ಹಾಗೂ ನಟೇಶ್ ಎಂಬುವವರಿಂದ ವಂಚನೆ ವಂಚನೆ ಸಂಬಂಧ ಸಿಸಿಬಿಯಲ್ಲಿ ಉದ್ಯಮಿ ಕಾಂತರಾಜು ದೂರು ದಾಖಲಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಉದ್ಯಮಿ ಕಾಂತರಾಜುರವರನ್ನು ನಂಬಿಸಿದ ಆರೋಪಿಗಳು ಹಂತ ಹಂತವಾಗಿ ಜಮೀನು ಬರೆಸಿಕೊಂಡಿರುತ್ತಾರೆ. ಉದ್ಯಮಿ ಕಾಂತರಾಜು ಅಂಡರ್ ವಾಟರ್ ಹಾಗೂ ಕ್ರೂಡಾಯಿಲ್ ಪತ್ತೆ […]

Continue Reading